<p><strong>ಪೆಶಾವರ(ಪಿಟಿಐ): </strong>ಪ್ರಾರ್ಥನೆ ವೇಳೆ ನಡೆದ ಆತ್ಮಹತ್ಯಾ ದಾಳಿಯಲ್ಲಿ 14 ಮಂದಿ ಸ್ಥಳದಲ್ಲೇ ಸಾವಿಗೀಡಾಗಿ, 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಪೆಶಾವರದಲ್ಲಿ ಶುಕ್ರವಾರ ನಡೆದಿದೆ.<br /> <br /> ಪೆಶಾವರದ ಗುಲ್ಷನ್ ಕಾಲೊನಿಯ ಹುಸೇನಿಯಾ ಮದರಸಾದಲ್ಲಿ ಶುಕ್ರವಾರದ ಸಾಮೂಹಿಕ ಪ್ರಾರ್ಥನೆಗೆ 200 ಮಂದಿ ಸೇರಿದ್ದರು. ಈ ಸಂದರ್ಭದಲ್ಲಿ ಇಬ್ಬರು ಸಹಚರರೊಂದಿಗೆ ಆಗಮಿಸಿದ ಆತ್ಮಹತ್ಯಾ ದಾಳಿಕೋರ ತನ್ನನ್ನು ಸ್ಫೋಟಿಸಿಕೊಂಡ. ಸ್ಫೋಟದ ನಂತರ ಇಬ್ಬರು ಸಹಚರರು ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> <br /> ಪ್ರಾರ್ಥನಾ ಸ್ಥಳಕ್ಕೆ ಆಗಮಿಸುವ ಸಮಯದಲ್ಲಿ ಆತ್ಮಹತ್ಯಾ ದಾಳಿಕೋರ ಮತ್ತು ಆತನ ಇಬ್ಬರು ಸಹಚರರು ರಕ್ಷಣಾ ಕಾರ್ಯಕ್ಕೆ ನಿಯೋಜಿಸಿದ್ದ ಪೊಲೀಸ್ನನ್ನು ಗುಂಡಿಕ್ಕಿ ಕೊಂದರು. ಸೂಕ್ತ ಬಂದೋಬಸ್ತ್ ವ್ಯವಸ್ಥೆಯ ನಡುವೆಯೂ ದಾಳಿಕೋರರು ಒಳಗೆ ನುಸುಳಿ ಈ ದುಷ್ಕೃತ್ಯ ಎಸಗಿದರು.<br /> <br /> ದಾಳಿಕೋರರು ಮದರಸಾದೊಳಗೆ ನುಸುಳಿದಾಗ ಜನರು ಪ್ರಾರ್ಥನೆಯಲ್ಲಿ ಮಗ್ನರಾಗಿದ್ದರು. ಈ ಸಂದರ್ಭ ನೋಡಿ ದಾಳಿಕೋರ ತನ್ನನ್ನು ಸ್ಫೋಟಿಸಿಕೊಂಡ. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ದಾಳಿಯ ಹೊಣೆಯನ್ನು ಇದುವರೆಗೂ ಯಾವ ಸಂಘಟನೆಯೂ ಹೊತ್ತುಕೊಂಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೆಶಾವರ(ಪಿಟಿಐ): </strong>ಪ್ರಾರ್ಥನೆ ವೇಳೆ ನಡೆದ ಆತ್ಮಹತ್ಯಾ ದಾಳಿಯಲ್ಲಿ 14 ಮಂದಿ ಸ್ಥಳದಲ್ಲೇ ಸಾವಿಗೀಡಾಗಿ, 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಪೆಶಾವರದಲ್ಲಿ ಶುಕ್ರವಾರ ನಡೆದಿದೆ.<br /> <br /> ಪೆಶಾವರದ ಗುಲ್ಷನ್ ಕಾಲೊನಿಯ ಹುಸೇನಿಯಾ ಮದರಸಾದಲ್ಲಿ ಶುಕ್ರವಾರದ ಸಾಮೂಹಿಕ ಪ್ರಾರ್ಥನೆಗೆ 200 ಮಂದಿ ಸೇರಿದ್ದರು. ಈ ಸಂದರ್ಭದಲ್ಲಿ ಇಬ್ಬರು ಸಹಚರರೊಂದಿಗೆ ಆಗಮಿಸಿದ ಆತ್ಮಹತ್ಯಾ ದಾಳಿಕೋರ ತನ್ನನ್ನು ಸ್ಫೋಟಿಸಿಕೊಂಡ. ಸ್ಫೋಟದ ನಂತರ ಇಬ್ಬರು ಸಹಚರರು ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> <br /> ಪ್ರಾರ್ಥನಾ ಸ್ಥಳಕ್ಕೆ ಆಗಮಿಸುವ ಸಮಯದಲ್ಲಿ ಆತ್ಮಹತ್ಯಾ ದಾಳಿಕೋರ ಮತ್ತು ಆತನ ಇಬ್ಬರು ಸಹಚರರು ರಕ್ಷಣಾ ಕಾರ್ಯಕ್ಕೆ ನಿಯೋಜಿಸಿದ್ದ ಪೊಲೀಸ್ನನ್ನು ಗುಂಡಿಕ್ಕಿ ಕೊಂದರು. ಸೂಕ್ತ ಬಂದೋಬಸ್ತ್ ವ್ಯವಸ್ಥೆಯ ನಡುವೆಯೂ ದಾಳಿಕೋರರು ಒಳಗೆ ನುಸುಳಿ ಈ ದುಷ್ಕೃತ್ಯ ಎಸಗಿದರು.<br /> <br /> ದಾಳಿಕೋರರು ಮದರಸಾದೊಳಗೆ ನುಸುಳಿದಾಗ ಜನರು ಪ್ರಾರ್ಥನೆಯಲ್ಲಿ ಮಗ್ನರಾಗಿದ್ದರು. ಈ ಸಂದರ್ಭ ನೋಡಿ ದಾಳಿಕೋರ ತನ್ನನ್ನು ಸ್ಫೋಟಿಸಿಕೊಂಡ. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ದಾಳಿಯ ಹೊಣೆಯನ್ನು ಇದುವರೆಗೂ ಯಾವ ಸಂಘಟನೆಯೂ ಹೊತ್ತುಕೊಂಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>