<p><strong>ದಾವಣಗೆರೆ:</strong> ಆಪರೇಷನ್ ಕಮಲದ ಕೂಸು ಎಸ್.ವಿ. ರಾಮಚಂದ್ರ ಅವರನ್ನು ಉಪಚುನಾವಣೆಯಲ್ಲಿ ಸೋಲಿಸುವ ಮೂಲಕ ಜಗಳೂರು ಕ್ಷೇತ್ರದ ಜನತೆ ರಾಜ್ಯದ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕರೆ ನೀಡಿದರು. ಜಗಳೂರು ತಾಲ್ಲೂಕಿನ ಬಿಳಿಚೋಡಿನಲ್ಲಿ ಭಾನುವಾರ ನಡೆದ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ದೇವೇಂದ್ರಪ್ಪ ಪರ ಮತಯಾಚಿಸಿ ಅವರು ಮಾತನಾಡಿದರು.<br /> <br /> ಬಹುಮತ ಇಲ್ಲದೇ ಪಕ್ಷೇತರರ ಸಹಕಾರದಿಂದ ಅಧಿಕಾರಕ್ಕೆ ಬಂದ ಯಡಿಯೂರಪ್ಪ ಸರ್ಕಾರ, ಆಪರೇಷನ್ ಕಮಲ ಹುಟ್ಟುಹಾಕುವ ಮೂಲಕ ಪ್ರಜಾಪ್ರಭುತ್ವದ ನಾಶಕ್ಕೆ ಮುನ್ನುಡಿ ಬರೆಯಿತು. ಭ್ರಷ್ಟಾಚಾರದ ಮೂಲಕ ಗಳಿಸಿದ ಹಣವನ್ನು ಆಪರೇಷನ್ ಕಮಲಕ್ಕೆ ಬಲಿಯಾದ ಶಾಸಕರಿಗೆ ನೀಡುತ್ತಿದೆ. ಅನವಶ್ಯಕವಾಗಿ ಜನರ ಮೇಲೆ ಉಪಚುನಾವಣೆ ಹೇರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು, ಸಮರ್ಪಕ ವಿದ್ಯುತ್ ಪೂರೈಸಲು ಸಾಧ್ಯವಾಗದ ಸರ್ಕಾರ ಶಾಸಕರನ್ನು ಖರೀದಿಸಲು ಕೋಟಿಗಟ್ಟಲೆ ಹಣ ಚೆಲ್ಲುತ್ತಿದೆ.ಇತ್ತ ದುಡ್ಡಿನ ವ್ಯಾಮೋಹದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಗೆಲ್ಲಿಸಿದ ಪಕ್ಷಕ್ಕೆ, ನಂಬಿಕೆ ಇಟ್ಟ ಮತದಾರರಿಗೆ ಕೆಲವರು ದ್ರೋಹ ಮಾಡಿದ್ದಾರೆ.ಅಂತಹ ರಾಜಕೀಯ ನೀಚರನ್ನು ಸೋಲಿಸುವ ಮೂಲಕ ರಾಜ್ಯಕ್ಕೆ ಒಳ್ಳೆಯ ಸಂದೇಶ ನೀಡಬೇಕು ಎಂದು ಮತದಾರರನ್ನು ಕೋರಿದರು.<br /> <br /> ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಮಾತನಾಡಿ, ಕ್ಷೇತ್ರದ ಜನತೆ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಭ್ರಷ್ಟಾಚಾರಿ, ಪಕ್ಷಾಂತರಿಗಳಿಗೆ ತಕ್ಕಪಾಠ ಕಲಿಸುವಂತೆ ಕೋರಿದರು.<br /> ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಮಾತನಾಡಿ, ಪಕ್ಷಕ್ಕೆ, ಕ್ಷೇತ್ರದ ಮತದಾರರಿಗೆ ದ್ರೋಹ ಬಗೆಯುವ ಮೂಲಕ ರಾಮಚಂದ್ರ ಅವರು ಸ್ವಾಭಿಮಾನದ ಪಾಳೇಗಾರರಿಗೆ ಅವಮಾನ ಮಾಡಿದ್ದಾರೆ.<br /> <br /> ಜಗಳೂರನ್ನು ಭದ್ರಾ ಮೇಲ್ದಂಡೆ ಯೋಜನೆಗೆ ಸೇರಿಸದ ಯಡಿಯೂರಪ್ಪ ಯಾವ ಮುಖ ಇಟ್ಟುಕೊಂಡು ಮತಯಾಚಿಸುತ್ತಾರೆ ಎಂದು ಪ್ರಶ್ನಿಸಿದರು.ಮಾಜಿ ಸಂಸದ ಕೋದಂಡರಾಮಯ್ಯ, ಮಾಜಿ ಶಾಸಕ ಕೆ. ಮಲ್ಲಪ್ಪ, ಶಾಸಕರಾದ ಹಂಪಯ್ಯ, ರಾಯಪ್ಪ ನಾಯಕ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಡಾ.ವೈ. ರಾಮಪ್ಪ ಪಕ್ಷದ ಅಭ್ಯರ್ಥಿ ದೇವೇಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಆಪರೇಷನ್ ಕಮಲದ ಕೂಸು ಎಸ್.ವಿ. ರಾಮಚಂದ್ರ ಅವರನ್ನು ಉಪಚುನಾವಣೆಯಲ್ಲಿ ಸೋಲಿಸುವ ಮೂಲಕ ಜಗಳೂರು ಕ್ಷೇತ್ರದ ಜನತೆ ರಾಜ್ಯದ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕರೆ ನೀಡಿದರು. ಜಗಳೂರು ತಾಲ್ಲೂಕಿನ ಬಿಳಿಚೋಡಿನಲ್ಲಿ ಭಾನುವಾರ ನಡೆದ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ದೇವೇಂದ್ರಪ್ಪ ಪರ ಮತಯಾಚಿಸಿ ಅವರು ಮಾತನಾಡಿದರು.<br /> <br /> ಬಹುಮತ ಇಲ್ಲದೇ ಪಕ್ಷೇತರರ ಸಹಕಾರದಿಂದ ಅಧಿಕಾರಕ್ಕೆ ಬಂದ ಯಡಿಯೂರಪ್ಪ ಸರ್ಕಾರ, ಆಪರೇಷನ್ ಕಮಲ ಹುಟ್ಟುಹಾಕುವ ಮೂಲಕ ಪ್ರಜಾಪ್ರಭುತ್ವದ ನಾಶಕ್ಕೆ ಮುನ್ನುಡಿ ಬರೆಯಿತು. ಭ್ರಷ್ಟಾಚಾರದ ಮೂಲಕ ಗಳಿಸಿದ ಹಣವನ್ನು ಆಪರೇಷನ್ ಕಮಲಕ್ಕೆ ಬಲಿಯಾದ ಶಾಸಕರಿಗೆ ನೀಡುತ್ತಿದೆ. ಅನವಶ್ಯಕವಾಗಿ ಜನರ ಮೇಲೆ ಉಪಚುನಾವಣೆ ಹೇರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು, ಸಮರ್ಪಕ ವಿದ್ಯುತ್ ಪೂರೈಸಲು ಸಾಧ್ಯವಾಗದ ಸರ್ಕಾರ ಶಾಸಕರನ್ನು ಖರೀದಿಸಲು ಕೋಟಿಗಟ್ಟಲೆ ಹಣ ಚೆಲ್ಲುತ್ತಿದೆ.ಇತ್ತ ದುಡ್ಡಿನ ವ್ಯಾಮೋಹದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಗೆಲ್ಲಿಸಿದ ಪಕ್ಷಕ್ಕೆ, ನಂಬಿಕೆ ಇಟ್ಟ ಮತದಾರರಿಗೆ ಕೆಲವರು ದ್ರೋಹ ಮಾಡಿದ್ದಾರೆ.ಅಂತಹ ರಾಜಕೀಯ ನೀಚರನ್ನು ಸೋಲಿಸುವ ಮೂಲಕ ರಾಜ್ಯಕ್ಕೆ ಒಳ್ಳೆಯ ಸಂದೇಶ ನೀಡಬೇಕು ಎಂದು ಮತದಾರರನ್ನು ಕೋರಿದರು.<br /> <br /> ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಮಾತನಾಡಿ, ಕ್ಷೇತ್ರದ ಜನತೆ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಭ್ರಷ್ಟಾಚಾರಿ, ಪಕ್ಷಾಂತರಿಗಳಿಗೆ ತಕ್ಕಪಾಠ ಕಲಿಸುವಂತೆ ಕೋರಿದರು.<br /> ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಮಾತನಾಡಿ, ಪಕ್ಷಕ್ಕೆ, ಕ್ಷೇತ್ರದ ಮತದಾರರಿಗೆ ದ್ರೋಹ ಬಗೆಯುವ ಮೂಲಕ ರಾಮಚಂದ್ರ ಅವರು ಸ್ವಾಭಿಮಾನದ ಪಾಳೇಗಾರರಿಗೆ ಅವಮಾನ ಮಾಡಿದ್ದಾರೆ.<br /> <br /> ಜಗಳೂರನ್ನು ಭದ್ರಾ ಮೇಲ್ದಂಡೆ ಯೋಜನೆಗೆ ಸೇರಿಸದ ಯಡಿಯೂರಪ್ಪ ಯಾವ ಮುಖ ಇಟ್ಟುಕೊಂಡು ಮತಯಾಚಿಸುತ್ತಾರೆ ಎಂದು ಪ್ರಶ್ನಿಸಿದರು.ಮಾಜಿ ಸಂಸದ ಕೋದಂಡರಾಮಯ್ಯ, ಮಾಜಿ ಶಾಸಕ ಕೆ. ಮಲ್ಲಪ್ಪ, ಶಾಸಕರಾದ ಹಂಪಯ್ಯ, ರಾಯಪ್ಪ ನಾಯಕ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಡಾ.ವೈ. ರಾಮಪ್ಪ ಪಕ್ಷದ ಅಭ್ಯರ್ಥಿ ದೇವೇಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>