<p>ಬೆಂಗಳೂರು: ‘ಆಡು ನುಡಿಯ ಮೂಲಕ ಮಕ್ಕಳಿಗೆ ಕನ್ನಡ ಕಲಿಸುವ ಕೆಲಸ ಆಗಬೇಕಿದೆ’ ಎಂದು ಹಿರಿಯ ರಂಗಕರ್ಮಿ ಪ್ರಸನ್ನ ಅಭಿಪ್ರಾಯಪಟ್ಟರು.<br /> ರಂಗಕರ್ಮಿ ಎ.ಎಸ್.ಮೂರ್ತಿ ಅವರ ನೆನಪಿನಲ್ಲಿ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಹನುಮಂತನಗರದ ರಾಮಾಂಜನೇಯ ಗುಡ್ಡದಲ್ಲಿ ಭಾನುವಾರ ನಡೆದ ಕಲೋತ್ಸವದಲ್ಲಿ ಅವರು ಮಾತನಾಡಿದರು.<br /> <br /> ‘ಹೆಚ್ಚು ಸಂಸ್ಕೃತ ಪದಗಳನ್ನು ಒಳಗೊಂಡಿರುವ ಕನ್ನಡದಿಂದ ಮಕ್ಕಳನ್ನು ಸೆಳೆಯಲು ಸಾಧ್ಯವಿಲ್ಲ. ಆರಂಭಿಕ ಹಂತದಲ್ಲೇ ರನ್ನ, ಪಂಪನ ಕಾವ್ಯಗಳನ್ನು ಓದಿಸಿದರೆ ಮಕ್ಕಳಿಗೆ ಕಲಿಕೆ ಕಷ್ಟವಾಗುತ್ತದೆ. ಅವರು ಆತಂಕಕ್ಕೊಳಗಾಗುತ್ತಾರೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಆಡು ನುಡಿಯಲ್ಲೇ ಕನ್ನಡ ಕಲಿಸಬೇಕು’ ಎಂದು ಅವರು ಕಿವಿಮಾತು ಹೇಳಿದರು.<br /> <br /> ‘ಕಲೆಗೂ ಸಂಸ್ಕೃತಿಗೂ ಇರುವ ಸಂಬಂಧದ ಕುರಿತು ಮಕ್ಕಳಿಗೆ ತಿಳಿಸುವ ಕೆಲಸವನ್ನು ಪೋಷಕರು ಮಾಡಬೇಕು’ ಎಂದು ಅವರು ಸಲಹೆ ನೀಡಿದರು.<br /> ‘ಮೂರ್ತಿ ಅವರು ಯುವಕರನ್ನು ಒಡನಾಡಿಗಳನ್ನಾಗಿ ಮಾಡಿಕೊಂಡು ಮಕ್ಕಳಿಗಾಗಿ ನಾಟಕ ಆಡಿದರು. ಕಲಾಶಾಲೆಯನ್ನು ಆರಂಭಿಸಿದರು. ರಂಗಭೂಮಿಯಲ್ಲಿ ಹೊಸ ಹೊಸ ಪ್ರಯೋಗ ಮಾಡಿದರು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.<br /> <br /> ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ, ‘ರಂಗಭೂಮಿ ಈಗ ಅವನತಿಯ ಅಂಚಿನಲ್ಲಿ ಇದೆ. ಇಂತಹ ಸಂದರ್ಭದಲ್ಲಿ ಬೀದಿನಾಟಕ ಸೇರಿದಂತೆ ವಿವಿಧ ನಾಟಕ ಪ್ರಕಾರಗಳನ್ನು ಪ್ರದರ್ಶಿಸುವ ಜವಾಬ್ದಾರಿ ಯುವಜನರ ಮೇಲಿದೆ’ ಎಂದರು.<br /> <br /> ‘ಬೀದಿನಾಟಕದ ಬಗ್ಗೆ ಮೂರ್ತಿ ಅವರ ಪ್ರೀತಿ ಅಮೋಘವಾದುದು. ಕನ್ನಡದಲ್ಲಿ ಬೀದಿನಾಟಕಕ್ಕೆ ಚಾಲನೆ ನೀಡಿದವರು ಅವರು. ಅವರು ಉತ್ತಮ ಮಾತುಗಾರ. ಅವರ ಪ್ರಯೋಗಶೀಲತೆ ಶ್ಲಾಘ ನೀಯ’ ಎಂದರು.<br /> <br /> ಮೇಯರ್ ಬಿ.ಎಸ್.ಸತ್ಯನಾರಾಯಣ, ‘ಹಿರಿಯ ಕಲಾವಿದರ ಸಲಹೆ ಸೂಚನೆಗಳನ್ನು ಪಡೆದು ಪುರಭವನದ ನವೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗುವುದು’ ಎಂದರು.<br /> <br /> ಮತ್ತಿತರರು ಇದ್ದರು. ಇದೇ ಸಂದರ್ಭ ಮಕ್ಕಳ ಚಿತ್ರಕಲಾ ಸ್ಪರ್ಧೆ, ಮಕ್ಕಳಿಗೆ ಹಾಡಿನ ಶಿಬಿರ, ಬೀದಿನಾಟಕ, ಚಿತ್ರಕಲಾ ಪ್ರದರ್ಶನ, ಕರಕುಶಲ ವಸ್ತುಪ್ರದರ್ಶನ, ಹಿರಿಯರಿಗೆ ಹಾಡಿನ ಶಿಬಿರಗಳನ್ನು ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಆಡು ನುಡಿಯ ಮೂಲಕ ಮಕ್ಕಳಿಗೆ ಕನ್ನಡ ಕಲಿಸುವ ಕೆಲಸ ಆಗಬೇಕಿದೆ’ ಎಂದು ಹಿರಿಯ ರಂಗಕರ್ಮಿ ಪ್ರಸನ್ನ ಅಭಿಪ್ರಾಯಪಟ್ಟರು.<br /> ರಂಗಕರ್ಮಿ ಎ.ಎಸ್.ಮೂರ್ತಿ ಅವರ ನೆನಪಿನಲ್ಲಿ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಹನುಮಂತನಗರದ ರಾಮಾಂಜನೇಯ ಗುಡ್ಡದಲ್ಲಿ ಭಾನುವಾರ ನಡೆದ ಕಲೋತ್ಸವದಲ್ಲಿ ಅವರು ಮಾತನಾಡಿದರು.<br /> <br /> ‘ಹೆಚ್ಚು ಸಂಸ್ಕೃತ ಪದಗಳನ್ನು ಒಳಗೊಂಡಿರುವ ಕನ್ನಡದಿಂದ ಮಕ್ಕಳನ್ನು ಸೆಳೆಯಲು ಸಾಧ್ಯವಿಲ್ಲ. ಆರಂಭಿಕ ಹಂತದಲ್ಲೇ ರನ್ನ, ಪಂಪನ ಕಾವ್ಯಗಳನ್ನು ಓದಿಸಿದರೆ ಮಕ್ಕಳಿಗೆ ಕಲಿಕೆ ಕಷ್ಟವಾಗುತ್ತದೆ. ಅವರು ಆತಂಕಕ್ಕೊಳಗಾಗುತ್ತಾರೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಆಡು ನುಡಿಯಲ್ಲೇ ಕನ್ನಡ ಕಲಿಸಬೇಕು’ ಎಂದು ಅವರು ಕಿವಿಮಾತು ಹೇಳಿದರು.<br /> <br /> ‘ಕಲೆಗೂ ಸಂಸ್ಕೃತಿಗೂ ಇರುವ ಸಂಬಂಧದ ಕುರಿತು ಮಕ್ಕಳಿಗೆ ತಿಳಿಸುವ ಕೆಲಸವನ್ನು ಪೋಷಕರು ಮಾಡಬೇಕು’ ಎಂದು ಅವರು ಸಲಹೆ ನೀಡಿದರು.<br /> ‘ಮೂರ್ತಿ ಅವರು ಯುವಕರನ್ನು ಒಡನಾಡಿಗಳನ್ನಾಗಿ ಮಾಡಿಕೊಂಡು ಮಕ್ಕಳಿಗಾಗಿ ನಾಟಕ ಆಡಿದರು. ಕಲಾಶಾಲೆಯನ್ನು ಆರಂಭಿಸಿದರು. ರಂಗಭೂಮಿಯಲ್ಲಿ ಹೊಸ ಹೊಸ ಪ್ರಯೋಗ ಮಾಡಿದರು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.<br /> <br /> ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ, ‘ರಂಗಭೂಮಿ ಈಗ ಅವನತಿಯ ಅಂಚಿನಲ್ಲಿ ಇದೆ. ಇಂತಹ ಸಂದರ್ಭದಲ್ಲಿ ಬೀದಿನಾಟಕ ಸೇರಿದಂತೆ ವಿವಿಧ ನಾಟಕ ಪ್ರಕಾರಗಳನ್ನು ಪ್ರದರ್ಶಿಸುವ ಜವಾಬ್ದಾರಿ ಯುವಜನರ ಮೇಲಿದೆ’ ಎಂದರು.<br /> <br /> ‘ಬೀದಿನಾಟಕದ ಬಗ್ಗೆ ಮೂರ್ತಿ ಅವರ ಪ್ರೀತಿ ಅಮೋಘವಾದುದು. ಕನ್ನಡದಲ್ಲಿ ಬೀದಿನಾಟಕಕ್ಕೆ ಚಾಲನೆ ನೀಡಿದವರು ಅವರು. ಅವರು ಉತ್ತಮ ಮಾತುಗಾರ. ಅವರ ಪ್ರಯೋಗಶೀಲತೆ ಶ್ಲಾಘ ನೀಯ’ ಎಂದರು.<br /> <br /> ಮೇಯರ್ ಬಿ.ಎಸ್.ಸತ್ಯನಾರಾಯಣ, ‘ಹಿರಿಯ ಕಲಾವಿದರ ಸಲಹೆ ಸೂಚನೆಗಳನ್ನು ಪಡೆದು ಪುರಭವನದ ನವೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗುವುದು’ ಎಂದರು.<br /> <br /> ಮತ್ತಿತರರು ಇದ್ದರು. ಇದೇ ಸಂದರ್ಭ ಮಕ್ಕಳ ಚಿತ್ರಕಲಾ ಸ್ಪರ್ಧೆ, ಮಕ್ಕಳಿಗೆ ಹಾಡಿನ ಶಿಬಿರ, ಬೀದಿನಾಟಕ, ಚಿತ್ರಕಲಾ ಪ್ರದರ್ಶನ, ಕರಕುಶಲ ವಸ್ತುಪ್ರದರ್ಶನ, ಹಿರಿಯರಿಗೆ ಹಾಡಿನ ಶಿಬಿರಗಳನ್ನು ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>