<p><strong>ಮೈಸೂರು</strong>: ಆಟೋಗಳಿಗೆ ಗ್ಯಾಸ್ಕಿಟ್ ಅಳವಡಿಸುವುದನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಮೈಸೂರು ಆಟೋ ರಿಕ್ಷಾ ಚಾಲಕರ ಸಂಘದ ಸದಸ್ಯರು ಆರ್ಟಿಓ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.<br /> <br /> ಗ್ಯಾಸ್ಕಿಟ್ ಅಳವಡಿಕೆಗೆ ಸುಪ್ರೀಂ ಕೋರ್ಟ್ 2010ರ ಡಿ.30ರಂದು ತಡೆ ನೀಡಿದೆ. ಆದರೆ, ರಾಜ್ಯ ಸರ್ಕಾರ ಕಡ್ಡಾಯವಾಗಿ ಗ್ಯಾಸ್ಕಿಟ್ ಅಳವಡಿಸಿಕೊಳ್ಳುವಂತೆ ಸೂಚಿಸುವ ಮೂಲಕ ಸುಪ್ರೀಂ ಕೋರ್ಟ್ನ ಆದೇಶವನ್ನು ಉಲ್ಲಂಘನೆ ಮಾಡಲು ಹೊರಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.<br /> <br /> ಪೆಟ್ರೋಲ್ ಇಂಧನದ ಆಟೋ ರಿಕ್ಷಾಗಳಿಗೆ ಅರ್ಹತಾ ಪ್ರಮಾಣಪತ್ರ ನೀಡಲು ಪೂರ್ವ ವಲಯದ ಆರ್ಟಿಓ ಅಧಿಕಾರಿ ನಿರಾಕರಿಸುತ್ತಿದ್ದಾರೆ. ಆಟೋಗಳಿಗೆ ಕಡ್ಡಾಯವಾಗಿ ಗ್ಯಾಸ್ಕಿಟ್ ಅಳವಡಿಸುವವರೆಗೂ ಅರ್ಹತಾ ಪ್ರಮಾಣ ಪತ್ರ ನೀಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಇದರಿಂದಾಗಿ ಬಡ ಆಟೋ ರಿಕ್ಷಾ ಚಾಲಕರು ಪರದಾಡುವಂತಾಗಿದೆ. ಆದ್ದರಿಂದ, ಈ ಕೂಡಲೇ ಗ್ಯಾಸ್ ಅಳವಡಿಕೆ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ, ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.<br /> <br /> ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಬಿ.ಟಿ.ರಾಜಣ್ಣ, ಗೌರವ ಅಧ್ಯಕ್ಷ ಹಿನಕಲ್ ಚನ್ನೇಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಎಂ.ಮಹೇವಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಆಟೋಗಳಿಗೆ ಗ್ಯಾಸ್ಕಿಟ್ ಅಳವಡಿಸುವುದನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಮೈಸೂರು ಆಟೋ ರಿಕ್ಷಾ ಚಾಲಕರ ಸಂಘದ ಸದಸ್ಯರು ಆರ್ಟಿಓ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.<br /> <br /> ಗ್ಯಾಸ್ಕಿಟ್ ಅಳವಡಿಕೆಗೆ ಸುಪ್ರೀಂ ಕೋರ್ಟ್ 2010ರ ಡಿ.30ರಂದು ತಡೆ ನೀಡಿದೆ. ಆದರೆ, ರಾಜ್ಯ ಸರ್ಕಾರ ಕಡ್ಡಾಯವಾಗಿ ಗ್ಯಾಸ್ಕಿಟ್ ಅಳವಡಿಸಿಕೊಳ್ಳುವಂತೆ ಸೂಚಿಸುವ ಮೂಲಕ ಸುಪ್ರೀಂ ಕೋರ್ಟ್ನ ಆದೇಶವನ್ನು ಉಲ್ಲಂಘನೆ ಮಾಡಲು ಹೊರಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.<br /> <br /> ಪೆಟ್ರೋಲ್ ಇಂಧನದ ಆಟೋ ರಿಕ್ಷಾಗಳಿಗೆ ಅರ್ಹತಾ ಪ್ರಮಾಣಪತ್ರ ನೀಡಲು ಪೂರ್ವ ವಲಯದ ಆರ್ಟಿಓ ಅಧಿಕಾರಿ ನಿರಾಕರಿಸುತ್ತಿದ್ದಾರೆ. ಆಟೋಗಳಿಗೆ ಕಡ್ಡಾಯವಾಗಿ ಗ್ಯಾಸ್ಕಿಟ್ ಅಳವಡಿಸುವವರೆಗೂ ಅರ್ಹತಾ ಪ್ರಮಾಣ ಪತ್ರ ನೀಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಇದರಿಂದಾಗಿ ಬಡ ಆಟೋ ರಿಕ್ಷಾ ಚಾಲಕರು ಪರದಾಡುವಂತಾಗಿದೆ. ಆದ್ದರಿಂದ, ಈ ಕೂಡಲೇ ಗ್ಯಾಸ್ ಅಳವಡಿಕೆ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ, ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.<br /> <br /> ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಬಿ.ಟಿ.ರಾಜಣ್ಣ, ಗೌರವ ಅಧ್ಯಕ್ಷ ಹಿನಕಲ್ ಚನ್ನೇಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಎಂ.ಮಹೇವಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>