<p><strong>ಬೆಂಗಳೂರು: </strong>`ಸಮಾಜದಲ್ಲಿ ಆಧುನಿಕತೆ ಹೆಚ್ಚಿದಂತೆ ಅನಾರೋಗ್ಯವೂ ಹೆಚ್ಚಾಗುತ್ತಿದೆ. ಜನರು ಸಾಂಪ್ರದಾಯಿಕ ಆಹಾರ ಪದ್ಧತಿ ಕೈ ಬಿಟ್ಟು ಆಧುನಿಕ ಆಹಾರ ಪದ್ಧತಿಗೆ ಮೊರೆ ಹೋಗಿರುವುದು ಇದಕ್ಕೆ ಕಾರಣ~ ಎಂದು ಹೋಟೆಲ್ ಉದ್ಯಮಿ ಪಿ. ಸದಾನಂದ ಮಯ್ಯ ಪ್ರತಿಪಾದಿಸಿದರು. <br /> <br /> ಉನ್ನತ ಶಿಕ್ಷಣ ಪರಿಷತ್ ಹಾಗೂ ತುಮಕೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಉನ್ನತ ಶಿಕ್ಷಣ ಪರಿಷತ್ನ ಸಭಾಂಗಣದಲ್ಲಿ ಶನಿವಾರ ನಡೆದ `ಆರೋಗ್ಯದಲ್ಲಿ ಆಹಾರ~ ಕುರಿತ ರಾಷ್ಟ್ರೀಯ ಕಾರ್ಯಾಗಾರದಲ್ಲಿ ಅವರು ಉಪನ್ಯಾಸ ನೀಡಿದರು. <br /> <br /> `ಆರೋಗ್ಯಕರ ದೇಹಕ್ಕೆ ಸಾಂಪ್ರದಾಯಿಕ ಆಹಾರ ಪದ್ಧತಿ ಅನುಸರಿಸುವುದು ಅಗತ್ಯ. ಆಧುನಿಕತೆಯ ಭರಾಟೆಗೆ ಮರುಳಾಗಿ ಆಹಾರ ಪದ್ಧತಿ ಬದಲಾಯಿಸಿದ್ದೇವೆ. ಈ ಹಿಂದೆ ಅಕ್ಕಿಯನ್ನು ಪಾಲಿಷ್ ಮಾಡುತ್ತಿರಲಿಲ್ಲ. ಕಾಫಿಯೂ ಕಲಬೆರಕೆ ಆಗಿದೆ. ಇದರಿಂದ ಅನಾರೋಗ್ಯ ಹೆಚ್ಚುತ್ತಿದೆ. ವಿಜ್ಞಾನದ ನ್ಯಾನೊ ತಂತ್ರಜ್ಞಾನದಂತೆ ಆಹಾರದಲ್ಲೂ ನ್ಯಾನೊ ತಂತ್ರಜ್ಞಾನ ಅಳವಡಿಕೆ ಅಗತ್ಯ~ ಎಂದರು.<br /> <br /> ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಎಸ್.ಸಿ. ಶರ್ಮಾ, ಉನ್ನತ ಶಿಕ್ಷಣ ಪರಿಷತ್ ಕಾರ್ಯಕಾರಿ ನಿರ್ದೇಶಕ ಡಾ.ಕೆ.ಎಂ. ಕಾವೇರಿಯಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಸಮಾಜದಲ್ಲಿ ಆಧುನಿಕತೆ ಹೆಚ್ಚಿದಂತೆ ಅನಾರೋಗ್ಯವೂ ಹೆಚ್ಚಾಗುತ್ತಿದೆ. ಜನರು ಸಾಂಪ್ರದಾಯಿಕ ಆಹಾರ ಪದ್ಧತಿ ಕೈ ಬಿಟ್ಟು ಆಧುನಿಕ ಆಹಾರ ಪದ್ಧತಿಗೆ ಮೊರೆ ಹೋಗಿರುವುದು ಇದಕ್ಕೆ ಕಾರಣ~ ಎಂದು ಹೋಟೆಲ್ ಉದ್ಯಮಿ ಪಿ. ಸದಾನಂದ ಮಯ್ಯ ಪ್ರತಿಪಾದಿಸಿದರು. <br /> <br /> ಉನ್ನತ ಶಿಕ್ಷಣ ಪರಿಷತ್ ಹಾಗೂ ತುಮಕೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಉನ್ನತ ಶಿಕ್ಷಣ ಪರಿಷತ್ನ ಸಭಾಂಗಣದಲ್ಲಿ ಶನಿವಾರ ನಡೆದ `ಆರೋಗ್ಯದಲ್ಲಿ ಆಹಾರ~ ಕುರಿತ ರಾಷ್ಟ್ರೀಯ ಕಾರ್ಯಾಗಾರದಲ್ಲಿ ಅವರು ಉಪನ್ಯಾಸ ನೀಡಿದರು. <br /> <br /> `ಆರೋಗ್ಯಕರ ದೇಹಕ್ಕೆ ಸಾಂಪ್ರದಾಯಿಕ ಆಹಾರ ಪದ್ಧತಿ ಅನುಸರಿಸುವುದು ಅಗತ್ಯ. ಆಧುನಿಕತೆಯ ಭರಾಟೆಗೆ ಮರುಳಾಗಿ ಆಹಾರ ಪದ್ಧತಿ ಬದಲಾಯಿಸಿದ್ದೇವೆ. ಈ ಹಿಂದೆ ಅಕ್ಕಿಯನ್ನು ಪಾಲಿಷ್ ಮಾಡುತ್ತಿರಲಿಲ್ಲ. ಕಾಫಿಯೂ ಕಲಬೆರಕೆ ಆಗಿದೆ. ಇದರಿಂದ ಅನಾರೋಗ್ಯ ಹೆಚ್ಚುತ್ತಿದೆ. ವಿಜ್ಞಾನದ ನ್ಯಾನೊ ತಂತ್ರಜ್ಞಾನದಂತೆ ಆಹಾರದಲ್ಲೂ ನ್ಯಾನೊ ತಂತ್ರಜ್ಞಾನ ಅಳವಡಿಕೆ ಅಗತ್ಯ~ ಎಂದರು.<br /> <br /> ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಎಸ್.ಸಿ. ಶರ್ಮಾ, ಉನ್ನತ ಶಿಕ್ಷಣ ಪರಿಷತ್ ಕಾರ್ಯಕಾರಿ ನಿರ್ದೇಶಕ ಡಾ.ಕೆ.ಎಂ. ಕಾವೇರಿಯಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>