<p><strong>ಚಾಮರಾಜನಗರ:</strong> ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮಲೆಮಹದೇಶ್ವರ ಹಾಗೂ ಎಡೆಯರಹಳ್ಳಿ ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿರುವ ಆನೆ ಪಥದ (ಎಲಿಫೆಂಟ್ ಕಾರಿಡಾರ್) ಬಳಿಯೇ ಕಲ್ಲು ಗಣಿಗಾರಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಕಾಡಾನೆಗಳ ಸಂಚಾರಕ್ಕೆ ಆಪತ್ತು ಎದುರಾಗಿದೆ.</p>.<p>ಕರ್ನಾಟಕ ಅರಣ್ಯ ನಿಯಮಾವಳಿ 1969ರ ನಿಯಮ 41ರ ಉಪ ನಿಯಮ 2ರ ಅನ್ವಯ ಅರಣ್ಯ ಪ್ರದೇಶದಿಂದ 100 ಮೀ. ವ್ಯಾಪ್ತಿಯೊಳಗೆ ಯಾವುದೇ ಅರಣ್ಯೇತರ ಚಟುವಟಿಕೆಗೆ ಅನುಮತಿ ನೀಡುವಂತಿಲ್ಲ. ಗಣಿಗಾರಿಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಆದರೆ, ಈ ಎರಡು ಮೀಸಲು ಅರಣ್ಯ ಪ್ರದೇಶದ ಸೀಮಾರೇಖೆಯೊಳಗೆ 8 ಗಣಿ ಗುತ್ತಿಗೆಗೆ ಪರವಾನಗಿ ನೀಡಲಾಗಿದೆ.</p>.<p>ಜಿಲ್ಲೆಯ ಅರಣ್ಯ ಪ್ರದೇಶದ ಅಂಚಿನಲ್ಲಿ ನಡೆಯುತ್ತಿರುವ ಗಣಿಗಾರಿಕೆ ಪತ್ತೆಹಚ್ಚಲು ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಡಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ನಡೆಸಿದ ಜಂಟಿ ಸಮೀಕ್ಷೆಯಿಂದ ಆನೆ ಪಥದ ಸುತ್ತಮುತ್ತ ಗಣಿಗಾರಿಕೆ ನಡೆಯುತ್ತಿರುವುದು ಬಯಲಾಗಿದೆ. ಪ್ರಸ್ತುತ ಕರ್ನಾಟಕ ಅರಣ್ಯ ನಿಯಮಾವಳಿ ಉಲ್ಲಂಘಿಸಿ ನಡೆಯುತ್ತಿರುವ ಗಣಿಗಾರಿಕೆಯನ್ನು ರದ್ದುಪಡಿಸುವಂತೆಯೂ ವಿಶೇಷ ತಂಡದಿಂದ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಕೆಯಾಗಿದೆ. ಈ ವರದಿ ~ಪ್ರಜಾವಾಣಿ~ಗೆ ಲಭ್ಯವಾಗಿದೆ.</p>.<p>ಕೊಳ್ಳೇಗಾಲ ಅರಣ್ಯ ಪ್ರದೇಶ ಹಾಗೂ ಬಿಳಿಗಿರಿರಂಗನಾಥಸ್ವಾಮಿ ಹುಲಿ ರಕ್ಷಿತಾರಣ್ಯದ ನಡುವೆ ಎಡೆಯರಹಳ್ಳಿ-ದೊಡ್ಡಸಂಪಿಗೆ ಆನೆ ಪಥ ಸಂಪರ್ಕ ಕಲ್ಪಿಸುತ್ತದೆ. 2007ರಲ್ಲಿ ಸ್ವಯಂಸೇವಾ ಸಂಸ್ಥೆಯಾದ ವೈಲ್ಡ್ ಲೈಫ್ ಟ್ರಸ್ಟ್ ಆಫ್ ಇಂಡಿಯಾ ಈ ಆನೆ ಪಥದ ಬಳಿಯಲ್ಲಿ ಒತ್ತುವರಿಯಾಗಿದ್ದ 23 ಎಕರೆ ಜಮೀನು ಖರೀದಿಸಿ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿತ್ತು.</p>.<p>ಪ್ರಸ್ತುತ ಎಡೆಯರಹಳ್ಳಿ ಮೀಸಲು ಅರಣ್ಯದ ವ್ಯಾಪ್ತಿಯ ಮೀಣ್ಯಂ ಗ್ರಾಮದ ಪಟ್ಟಾ ಜಮೀನಿನ ಸರ್ವೇ ನಂ. 64/3ರಲ್ಲಿ 3 ಎಕರೆ, ಸರ್ವೇ ನಂ. 64/5ರಲ್ಲಿ 4.5 ಎಕರೆ ಹಾಗೂ ಹುತ್ತೂರು ಗ್ರಾಮದ ಸರ್ಕಾರಿ ಜಮೀನಿನ ಸರ್ವೇ ನಂ. 377/2ರಲ್ಲಿ 2 ಎಕರೆಯಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಅರಣ್ಯದ ಅಂಚಿನಿಂದ 35 ಮೀ. ಅಂತರದಲ್ಲಿಯೇ ಈ ಗಣಿಗಾರಿಕೆ ನಡೆಯುತ್ತಿದೆ.</p>.<p>ಎಡೆಯರಹಳ್ಳಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆಯೇ ಮಲೆಮಹದೇಶ್ವರ ಮೀಸಲು ಅರಣ್ಯ ಪ್ರದೇಶವಿದೆ. ಈ ಭಾಗದಲ್ಲಿ ಆನೆಗಳ ಸಂಖ್ಯೆಯೂ ಹೆಚ್ಚಿದೆ. ಆದರೆ, ಈ ಮೀಸಲು ಅರಣ್ಯ ಪ್ರದೇಶದ ಸೀಮಾರೇಖೆಯೊಳಗೆ 5 ಗಣಿ ಗುತ್ತಿಗೆಗೆ ಪರವಾನಗಿ ನೀಡಲಾಗಿದೆ.</p>.<p>ಪೊನ್ನಾಚಿ ಗ್ರಾಮದ ಸರ್ವೇ ನಂ. 24ರಲ್ಲಿ 2 ಎಕರೆ, ಸರ್ವೇ ನಂ. 1ರಲ್ಲಿ 7.2 ಎಕರೆ, ಸರ್ವೇ ನಂ. 96ರಲ್ಲಿ 10 ಎಕರೆ (ಸೀಮಾರೇಖೆಯಿಂದ 20 ಮೀ. ದೂರ), ಸರ್ವೇ ನಂ. 96ಬಿಯಲ್ಲಿ 11.32 ಎಕರೆ ಹಾಗೂ ಸರ್ವೇ ನಂ. 86ಬಿನಲ್ಲಿ 8 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಸರ್ಕಾರಿ ಜಮೀನಿನಲ್ಲಿಯೇ ಈ ಐದು ಗಣಿ ಗುತ್ತಿಗೆಗೆ ಪರವಾನಗಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮಲೆಮಹದೇಶ್ವರ ಹಾಗೂ ಎಡೆಯರಹಳ್ಳಿ ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿರುವ ಆನೆ ಪಥದ (ಎಲಿಫೆಂಟ್ ಕಾರಿಡಾರ್) ಬಳಿಯೇ ಕಲ್ಲು ಗಣಿಗಾರಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಕಾಡಾನೆಗಳ ಸಂಚಾರಕ್ಕೆ ಆಪತ್ತು ಎದುರಾಗಿದೆ.</p>.<p>ಕರ್ನಾಟಕ ಅರಣ್ಯ ನಿಯಮಾವಳಿ 1969ರ ನಿಯಮ 41ರ ಉಪ ನಿಯಮ 2ರ ಅನ್ವಯ ಅರಣ್ಯ ಪ್ರದೇಶದಿಂದ 100 ಮೀ. ವ್ಯಾಪ್ತಿಯೊಳಗೆ ಯಾವುದೇ ಅರಣ್ಯೇತರ ಚಟುವಟಿಕೆಗೆ ಅನುಮತಿ ನೀಡುವಂತಿಲ್ಲ. ಗಣಿಗಾರಿಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಆದರೆ, ಈ ಎರಡು ಮೀಸಲು ಅರಣ್ಯ ಪ್ರದೇಶದ ಸೀಮಾರೇಖೆಯೊಳಗೆ 8 ಗಣಿ ಗುತ್ತಿಗೆಗೆ ಪರವಾನಗಿ ನೀಡಲಾಗಿದೆ.</p>.<p>ಜಿಲ್ಲೆಯ ಅರಣ್ಯ ಪ್ರದೇಶದ ಅಂಚಿನಲ್ಲಿ ನಡೆಯುತ್ತಿರುವ ಗಣಿಗಾರಿಕೆ ಪತ್ತೆಹಚ್ಚಲು ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಡಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ನಡೆಸಿದ ಜಂಟಿ ಸಮೀಕ್ಷೆಯಿಂದ ಆನೆ ಪಥದ ಸುತ್ತಮುತ್ತ ಗಣಿಗಾರಿಕೆ ನಡೆಯುತ್ತಿರುವುದು ಬಯಲಾಗಿದೆ. ಪ್ರಸ್ತುತ ಕರ್ನಾಟಕ ಅರಣ್ಯ ನಿಯಮಾವಳಿ ಉಲ್ಲಂಘಿಸಿ ನಡೆಯುತ್ತಿರುವ ಗಣಿಗಾರಿಕೆಯನ್ನು ರದ್ದುಪಡಿಸುವಂತೆಯೂ ವಿಶೇಷ ತಂಡದಿಂದ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಕೆಯಾಗಿದೆ. ಈ ವರದಿ ~ಪ್ರಜಾವಾಣಿ~ಗೆ ಲಭ್ಯವಾಗಿದೆ.</p>.<p>ಕೊಳ್ಳೇಗಾಲ ಅರಣ್ಯ ಪ್ರದೇಶ ಹಾಗೂ ಬಿಳಿಗಿರಿರಂಗನಾಥಸ್ವಾಮಿ ಹುಲಿ ರಕ್ಷಿತಾರಣ್ಯದ ನಡುವೆ ಎಡೆಯರಹಳ್ಳಿ-ದೊಡ್ಡಸಂಪಿಗೆ ಆನೆ ಪಥ ಸಂಪರ್ಕ ಕಲ್ಪಿಸುತ್ತದೆ. 2007ರಲ್ಲಿ ಸ್ವಯಂಸೇವಾ ಸಂಸ್ಥೆಯಾದ ವೈಲ್ಡ್ ಲೈಫ್ ಟ್ರಸ್ಟ್ ಆಫ್ ಇಂಡಿಯಾ ಈ ಆನೆ ಪಥದ ಬಳಿಯಲ್ಲಿ ಒತ್ತುವರಿಯಾಗಿದ್ದ 23 ಎಕರೆ ಜಮೀನು ಖರೀದಿಸಿ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿತ್ತು.</p>.<p>ಪ್ರಸ್ತುತ ಎಡೆಯರಹಳ್ಳಿ ಮೀಸಲು ಅರಣ್ಯದ ವ್ಯಾಪ್ತಿಯ ಮೀಣ್ಯಂ ಗ್ರಾಮದ ಪಟ್ಟಾ ಜಮೀನಿನ ಸರ್ವೇ ನಂ. 64/3ರಲ್ಲಿ 3 ಎಕರೆ, ಸರ್ವೇ ನಂ. 64/5ರಲ್ಲಿ 4.5 ಎಕರೆ ಹಾಗೂ ಹುತ್ತೂರು ಗ್ರಾಮದ ಸರ್ಕಾರಿ ಜಮೀನಿನ ಸರ್ವೇ ನಂ. 377/2ರಲ್ಲಿ 2 ಎಕರೆಯಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಅರಣ್ಯದ ಅಂಚಿನಿಂದ 35 ಮೀ. ಅಂತರದಲ್ಲಿಯೇ ಈ ಗಣಿಗಾರಿಕೆ ನಡೆಯುತ್ತಿದೆ.</p>.<p>ಎಡೆಯರಹಳ್ಳಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆಯೇ ಮಲೆಮಹದೇಶ್ವರ ಮೀಸಲು ಅರಣ್ಯ ಪ್ರದೇಶವಿದೆ. ಈ ಭಾಗದಲ್ಲಿ ಆನೆಗಳ ಸಂಖ್ಯೆಯೂ ಹೆಚ್ಚಿದೆ. ಆದರೆ, ಈ ಮೀಸಲು ಅರಣ್ಯ ಪ್ರದೇಶದ ಸೀಮಾರೇಖೆಯೊಳಗೆ 5 ಗಣಿ ಗುತ್ತಿಗೆಗೆ ಪರವಾನಗಿ ನೀಡಲಾಗಿದೆ.</p>.<p>ಪೊನ್ನಾಚಿ ಗ್ರಾಮದ ಸರ್ವೇ ನಂ. 24ರಲ್ಲಿ 2 ಎಕರೆ, ಸರ್ವೇ ನಂ. 1ರಲ್ಲಿ 7.2 ಎಕರೆ, ಸರ್ವೇ ನಂ. 96ರಲ್ಲಿ 10 ಎಕರೆ (ಸೀಮಾರೇಖೆಯಿಂದ 20 ಮೀ. ದೂರ), ಸರ್ವೇ ನಂ. 96ಬಿಯಲ್ಲಿ 11.32 ಎಕರೆ ಹಾಗೂ ಸರ್ವೇ ನಂ. 86ಬಿನಲ್ಲಿ 8 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಸರ್ಕಾರಿ ಜಮೀನಿನಲ್ಲಿಯೇ ಈ ಐದು ಗಣಿ ಗುತ್ತಿಗೆಗೆ ಪರವಾನಗಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>