<p><strong>ನವದೆಹಲಿ (ಪಿಟಿಐ):</strong> ಆದಾಯ ತೆರಿಗೆ ಬಾಕಿ ಪಾವತಿಗೆ ಸಂಬಂಧಿಸಿದಂತೆ ನೀಡಲಾಗಿದ್ದ ನೋಟಿಸ್ಗೆ ಸೂಕ್ತ ಉತ್ತರ ನೀಡಲು ಇನ್ನಷ್ಟು ಕಾಲಾವಕಾಶದ ಅವಶ್ಯಕತೆ ಇದೆ ಎಂದು ಅಣ್ಣಾ ಹಜಾರೆ ತಂಡದ ಸದಸ್ಯ ಅರವಿಂದ ಕೇಜ್ರಿವಾಲ್ ಅಭಿಪ್ರಾಯಪಟ್ಟಿದಾರೆ.<br /> <br /> 9.27 ಲಕ್ಷ ರೂಪಾಯಿ ಬಾಕಿ ಪಾವತಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯು ಕೇಜ್ರಿವಾಲ ಅವರಿಗೆ ನೀಡಿದ್ದ ಗಡುವು ಗುರುವಾರ ಕೊನೆಗೊಂಡಿತು. ಈ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.<br /> <br /> `ಆದಾಯ ತೆರಿಗೆ ಇಲಾಖೆಯವರು ನನಗೆ ತುಂಬಾ ಕಡಿಮೆ ಕಾಲಾವಕಾಶ ನೀಡಿದ್ದರು. ಈ ಬಗ್ಗೆ ನಾನು ನನ್ನ ಸ್ನೇಹಿತರೊಂದಿಗೆ ಚರ್ಚಿಸುತ್ತಿದ್ದೇನೆ. ವಾರ ಅಥವಾ 10 ದಿನಗಳ ಒಳಗಾಗಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ~ ಎಂದು ಅವರು ತಿಳಿಸಿದ್ದಾರೆ.<br /> <br /> ಸೂಕ್ತ ಸಮಯದಲ್ಲಿ ಬಾಕಿ ಪಾವತಿಸದೇ ಇರುವ ಕಾರಣ ಆದಾಯ ತೆರಿಗೆ ಅಧಿಕಾರಿಗಳು ಕೇಜ್ರಿವಾಲ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮತ್ತು ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.<br /> <br /> ಕೇಜ್ರಿವಾಲ ಈ ಮೊದಲು ಭಾರತೀಯ ಕಂದಾಯ ಸೇವಾ ಇಲಾಖೆಯ ಐಆರ್ಎಸ್ ಅಧಿಕಾರಿಯಾಗಿದ್ದರು. ಇವರು ಸೇವೆಯಲ್ಲಿದ್ದಾಗಿನ 2000 -2002ರ ನಡುವಿನ ಅವಧಿಯಲ್ಲಿ 2 ವರ್ಷಅಧ್ಯಯನ ರಜೆ ಮೇಲೆ ವಿದೇಶಕ್ಕೆ ತೆರಳಿದ್ದರು. ಆಗ ಅವರು ಇಲಾಖೆಯ ಜತೆ ಮಾಡಿಕೊಂಡಿದ್ದ ಒಪ್ಪಂದಗಳು ಉಲ್ಲಂಘನೆಯಾಗಿವೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ 9.27 ಲಕ್ಷ ರೂಪಾಯಿ ಆದಾಯ ತೆರಿಗೆ ಪಾವತಿಸಬೇಕೆಂಬುದು ಆದಾಯ ತೆರಿಗೆ ಇಲಾಖೆ ಮುಖ್ಯ ಆಯುಕ್ತರು ಜಾರಿ ಮಾಡಿದ್ದ ನೋಟಿಸ್ನ ಸಾರವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಆದಾಯ ತೆರಿಗೆ ಬಾಕಿ ಪಾವತಿಗೆ ಸಂಬಂಧಿಸಿದಂತೆ ನೀಡಲಾಗಿದ್ದ ನೋಟಿಸ್ಗೆ ಸೂಕ್ತ ಉತ್ತರ ನೀಡಲು ಇನ್ನಷ್ಟು ಕಾಲಾವಕಾಶದ ಅವಶ್ಯಕತೆ ಇದೆ ಎಂದು ಅಣ್ಣಾ ಹಜಾರೆ ತಂಡದ ಸದಸ್ಯ ಅರವಿಂದ ಕೇಜ್ರಿವಾಲ್ ಅಭಿಪ್ರಾಯಪಟ್ಟಿದಾರೆ.<br /> <br /> 9.27 ಲಕ್ಷ ರೂಪಾಯಿ ಬಾಕಿ ಪಾವತಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯು ಕೇಜ್ರಿವಾಲ ಅವರಿಗೆ ನೀಡಿದ್ದ ಗಡುವು ಗುರುವಾರ ಕೊನೆಗೊಂಡಿತು. ಈ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.<br /> <br /> `ಆದಾಯ ತೆರಿಗೆ ಇಲಾಖೆಯವರು ನನಗೆ ತುಂಬಾ ಕಡಿಮೆ ಕಾಲಾವಕಾಶ ನೀಡಿದ್ದರು. ಈ ಬಗ್ಗೆ ನಾನು ನನ್ನ ಸ್ನೇಹಿತರೊಂದಿಗೆ ಚರ್ಚಿಸುತ್ತಿದ್ದೇನೆ. ವಾರ ಅಥವಾ 10 ದಿನಗಳ ಒಳಗಾಗಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ~ ಎಂದು ಅವರು ತಿಳಿಸಿದ್ದಾರೆ.<br /> <br /> ಸೂಕ್ತ ಸಮಯದಲ್ಲಿ ಬಾಕಿ ಪಾವತಿಸದೇ ಇರುವ ಕಾರಣ ಆದಾಯ ತೆರಿಗೆ ಅಧಿಕಾರಿಗಳು ಕೇಜ್ರಿವಾಲ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮತ್ತು ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.<br /> <br /> ಕೇಜ್ರಿವಾಲ ಈ ಮೊದಲು ಭಾರತೀಯ ಕಂದಾಯ ಸೇವಾ ಇಲಾಖೆಯ ಐಆರ್ಎಸ್ ಅಧಿಕಾರಿಯಾಗಿದ್ದರು. ಇವರು ಸೇವೆಯಲ್ಲಿದ್ದಾಗಿನ 2000 -2002ರ ನಡುವಿನ ಅವಧಿಯಲ್ಲಿ 2 ವರ್ಷಅಧ್ಯಯನ ರಜೆ ಮೇಲೆ ವಿದೇಶಕ್ಕೆ ತೆರಳಿದ್ದರು. ಆಗ ಅವರು ಇಲಾಖೆಯ ಜತೆ ಮಾಡಿಕೊಂಡಿದ್ದ ಒಪ್ಪಂದಗಳು ಉಲ್ಲಂಘನೆಯಾಗಿವೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ 9.27 ಲಕ್ಷ ರೂಪಾಯಿ ಆದಾಯ ತೆರಿಗೆ ಪಾವತಿಸಬೇಕೆಂಬುದು ಆದಾಯ ತೆರಿಗೆ ಇಲಾಖೆ ಮುಖ್ಯ ಆಯುಕ್ತರು ಜಾರಿ ಮಾಡಿದ್ದ ನೋಟಿಸ್ನ ಸಾರವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>