<p><strong>ಇಸ್ಲಾಮಾಬಾದ್ (ಪಿಟಿಐ):</strong> ಪೆಶಾವರದ ವಾಯವ್ಯ ಭಾಗದಲ್ಲಿ ಭಾನುವಾರ ನಡೆದ ಆತ್ಮಾಹುತಿ ದಾಳಿಯಲ್ಲಿ 15 ಜನರ ಹತ್ಯೆಯಾಗಿದ್ದು, 32 ಜನರು ಗಾಯಗೊಂಡಿದ್ದಾರೆ. ಪಾಕಿಸ್ತಾನದ ಹಿರಿಯ ರಾಜಕಾರಣಿಯೊಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ.</p>.<p>ಪೆಶಾವರದ ಬದಭೇರ್ ಪ್ರದೇಶದಲ್ಲಿನ ಸ್ಥಳೀಯ ರಾಜಕಾರಣಿಯೊಬ್ಬರ ಶವಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ಖೈಬರ್ ಪ್ರಾಂತ್ಯದ ಉಪ ಸಭಾಪತಿ ಖುಷ್ದಿಲ್ ಖಾನ್ ಅವರನ್ನು ಗುರಿಯಾಗಿಟ್ಟುಕೊಂಡು ಈ ದಾಳಿ ನಡೆಸಲಾಗಿತ್ತು. ಆದರೆ ಅಂತ್ಯಕ್ರಿಯೆ ಬಳಿಕ ನಡೆದ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಅವರು ತೆರಳಿದ ಕೆಲವೇ ನಿಮಿಷಗಳಲ್ಲಿ ಈ ಘಟನೆ ಸಂಭವಿಸಿದೆ.</p>.<p>ತಾಲಿಬಾನಿಗಳ ವಿರುದ್ಧ ಉಗ್ರ ಟೀಕಾಪ್ರಹಾರ ನಡೆಸುತ್ತಿದ್ದ ಖಾನ್ ಅವರನ್ನು ಗುರಿಯಾಗಿಟ್ಟುಕೊಳ್ಳಲಾಗಿತ್ತು. ಸ್ಫೋಟ ಸಂಭವಿಸುವ 10 ನಿಮಿಷಗಳ ಮುಂಚೆಯೇ ಅವರು ಅಲ್ಲಿಂದ ತೆರಳಿದ್ದರು ಎಂದು ಪೆಶಾವರದ ಪೊಲೀಸ್ ಮುಖ್ಯಸ್ಥ ಇಮ್ತಿಯಾಜ್ ಅಲ್ತಾಫ್ ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>ಘಟನೆಯಲ್ಲಿ ಗಾಯಗೊಂಡವರ ಸ್ಥಿತಿ ಗಂಭೀರವಾಗ್ದ್ದಿದು ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.</p>.<p>ಆತ್ಮಾಹುತಿ ದಾಳಿ ನಡೆಸಿದ ವ್ಯಕ್ತಿಯ ಕಾಲು ಮತ್ತು ತಲೆಯನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶಕ್ತಿಶಾಲಿ ಸ್ಫೋಟದಿಂದಾಗಿ ಹಲವು ವಾಹನಗಳು ಜಖಂಗೊಡಿವೆ. ಭದ್ರತಾ ಪಡೆಗಳು ಈ ಜಾಗದಲ್ಲಿ ಬೀಡುಬಿಟ್ಟಿದ್ದು, ಶೋಧ ಕಾರ್ಯಾಚರಣೆ ನಡೆಸಿವೆ. ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್ (ಪಿಟಿಐ):</strong> ಪೆಶಾವರದ ವಾಯವ್ಯ ಭಾಗದಲ್ಲಿ ಭಾನುವಾರ ನಡೆದ ಆತ್ಮಾಹುತಿ ದಾಳಿಯಲ್ಲಿ 15 ಜನರ ಹತ್ಯೆಯಾಗಿದ್ದು, 32 ಜನರು ಗಾಯಗೊಂಡಿದ್ದಾರೆ. ಪಾಕಿಸ್ತಾನದ ಹಿರಿಯ ರಾಜಕಾರಣಿಯೊಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ.</p>.<p>ಪೆಶಾವರದ ಬದಭೇರ್ ಪ್ರದೇಶದಲ್ಲಿನ ಸ್ಥಳೀಯ ರಾಜಕಾರಣಿಯೊಬ್ಬರ ಶವಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ಖೈಬರ್ ಪ್ರಾಂತ್ಯದ ಉಪ ಸಭಾಪತಿ ಖುಷ್ದಿಲ್ ಖಾನ್ ಅವರನ್ನು ಗುರಿಯಾಗಿಟ್ಟುಕೊಂಡು ಈ ದಾಳಿ ನಡೆಸಲಾಗಿತ್ತು. ಆದರೆ ಅಂತ್ಯಕ್ರಿಯೆ ಬಳಿಕ ನಡೆದ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಅವರು ತೆರಳಿದ ಕೆಲವೇ ನಿಮಿಷಗಳಲ್ಲಿ ಈ ಘಟನೆ ಸಂಭವಿಸಿದೆ.</p>.<p>ತಾಲಿಬಾನಿಗಳ ವಿರುದ್ಧ ಉಗ್ರ ಟೀಕಾಪ್ರಹಾರ ನಡೆಸುತ್ತಿದ್ದ ಖಾನ್ ಅವರನ್ನು ಗುರಿಯಾಗಿಟ್ಟುಕೊಳ್ಳಲಾಗಿತ್ತು. ಸ್ಫೋಟ ಸಂಭವಿಸುವ 10 ನಿಮಿಷಗಳ ಮುಂಚೆಯೇ ಅವರು ಅಲ್ಲಿಂದ ತೆರಳಿದ್ದರು ಎಂದು ಪೆಶಾವರದ ಪೊಲೀಸ್ ಮುಖ್ಯಸ್ಥ ಇಮ್ತಿಯಾಜ್ ಅಲ್ತಾಫ್ ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>ಘಟನೆಯಲ್ಲಿ ಗಾಯಗೊಂಡವರ ಸ್ಥಿತಿ ಗಂಭೀರವಾಗ್ದ್ದಿದು ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.</p>.<p>ಆತ್ಮಾಹುತಿ ದಾಳಿ ನಡೆಸಿದ ವ್ಯಕ್ತಿಯ ಕಾಲು ಮತ್ತು ತಲೆಯನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶಕ್ತಿಶಾಲಿ ಸ್ಫೋಟದಿಂದಾಗಿ ಹಲವು ವಾಹನಗಳು ಜಖಂಗೊಡಿವೆ. ಭದ್ರತಾ ಪಡೆಗಳು ಈ ಜಾಗದಲ್ಲಿ ಬೀಡುಬಿಟ್ಟಿದ್ದು, ಶೋಧ ಕಾರ್ಯಾಚರಣೆ ನಡೆಸಿವೆ. ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>