<p>ಬೀದರ್: ಆಟೋ ಚಾಲಕರ ಕ್ಷೇಮಾಭಿವೃದ್ಧಿ ಮಂಡಳಿ ರಚಿಸುವಂತೆ ಆಗ್ರಹಿಸಿ ಫೆಡರೇಷನ್ ಆಫ್ ಕರ್ನಾಟಕ ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ನಿಂದ ನಗರದಲ್ಲಿ ಮಂಗಳವಾರ ಆಟೋಗಳೊಂದಿಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.<br /> <br /> ನಗರದ ಬೌದ್ಧ ವಿಹಾರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.<br /> ಆಟೋರಿಕ್ಷಾಗಳಿಂದ ಸರ್ಕಾರಕ್ಕೆ ಆದಾಯ ಇದೆ. ಆದರೆ, ಆಟೋ ಚಾಲಕರು ಮಾತ್ರ ಯಾವುದೇ ರೀತಿಯ ಭದ್ರತೆ ಇಲ್ಲದೆ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರದಲ್ಲಿ ದೂರಿದ್ದಾರೆ.<br /> <br /> ಆಟೋ ಚಾಲಕರ ಕ್ಷೇಮಾಭಿವೃದ್ಧಿಗಾಗಿ ಮಂಡಳಿಯೊಂದನ್ನು ರಚಿಸಬೇಕು. ಚಾಲಕರ ಕುಟುಂಬಕ್ಕೆ ಆರೋಗ್ಯ, ಮಕ್ಕಳ ಶಿಕ್ಷಣಕ್ಕೆ ನೆರವು, ಮನೆ, ಬಿ.ಪಿ.ಎಲ್. ಕಾರ್ಡ್, ನಿವೃತ್ತಿ ವೇತನ ಮತ್ತಿತರ ಸೌಕರ್ಯಗಳನ್ನು ಇದರ ಮೂಲಕ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಪರಿವಾರಕ್ಕೆ 1 ಲಕ್ಷ ರೂಪಾಯಿ, ಸಹಜ ಸಾವಿಗೆ 50 ಸಾವಿರ ರೂಪಾಯಿ ಪರಿಹಾರ ಒದಗಿಸಬೇಕು. ಚಾಲಕರಿಗೆ ಗುರುತಿನ ಚೀಟಿ ನೀಡಬೇಕು.<br /> <br /> ರಾಜ್ಯಾದ್ಯಂತ ಆಟೋ ಕಾಲೋನಿ ಸ್ಥಾಪಿಸಬೇಕು. ವಾಹನ ಚಾಲನಾ ಪತ್ರಕ್ಕಾಗಿ ವಿದ್ಯಾರ್ಹತೆ ಕಡ್ಡಾಯಗೊಳಿಸಬಾರದು. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಹೊಸ ವಾಹನ ಅಥವಾ ಹಳೆಯ ವಾಹನಕ್ಕೆ ಸಾಲ ಕಲ್ಪಿಸಬೇಕು. ತೈಲ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.<br /> <br /> ಸಮಿತಿಯ ಜಿಲ್ಲಾ ಸಂಚಾಲಕ ಆರ್.ಪಿ. ರಾಜಾ. ಸಹ ಸಂಚಾಲಕರಾದ ಎಂ.ಡಿ. ಮೈನೊದ್ದೀನ್, ರಾಘವೇಂದ್ರ ದುಬಲಗುಂಡಿಕರ್, ರೇಷ್ಮಾ ಹಂಸರಾಜ, ಕಲಾವತಿ ಕಾಡವಾದ, ಉಮೇಶ ಆರ್ಯ, ದಶರಥ ಅರಕಿ, ಇಸಾಮೊದ್ದೀನ್ ಮತ್ತಿತರರು ಪ್ರತಿಭಟನೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಆಟೋ ಚಾಲಕರ ಕ್ಷೇಮಾಭಿವೃದ್ಧಿ ಮಂಡಳಿ ರಚಿಸುವಂತೆ ಆಗ್ರಹಿಸಿ ಫೆಡರೇಷನ್ ಆಫ್ ಕರ್ನಾಟಕ ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ನಿಂದ ನಗರದಲ್ಲಿ ಮಂಗಳವಾರ ಆಟೋಗಳೊಂದಿಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.<br /> <br /> ನಗರದ ಬೌದ್ಧ ವಿಹಾರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.<br /> ಆಟೋರಿಕ್ಷಾಗಳಿಂದ ಸರ್ಕಾರಕ್ಕೆ ಆದಾಯ ಇದೆ. ಆದರೆ, ಆಟೋ ಚಾಲಕರು ಮಾತ್ರ ಯಾವುದೇ ರೀತಿಯ ಭದ್ರತೆ ಇಲ್ಲದೆ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರದಲ್ಲಿ ದೂರಿದ್ದಾರೆ.<br /> <br /> ಆಟೋ ಚಾಲಕರ ಕ್ಷೇಮಾಭಿವೃದ್ಧಿಗಾಗಿ ಮಂಡಳಿಯೊಂದನ್ನು ರಚಿಸಬೇಕು. ಚಾಲಕರ ಕುಟುಂಬಕ್ಕೆ ಆರೋಗ್ಯ, ಮಕ್ಕಳ ಶಿಕ್ಷಣಕ್ಕೆ ನೆರವು, ಮನೆ, ಬಿ.ಪಿ.ಎಲ್. ಕಾರ್ಡ್, ನಿವೃತ್ತಿ ವೇತನ ಮತ್ತಿತರ ಸೌಕರ್ಯಗಳನ್ನು ಇದರ ಮೂಲಕ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಪರಿವಾರಕ್ಕೆ 1 ಲಕ್ಷ ರೂಪಾಯಿ, ಸಹಜ ಸಾವಿಗೆ 50 ಸಾವಿರ ರೂಪಾಯಿ ಪರಿಹಾರ ಒದಗಿಸಬೇಕು. ಚಾಲಕರಿಗೆ ಗುರುತಿನ ಚೀಟಿ ನೀಡಬೇಕು.<br /> <br /> ರಾಜ್ಯಾದ್ಯಂತ ಆಟೋ ಕಾಲೋನಿ ಸ್ಥಾಪಿಸಬೇಕು. ವಾಹನ ಚಾಲನಾ ಪತ್ರಕ್ಕಾಗಿ ವಿದ್ಯಾರ್ಹತೆ ಕಡ್ಡಾಯಗೊಳಿಸಬಾರದು. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಹೊಸ ವಾಹನ ಅಥವಾ ಹಳೆಯ ವಾಹನಕ್ಕೆ ಸಾಲ ಕಲ್ಪಿಸಬೇಕು. ತೈಲ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.<br /> <br /> ಸಮಿತಿಯ ಜಿಲ್ಲಾ ಸಂಚಾಲಕ ಆರ್.ಪಿ. ರಾಜಾ. ಸಹ ಸಂಚಾಲಕರಾದ ಎಂ.ಡಿ. ಮೈನೊದ್ದೀನ್, ರಾಘವೇಂದ್ರ ದುಬಲಗುಂಡಿಕರ್, ರೇಷ್ಮಾ ಹಂಸರಾಜ, ಕಲಾವತಿ ಕಾಡವಾದ, ಉಮೇಶ ಆರ್ಯ, ದಶರಥ ಅರಕಿ, ಇಸಾಮೊದ್ದೀನ್ ಮತ್ತಿತರರು ಪ್ರತಿಭಟನೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>