<p>ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಸಿರುಗುಪ್ಪ ಶಾಸಕ ಎಂ.ಎಸ್.ಸೋಮಲಿಂಗಪ್ಪ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಬುಧವಾರ ಇತ್ಯರ್ಥಗೊಳಿಸಿದೆ.<br /> <br /> ತನಿಖೆಯ ಅವಧಿಯಲ್ಲಿ ಶಾಸಕರ ಬಂಧನ ಸಾಧ್ಯತೆ ಇಲ್ಲ ಎಂದು ಲೋಕಾಯುಕ್ತ ಪೊಲೀಸರು ಪ್ರಮಾಣ ಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಕ್ರಮ ಕೈಗೊಂಡಿದೆ.<br /> <br /> ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದ ನಿವೃತ್ತ ಉಪನ್ಯಾಸಕ ಬಿ.ಈರಣ್ಣ ಅವರು ಸೋಮಲಿಂಗಪ್ಪ ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. `ಪ್ರಥಮ ಮಾಹಿತಿ ವರದಿ~ (ಎಫ್ಐಆರ್) ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದರು.<br /> <br /> ತನಿಖೆಯ ಅವಧಿಯಲ್ಲಿ ತಮ್ಮನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಆತಂಕಗೊಂಡ ಶಾಸಕರು, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಶಾಸಕರ ಅರ್ಜಿಯ ವಿಚಾರಣೆ ವೇಳೆ ಬುಧವಾರ ಪ್ರಮಾಣಪತ್ರ ಸಲ್ಲಿಸಿದ ಲೋಕಾಯುಕ್ತ ಪೊಲೀಸರು, `ಸಾಕ್ಷ್ಯ ನಾಶ, ಸಾಕ್ಷಿಗಳಿಗೆ ಬೆದರಿಕೆ ಹಾಕವುದು ಮತ್ತಿತರ ಚಟುವಟಿಕೆಗಳ ಮೂಲಕ ತನಿಖೆಗೆ ಅಡ್ಡಿಪಡಿಸದೇ ಇದ್ದರೆ ತನಿಖೆ ಪೂರ್ಣಗೊಳ್ಳುವವರೆಗೂ ಸೋಮಲಿಂಗಪ್ಪ ಅವರನ್ನು ಬಂಧಿಸುವುದಿಲ್ಲ~ ಎಂದು ತಿಳಿಸಿದರು.<br /> <br /> ತನಿಖಾಧಿಕಾರಿಯ ಹೇಳಿಕೆಯನ್ನು ಪರಿಗಣಿಸಿದ ನ್ಯಾಯಾಧೀಶ ಎನ್.ಕೆ.ಸುಧೀಂಧ್ರ ರಾವ್ ಅವರು, ಸೋಮಲಿಂಗಪ್ಪ ಅವರ ಅರ್ಜಿಯನ್ನು ಇತ್ಯರ್ಥಪಡಿಸಿದರು. ತನಿಖೆಗೆ ಅಡ್ಡಿಪಡಿಸದಂತೆಯೂ ಈ ಸಂದರ್ಭದಲ್ಲಿ ಶಾಸಕರಿಗೆ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಸಿರುಗುಪ್ಪ ಶಾಸಕ ಎಂ.ಎಸ್.ಸೋಮಲಿಂಗಪ್ಪ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಬುಧವಾರ ಇತ್ಯರ್ಥಗೊಳಿಸಿದೆ.<br /> <br /> ತನಿಖೆಯ ಅವಧಿಯಲ್ಲಿ ಶಾಸಕರ ಬಂಧನ ಸಾಧ್ಯತೆ ಇಲ್ಲ ಎಂದು ಲೋಕಾಯುಕ್ತ ಪೊಲೀಸರು ಪ್ರಮಾಣ ಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಕ್ರಮ ಕೈಗೊಂಡಿದೆ.<br /> <br /> ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದ ನಿವೃತ್ತ ಉಪನ್ಯಾಸಕ ಬಿ.ಈರಣ್ಣ ಅವರು ಸೋಮಲಿಂಗಪ್ಪ ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. `ಪ್ರಥಮ ಮಾಹಿತಿ ವರದಿ~ (ಎಫ್ಐಆರ್) ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದರು.<br /> <br /> ತನಿಖೆಯ ಅವಧಿಯಲ್ಲಿ ತಮ್ಮನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಆತಂಕಗೊಂಡ ಶಾಸಕರು, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಶಾಸಕರ ಅರ್ಜಿಯ ವಿಚಾರಣೆ ವೇಳೆ ಬುಧವಾರ ಪ್ರಮಾಣಪತ್ರ ಸಲ್ಲಿಸಿದ ಲೋಕಾಯುಕ್ತ ಪೊಲೀಸರು, `ಸಾಕ್ಷ್ಯ ನಾಶ, ಸಾಕ್ಷಿಗಳಿಗೆ ಬೆದರಿಕೆ ಹಾಕವುದು ಮತ್ತಿತರ ಚಟುವಟಿಕೆಗಳ ಮೂಲಕ ತನಿಖೆಗೆ ಅಡ್ಡಿಪಡಿಸದೇ ಇದ್ದರೆ ತನಿಖೆ ಪೂರ್ಣಗೊಳ್ಳುವವರೆಗೂ ಸೋಮಲಿಂಗಪ್ಪ ಅವರನ್ನು ಬಂಧಿಸುವುದಿಲ್ಲ~ ಎಂದು ತಿಳಿಸಿದರು.<br /> <br /> ತನಿಖಾಧಿಕಾರಿಯ ಹೇಳಿಕೆಯನ್ನು ಪರಿಗಣಿಸಿದ ನ್ಯಾಯಾಧೀಶ ಎನ್.ಕೆ.ಸುಧೀಂಧ್ರ ರಾವ್ ಅವರು, ಸೋಮಲಿಂಗಪ್ಪ ಅವರ ಅರ್ಜಿಯನ್ನು ಇತ್ಯರ್ಥಪಡಿಸಿದರು. ತನಿಖೆಗೆ ಅಡ್ಡಿಪಡಿಸದಂತೆಯೂ ಈ ಸಂದರ್ಭದಲ್ಲಿ ಶಾಸಕರಿಗೆ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>