<p><strong>ಬೆಂಗಳೂರು: </strong>`ದೇಶದಲ್ಲಿ ಈ ವರೆಗೆ 20 ಕೋಟಿ ಜನರು ಆಧಾರ್ ಯೋಜನೆಗೆ ನೋಂದಣಿಯಾಗಿದ್ದು, ಇದರಲ್ಲಿ 13.5 ಕೋಟಿ ಆಧಾರ್ ಕಾರ್ಡ್ಗಳ ವಿತರಣೆಯಾಗಿದೆ~ ಎಂದು ಆಧಾರ್ ಯೋಜನೆಯ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದರು.<br /> <br /> ನಗರದಲ್ಲಿ ಶನಿವಾರ ಸಪ್ನ ಬುಕ್ ಹೌಸ್ ಆಯೋಜಿಸಿದ್ದ ಅವರ `ಇಮ್ಯಾಜಿನಿಂಗ್ ಇಂಡಿಯಾ~ ಕೃತಿಯ ಕನ್ನಡಾನುವಾದ `ಬಿಂಬ ಭಾರತ~ ಪುಸ್ತಕ ಬಿಡುಗಡೆ ಸಮಾರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಆಧಾರ್ ಯೋಜನೆಯ ನೋಂದಣಿ ಪ್ರಕ್ರಿಯೆ ಸರಾಗವಾಗಿ ನಡೆದಿದೆ. ಪ್ರತಿ ತಿಂಗಳೂ ಎರಡು ಕೋಟಿ ಜನರನ್ನು ಆಧಾರ್ ಕಾರ್ಡ್ಗಾಗಿ ನೋಂದಣಿ ಮಾಡಲಾಗುತ್ತಿದೆ. ಏಪ್ರಿಲ್ ಅಂತ್ಯದಿಂದ 40 ಕೋಟಿ ಆಧಾರ್ ನೋಂದಣಿಯ ಗುರಿ ಹೊಂದಲಾಗಿದೆ. <br /> <br /> ಒಂದಕ್ಕಿಂತ ಹೆಚ್ಚು ಬಾರಿ ಆಧಾರ್ಗೆ ನೋಂದಣಿಯಾಗಿರುವವರ ಮಾಹಿತಿಗಳನ್ನು ಬಯೋ ಮೆಟ್ರಿಕ್ ವ್ಯವಸ್ಥೆಯ ಮೂಲಕ ಗುರುತಿಸಿ ತೆಗೆದುಹಾಕುವ ಕಾರ್ಯ ಕೈಗೊಳ್ಳಲಾಗಿದೆ. ಆಧಾರ್ ಕಾರ್ಡ್ನ ಮುದ್ರಣ ಗುಣಮಟ್ಟ ಹೆಚ್ಚಿಸಲು ತಲಾ ಐದು ಕೋಟಿ ರೂ.ಗಳ ಮೂರು ಹೊಸ ಮುದ್ರಣ ಯಂತ್ರಗಳನ್ನು ಖರೀದಿಸಲಾಗಿದೆ ಎಂದರು. <br /> ಯೋಜನೆಗಾಗಿ ಪ್ರಾಧಿಕಾರಕ್ಕೆ ಯಾವುದೇ ಹಣಕಾಸಿನ ತೊಂದರೆ ಇಲ್ಲ. ಪ್ರಾಧಿಕಾರದ ಬಳಿ ಎಂಟು ಸಾವಿರ ಕೋಟಿ ರೂಪಾಯಿ ಅನುದಾನವಿದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ದೇಶದಲ್ಲಿ ಈ ವರೆಗೆ 20 ಕೋಟಿ ಜನರು ಆಧಾರ್ ಯೋಜನೆಗೆ ನೋಂದಣಿಯಾಗಿದ್ದು, ಇದರಲ್ಲಿ 13.5 ಕೋಟಿ ಆಧಾರ್ ಕಾರ್ಡ್ಗಳ ವಿತರಣೆಯಾಗಿದೆ~ ಎಂದು ಆಧಾರ್ ಯೋಜನೆಯ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದರು.<br /> <br /> ನಗರದಲ್ಲಿ ಶನಿವಾರ ಸಪ್ನ ಬುಕ್ ಹೌಸ್ ಆಯೋಜಿಸಿದ್ದ ಅವರ `ಇಮ್ಯಾಜಿನಿಂಗ್ ಇಂಡಿಯಾ~ ಕೃತಿಯ ಕನ್ನಡಾನುವಾದ `ಬಿಂಬ ಭಾರತ~ ಪುಸ್ತಕ ಬಿಡುಗಡೆ ಸಮಾರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಆಧಾರ್ ಯೋಜನೆಯ ನೋಂದಣಿ ಪ್ರಕ್ರಿಯೆ ಸರಾಗವಾಗಿ ನಡೆದಿದೆ. ಪ್ರತಿ ತಿಂಗಳೂ ಎರಡು ಕೋಟಿ ಜನರನ್ನು ಆಧಾರ್ ಕಾರ್ಡ್ಗಾಗಿ ನೋಂದಣಿ ಮಾಡಲಾಗುತ್ತಿದೆ. ಏಪ್ರಿಲ್ ಅಂತ್ಯದಿಂದ 40 ಕೋಟಿ ಆಧಾರ್ ನೋಂದಣಿಯ ಗುರಿ ಹೊಂದಲಾಗಿದೆ. <br /> <br /> ಒಂದಕ್ಕಿಂತ ಹೆಚ್ಚು ಬಾರಿ ಆಧಾರ್ಗೆ ನೋಂದಣಿಯಾಗಿರುವವರ ಮಾಹಿತಿಗಳನ್ನು ಬಯೋ ಮೆಟ್ರಿಕ್ ವ್ಯವಸ್ಥೆಯ ಮೂಲಕ ಗುರುತಿಸಿ ತೆಗೆದುಹಾಕುವ ಕಾರ್ಯ ಕೈಗೊಳ್ಳಲಾಗಿದೆ. ಆಧಾರ್ ಕಾರ್ಡ್ನ ಮುದ್ರಣ ಗುಣಮಟ್ಟ ಹೆಚ್ಚಿಸಲು ತಲಾ ಐದು ಕೋಟಿ ರೂ.ಗಳ ಮೂರು ಹೊಸ ಮುದ್ರಣ ಯಂತ್ರಗಳನ್ನು ಖರೀದಿಸಲಾಗಿದೆ ಎಂದರು. <br /> ಯೋಜನೆಗಾಗಿ ಪ್ರಾಧಿಕಾರಕ್ಕೆ ಯಾವುದೇ ಹಣಕಾಸಿನ ತೊಂದರೆ ಇಲ್ಲ. ಪ್ರಾಧಿಕಾರದ ಬಳಿ ಎಂಟು ಸಾವಿರ ಕೋಟಿ ರೂಪಾಯಿ ಅನುದಾನವಿದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>