ಆನಂದಿಬೆನ್ ರಾಜೀನಾಮೆ ಅಂಗೀಕಾರ

ನವದೆಹಲಿ: ಗುಜರಾತ್ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರ ರಾಜೀನಾಮೆಯನ್ನು ಬಿಜೆಪಿ ಸಂಸದೀಯ ಮಂಡಳಿ ಅಂಗೀಕರಿಸಿದೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಬುಧವಾರ ನಡೆದ ಸಂಸದೀಯ ಮಂಡಳಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೆಂಕಯ್ಯ ನಾಯ್ಡು, ಪಕ್ಷವು ರಾಷ್ಟ್ರಮಟ್ಟದಲ್ಲಿ ಷಾ ಅವರ ಸೇವೆಯನ್ನು ಬಯಸುತ್ತಿದೆ. ಷಾ ಅವರನ್ನು ಗುಜರಾತ್ ಮುಖ್ಯಮಂತ್ರಿಯಾಗಿ ನೇಮಿಸುವ ಸಂಬಂಧ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದರು.
ಗುಜರಾತ್ನಲ್ಲಿ ಗುರುವಾರ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿತಿನ್ ಗಡ್ಕರಿ ಮತ್ತು ಸರೋಜ್ ಪಾಂಡೆ ಅವರ ನೇತೃತ್ವದ ನಿಯೋಗವು ಭಾಗವಹಿಸಲಿದೆ. ಷಾ ಅವರು ಈ ವೇಳೆ ಹಾಜರಿರುತ್ತಾರೆ. ಅವರ ಮುಂದೆಯೇ ಮುಖ್ಯಮಂತ್ರಿ ಆಯ್ಕೆ ನಡೆಯಲಿದೆ ಎಂದು ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.