<p>ಅಲಹಾಬಾದ್ (ಪಿಟಿಐ): ಚುನಾವಣೆ ನಡೆಯಲಿರುವ ಉತ್ತರ ಪ್ರದೇಶದಲ್ಲಿ ಜಾರಿ ಮಾಡಲಾಗಿರುವ ನೀತಿ ಸಂಹಿತೆಯ ಅನ್ವಯ ಆನೆ ಪ್ರತಿಮೆಗಳಿಗೆ ಮುಸುಕು ಹಾಕುವಂತೆ ಚುನಾವಣಾ ಆಯೋಗ ಆದೇಶಿಸಿದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾ ಮಾಡಿದೆ.<br /> <br /> ಸಾಮಾಜಿಕ ಕಾರ್ಯಕರ್ತ ಧೀರಜ್ ಸಿಂಗ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ತಾಂತ್ರಿಕ ದೋಷವಿದೆ ಎಂದು ವಿಚಾರಣೆಯ ಆರಂಭದಲ್ಲಿಯೇ ಮುಖ್ಯ ನ್ಯಾಯಮೂರ್ತಿ ಎಸ್. ಆರ್. ಆಲಂ ಮತ್ತು ರಣ್ವಿಜಯ್ ಸಿಂಗ್ ಅವರನ್ನು ಒಳಗೊಂಡ ನ್ಯಾಯಪೀಠವು ಅಭಿಪ್ರಾಯಪಟ್ಟಿತು.<br /> <br /> ಅರ್ಜಿಯಲ್ಲಿ ಅರ್ಜಿದಾರರ ಪೂರ್ತಿ ವಿವರಗಳಿಲ್ಲ ಮತ್ತು ಚುನಾವಣಾ ಆಯೋಗದ ಆದೇಶದ ಪ್ರತಿಯನ್ನೂ ಲಗತ್ತಿಸಿಲ್ಲ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದಾಗ, ಅರ್ಜಿದಾರರ ಪರ ವಕೀಲ ಅನಿಲ್ ಸಿಂಗ್ ಬಿಸೆನ್ ಅವರು ತಿದ್ದುಪಡಿಯನ್ನು ಒಳಗೊಂಡ ಅರ್ಜಿಯನ್ನು ಸಲ್ಲಿಸಲು ಅನುಮತಿ ಕೋರಿದರು.<br /> <br /> ಆದರೆ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿ ನಿಯಮದ ಪ್ರಕಾರ ಹೊಸ ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಿತು.<br /> <br /> ಶೀಘ್ರದಲ್ಲಿಯೇ ಹೊಸ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ಬಿಸೆನ್ ತಿಳಿಸಿದರು. ಆನೆ ತಮ್ಮ ಪಕ್ಷದ ಚಿನ್ಹೆಯಾಗಿರುವುದರಿಂದ ಚುನಾವಣಾ ಆಯೋಗದ ಆದೇಶವು ತಮಗೆ ವಿರುದ್ಧವಾಗಿದೆ ಎಂಬ ಅಂಶವನ್ನು ನ್ಯಾಯಾಲಯದ ಗಮನಕ್ಕೆ ತರಲು ಬಿಎಸ್ಪಿ ನಿರ್ಧರಿಸಿದೆ ಎಂದು ಹೇಳಲಾಗಿದೆ.<br /> <br /> ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ರಾಜ್ಯದಲ್ಲಿ ಆನೆ ಮತ್ತು ಮುಖ್ಯಮಂತ್ರಿ ಮಾಯಾವತಿ ಅವರ ಪ್ರತಿಮೆಗಳಿಗೆ ಮುಸುಕು ಹಾಕುವಂತೆ ಚುನಾವಣಾ ಆಯೋಗವು ಕಳೆದ ವಾರ ಆದೇಶಿಸಿದೆ.</p>.<p><strong>ಪ್ರತಿಮೆ ಮುಚ್ಚುವ ಕಾರ್ಯ ಪೂರ್ಣ</strong><br /> (ಲಖನೌ ವರದಿ): ನೋಯ್ಡಾ ಮತ್ತು ಲಖನೌ ನಗರಗಳ ವಿವಿಧ ಕಡೆ ಉದ್ಯಾನ ಮತ್ತು ಸ್ಮಾರಕಗಳಲ್ಲಿ ಸ್ಥಾಪಿಸಲಾಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಮತ್ತು ಬಿಎಸ್ಪಿ ಚಿಹ್ನೆಯಾದ ಆನೆಯ ಪ್ರತಿಮೆಗಳನ್ನು ಮುಚ್ಚುವ ಕಾರ್ಯವನ್ನು ಚುನಾವಣಾ ಆಯೋಗ ಬುಧವಾರ ಪೂರ್ಣ ಗೊಳಿಸಿದೆ.<br /> <br /> `ಪ್ರತಿಮೆಗಳನ್ನು ಮುಚ್ಚುವ ಕೆಲಸವು ಪೂರ್ಣಗೊಂಡಿರುವ ಬಗ್ಗೆ ಅಧಿಕೃತ ವರದಿ ಇನ್ನೂ ಬಂದಿಲ್ಲ. ಆದರೆ ಎರಡೂ ಜಿಲ್ಲೆಗಳಲ್ಲಿ ನಿಯುಕ್ತರಾಗಿ ರುವ ಚುನಾವಣಾಧಿಕಾರಿಗಳು ದೂರವಾಣಿ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ~ ಎಂದು ಉತ್ತರ ಪ್ರದೇಶ ಮುಖ್ಯ ಚುನಾವಣಾಧಿಕಾರಿ ಉಮೇಶ್ ಸಿನ್ಹಾ ಬುಧವಾರ ಹೇಳಿದ್ದಾರೆ.<br /> <br /> ಮಾಯಾವತಿ ಹಾಗೂ ಬಿಎಸ್ಪಿ ಚಿಹ್ನೆಯಾಗಿರುವ ಆನೆಗಳ ಪ್ರತಿಮೆಯನ್ನು ಮುಚ್ಚುವಂತೆ ಚುನಾವಣಾ ಆಯೋಗ ಶನಿವಾರ ಆದೇಶಿಸಿತ್ತು.<br /> <br /> ಈ ಮಧ್ಯೆ, ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಳ್ಳಿ ಹಾಕಿದೆ.<br /> <br /> <strong>ಶಾಸಕರ ಕಾರಿನಿಂದ ಹಣ ವಶ</strong><br /> (ಸುಲ್ತಾನ್ಪುರ ವರದಿ): ಉತ್ತರ ಪ್ರದೇಶದ ಸುಲ್ತಾನ್ಪುರದ ಶಾಸಕ ಭೋಲಾ ಪಾಸ್ವಾನ್ ಅವರ ವಾಹನದಲ್ಲಿದ್ದ ಆರು ಲಕ್ಷ ರೂಪಾಯಿ ಹಣವನ್ನು ಚುನಾವಣಾ ಆಯೋಗದ ತಂಡ ಸ್ವಾಧೀನಪಡಿಸಿಕೊಂಡಿದೆ.<br /> <br /> ಸರೈಮಿರ್ ಎಂಬಲ್ಲಿಗೆ ತೆರಳುತ್ತಿದ್ದ ಶಾಸಕರ ವಾಹನವನ್ನು ಚಂದಾ ಪ್ರದೇಶದ ಬಳಿ ನಿಲ್ಲಿಸಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. <br /> <strong><br /> ಉತ್ತರ ಪ್ರದೇಶ: ಮಹಿಳೆಯರ ಅವಗಣನೆ</strong> <br /> (ಲಖನೌ ವರದಿ): ವಿಧಾನಸಭೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ವಿಚಾರಕ್ಕೆ ಬಂದರೆ ಉತ್ತರ ಪ್ರದೇಶದಲ್ಲಿ ಮಹಿಳೆಯರು ಸಂಪೂರ್ಣವಾಗಿ ಅವಗಣನೆಗೆ ಒಳಗಾಗಿದ್ದಾರೆ. ಚುನಾವಣಾ ಆಯೋಗದಲ್ಲಿ ಲಭ್ಯವಿರುವ ಅಂಕಿ ಅಂಶಗಳೇ ಅದನ್ನು ಹೇಳುತ್ತದೆ.<br /> <br /> 1952ರಲ್ಲಿ ಮೊದಲ ಬಾರಿ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆದ ನಂತರ ಇದುವರೆಗೆ ಒಟ್ಟು 15 ಬಾರಿ ಚುನಾವಣೆ ನಡೆದಿದೆ. ಚುನಾವಣಾ ಆಯೋಗ ನೀಡಿರುವ ಮಾಹಿತಿಗಳ ಪ್ರಕಾರ ಇದುವರೆಗೆ ಕೇವಲ ಶೇ 4.4ರಷ್ಟು ಮಹಿಳೆಯರು ಶಾಸಕರಾಗಿ ಆಯ್ಕೆಯಾಗಿದ್ದಾರೆ.<br /> <br /> ಪಕ್ಷಗಳ ವಿಚಾರಕ್ಕೆ ಬಂದರೆ 1952ರಿಂದ 2007ರವರೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅತೀ ಹೆಚ್ಚು ಅಂದರೆ 338 ಮಹಿಳೆಯರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದೆ. ಪ್ರತಿ ಚುನಾವಣೆಯಲ್ಲಿ ಅದು 24 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.<br /> <br /> ಉತ್ತರ ಪ್ರದೇಶದಲ್ಲಿರುವ ಸಾಮಾಜಿಕ ನಿರ್ಬಂಧಗಳ ಹೊರತಾಗಿಯೂ ರಾಜಕೀಯದಲ್ಲಿ ತಮ್ಮ ಪಾಲು ಪಡೆಯಲು ಮಹಿಳೆಯರು ಯತ್ನಿಸಿದ್ದಾರೆ.<br /> <br /> ಇದುವರೆಗೆ ನಡೆದಿರುವ 15 ಚುನಾವಣೆಗಳಲ್ಲಿ ಒಟ್ಟು 1,985 ಮಹಿಳೆಯರು ಸ್ಪರ್ಧಿಸಿ ತಮ್ಮ ಅದೃಷ್ಟ ಪರೀಕ್ಷಿಸಿದ್ದಾರೆ. ಇವುಗಳಲ್ಲಿ ಶೇ 41.61ರಷ್ಟು ಅಂದರೆ 826 ಮಹಿಳೆಯರು ಪಕ್ಷೇತರರಾಗಿ ಚುನಾವಣಾ ಅಖಾಡಕ್ಕಿಳಿದಿದ್ದರು. ಆದಾಗ್ಯೂ, ಇಷ್ಟು ಪಕ್ಷೇತರ ಅಭ್ಯರ್ಥಿಗಳಲ್ಲಿ ವಿಧಾನಸಭೆಗೆ ಆಯ್ಕೆಯಾಗಿದ್ದು ಕೇವಲ ಮೂವರು ಮಾತ್ರ!<br /> <br /> ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಮೊದಲ ಬಾರಿಗೆ ಮಹಿಳೆಯೊಬ್ಬರು ಶಾಸಕಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು 1977ರಲ್ಲಿ. <br /> <br /> ಚುನಾವಣಾ ಆಯೋಗ ನೀಡಿರುವ ಅಂಕಿ ಅಂಶಗಳ ಪ್ರಕಾರ, 1977ರಲ್ಲಿ ಸಂದಿಲಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುದುಸಿಯಾ ಬೇಗಂ ಎಂಬುವರು ಶಾಸಕಿಯಾಗಿ ಆಯ್ಕೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಲಹಾಬಾದ್ (ಪಿಟಿಐ): ಚುನಾವಣೆ ನಡೆಯಲಿರುವ ಉತ್ತರ ಪ್ರದೇಶದಲ್ಲಿ ಜಾರಿ ಮಾಡಲಾಗಿರುವ ನೀತಿ ಸಂಹಿತೆಯ ಅನ್ವಯ ಆನೆ ಪ್ರತಿಮೆಗಳಿಗೆ ಮುಸುಕು ಹಾಕುವಂತೆ ಚುನಾವಣಾ ಆಯೋಗ ಆದೇಶಿಸಿದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾ ಮಾಡಿದೆ.<br /> <br /> ಸಾಮಾಜಿಕ ಕಾರ್ಯಕರ್ತ ಧೀರಜ್ ಸಿಂಗ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ತಾಂತ್ರಿಕ ದೋಷವಿದೆ ಎಂದು ವಿಚಾರಣೆಯ ಆರಂಭದಲ್ಲಿಯೇ ಮುಖ್ಯ ನ್ಯಾಯಮೂರ್ತಿ ಎಸ್. ಆರ್. ಆಲಂ ಮತ್ತು ರಣ್ವಿಜಯ್ ಸಿಂಗ್ ಅವರನ್ನು ಒಳಗೊಂಡ ನ್ಯಾಯಪೀಠವು ಅಭಿಪ್ರಾಯಪಟ್ಟಿತು.<br /> <br /> ಅರ್ಜಿಯಲ್ಲಿ ಅರ್ಜಿದಾರರ ಪೂರ್ತಿ ವಿವರಗಳಿಲ್ಲ ಮತ್ತು ಚುನಾವಣಾ ಆಯೋಗದ ಆದೇಶದ ಪ್ರತಿಯನ್ನೂ ಲಗತ್ತಿಸಿಲ್ಲ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದಾಗ, ಅರ್ಜಿದಾರರ ಪರ ವಕೀಲ ಅನಿಲ್ ಸಿಂಗ್ ಬಿಸೆನ್ ಅವರು ತಿದ್ದುಪಡಿಯನ್ನು ಒಳಗೊಂಡ ಅರ್ಜಿಯನ್ನು ಸಲ್ಲಿಸಲು ಅನುಮತಿ ಕೋರಿದರು.<br /> <br /> ಆದರೆ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿ ನಿಯಮದ ಪ್ರಕಾರ ಹೊಸ ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಿತು.<br /> <br /> ಶೀಘ್ರದಲ್ಲಿಯೇ ಹೊಸ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ಬಿಸೆನ್ ತಿಳಿಸಿದರು. ಆನೆ ತಮ್ಮ ಪಕ್ಷದ ಚಿನ್ಹೆಯಾಗಿರುವುದರಿಂದ ಚುನಾವಣಾ ಆಯೋಗದ ಆದೇಶವು ತಮಗೆ ವಿರುದ್ಧವಾಗಿದೆ ಎಂಬ ಅಂಶವನ್ನು ನ್ಯಾಯಾಲಯದ ಗಮನಕ್ಕೆ ತರಲು ಬಿಎಸ್ಪಿ ನಿರ್ಧರಿಸಿದೆ ಎಂದು ಹೇಳಲಾಗಿದೆ.<br /> <br /> ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ರಾಜ್ಯದಲ್ಲಿ ಆನೆ ಮತ್ತು ಮುಖ್ಯಮಂತ್ರಿ ಮಾಯಾವತಿ ಅವರ ಪ್ರತಿಮೆಗಳಿಗೆ ಮುಸುಕು ಹಾಕುವಂತೆ ಚುನಾವಣಾ ಆಯೋಗವು ಕಳೆದ ವಾರ ಆದೇಶಿಸಿದೆ.</p>.<p><strong>ಪ್ರತಿಮೆ ಮುಚ್ಚುವ ಕಾರ್ಯ ಪೂರ್ಣ</strong><br /> (ಲಖನೌ ವರದಿ): ನೋಯ್ಡಾ ಮತ್ತು ಲಖನೌ ನಗರಗಳ ವಿವಿಧ ಕಡೆ ಉದ್ಯಾನ ಮತ್ತು ಸ್ಮಾರಕಗಳಲ್ಲಿ ಸ್ಥಾಪಿಸಲಾಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಮತ್ತು ಬಿಎಸ್ಪಿ ಚಿಹ್ನೆಯಾದ ಆನೆಯ ಪ್ರತಿಮೆಗಳನ್ನು ಮುಚ್ಚುವ ಕಾರ್ಯವನ್ನು ಚುನಾವಣಾ ಆಯೋಗ ಬುಧವಾರ ಪೂರ್ಣ ಗೊಳಿಸಿದೆ.<br /> <br /> `ಪ್ರತಿಮೆಗಳನ್ನು ಮುಚ್ಚುವ ಕೆಲಸವು ಪೂರ್ಣಗೊಂಡಿರುವ ಬಗ್ಗೆ ಅಧಿಕೃತ ವರದಿ ಇನ್ನೂ ಬಂದಿಲ್ಲ. ಆದರೆ ಎರಡೂ ಜಿಲ್ಲೆಗಳಲ್ಲಿ ನಿಯುಕ್ತರಾಗಿ ರುವ ಚುನಾವಣಾಧಿಕಾರಿಗಳು ದೂರವಾಣಿ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ~ ಎಂದು ಉತ್ತರ ಪ್ರದೇಶ ಮುಖ್ಯ ಚುನಾವಣಾಧಿಕಾರಿ ಉಮೇಶ್ ಸಿನ್ಹಾ ಬುಧವಾರ ಹೇಳಿದ್ದಾರೆ.<br /> <br /> ಮಾಯಾವತಿ ಹಾಗೂ ಬಿಎಸ್ಪಿ ಚಿಹ್ನೆಯಾಗಿರುವ ಆನೆಗಳ ಪ್ರತಿಮೆಯನ್ನು ಮುಚ್ಚುವಂತೆ ಚುನಾವಣಾ ಆಯೋಗ ಶನಿವಾರ ಆದೇಶಿಸಿತ್ತು.<br /> <br /> ಈ ಮಧ್ಯೆ, ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಳ್ಳಿ ಹಾಕಿದೆ.<br /> <br /> <strong>ಶಾಸಕರ ಕಾರಿನಿಂದ ಹಣ ವಶ</strong><br /> (ಸುಲ್ತಾನ್ಪುರ ವರದಿ): ಉತ್ತರ ಪ್ರದೇಶದ ಸುಲ್ತಾನ್ಪುರದ ಶಾಸಕ ಭೋಲಾ ಪಾಸ್ವಾನ್ ಅವರ ವಾಹನದಲ್ಲಿದ್ದ ಆರು ಲಕ್ಷ ರೂಪಾಯಿ ಹಣವನ್ನು ಚುನಾವಣಾ ಆಯೋಗದ ತಂಡ ಸ್ವಾಧೀನಪಡಿಸಿಕೊಂಡಿದೆ.<br /> <br /> ಸರೈಮಿರ್ ಎಂಬಲ್ಲಿಗೆ ತೆರಳುತ್ತಿದ್ದ ಶಾಸಕರ ವಾಹನವನ್ನು ಚಂದಾ ಪ್ರದೇಶದ ಬಳಿ ನಿಲ್ಲಿಸಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. <br /> <strong><br /> ಉತ್ತರ ಪ್ರದೇಶ: ಮಹಿಳೆಯರ ಅವಗಣನೆ</strong> <br /> (ಲಖನೌ ವರದಿ): ವಿಧಾನಸಭೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ವಿಚಾರಕ್ಕೆ ಬಂದರೆ ಉತ್ತರ ಪ್ರದೇಶದಲ್ಲಿ ಮಹಿಳೆಯರು ಸಂಪೂರ್ಣವಾಗಿ ಅವಗಣನೆಗೆ ಒಳಗಾಗಿದ್ದಾರೆ. ಚುನಾವಣಾ ಆಯೋಗದಲ್ಲಿ ಲಭ್ಯವಿರುವ ಅಂಕಿ ಅಂಶಗಳೇ ಅದನ್ನು ಹೇಳುತ್ತದೆ.<br /> <br /> 1952ರಲ್ಲಿ ಮೊದಲ ಬಾರಿ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆದ ನಂತರ ಇದುವರೆಗೆ ಒಟ್ಟು 15 ಬಾರಿ ಚುನಾವಣೆ ನಡೆದಿದೆ. ಚುನಾವಣಾ ಆಯೋಗ ನೀಡಿರುವ ಮಾಹಿತಿಗಳ ಪ್ರಕಾರ ಇದುವರೆಗೆ ಕೇವಲ ಶೇ 4.4ರಷ್ಟು ಮಹಿಳೆಯರು ಶಾಸಕರಾಗಿ ಆಯ್ಕೆಯಾಗಿದ್ದಾರೆ.<br /> <br /> ಪಕ್ಷಗಳ ವಿಚಾರಕ್ಕೆ ಬಂದರೆ 1952ರಿಂದ 2007ರವರೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅತೀ ಹೆಚ್ಚು ಅಂದರೆ 338 ಮಹಿಳೆಯರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದೆ. ಪ್ರತಿ ಚುನಾವಣೆಯಲ್ಲಿ ಅದು 24 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.<br /> <br /> ಉತ್ತರ ಪ್ರದೇಶದಲ್ಲಿರುವ ಸಾಮಾಜಿಕ ನಿರ್ಬಂಧಗಳ ಹೊರತಾಗಿಯೂ ರಾಜಕೀಯದಲ್ಲಿ ತಮ್ಮ ಪಾಲು ಪಡೆಯಲು ಮಹಿಳೆಯರು ಯತ್ನಿಸಿದ್ದಾರೆ.<br /> <br /> ಇದುವರೆಗೆ ನಡೆದಿರುವ 15 ಚುನಾವಣೆಗಳಲ್ಲಿ ಒಟ್ಟು 1,985 ಮಹಿಳೆಯರು ಸ್ಪರ್ಧಿಸಿ ತಮ್ಮ ಅದೃಷ್ಟ ಪರೀಕ್ಷಿಸಿದ್ದಾರೆ. ಇವುಗಳಲ್ಲಿ ಶೇ 41.61ರಷ್ಟು ಅಂದರೆ 826 ಮಹಿಳೆಯರು ಪಕ್ಷೇತರರಾಗಿ ಚುನಾವಣಾ ಅಖಾಡಕ್ಕಿಳಿದಿದ್ದರು. ಆದಾಗ್ಯೂ, ಇಷ್ಟು ಪಕ್ಷೇತರ ಅಭ್ಯರ್ಥಿಗಳಲ್ಲಿ ವಿಧಾನಸಭೆಗೆ ಆಯ್ಕೆಯಾಗಿದ್ದು ಕೇವಲ ಮೂವರು ಮಾತ್ರ!<br /> <br /> ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಮೊದಲ ಬಾರಿಗೆ ಮಹಿಳೆಯೊಬ್ಬರು ಶಾಸಕಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು 1977ರಲ್ಲಿ. <br /> <br /> ಚುನಾವಣಾ ಆಯೋಗ ನೀಡಿರುವ ಅಂಕಿ ಅಂಶಗಳ ಪ್ರಕಾರ, 1977ರಲ್ಲಿ ಸಂದಿಲಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುದುಸಿಯಾ ಬೇಗಂ ಎಂಬುವರು ಶಾಸಕಿಯಾಗಿ ಆಯ್ಕೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>