<p><strong>ಮುಂಬೈ (ಪಿಟಿಐ): </strong>ಆದರ್ಶ ಗೃಹ ನಿರ್ಮಾಣ ಸೊಸೈಟಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ನಗರದ ಮಾಜಿ ಮುಖ್ಯ ಪೌರ ಜೈರಾಜ್ ಪಾಠಕ್ ಮತ್ತು ರಾಜ್ಯ ಮಾಜಿ ಮುಖ್ಯ ಮಾಹಿತಿ ಆಯುಕ್ತ ರಮಾನಂದ ತಿವಾರಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಗುರುವಾರ ಜಾಮೀನು ನೀಡಿತು.<br /> <br /> ತನಿಖಾ ತಂಡವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯನ್ನು 60 ದಿನಗಳೊಳಗೆ ನ್ಯಾಯಾಲಯಕ್ಕೆ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ವಿಶೇಷ ಸಿಬಿಐ ನ್ಯಾಯಾಲಯವು ತಿವಾರಿ ಮತ್ತು ಪಾಠಕ್ ಅವರಿಗೆ ಜಾಮೀನು ನೀಡಿದೆ.<br /> <br /> `ಪ್ರಕರಣಕ್ಕೆ ಸಂಬಂಧಿಸಿದ ಆರೋಪ ಪಟ್ಟಿಯನ್ನು ತನಿಖಾ ತಂಡದ ಅಧಿಕಾರಿಗಳು 60 ದಿನಗಳೊಳಗೆ ಅಂದರೆ ಜೂನ್ 4ರೊಳಗೆ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಸಲ್ಲಿಸಬೇಕಿತ್ತು. ಇದರಲ್ಲಿ ತನಿಖಾ ತಂಡವು ವಿಫಲವಾಗಿದೆ. ಇದರ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಾಮೀನು ನೀಡಿದೆ~ ಎಂದು ಪಠಾಕ್ ಪರ ವಕೀಲ ಸ್ವಪ್ನಾ ಕೊಡೆ ಹಾಗೂ ತಿವಾರಿ ಪರ ವಕೀಲ ಸದಾನಂದ ಶೆಟ್ಟಿ ಅವರು ತಿಳಿಸಿದ್ದಾರೆ. <br /> <br /> `ಸಿಬಿಐ ಅಧಿಕಾರಿಗಳು ನಮ್ಮನ್ನು ಬಂಧಿಸಿದ ಬಳಿಕ 60 ದಿನಗಳು ಕಳೆದರೂ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ~ ಎಂದು ನಗರದ ಮಾಜಿ ಮುಖ್ಯ ಪೌರ ಜೈರಾಜ್ ಪಾಠಕ್ ಮತ್ತು ರಾಜ್ಯ ಮಾಜಿ ಮುಖ್ಯ ಮಾಹಿತಿ ಆಯುಕ್ತ ರಮಾನಂದ ತಿವಾರಿ ಅವರು ಸೋಮವಾರ ಇಲ್ಲಿನ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ನೀಡುವಂತೆ ಮನವಿ ಮಾಡಿಕೊಂಡಿದ್ದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ): </strong>ಆದರ್ಶ ಗೃಹ ನಿರ್ಮಾಣ ಸೊಸೈಟಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ನಗರದ ಮಾಜಿ ಮುಖ್ಯ ಪೌರ ಜೈರಾಜ್ ಪಾಠಕ್ ಮತ್ತು ರಾಜ್ಯ ಮಾಜಿ ಮುಖ್ಯ ಮಾಹಿತಿ ಆಯುಕ್ತ ರಮಾನಂದ ತಿವಾರಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಗುರುವಾರ ಜಾಮೀನು ನೀಡಿತು.<br /> <br /> ತನಿಖಾ ತಂಡವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯನ್ನು 60 ದಿನಗಳೊಳಗೆ ನ್ಯಾಯಾಲಯಕ್ಕೆ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ವಿಶೇಷ ಸಿಬಿಐ ನ್ಯಾಯಾಲಯವು ತಿವಾರಿ ಮತ್ತು ಪಾಠಕ್ ಅವರಿಗೆ ಜಾಮೀನು ನೀಡಿದೆ.<br /> <br /> `ಪ್ರಕರಣಕ್ಕೆ ಸಂಬಂಧಿಸಿದ ಆರೋಪ ಪಟ್ಟಿಯನ್ನು ತನಿಖಾ ತಂಡದ ಅಧಿಕಾರಿಗಳು 60 ದಿನಗಳೊಳಗೆ ಅಂದರೆ ಜೂನ್ 4ರೊಳಗೆ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಸಲ್ಲಿಸಬೇಕಿತ್ತು. ಇದರಲ್ಲಿ ತನಿಖಾ ತಂಡವು ವಿಫಲವಾಗಿದೆ. ಇದರ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಾಮೀನು ನೀಡಿದೆ~ ಎಂದು ಪಠಾಕ್ ಪರ ವಕೀಲ ಸ್ವಪ್ನಾ ಕೊಡೆ ಹಾಗೂ ತಿವಾರಿ ಪರ ವಕೀಲ ಸದಾನಂದ ಶೆಟ್ಟಿ ಅವರು ತಿಳಿಸಿದ್ದಾರೆ. <br /> <br /> `ಸಿಬಿಐ ಅಧಿಕಾರಿಗಳು ನಮ್ಮನ್ನು ಬಂಧಿಸಿದ ಬಳಿಕ 60 ದಿನಗಳು ಕಳೆದರೂ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ~ ಎಂದು ನಗರದ ಮಾಜಿ ಮುಖ್ಯ ಪೌರ ಜೈರಾಜ್ ಪಾಠಕ್ ಮತ್ತು ರಾಜ್ಯ ಮಾಜಿ ಮುಖ್ಯ ಮಾಹಿತಿ ಆಯುಕ್ತ ರಮಾನಂದ ತಿವಾರಿ ಅವರು ಸೋಮವಾರ ಇಲ್ಲಿನ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ನೀಡುವಂತೆ ಮನವಿ ಮಾಡಿಕೊಂಡಿದ್ದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>