<p><strong>ಬೆಂಗಳೂರು</strong>: ರಾಜ್ಯದ ಜನರು ಬರಗಾಲ ಪರಿಸ್ಥಿತಿ ಎದುರಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಪಕ್ಷವು ಜಾತಿ ರಾಜಕಾರಣ ಮತ್ತು ಆಂತರಿಕ ಕಚ್ಚಾಟದ ಮೂಲಕ ಆಡಳಿತ ಯಂತ್ರವನ್ನೇ ಮರೆತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.<br /> <br /> ಕೆ.ಆರ್.ಪುರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್, `ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮತ್ತು ಜಾತಿ ರಾಜಕಾರಣದಲ್ಲಿ ಮುಳುಗಿದೆ. ಜಾತಿಯ ಕಾರಣದಿಂದ ಅಧಿಕಾರ ಹಂಚಿಕೆ ಮಾಡುತ್ತಿರುವ ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಮುಂಬರುವ ಚುನಾವಣೆಯಲ್ಲಿ ನಾಡಿನ ಜನತೆ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತಾರೆ~ ಎಂದರು.<br /> <br /> `ಅಧಿಕಾರಕ್ಕೆ ಬಂದ ದಿನದಂದಲೂ ಬಿಜೆಪಿಯೊಳಗೆ ಆಂತರಿಕ ಕಿತ್ತಾಟ ಇದ್ದೇ ಇದೆ. ಅನಗತ್ಯವಾಗಿ ಮುಖ್ಯಮಂತ್ರಿ ಹಾಗೂ ಸಚಿವರನ್ನು ಬದಲಾಯಿಸುತ್ತಿರುವುದನ್ನು ನೊಡಿದರೆ ರಾಜ್ಯ ಬಿಜೆಪಿ ಪಕ್ಷದಲ್ಲಿ ಇರುವವರಿಗೆ ಸಮರ್ಪಕವಾಗಿ ಅಧಿಕಾರ ನಡೆಸಲು ಬರುವುದಿಲ್ಲ ಎಂಬುದು ತಿಳಿಯುತ್ತದೆ~ ಎಂದು ಅವರು ದೂರಿದರು.<br /> <br /> ಶಾಸಕ ದಿನೇಶ್ ಗುಂಡೂರಾವ್ ಮಾತನಾಡಿ, `ಮುಖ್ಯಮಂತ್ರಿಗಳನ್ನು ಬದಲಿಸುತ್ತಾ ರಾಜ್ಯದ ಜನರಿಗೆ ಸಮರ್ಪಕ ಆಡಳಿತ ನೀಡಲು ಸೋತಿರುವ ಬಿಜೆಪಿ ಪಕ್ಷ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ. ಜನರಿಗೆ ಬಿಜೆಪಿಯ ಮುಖವಾಡದ ಪರಿಚಯವಾಗಿದ್ದು, ಭ್ರಷ್ಟ ಬಜೆಪಿ ಪಕ್ಷವನ್ನು ಜನರೇ ನಿರಾಕರಿಸುತ್ತಾರೆ~ ಎಂದರು.<br /> <br /> ಆನಂದರಾವ್ ವೃತ್ತದ ಬಳಿಯ ಮಹಾತ್ಮಗಾಂಧಿ ಪ್ರತಿಮೆಯ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ನಗರ ಕಾಂಗ್ರೆಸ್ ಸಮಿತಿ ಸದಸ್ಯ ಎಸ್.ಮನೋಹರ್, `ರಾಜ್ಯದ ಜನರು ಬರಗಾಲದಿಂದ ತತ್ತರಿಸುತ್ತಿದ್ದಾರೆ. ಆದರೆ ಬಿಜೆಪಿ ಸರ್ಕಾರಕ್ಕೆ ಇದಾವುದೂ ಕಣ್ಣಿಗೆ ಕಾಣುತ್ತಿಲ್ಲ. <br /> <br /> ರಾಜ್ಯದ ಜನರ ಕಷ್ಟಗಳಿಗಿಂತಾ ಅಧಿಕಾರ ಹಂಚಿಕೆಯೇ ಪಕ್ಷಕ್ಕೆ ಮುಖ್ಯವಾಗಿದೆ. ಉಳಿದಿರುವ ಅಧಿಕಾರಾವಧಿಯಲ್ಲಾದರೂ ಪಕ್ಷ ಭ್ರಷ್ಟಾಚಾರದಲ್ಲಿ ಮುಳುಗದೇ ಉತ್ತಮ ಆಡಳಿತ ನೀಡಬೇಕು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದ ಜನರು ಬರಗಾಲ ಪರಿಸ್ಥಿತಿ ಎದುರಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಪಕ್ಷವು ಜಾತಿ ರಾಜಕಾರಣ ಮತ್ತು ಆಂತರಿಕ ಕಚ್ಚಾಟದ ಮೂಲಕ ಆಡಳಿತ ಯಂತ್ರವನ್ನೇ ಮರೆತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.<br /> <br /> ಕೆ.ಆರ್.ಪುರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್, `ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮತ್ತು ಜಾತಿ ರಾಜಕಾರಣದಲ್ಲಿ ಮುಳುಗಿದೆ. ಜಾತಿಯ ಕಾರಣದಿಂದ ಅಧಿಕಾರ ಹಂಚಿಕೆ ಮಾಡುತ್ತಿರುವ ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಮುಂಬರುವ ಚುನಾವಣೆಯಲ್ಲಿ ನಾಡಿನ ಜನತೆ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತಾರೆ~ ಎಂದರು.<br /> <br /> `ಅಧಿಕಾರಕ್ಕೆ ಬಂದ ದಿನದಂದಲೂ ಬಿಜೆಪಿಯೊಳಗೆ ಆಂತರಿಕ ಕಿತ್ತಾಟ ಇದ್ದೇ ಇದೆ. ಅನಗತ್ಯವಾಗಿ ಮುಖ್ಯಮಂತ್ರಿ ಹಾಗೂ ಸಚಿವರನ್ನು ಬದಲಾಯಿಸುತ್ತಿರುವುದನ್ನು ನೊಡಿದರೆ ರಾಜ್ಯ ಬಿಜೆಪಿ ಪಕ್ಷದಲ್ಲಿ ಇರುವವರಿಗೆ ಸಮರ್ಪಕವಾಗಿ ಅಧಿಕಾರ ನಡೆಸಲು ಬರುವುದಿಲ್ಲ ಎಂಬುದು ತಿಳಿಯುತ್ತದೆ~ ಎಂದು ಅವರು ದೂರಿದರು.<br /> <br /> ಶಾಸಕ ದಿನೇಶ್ ಗುಂಡೂರಾವ್ ಮಾತನಾಡಿ, `ಮುಖ್ಯಮಂತ್ರಿಗಳನ್ನು ಬದಲಿಸುತ್ತಾ ರಾಜ್ಯದ ಜನರಿಗೆ ಸಮರ್ಪಕ ಆಡಳಿತ ನೀಡಲು ಸೋತಿರುವ ಬಿಜೆಪಿ ಪಕ್ಷ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ. ಜನರಿಗೆ ಬಿಜೆಪಿಯ ಮುಖವಾಡದ ಪರಿಚಯವಾಗಿದ್ದು, ಭ್ರಷ್ಟ ಬಜೆಪಿ ಪಕ್ಷವನ್ನು ಜನರೇ ನಿರಾಕರಿಸುತ್ತಾರೆ~ ಎಂದರು.<br /> <br /> ಆನಂದರಾವ್ ವೃತ್ತದ ಬಳಿಯ ಮಹಾತ್ಮಗಾಂಧಿ ಪ್ರತಿಮೆಯ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ನಗರ ಕಾಂಗ್ರೆಸ್ ಸಮಿತಿ ಸದಸ್ಯ ಎಸ್.ಮನೋಹರ್, `ರಾಜ್ಯದ ಜನರು ಬರಗಾಲದಿಂದ ತತ್ತರಿಸುತ್ತಿದ್ದಾರೆ. ಆದರೆ ಬಿಜೆಪಿ ಸರ್ಕಾರಕ್ಕೆ ಇದಾವುದೂ ಕಣ್ಣಿಗೆ ಕಾಣುತ್ತಿಲ್ಲ. <br /> <br /> ರಾಜ್ಯದ ಜನರ ಕಷ್ಟಗಳಿಗಿಂತಾ ಅಧಿಕಾರ ಹಂಚಿಕೆಯೇ ಪಕ್ಷಕ್ಕೆ ಮುಖ್ಯವಾಗಿದೆ. ಉಳಿದಿರುವ ಅಧಿಕಾರಾವಧಿಯಲ್ಲಾದರೂ ಪಕ್ಷ ಭ್ರಷ್ಟಾಚಾರದಲ್ಲಿ ಮುಳುಗದೇ ಉತ್ತಮ ಆಡಳಿತ ನೀಡಬೇಕು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>