<p>ಬೆಂಗಳೂರು: ಬಾಂಬ್ ಸ್ಫೋಟದಿಂದಾಗಿ ತಲ್ಲಣಗೊಂಡಿದ್ದ ನಗರದ ಚರ್ಚ್ ಸ್ಟ್ರೀಟ್ನಲ್ಲಿ ಶನಿವಾರ ಸಂಜೆ ಸಂಭ್ರಮ ಮನೆ ಮಾಡಿತ್ತು. ಎಲ್ಲಾ ಆತಂಕಗಳನ್ನು ಮರೆತು ಜನರು ಗಾಳಿಪಟಗಳನ್ನು ಹಾರಿಸುವ ಮೂಲಕ ಸಂಭ್ರಮಿಸಿದರು.<br /> <br /> ‘ಬೆಂಗಳೂರು ನೀಡ್ಸ್ ಯು’ ಸಂಘಟನೆ ವತಿಯಿಂದ ಆಯೋಜಿಸಲಾಗಿದ್ದ ಗಾಳಿಪಟ ಉತ್ಸವದಲ್ಲಿ ಚರ್ಚ್ ಸ್ಟ್ರೀಟ್ನ ವ್ಯಾಪಾರಿಗಳು, ಉದ್ಯಮಿಗಳು, ರೆಸ್ಟೋರೆಂಟ್ಗಳ ಮಾಲೀಕರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನಗರದ ವಿವಿಧ ಭಾಗಗಳ ನೂರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.<br /> <br /> ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಸಭಾ ಸದಸ್ಯ ಪ್ರೊ.ಎಂ.ವಿ.ರಾಜೀವ್ಗೌಡ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿ, ‘ನನ್ನ ಕಚೇರಿ ಸಹ ಚರ್ಚ್ ಸ್ಟ್ರೀಟ್ನಲ್ಲಿದೆ. ಸದಾ ಜನರಿಂದ ಕೂಡಿರುತ್ತಿದ್ದ ಈ ರಸ್ತೆ ಕೆಲ ದಿನಗಳಿಂದ ಕಳೆಗುಂದಿತ್ತು. ಭಯದ ವಾತಾವರಣ ನಿರ್ಮಾಣವಾಗಿತ್ತು. ಎಲ್ಲರೂ ಒಟ್ಟಿಗೆ ಸೇರಿ ಕಹಿ ಘಟನೆಯನ್ನು ಮರೆಯುವ ಉದ್ದೇಶದಿಂದ ಈ ಗಾಳಿಪಟ ಉತ್ಸವ ಆಯೋಜಿಸಲಾಗಿದೆ’ ಎಂದರು.<br /> <br /> ‘ಸ್ಫೋಟದ ನಂತರ ಚರ್ಚ್ ಸ್ಟ್ರೀಟ್ಗೆ ಬರಲು ಭಯವಾಗುತ್ತಿತ್ತು. ಯಾರೋ ಎಸಗುವ ಕೃತ್ಯಕ್ಕೆ ಅಮಾಯಕರು ಬಲಿಯಾಗುತ್ತಾರೆ. ಇಂತಹ ಘಟನೆಗಳು ಮತ್ತೆ ನಗರದಲ್ಲಿ ಮರುಕಳಿಸಬಾರದು.<br /> <br /> ಎಲ್ಲರೂ ಒಂದೆಡೆ ಸೇರಿ ಇಂತಹ ಉತ್ಸವಗಳಲ್ಲಿ ಪಾಲ್ಗೊಂಡಾಗ ಮಾತ್ರ ಕಹಿ ಘಟನೆಗಳನ್ನು ಮರೆಯಲು ಸಾಧ್ಯ’ ಎಂದು ಉತ್ಸವದಲ್ಲಿ ಪಾಲ್ಗೊಂಡಿದ್ದ ಕೃತಿ ಹೇಳಿದರು.<br /> <br /> ಚರ್ಚ್ ಸ್ಟ್ರೀಟ್ನ ಬ್ರಿಗೇಡ್ ಗಾರ್ಡನ್, ಮಾಲಿನ್ಯ ನಿಯಂತ್ರಣ ಮಂಡಳಿ, ಎಸ್ಬಿಐ ಬ್ಯಾಂಕ್ ಕಟ್ಟಡ, ಸಿಟಿ ಸೆಂಟರ್ ಸೇರಿದಂತೆ ಹಲವು ಕಟ್ಟಡಗಳ ಮೇಲ್ಬಾಗದಿಂದ ಗಾಳಿಪಟಗಳನ್ನು ಹಾರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಾಂಬ್ ಸ್ಫೋಟದಿಂದಾಗಿ ತಲ್ಲಣಗೊಂಡಿದ್ದ ನಗರದ ಚರ್ಚ್ ಸ್ಟ್ರೀಟ್ನಲ್ಲಿ ಶನಿವಾರ ಸಂಜೆ ಸಂಭ್ರಮ ಮನೆ ಮಾಡಿತ್ತು. ಎಲ್ಲಾ ಆತಂಕಗಳನ್ನು ಮರೆತು ಜನರು ಗಾಳಿಪಟಗಳನ್ನು ಹಾರಿಸುವ ಮೂಲಕ ಸಂಭ್ರಮಿಸಿದರು.<br /> <br /> ‘ಬೆಂಗಳೂರು ನೀಡ್ಸ್ ಯು’ ಸಂಘಟನೆ ವತಿಯಿಂದ ಆಯೋಜಿಸಲಾಗಿದ್ದ ಗಾಳಿಪಟ ಉತ್ಸವದಲ್ಲಿ ಚರ್ಚ್ ಸ್ಟ್ರೀಟ್ನ ವ್ಯಾಪಾರಿಗಳು, ಉದ್ಯಮಿಗಳು, ರೆಸ್ಟೋರೆಂಟ್ಗಳ ಮಾಲೀಕರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನಗರದ ವಿವಿಧ ಭಾಗಗಳ ನೂರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.<br /> <br /> ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಸಭಾ ಸದಸ್ಯ ಪ್ರೊ.ಎಂ.ವಿ.ರಾಜೀವ್ಗೌಡ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿ, ‘ನನ್ನ ಕಚೇರಿ ಸಹ ಚರ್ಚ್ ಸ್ಟ್ರೀಟ್ನಲ್ಲಿದೆ. ಸದಾ ಜನರಿಂದ ಕೂಡಿರುತ್ತಿದ್ದ ಈ ರಸ್ತೆ ಕೆಲ ದಿನಗಳಿಂದ ಕಳೆಗುಂದಿತ್ತು. ಭಯದ ವಾತಾವರಣ ನಿರ್ಮಾಣವಾಗಿತ್ತು. ಎಲ್ಲರೂ ಒಟ್ಟಿಗೆ ಸೇರಿ ಕಹಿ ಘಟನೆಯನ್ನು ಮರೆಯುವ ಉದ್ದೇಶದಿಂದ ಈ ಗಾಳಿಪಟ ಉತ್ಸವ ಆಯೋಜಿಸಲಾಗಿದೆ’ ಎಂದರು.<br /> <br /> ‘ಸ್ಫೋಟದ ನಂತರ ಚರ್ಚ್ ಸ್ಟ್ರೀಟ್ಗೆ ಬರಲು ಭಯವಾಗುತ್ತಿತ್ತು. ಯಾರೋ ಎಸಗುವ ಕೃತ್ಯಕ್ಕೆ ಅಮಾಯಕರು ಬಲಿಯಾಗುತ್ತಾರೆ. ಇಂತಹ ಘಟನೆಗಳು ಮತ್ತೆ ನಗರದಲ್ಲಿ ಮರುಕಳಿಸಬಾರದು.<br /> <br /> ಎಲ್ಲರೂ ಒಂದೆಡೆ ಸೇರಿ ಇಂತಹ ಉತ್ಸವಗಳಲ್ಲಿ ಪಾಲ್ಗೊಂಡಾಗ ಮಾತ್ರ ಕಹಿ ಘಟನೆಗಳನ್ನು ಮರೆಯಲು ಸಾಧ್ಯ’ ಎಂದು ಉತ್ಸವದಲ್ಲಿ ಪಾಲ್ಗೊಂಡಿದ್ದ ಕೃತಿ ಹೇಳಿದರು.<br /> <br /> ಚರ್ಚ್ ಸ್ಟ್ರೀಟ್ನ ಬ್ರಿಗೇಡ್ ಗಾರ್ಡನ್, ಮಾಲಿನ್ಯ ನಿಯಂತ್ರಣ ಮಂಡಳಿ, ಎಸ್ಬಿಐ ಬ್ಯಾಂಕ್ ಕಟ್ಟಡ, ಸಿಟಿ ಸೆಂಟರ್ ಸೇರಿದಂತೆ ಹಲವು ಕಟ್ಟಡಗಳ ಮೇಲ್ಬಾಗದಿಂದ ಗಾಳಿಪಟಗಳನ್ನು ಹಾರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>