<p><strong>ಮುಂಬೈ (ಪಿಟಿಐ):</strong> ವಿವಾದಿತ ಆದರ್ಶ ಗೃಹ ಮಂಡಳಿ ಕಟ್ಟಡದ ಜಾಗವು ರಾಜ್ಯ ಸರ್ಕಾರಕ್ಕೆ ಸೇರಿದೆಯೇ ಹೊರತು ಸೇನೆಯದಲ್ಲ ಎಂದು ಈ ಪ್ರಕರಣದ ತನಿಖೆ ನಡೆಸುತ್ತಿರುವ ನ್ಯಾಯಾಂಗ ಸಮಿತಿಯು ಹೇಳಿದೆ. ಇದರಿಂದ ಮಹಾರಾಷ್ಟ್ರ ಸರ್ಕಾರ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.<br /> <br /> ಬಾಂಬೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜೆ.ಎ.ಪಾಟೀಲ್, ರಾಜ್ಯದ ಮಾಜಿ ಮುಖ್ಯ ಕಾರ್ಯದರ್ಶಿ ಪಿ.ಸುಬ್ರಮಣಿಯನ್ ನೇತೃತ್ವದ ದ್ವಿಸದಸ್ಯ ಸಮಿತಿಯು ಕಳೆದ ಶುಕ್ರವಾರ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದು, ಈ ಕಟ್ಟಡವನ್ನು ಸೈನಿಕರು ಹಾಗೂ ಅವರ ವಿಧವಾ ಪತ್ನಿಯರಿಗೆ ಮೀಸಲಾಗಿಟ್ಟಿಲ್ಲ ಎಂದೂ ಹೇಳಿದೆ.<br /> ಸಮಿತಿ ಸಲ್ಲಿಸಿದ ಮಧ್ಯಂತರ ವರದಿ ಕುರಿತು ಮಂಗಳವಾರ ಮಹಾರಾಷ್ಟ್ರ ಸಂಪುಟದಲ್ಲಿ ಚರ್ಚೆ ನಡೆದಿದೆ. <br /> <br /> ಕೊಲಾಬಾದಲ್ಲಿರುವ 31 ಮಹಡಿಯ ಈ ಕಟ್ಟಡದ ಮಾಲೀಕತ್ವದ ಬಗ್ಗೆ ವರದಿ ಬೆಳಕು ಚೆಲ್ಲಿದೆ ಎಂದು ಮೂಲಗಳು ತಿಳಿಸಿವೆ. ಈ ಜಮೀನು ರಕ್ಷಣಾ ಸಚಿವಾಲಯಕ್ಕೆ ಸೇರಿದ್ದರೂ ಇದನ್ನು ಸರ್ಕಾರವು ಆದರ್ಶ ಸೊಸೈಟಿಗೆ ಮಂಜೂರು ಮಾಡಿದೆ, ಅಲ್ಲದೆ ಕಟ್ಟಡ ನಿರ್ಮಾಣದಲ್ಲಿ ಪೌರ ಹಾಗೂ ಪರಿಸರ ನಿಯಮ ಉಲ್ಲಂಘಿಸಲಾಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ):</strong> ವಿವಾದಿತ ಆದರ್ಶ ಗೃಹ ಮಂಡಳಿ ಕಟ್ಟಡದ ಜಾಗವು ರಾಜ್ಯ ಸರ್ಕಾರಕ್ಕೆ ಸೇರಿದೆಯೇ ಹೊರತು ಸೇನೆಯದಲ್ಲ ಎಂದು ಈ ಪ್ರಕರಣದ ತನಿಖೆ ನಡೆಸುತ್ತಿರುವ ನ್ಯಾಯಾಂಗ ಸಮಿತಿಯು ಹೇಳಿದೆ. ಇದರಿಂದ ಮಹಾರಾಷ್ಟ್ರ ಸರ್ಕಾರ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.<br /> <br /> ಬಾಂಬೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜೆ.ಎ.ಪಾಟೀಲ್, ರಾಜ್ಯದ ಮಾಜಿ ಮುಖ್ಯ ಕಾರ್ಯದರ್ಶಿ ಪಿ.ಸುಬ್ರಮಣಿಯನ್ ನೇತೃತ್ವದ ದ್ವಿಸದಸ್ಯ ಸಮಿತಿಯು ಕಳೆದ ಶುಕ್ರವಾರ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದು, ಈ ಕಟ್ಟಡವನ್ನು ಸೈನಿಕರು ಹಾಗೂ ಅವರ ವಿಧವಾ ಪತ್ನಿಯರಿಗೆ ಮೀಸಲಾಗಿಟ್ಟಿಲ್ಲ ಎಂದೂ ಹೇಳಿದೆ.<br /> ಸಮಿತಿ ಸಲ್ಲಿಸಿದ ಮಧ್ಯಂತರ ವರದಿ ಕುರಿತು ಮಂಗಳವಾರ ಮಹಾರಾಷ್ಟ್ರ ಸಂಪುಟದಲ್ಲಿ ಚರ್ಚೆ ನಡೆದಿದೆ. <br /> <br /> ಕೊಲಾಬಾದಲ್ಲಿರುವ 31 ಮಹಡಿಯ ಈ ಕಟ್ಟಡದ ಮಾಲೀಕತ್ವದ ಬಗ್ಗೆ ವರದಿ ಬೆಳಕು ಚೆಲ್ಲಿದೆ ಎಂದು ಮೂಲಗಳು ತಿಳಿಸಿವೆ. ಈ ಜಮೀನು ರಕ್ಷಣಾ ಸಚಿವಾಲಯಕ್ಕೆ ಸೇರಿದ್ದರೂ ಇದನ್ನು ಸರ್ಕಾರವು ಆದರ್ಶ ಸೊಸೈಟಿಗೆ ಮಂಜೂರು ಮಾಡಿದೆ, ಅಲ್ಲದೆ ಕಟ್ಟಡ ನಿರ್ಮಾಣದಲ್ಲಿ ಪೌರ ಹಾಗೂ ಪರಿಸರ ನಿಯಮ ಉಲ್ಲಂಘಿಸಲಾಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>