<p>ರಾಮನಗರ: `ದಶಕದ ಹಿಂದೆ ರಾಷ್ಟ್ರದಲ್ಲಿಯೇ ಕರ್ನಾಟಕದ ಆಡಳಿತ ವ್ಯವಸ್ಥೆ ಮುಂಚೂಣಿಯಲ್ಲಿತ್ತು. ಆದರೆ ಈಗ ಅದು ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇದಕ್ಕೆ ಕಾರಣ ಏನು? ಎಲ್ಲಿ ಲೋಪವಾಗಿದೆ ಎಂಬುದನ್ನು ಸರ್ಕಾರಿ ನೌಕರರಾದ ನಾವೇ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ~ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆ ನಿರ್ದೇಶಕ ಅಶ್ರಫುಲ್ ಹಸನ್ ತಿಳಿಸಿದರು.<br /> <br /> ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಜಿಲ್ಲಾ ಪಂಚಾಯಿತಿ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ `ಕರ್ನಾಟಕ ನಾಗರಿಕ ಸೇವೆಗಳ ಖಾತ್ರಿ ಕಾಯ್ದೆ-2011~ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. <br /> <br /> `ಸರ್ಕಾರಿ ಕೆಲಸವನ್ನು ದೇವರ ಕೆಲಸ ಎಂದು ಹೇಳಲಾಗುತ್ತದೆ. ಆದರೆ ಸರ್ಕಾರಿ ನೌಕರರಾದ ನಾವು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ನಾಗರಿಕರಿಗೆ ಎಂತಹ ಸೇವೆಯನ್ನು ನೀಡುತ್ತಿದ್ದೇವೆ ಎಂಬುದನ್ನು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು~ ಎಂದರು. `ಸರಿಯಾಗಿ ಕೆಲಸ ಮಾಡದ ಕಾರಣ ನಮ್ಮ ಮೇಲೆ ನಿಗಾ ಇಡಲು ಅಧಿನಿಯಮವೊಂದು ಜಾರಿಗೆ ಬಂದಿರುವುದು ದುರಂತವೇ ಸರಿ. ಈ ಮೂಲಕ ದಂಡ ಹಾಕಿಸಿಕೊಳ್ಳಬೇಕಾಗಿ ಬಂದಿರುವುದು ಶೋಚನೀಯ~ ಎಂದು ಅವರು ಬೇಸರ ವ್ಯಕ್ತಪಡಿಸಿದರು.<br /> <br /> `ಉತ್ತರದಾಯಿತ್ವ, ಹೊಣೆಗಾರಿಕೆ, ಪಾರದರ್ಶಕತೆ ಈ ಮೂರು ಗುಣಗಳು ಸರ್ಕಾರಿ ಸಿಬ್ಬಂದಿಯಲ್ಲಿ ಇರಬೇಕು~ ಎಂದರು. `ಪ್ರಸ್ತುತ 11 ಇಲಾಖೆ 151 ಸೇವೆಗಳನ್ನು ಈ ನೂತನ ಕಾಯ್ದೆಯಡಿ ತರಲಾಗಿದೆ. ಕಾಲಮಿತಿಯೊಳಗೆ ಗುಣಮಟ್ಟದ ಸೇವೆಯನ್ನು ಒದಗಿಸುವುದೇ ಈ ಕಾಯ್ದೆಯ ಉದ್ದೇಶವಾಗಿದೆ.<br /> <br /> ಈ ಕಾಯ್ದೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳನ್ನು ದಂಡಿಸುವ ಮತ್ತು ಶಿಕ್ಷಿಸುವ ಶಕ್ತಿಯನ್ನು ಹೊಂದಿದೆ. ಈಗಾಗಲೇ ದೇಶದ ಕೆಲವು ರಾಜ್ಯಗಳು ಈ ಕಾಯ್ದೆಯನ್ನು ಅಳವಡಿಸಿಕೊಂಡಿವೆ. ಈ ಸಾಲಿನಲ್ಲಿ ಕರ್ನಾಟಕ 10ನೇ ರಾಜ್ಯವಾಗಿದೆ ಎಂದು ಮಾಹಿತಿ ನೀಡಿದರು. <br /> <br /> ಜಿ.ಪಂ. ಸಿಇಒ ಕೆ.ಎಸ್.ವೆಂಕಟೇಶಪ್ಪ, ಉಪ ಕಾರ್ಯದರ್ಶಿ ಸಿದ್ದರಾಮಯ್ಯ, ತಹಶೀಲ್ದಾರ್ಗಳು, ಉಪ ವಿಭಾಗಾಧಿಕಾರಿ, ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಾರ್ಯಾಗಾರದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: `ದಶಕದ ಹಿಂದೆ ರಾಷ್ಟ್ರದಲ್ಲಿಯೇ ಕರ್ನಾಟಕದ ಆಡಳಿತ ವ್ಯವಸ್ಥೆ ಮುಂಚೂಣಿಯಲ್ಲಿತ್ತು. ಆದರೆ ಈಗ ಅದು ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇದಕ್ಕೆ ಕಾರಣ ಏನು? ಎಲ್ಲಿ ಲೋಪವಾಗಿದೆ ಎಂಬುದನ್ನು ಸರ್ಕಾರಿ ನೌಕರರಾದ ನಾವೇ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ~ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆ ನಿರ್ದೇಶಕ ಅಶ್ರಫುಲ್ ಹಸನ್ ತಿಳಿಸಿದರು.<br /> <br /> ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಜಿಲ್ಲಾ ಪಂಚಾಯಿತಿ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ `ಕರ್ನಾಟಕ ನಾಗರಿಕ ಸೇವೆಗಳ ಖಾತ್ರಿ ಕಾಯ್ದೆ-2011~ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. <br /> <br /> `ಸರ್ಕಾರಿ ಕೆಲಸವನ್ನು ದೇವರ ಕೆಲಸ ಎಂದು ಹೇಳಲಾಗುತ್ತದೆ. ಆದರೆ ಸರ್ಕಾರಿ ನೌಕರರಾದ ನಾವು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ನಾಗರಿಕರಿಗೆ ಎಂತಹ ಸೇವೆಯನ್ನು ನೀಡುತ್ತಿದ್ದೇವೆ ಎಂಬುದನ್ನು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು~ ಎಂದರು. `ಸರಿಯಾಗಿ ಕೆಲಸ ಮಾಡದ ಕಾರಣ ನಮ್ಮ ಮೇಲೆ ನಿಗಾ ಇಡಲು ಅಧಿನಿಯಮವೊಂದು ಜಾರಿಗೆ ಬಂದಿರುವುದು ದುರಂತವೇ ಸರಿ. ಈ ಮೂಲಕ ದಂಡ ಹಾಕಿಸಿಕೊಳ್ಳಬೇಕಾಗಿ ಬಂದಿರುವುದು ಶೋಚನೀಯ~ ಎಂದು ಅವರು ಬೇಸರ ವ್ಯಕ್ತಪಡಿಸಿದರು.<br /> <br /> `ಉತ್ತರದಾಯಿತ್ವ, ಹೊಣೆಗಾರಿಕೆ, ಪಾರದರ್ಶಕತೆ ಈ ಮೂರು ಗುಣಗಳು ಸರ್ಕಾರಿ ಸಿಬ್ಬಂದಿಯಲ್ಲಿ ಇರಬೇಕು~ ಎಂದರು. `ಪ್ರಸ್ತುತ 11 ಇಲಾಖೆ 151 ಸೇವೆಗಳನ್ನು ಈ ನೂತನ ಕಾಯ್ದೆಯಡಿ ತರಲಾಗಿದೆ. ಕಾಲಮಿತಿಯೊಳಗೆ ಗುಣಮಟ್ಟದ ಸೇವೆಯನ್ನು ಒದಗಿಸುವುದೇ ಈ ಕಾಯ್ದೆಯ ಉದ್ದೇಶವಾಗಿದೆ.<br /> <br /> ಈ ಕಾಯ್ದೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳನ್ನು ದಂಡಿಸುವ ಮತ್ತು ಶಿಕ್ಷಿಸುವ ಶಕ್ತಿಯನ್ನು ಹೊಂದಿದೆ. ಈಗಾಗಲೇ ದೇಶದ ಕೆಲವು ರಾಜ್ಯಗಳು ಈ ಕಾಯ್ದೆಯನ್ನು ಅಳವಡಿಸಿಕೊಂಡಿವೆ. ಈ ಸಾಲಿನಲ್ಲಿ ಕರ್ನಾಟಕ 10ನೇ ರಾಜ್ಯವಾಗಿದೆ ಎಂದು ಮಾಹಿತಿ ನೀಡಿದರು. <br /> <br /> ಜಿ.ಪಂ. ಸಿಇಒ ಕೆ.ಎಸ್.ವೆಂಕಟೇಶಪ್ಪ, ಉಪ ಕಾರ್ಯದರ್ಶಿ ಸಿದ್ದರಾಮಯ್ಯ, ತಹಶೀಲ್ದಾರ್ಗಳು, ಉಪ ವಿಭಾಗಾಧಿಕಾರಿ, ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಾರ್ಯಾಗಾರದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>