<p><strong>ಬೆಂಗಳೂರು: </strong>ವೈಯಾಲಿಕಾವಲ್ ಗೃಹನಿರ್ಮಾಣ ಸಹಕಾರ ಸಂಘವು ನಾಗವಾರ ಬಡಾವಣೆ ನಿರ್ಮಾಣಕ್ಕೆ ಸ್ವಾಧೀನ ಮಾಡಿಕೊಂಡಿದ್ದ 165 ಎಕರೆ ಜಮೀನನ್ನು ಮೂಲ ಮಾಲೀಕರಿಗೆ ಮರಳಿಸಬೇಕು ಎಂದು ಸರ್ಕಾರ 2013ರ ಜೂನ್ನಲ್ಲಿ ಹೊರಡಿಸಿದ ಆದೇಶವನ್ನು ಹೈಕೋರ್ಟ್ ಮಂಗಳವಾರ ರದ್ದುಪಡಿಸಿದೆ.<br /> <br /> ‘ಈ ಬಡಾವಣೆ ನಿರ್ಮಾಣಕ್ಕೆ ಗುರುತಿಸಲಾದ 165 ಎಕರೆ ಜಮೀನಿನ ಪೈಕಿ ಒಟ್ಟು 52.30 ಎಕರೆ ಜಮೀನನ್ನು ಮಾತ್ರ ಮೂಲ ಮಾಲೀಕರಿಗೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಆದೇಶ ಪಾಲಿಸಿರುವ ಕುರಿತು ಸುಪ್ರೀಂ ಕೋರ್ಟ್ಗೆ ಹೇಳಿಕೆಯನ್ನೂ ಸಲ್ಲಿಸಲಾಗಿದೆ. ಅಲ್ಲಿ ಇದರ ವಿಚಾರಣೆ ಬಾಕಿ ಇದೆ. ಈ ಸಂದರ್ಭದಲ್ಲಿ ಸಂಪೂರ್ಣ ಜಮೀನು ಮರಳಿಸುವಂತೆ ಹೇಳುವುದು ಸರಿಯಲ್ಲ’ ಎಂದು ಸಂಘ ವಾದಿಸಿತ್ತು.<br /> ವಿಚಾರ ಸುಪ್ರೀಂ ಕೋರ್ಟ್ ಮುಂದಿರುವಾಗ, ಸರ್ಕಾರ ಹೀಗೆ ಆದೇಶ ಹೊರಡಿಸಿದ್ದು ತರಾತುರಿಯ ಕ್ರಮ. ಇದು ಸರಿಯಲ್ಲ ಎಂದು ಹೇಳಿರುವ ನ್ಯಾಯಮೂರ್ತಿ ಆನಂಧ ಬೈರಾರೆಡ್ಡಿ ಅವರ ಪೀಠ, ಅರ್ಜಿ ಮಾನ್ಯ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವೈಯಾಲಿಕಾವಲ್ ಗೃಹನಿರ್ಮಾಣ ಸಹಕಾರ ಸಂಘವು ನಾಗವಾರ ಬಡಾವಣೆ ನಿರ್ಮಾಣಕ್ಕೆ ಸ್ವಾಧೀನ ಮಾಡಿಕೊಂಡಿದ್ದ 165 ಎಕರೆ ಜಮೀನನ್ನು ಮೂಲ ಮಾಲೀಕರಿಗೆ ಮರಳಿಸಬೇಕು ಎಂದು ಸರ್ಕಾರ 2013ರ ಜೂನ್ನಲ್ಲಿ ಹೊರಡಿಸಿದ ಆದೇಶವನ್ನು ಹೈಕೋರ್ಟ್ ಮಂಗಳವಾರ ರದ್ದುಪಡಿಸಿದೆ.<br /> <br /> ‘ಈ ಬಡಾವಣೆ ನಿರ್ಮಾಣಕ್ಕೆ ಗುರುತಿಸಲಾದ 165 ಎಕರೆ ಜಮೀನಿನ ಪೈಕಿ ಒಟ್ಟು 52.30 ಎಕರೆ ಜಮೀನನ್ನು ಮಾತ್ರ ಮೂಲ ಮಾಲೀಕರಿಗೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಆದೇಶ ಪಾಲಿಸಿರುವ ಕುರಿತು ಸುಪ್ರೀಂ ಕೋರ್ಟ್ಗೆ ಹೇಳಿಕೆಯನ್ನೂ ಸಲ್ಲಿಸಲಾಗಿದೆ. ಅಲ್ಲಿ ಇದರ ವಿಚಾರಣೆ ಬಾಕಿ ಇದೆ. ಈ ಸಂದರ್ಭದಲ್ಲಿ ಸಂಪೂರ್ಣ ಜಮೀನು ಮರಳಿಸುವಂತೆ ಹೇಳುವುದು ಸರಿಯಲ್ಲ’ ಎಂದು ಸಂಘ ವಾದಿಸಿತ್ತು.<br /> ವಿಚಾರ ಸುಪ್ರೀಂ ಕೋರ್ಟ್ ಮುಂದಿರುವಾಗ, ಸರ್ಕಾರ ಹೀಗೆ ಆದೇಶ ಹೊರಡಿಸಿದ್ದು ತರಾತುರಿಯ ಕ್ರಮ. ಇದು ಸರಿಯಲ್ಲ ಎಂದು ಹೇಳಿರುವ ನ್ಯಾಯಮೂರ್ತಿ ಆನಂಧ ಬೈರಾರೆಡ್ಡಿ ಅವರ ಪೀಠ, ಅರ್ಜಿ ಮಾನ್ಯ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>