<p><strong>ಮಂಡ್ಯ: </strong>ನಾಗಮಂಗಲ ತಾಲ್ಲೂಕಿನ ಚಂದ್ರಶೇಖರಪುರ ಗ್ರಾಮ ಬಳಿ ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಮೂಡಿಸಿದ್ದ ಕರಡಿ ಒಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಸೆರೆ ಹಿಡಿದಿದ್ದಾರೆ.<br /> <br /> ಮುಂಜಾನೆ ಬಹಿರ್ದೆಸೆಗೆ ತೆರಳಿದ್ದ ಚಂದ್ರಶೇಖರ್ ಎಂಬಾತನಿಗೆ ಕರಡಿಗಳು ಕಾಣಿಸಿಕೊಂಡಿವೆ. ಭಯಭೀತನಾದ ಈತ ಗ್ರಾಮಕ್ಕೆ ಬಂದು ಜನರಿಗೆ ಸುದ್ದಿ ಮುಟ್ಟಿಸಿದ್ದಾನೆ. ನಂತರ, ಗುಂಪುಗೂಡಿ ಹೊಲದತ್ತ ಬಂದ ಜನರ ದಂಡು ಕಂಡ ಕರಡಿಗಳು ನಾಪತ್ತೆಯಾಗಿ, ಮತ್ತೊಂದು ಪ್ರದೇಶದಲ್ಲಿ ಕಾಣಿಸಿಕೊಂಡಿವೆ.<br /> <br /> ಈ ಬಗೆಗೆ ಅರಣ್ಯ ಇಲಾಖೆ ಸಿಬ್ಬಂದಿಗೂ ಮಾಹಿತಿ ರವಾನಿಸಲಾಗಿದೆ. ತಕ್ಷಣ ಬೋನು, ಬಲೆಯೊಂದಿಗೆ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ.<br /> <br /> ಬೋನಿನಲ್ಲಿ ಹಲಸಿನ ಹಣ್ಣು ಇಟ್ಟು ಕರಡಿಯನ್ನು ಆಕರ್ಷಿಸಲಾಯಿತು. ಹಣ್ಣಿನ ವಾಸನೆ ಹಿಡಿದು ಬಂದ ಕರಡಿ ಬೋನಿನೊಳಗೆ ಸೆರೆ ಬಿದ್ದಿದೆ.</p>.<p>ಬಲೆ ಬೀಸಿ ಸೆರೆ ಹಿಡಿಯುವ ವೇಳೆ ಕರಡಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸೂಕ್ತ ಚಿಕಿತ್ಸೆ ಕೊಡಿಸಿ ನಂತರ ಕಾಡಿಗೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದರು. <br /> <br /> ವಲಯ ಅರಣ್ಯಾಧಿಕಾರಿ ರಮೇಶ್, ಸಿಬ್ಬಂದಿಗಳಾದ ಮಂಜು, ಗಿರಿಯಪ್ಪ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ನಾಗಮಂಗಲ ತಾಲ್ಲೂಕಿನ ಚಂದ್ರಶೇಖರಪುರ ಗ್ರಾಮ ಬಳಿ ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಮೂಡಿಸಿದ್ದ ಕರಡಿ ಒಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಸೆರೆ ಹಿಡಿದಿದ್ದಾರೆ.<br /> <br /> ಮುಂಜಾನೆ ಬಹಿರ್ದೆಸೆಗೆ ತೆರಳಿದ್ದ ಚಂದ್ರಶೇಖರ್ ಎಂಬಾತನಿಗೆ ಕರಡಿಗಳು ಕಾಣಿಸಿಕೊಂಡಿವೆ. ಭಯಭೀತನಾದ ಈತ ಗ್ರಾಮಕ್ಕೆ ಬಂದು ಜನರಿಗೆ ಸುದ್ದಿ ಮುಟ್ಟಿಸಿದ್ದಾನೆ. ನಂತರ, ಗುಂಪುಗೂಡಿ ಹೊಲದತ್ತ ಬಂದ ಜನರ ದಂಡು ಕಂಡ ಕರಡಿಗಳು ನಾಪತ್ತೆಯಾಗಿ, ಮತ್ತೊಂದು ಪ್ರದೇಶದಲ್ಲಿ ಕಾಣಿಸಿಕೊಂಡಿವೆ.<br /> <br /> ಈ ಬಗೆಗೆ ಅರಣ್ಯ ಇಲಾಖೆ ಸಿಬ್ಬಂದಿಗೂ ಮಾಹಿತಿ ರವಾನಿಸಲಾಗಿದೆ. ತಕ್ಷಣ ಬೋನು, ಬಲೆಯೊಂದಿಗೆ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ.<br /> <br /> ಬೋನಿನಲ್ಲಿ ಹಲಸಿನ ಹಣ್ಣು ಇಟ್ಟು ಕರಡಿಯನ್ನು ಆಕರ್ಷಿಸಲಾಯಿತು. ಹಣ್ಣಿನ ವಾಸನೆ ಹಿಡಿದು ಬಂದ ಕರಡಿ ಬೋನಿನೊಳಗೆ ಸೆರೆ ಬಿದ್ದಿದೆ.</p>.<p>ಬಲೆ ಬೀಸಿ ಸೆರೆ ಹಿಡಿಯುವ ವೇಳೆ ಕರಡಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸೂಕ್ತ ಚಿಕಿತ್ಸೆ ಕೊಡಿಸಿ ನಂತರ ಕಾಡಿಗೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದರು. <br /> <br /> ವಲಯ ಅರಣ್ಯಾಧಿಕಾರಿ ರಮೇಶ್, ಸಿಬ್ಬಂದಿಗಳಾದ ಮಂಜು, ಗಿರಿಯಪ್ಪ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>