<p><strong>ಬೆಂಗಳೂರು:</strong> ನಗರಕ್ಕೆ ಇನ್ನೂ 40 ಸಾವಿರ ಆಟೊರಿಕ್ಷಾಗಳಿಗೆ ಅನುಮತಿ ನೀಡಿ ಮಾರ್ಚ್ 23ರಂದು ಸರ್ಕಾರ ಹೊರಡಿಸಿರುವ ಆದೇಶದ ರದ್ದತಿಗೆ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.<br /> <br /> ಆದೇಶವನ್ನು ಊರ್ಜಿತಗೊಳಿಸಿದ್ದ ಏಕಸದಸ್ಯಪೀಠದ ಆದೇಶ ಪ್ರಶ್ನಿಸಿ ಮೊಹಮ್ಮದ್ ಅಬ್ಬಾಸ್ ಹಾಗೂ ಇತರರು ಸಲ್ಲಿಸಿದ್ದ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ ವಜಾಗೊಳಿಸಿತು.<br /> <br /> ಈಗ ಸದ್ಯ ನಗರದಲ್ಲಿ 85 ಸಾವಿರ ಸಾವಿರ ಆಟೊಗಳು ಇವೆ. ಅದನ್ನು 1.25 ಲಕ್ಷಕ್ಕೆ ಏರಿಸಿದರೆ ಜನರ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂಬ ಅರ್ಜಿದಾರರ ವಾದವನ್ನು ನ್ಯಾಯಮೂರ್ತಿಗಳು ಮಾನ್ಯ ಮಾಡಲಿಲ್ಲ. <br /> <br /> ಸಾರ್ವಜನಿಕರ ಹಿತದೃಷ್ಟಿಯಿಂದ ಆಟೊ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ಇದು ಸರ್ಕಾರದ ನೀತಿ ನಿಯಮಕ್ಕೆ ಸಂಬಂಧಿಸಿದ ವಿಷಯ. ಇದರ ಮಧ್ಯೆ ಕೋರ್ಟ್ ಬಾರದು ಎಂಬ ಏಕಸದಸ್ಯಪೀಠದ ತೀರ್ಪನ್ನು ವಿಭಾಗೀಯ ಪೀಠ ಮಾನ್ಯ ಮಾಡಿದೆ.<br /> <br /> <strong>ಹಬ್ಬಕ್ಕೆ ಪಟಾಕಿ: ಮಾಹಿತಿಗೆ ಆದೇಶ</strong><br /> ಹಬ್ಬ ಹರಿದಿನ ಸೇರಿದಂತೆ ಹಲವು ಸಂದರ್ಭಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದಕ್ಕೆ ನಿರ್ಬಂಧ ಹೇರಬಹುದೇ ಎಂಬ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಮೌಖಿಕ ಸೂಚನೆ ನೀಡಿದೆ.<br /> <br /> ಪಟಾಕಿ ಸಿಡಿತದಿಂದಾಗಿ ಹಲವು ಬಾಲಕರು ಕಣ್ಣು ಕಳೆದುಕೊಳ್ಳುತ್ತಿದ್ದು, ಪಟಾಕಿಗೆ ನಿಷೇಧ ಹೇರುವಂತೆ ಕೋರಿ ವಕೀಲ ಬಿ.ವಿ.ಪುಟ್ಟೇಗೌಡ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.<br /> <br /> <strong>ವಿಶಾಲಪೀಠಕ್ಕೆ ವರ್ಗ ಕೋರಿ ಅರ್ಜಿ</strong><br /> ಲೋಕಾಯುಕ್ತ ವಿಶೇಷ ಕೋರ್ಟ್ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹೈಕೋರ್ಟ್ಗೆ ಹಲವು ಅರ್ಜಿಗಳನ್ನು ಸಲ್ಲಿಸಿದ್ದು ಎಲ್ಲ ಅರ್ಜಿಗಳ ವಿಚಾರಣೆಯನ್ನು ವಿಶಾಲ ಪೀಠಕ್ಕೆ ವರ್ಗಾಯಿಸುವಂತೆ ಕೋರಿ ವಕೀಲ ಸಿರಾಜಿನ್ ಬಾಷಾ, ಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ.<br /> <br /> ಒಂದೊಂದು ಪೀಠದ ಮುಂದೆ ಒಂದೊಂದು ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ. ಕೆಲವೊಂದನ್ನು ಏಕಸದಸ್ಯಪೀಠ, ಇನ್ನು ಕೆಲವು ವಿಭಾಗೀಯ ಪೀಠಗಳು ನಡೆಸುತ್ತಿದ್ದು ಇದು ಗೊಂದಲಕ್ಕೆ ಕಾರಣವಾಗಿದೆ. <br /> ಈ ಹಿನ್ನೆಲೆಯಲ್ಲಿ ಒಂದೇ ಕಡೆ ಎಲ್ಲ ಅರ್ಜಿಗಳ ವಿಚಾರಣೆ ನಡೆಸಲು ಆದೇಶಿಸಬೇಕು ಎಂದು ಅವರು ನ್ಯಾಯಮೂರ್ತಿಗಳನ್ನು ಕೋರಿದ್ದಾರೆ.<br /> <br /> <strong>ಜಾಮೀನು ಅರ್ಜಿ: 30ಕ್ಕೆ ತೀರ್ಪು</strong><br /> ಗಣಿ ಗುತ್ತಿಗೆ ನವೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂತಕಲ್ ಮೈನಿಂಗ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ವಿನೋದ್ ಗೋಯಲ್ ಅವರಿಗೆ ಜಾಮೀನು ನೀಡಬೇಕೆ, ಬೇಡವೆ ಎಂಬ ಬಗೆಗಿನ ತೀರ್ಪನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಇದೇ 30ರಂದು ಪ್ರಕಟಿಸಲಿದೆ.<br /> <br /> ಜಾಮೀನು ನೀಡಿಕೆ ಕುರಿತಾದ ವಾದ, ಪ್ರತಿವಾದಗಳನ್ನು ಆಲಿಸಿ ಸೋಮವಾರ ಪೂರ್ಣಗೊಳಿಸಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ತೀರ್ಪನ್ನು ಕಾಯ್ದಿರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರಕ್ಕೆ ಇನ್ನೂ 40 ಸಾವಿರ ಆಟೊರಿಕ್ಷಾಗಳಿಗೆ ಅನುಮತಿ ನೀಡಿ ಮಾರ್ಚ್ 23ರಂದು ಸರ್ಕಾರ ಹೊರಡಿಸಿರುವ ಆದೇಶದ ರದ್ದತಿಗೆ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.<br /> <br /> ಆದೇಶವನ್ನು ಊರ್ಜಿತಗೊಳಿಸಿದ್ದ ಏಕಸದಸ್ಯಪೀಠದ ಆದೇಶ ಪ್ರಶ್ನಿಸಿ ಮೊಹಮ್ಮದ್ ಅಬ್ಬಾಸ್ ಹಾಗೂ ಇತರರು ಸಲ್ಲಿಸಿದ್ದ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ ವಜಾಗೊಳಿಸಿತು.<br /> <br /> ಈಗ ಸದ್ಯ ನಗರದಲ್ಲಿ 85 ಸಾವಿರ ಸಾವಿರ ಆಟೊಗಳು ಇವೆ. ಅದನ್ನು 1.25 ಲಕ್ಷಕ್ಕೆ ಏರಿಸಿದರೆ ಜನರ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂಬ ಅರ್ಜಿದಾರರ ವಾದವನ್ನು ನ್ಯಾಯಮೂರ್ತಿಗಳು ಮಾನ್ಯ ಮಾಡಲಿಲ್ಲ. <br /> <br /> ಸಾರ್ವಜನಿಕರ ಹಿತದೃಷ್ಟಿಯಿಂದ ಆಟೊ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ಇದು ಸರ್ಕಾರದ ನೀತಿ ನಿಯಮಕ್ಕೆ ಸಂಬಂಧಿಸಿದ ವಿಷಯ. ಇದರ ಮಧ್ಯೆ ಕೋರ್ಟ್ ಬಾರದು ಎಂಬ ಏಕಸದಸ್ಯಪೀಠದ ತೀರ್ಪನ್ನು ವಿಭಾಗೀಯ ಪೀಠ ಮಾನ್ಯ ಮಾಡಿದೆ.<br /> <br /> <strong>ಹಬ್ಬಕ್ಕೆ ಪಟಾಕಿ: ಮಾಹಿತಿಗೆ ಆದೇಶ</strong><br /> ಹಬ್ಬ ಹರಿದಿನ ಸೇರಿದಂತೆ ಹಲವು ಸಂದರ್ಭಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದಕ್ಕೆ ನಿರ್ಬಂಧ ಹೇರಬಹುದೇ ಎಂಬ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಮೌಖಿಕ ಸೂಚನೆ ನೀಡಿದೆ.<br /> <br /> ಪಟಾಕಿ ಸಿಡಿತದಿಂದಾಗಿ ಹಲವು ಬಾಲಕರು ಕಣ್ಣು ಕಳೆದುಕೊಳ್ಳುತ್ತಿದ್ದು, ಪಟಾಕಿಗೆ ನಿಷೇಧ ಹೇರುವಂತೆ ಕೋರಿ ವಕೀಲ ಬಿ.ವಿ.ಪುಟ್ಟೇಗೌಡ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.<br /> <br /> <strong>ವಿಶಾಲಪೀಠಕ್ಕೆ ವರ್ಗ ಕೋರಿ ಅರ್ಜಿ</strong><br /> ಲೋಕಾಯುಕ್ತ ವಿಶೇಷ ಕೋರ್ಟ್ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹೈಕೋರ್ಟ್ಗೆ ಹಲವು ಅರ್ಜಿಗಳನ್ನು ಸಲ್ಲಿಸಿದ್ದು ಎಲ್ಲ ಅರ್ಜಿಗಳ ವಿಚಾರಣೆಯನ್ನು ವಿಶಾಲ ಪೀಠಕ್ಕೆ ವರ್ಗಾಯಿಸುವಂತೆ ಕೋರಿ ವಕೀಲ ಸಿರಾಜಿನ್ ಬಾಷಾ, ಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ.<br /> <br /> ಒಂದೊಂದು ಪೀಠದ ಮುಂದೆ ಒಂದೊಂದು ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ. ಕೆಲವೊಂದನ್ನು ಏಕಸದಸ್ಯಪೀಠ, ಇನ್ನು ಕೆಲವು ವಿಭಾಗೀಯ ಪೀಠಗಳು ನಡೆಸುತ್ತಿದ್ದು ಇದು ಗೊಂದಲಕ್ಕೆ ಕಾರಣವಾಗಿದೆ. <br /> ಈ ಹಿನ್ನೆಲೆಯಲ್ಲಿ ಒಂದೇ ಕಡೆ ಎಲ್ಲ ಅರ್ಜಿಗಳ ವಿಚಾರಣೆ ನಡೆಸಲು ಆದೇಶಿಸಬೇಕು ಎಂದು ಅವರು ನ್ಯಾಯಮೂರ್ತಿಗಳನ್ನು ಕೋರಿದ್ದಾರೆ.<br /> <br /> <strong>ಜಾಮೀನು ಅರ್ಜಿ: 30ಕ್ಕೆ ತೀರ್ಪು</strong><br /> ಗಣಿ ಗುತ್ತಿಗೆ ನವೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂತಕಲ್ ಮೈನಿಂಗ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ವಿನೋದ್ ಗೋಯಲ್ ಅವರಿಗೆ ಜಾಮೀನು ನೀಡಬೇಕೆ, ಬೇಡವೆ ಎಂಬ ಬಗೆಗಿನ ತೀರ್ಪನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಇದೇ 30ರಂದು ಪ್ರಕಟಿಸಲಿದೆ.<br /> <br /> ಜಾಮೀನು ನೀಡಿಕೆ ಕುರಿತಾದ ವಾದ, ಪ್ರತಿವಾದಗಳನ್ನು ಆಲಿಸಿ ಸೋಮವಾರ ಪೂರ್ಣಗೊಳಿಸಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ತೀರ್ಪನ್ನು ಕಾಯ್ದಿರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>