<p>ನವದೆಹಲಿ (ಪಿಟಿಐ): ರೈಲ್ವೆ ಸಚಿವ ದಿನೇಶ್ ತ್ರಿವೇದಿ ಅವರ ನಿರ್ಗಮನದ ಬಗ್ಗೆ ಸರ್ಕಾರಕ್ಕೆ ಆತುರವಿಲ್ಲ ಎಂದು ಸ್ಪಷ್ಟಪಡಿಸಿರುವ ಕಾಂಗ್ರೆಸ್ ಪಕ್ಷದ ಮೂಲಗಳು, ಈ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕಾಗಿರುವುದು ತೃಣಮೂಲ ಕಾಂಗ್ರೆಸ್ ಎಂದು ಸ್ಪಷ್ಟಪಡಿಸಿದೆ.<br /> <br /> ಸಚಿವರ ರಾಜೀನಾಮೆ ವಿಚಾರದಲ್ಲಿ ತೃಣಮೂಲ ಕಾಂಗ್ರೆಸ್ನಲ್ಲಿಯೆ ಮರುಚಿಂತನೆ ನಡೆದಂತೆ ಕಾಣಿಸುತ್ತಿದೆ ಮತ್ತು ರೈಲ್ವೆ ಬಜೆಟ್ ಅಂಗೀಕಾರವಾಗುವವರೆಗೆ ಪರಿಸ್ಥಿತಿ ಇದೆ ರೀತಿ ಮುಂದುವರಿಯಬಹುದು ಎಂದು ಎಐಸಿಸಿ ವಕ್ತಾರ ಮನಿಶ್ ತಿವಾರಿ ತಿಳಿಸಿದ್ದಾರೆ.<br /> <br /> ರೈಲ್ವೆ ಬಜೆಟ್ ಈಗ ಸಂಸತ್ ಆಸ್ತಿಯಾಗಿರುವುದರಿಂದ ಸಂಸತ್ತೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ಪರೋಕ್ಷವಾಗಿ ಪ್ರಯಾಣ ದರ ಇಳಿಸುವಂತೆ ತೃಣಮೂಲ ಕಾಂಗ್ರೆಸ್ ಒತ್ತಡಕ್ಕೆ ಮಣಿಯುವುದಿಲ್ಲ ಎಂಬ ಇಂಗಿತ ವ್ಯಕ್ತಪಡಿಸಿದರು.<br /> <strong><br /> `ಯಾವ ಕ್ಷಣದಲ್ಲಾದರೂ ಬದಲಾವಣೆ~</strong><br /> ಯಾವುದೇ ಸಂದರ್ಭದಲ್ಲಾದರೂ ದಿನೇಶ್ ತ್ರಿವೇದಿ ಅವರ ಸಚಿವ ಸ್ಥಾನದ ಬಗ್ಗೆ ತೀರ್ಮಾನವಾಗುವ ಸಾಧ್ಯತೆ ಇದೆ ಎಂದು ತೃಣಮೂಲ ಕಾಂಗ್ರೆಸ್ನ ಮುಖಂಡ ಸುದೀಪ್ ಬಂದೋಪಾಧ್ಯಾಯ ತಿಳಿಸಿದ್ದಾರೆ.<br /> <br /> ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಮಮತಾ ಬ್ಯಾನರ್ಜಿ ಮಧ್ಯೆ ಈ ಬಗ್ಗೆ ಮಾತುಕತೆ ಆಗಿದೆ. ಆದ್ದರಿಂದ ಯಾವುದೇ ಕ್ಷಣದಲ್ಲಾದರೂ ನಿರ್ಧಾರ ಹೊರಬೀಳುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ. ರೈಲ್ವೆ ಬಜೆಟ್ ಚರ್ಚೆಗೆ ಮೊದಲು ಅಥವಾ ನಂತರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕಾದುದು ಸರ್ಕಾರ ಎಂದು ಅವರು ತಿಳಿಸಿದ್ದಾರೆ.<br /> <br /> ತ್ರಿವೇದಿ ಬದಲು ಮುಕುಲ್ ರಾಯ್ ನೇಮಕವಾಗಬೇಕು ಎಂಬುದು ಅಂತಿಮ ನಿರ್ಧಾರ. ಇದರಲ್ಲಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.<br /> <br /> <strong>ಬೆಂಬಲ ಅಬಾಧಿತ: ಎಸ್ಪಿ ಸ್ಪಷ್ಟನೆ</strong><br /> ಬಾಹ್ಯ ಬೆಂಬಲವನ್ನು ಮುಂದುವರಿಸಲಾಗುವುದು ಎಂದು ಸಮಾಜವಾದಿ ಪಕ್ಷ ಸ್ಪಷ್ಟಪಡಿಸಿರುವುದರಿಂದ ತೃಣಮೂಲ ಕಾಂಗ್ರೆಸ್ನ ಕಿರಿಕಿರಿ ಎದುರಿಸುತ್ತಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ನಿರಾಳವಾಗಿದೆ.<br /> <br /> ಒಮ್ಮೆ ತೃಣಮೂಲ ಕಾಂಗ್ರೆಸ್ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆದರೂ ತಮ್ಮ ಪಕ್ಷದ ಬಾಹ್ಯ ಬೆಂಬಲ ಮುಂದುವರಿಯುತ್ತದೆ ಎಂದು ಸಮಾಜವಾದಿ ಪಕ್ಷದ ಸಂಸದ ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.<br /> ಸಮಾಜವಾದಿ ಪಕ್ಷವೂ ಸರ್ಕಾರದಲ್ಲಿ ಭಾಗಿಯಾಗಲಿದೆ ಎಂಬ ವರದಿಯನ್ನು ಅವರು ತಳ್ಳಿಹಾಕಿದ್ದಾರೆ. <br /> <br /> ಸೋನಿಯಾ ಗಾಂಧಿ ಅವರ ಆದೇಶದಂತೆ ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಪವನ್ ಕುಮಾರ್ ಬನ್ಸಲ್ ಅವರು ಅಖಿಲೇಶ್ ಯಾದವ್ ಅವರು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಭಾಗವಹಿಸಿರುವುದು ಎರಡೂ ಪಕ್ಷಗಳ ಸ್ನೇಹ ಭದ್ರವಾಗಲು ಸಹಾಯಕವಾಗಿದೆ ಎಂದು ಹೇಳಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ರೈಲ್ವೆ ಸಚಿವ ದಿನೇಶ್ ತ್ರಿವೇದಿ ಅವರ ನಿರ್ಗಮನದ ಬಗ್ಗೆ ಸರ್ಕಾರಕ್ಕೆ ಆತುರವಿಲ್ಲ ಎಂದು ಸ್ಪಷ್ಟಪಡಿಸಿರುವ ಕಾಂಗ್ರೆಸ್ ಪಕ್ಷದ ಮೂಲಗಳು, ಈ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕಾಗಿರುವುದು ತೃಣಮೂಲ ಕಾಂಗ್ರೆಸ್ ಎಂದು ಸ್ಪಷ್ಟಪಡಿಸಿದೆ.<br /> <br /> ಸಚಿವರ ರಾಜೀನಾಮೆ ವಿಚಾರದಲ್ಲಿ ತೃಣಮೂಲ ಕಾಂಗ್ರೆಸ್ನಲ್ಲಿಯೆ ಮರುಚಿಂತನೆ ನಡೆದಂತೆ ಕಾಣಿಸುತ್ತಿದೆ ಮತ್ತು ರೈಲ್ವೆ ಬಜೆಟ್ ಅಂಗೀಕಾರವಾಗುವವರೆಗೆ ಪರಿಸ್ಥಿತಿ ಇದೆ ರೀತಿ ಮುಂದುವರಿಯಬಹುದು ಎಂದು ಎಐಸಿಸಿ ವಕ್ತಾರ ಮನಿಶ್ ತಿವಾರಿ ತಿಳಿಸಿದ್ದಾರೆ.<br /> <br /> ರೈಲ್ವೆ ಬಜೆಟ್ ಈಗ ಸಂಸತ್ ಆಸ್ತಿಯಾಗಿರುವುದರಿಂದ ಸಂಸತ್ತೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ಪರೋಕ್ಷವಾಗಿ ಪ್ರಯಾಣ ದರ ಇಳಿಸುವಂತೆ ತೃಣಮೂಲ ಕಾಂಗ್ರೆಸ್ ಒತ್ತಡಕ್ಕೆ ಮಣಿಯುವುದಿಲ್ಲ ಎಂಬ ಇಂಗಿತ ವ್ಯಕ್ತಪಡಿಸಿದರು.<br /> <strong><br /> `ಯಾವ ಕ್ಷಣದಲ್ಲಾದರೂ ಬದಲಾವಣೆ~</strong><br /> ಯಾವುದೇ ಸಂದರ್ಭದಲ್ಲಾದರೂ ದಿನೇಶ್ ತ್ರಿವೇದಿ ಅವರ ಸಚಿವ ಸ್ಥಾನದ ಬಗ್ಗೆ ತೀರ್ಮಾನವಾಗುವ ಸಾಧ್ಯತೆ ಇದೆ ಎಂದು ತೃಣಮೂಲ ಕಾಂಗ್ರೆಸ್ನ ಮುಖಂಡ ಸುದೀಪ್ ಬಂದೋಪಾಧ್ಯಾಯ ತಿಳಿಸಿದ್ದಾರೆ.<br /> <br /> ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಮಮತಾ ಬ್ಯಾನರ್ಜಿ ಮಧ್ಯೆ ಈ ಬಗ್ಗೆ ಮಾತುಕತೆ ಆಗಿದೆ. ಆದ್ದರಿಂದ ಯಾವುದೇ ಕ್ಷಣದಲ್ಲಾದರೂ ನಿರ್ಧಾರ ಹೊರಬೀಳುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ. ರೈಲ್ವೆ ಬಜೆಟ್ ಚರ್ಚೆಗೆ ಮೊದಲು ಅಥವಾ ನಂತರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕಾದುದು ಸರ್ಕಾರ ಎಂದು ಅವರು ತಿಳಿಸಿದ್ದಾರೆ.<br /> <br /> ತ್ರಿವೇದಿ ಬದಲು ಮುಕುಲ್ ರಾಯ್ ನೇಮಕವಾಗಬೇಕು ಎಂಬುದು ಅಂತಿಮ ನಿರ್ಧಾರ. ಇದರಲ್ಲಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.<br /> <br /> <strong>ಬೆಂಬಲ ಅಬಾಧಿತ: ಎಸ್ಪಿ ಸ್ಪಷ್ಟನೆ</strong><br /> ಬಾಹ್ಯ ಬೆಂಬಲವನ್ನು ಮುಂದುವರಿಸಲಾಗುವುದು ಎಂದು ಸಮಾಜವಾದಿ ಪಕ್ಷ ಸ್ಪಷ್ಟಪಡಿಸಿರುವುದರಿಂದ ತೃಣಮೂಲ ಕಾಂಗ್ರೆಸ್ನ ಕಿರಿಕಿರಿ ಎದುರಿಸುತ್ತಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ನಿರಾಳವಾಗಿದೆ.<br /> <br /> ಒಮ್ಮೆ ತೃಣಮೂಲ ಕಾಂಗ್ರೆಸ್ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆದರೂ ತಮ್ಮ ಪಕ್ಷದ ಬಾಹ್ಯ ಬೆಂಬಲ ಮುಂದುವರಿಯುತ್ತದೆ ಎಂದು ಸಮಾಜವಾದಿ ಪಕ್ಷದ ಸಂಸದ ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.<br /> ಸಮಾಜವಾದಿ ಪಕ್ಷವೂ ಸರ್ಕಾರದಲ್ಲಿ ಭಾಗಿಯಾಗಲಿದೆ ಎಂಬ ವರದಿಯನ್ನು ಅವರು ತಳ್ಳಿಹಾಕಿದ್ದಾರೆ. <br /> <br /> ಸೋನಿಯಾ ಗಾಂಧಿ ಅವರ ಆದೇಶದಂತೆ ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಪವನ್ ಕುಮಾರ್ ಬನ್ಸಲ್ ಅವರು ಅಖಿಲೇಶ್ ಯಾದವ್ ಅವರು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಭಾಗವಹಿಸಿರುವುದು ಎರಡೂ ಪಕ್ಷಗಳ ಸ್ನೇಹ ಭದ್ರವಾಗಲು ಸಹಾಯಕವಾಗಿದೆ ಎಂದು ಹೇಳಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>