<p><strong>ಬೆಂಗಳೂರು:</strong> ಬೆಳೆಗಾರರು ಮತ್ತು ನೇಕಾರರ ನಡುವೆ ಸಮನ್ವಯ ಸಾಧಿಸುವ ಜವಾಬ್ದಾರಿ ಹೊತ್ತಿರುವ ರೇಷ್ಮೆ ಮಂಡಳಿ ಇಕ್ಕಟ್ಟಿಗೆ ಸಿಲುಕಿದೆ ಎಂದು ಕೇಂದ್ರ ರೇಷ್ಮೆ ಮಂಡಳಿಯ ಜಂಟಿ ನಿರ್ದೇಶಕ ಕೆ.ಎಸ್. ಮೆನನ್ ಇಲ್ಲಿ ಅಭಿಪ್ರಾಯಪಟ್ಟರು.<br /> <br /> ಚೀನಾದಿಂದ ಆಮದಾಗುತ್ತಿರುವ ರೇಷ್ಮೆ ಮೇಲಿನ ಆಮದು ಸುಂಕವನ್ನು ಶೇಕಡ 30ರಿಂದ ಶೇಕಡ 5ಕ್ಕೆ ಇಳಿಕೆ ಮಾಡಿರುವ ಕ್ರಮವನ್ನು ರೇಷ್ಮೆ ಬೆಳೆಗಾರರು ವಿರೋಧಿಸುತ್ತಿದ್ದಾರೆ. ಆದರೆ ಈ ಕ್ರಮವನ್ನು ನೇಕಾರರು ಸ್ವಾಗತಿಸುತ್ತಿದ್ದಾರೆ. ಇದರಿಂದ ಮಂಡಳಿಯು ಇಕ್ಕಟ್ಟಿಗೆ ಗುರಿಯಾಗಿದೆ ಎಂದರು.<br /> <br /> ಕೇಂದ್ರ ರೇಷ್ಮೆ ಮಂಡಳಿಯ ಬೆಂಗಳೂರಿನ ಕಚೇರಿಯಲ್ಲಿ ಗುರುವಾರ ಆಯೋಜಿಸಲಾಗಿದ್ದ `ದೇಸಿ ರೇಷ್ಮೆಯಿಂದ ಉತ್ಕೃಷ್ಟ ದರ್ಜೆಯ ನೂಲು ತಯಾರಿಕೆ~ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.<br /> <br /> ಜಾಗತಿಕ ರೇಷ್ಮೆ ನೂಲು ಉತ್ಪಾದನೆಯಲ್ಲಿ ಭಾರತ ಮತ್ತು ಚೀನಾ ದೇಶಗಳ ಒಟ್ಟು ಪಾಲು ಶೇಕಡ 95ರಷ್ಟಿದೆ. ಮುಂದಿನ ಐದು ವರ್ಷಗಳಲ್ಲಿ 32 ಸಾವಿರ ಟನ್ ರೇಷ್ಮೆ ನೂಲು ಉತ್ಪಾದಿಸುವ ಗುರಿ ಇದೆ .<br /> <br /> ಸ್ವಯಂಚಾಲಿತ ನೂಲು ತೆಗೆಯುವ ಯಂತ್ರ: ಕೇಂದ್ರ ರೇಷ್ಮೆ ತಂತ್ರಜ್ಞಾನ ಸಂಶೋಧನಾ ಸಂಸ್ಥೆಯು ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಒಟ್ಟು ಏಳು ಸ್ವಯಂಚಾಲಿತ ರೇಷ್ಮೆ ನೂಲು ತೆಗೆಯುವ ಯಂತ್ರಗಳನ್ನು ಸ್ಥಾಪಿಸಿದೆ ಎಂದು ಸಂಸ್ಥೆಯು ನಿರ್ದೇಶಕ ಡಾ. ಅರಿಂದಮ್ ಬಸು ತಿಳಿಸಿದರು.<br /> <br /> `ಸ್ವಯಂಚಾಲಿತ ಯಂತ್ರಗಳ ಸ್ಥಾಪನೆಯ ನಂತರ ಚೀನಾ ದೇಶದ ರೇಷ್ಮೆ ನೂಲಿನಷ್ಟೇ ಗುಣಮಟ್ಟದ ರೇಷ್ಮೆ ನೂಲನ್ನು ದೇಸಿ ಮಾರುಕಟ್ಟೆಯಿಂದಲೇ ಪಡೆದುಕೊಳ್ಳಲು ಸಾಧ್ಯವಾಗುತ್ತಿದೆ~ ಎಂದರು.<br /> <br /> ಕರ್ನಾಟಕದ ರಾಮನಗರ ಮತ್ತು ಚನ್ನಪಟ್ಟಣಗಳಲ್ಲಿ ತಲಾ ಒಂದು ಸ್ವಯಂಚಾಲಿತ ರೇಷ್ಮೆ ನೂಲು ತೆಗೆಯುವ ಯಂತ್ರ, ಆಂಧ್ರಪ್ರದೇಶದ ಹಿಂದೂಪುರದಲ್ಲಿ ಎರಡು ಮತ್ತು ತಮಿಳುನಾಡಿನಲ್ಲಿ ಮೂರು ಯಂತ್ರಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.<br /> <br /> ಚೀನಾ ದೇಶದ ರೇಷ್ಮೆಗಿಂತ ದೇಸಿ ತಳಿಯಾದ ಮಲ್ಬರಿ ರೇಷ್ಮೆ ಹೆಚ್ಚು ಗುಣಮಟ್ಟದ್ದಾಗಿದೆ. ರಾಜ್ಯದಲ್ಲಿ ಈ ತಳಿಯ ರೇಷ್ಮೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲು ಪ್ರೋತ್ಸಾಹ ನೀಡಬೇಕು ಎಂದು ದೊಡ್ಡಬಳ್ಳಾಪುರದ ವಿದ್ಯುತ್ ಚಾಲಿತ ಮಗ್ಗಗಳ ಸಹಕಾರಿ ಸಂಘದ ಅಧ್ಯಕ್ಷ ಜಗನ್ನಾಥ ಆಗ್ರಹಿಸಿದರು.<br /> <br /> ರೇಷ್ಮೆ ಬೆಳೆಗಾರರು ಮತ್ತು ನೇಕಾರರು ತಮ್ಮ ಲಾಭಾಂಶವನ್ನು ಹಂಚಿಕೊಳ್ಳುವ ಒಪ್ಪಂದಕ್ಕೆ ಬಂದರೆ ಚೀನಾ ರೇಷ್ಮೆ ಆಮದಿನಿಂದ ಆಗುತ್ತಿರುವ ಸಮಸ್ಯೆಗಳಿಗೆ ಆಸ್ಪದ ಇರುವುದಿಲ್ಲ ಎಂದು ರೇಷ್ಮೆ ಮಂಡಳಿಯ ಅಧ್ಯಕ್ಷ (ತಾಂತ್ರಿಕ ವಿಭಾಗ) ಡಾ.ಬಿ. ಶರತ್ಚಂದ್ರ ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಳೆಗಾರರು ಮತ್ತು ನೇಕಾರರ ನಡುವೆ ಸಮನ್ವಯ ಸಾಧಿಸುವ ಜವಾಬ್ದಾರಿ ಹೊತ್ತಿರುವ ರೇಷ್ಮೆ ಮಂಡಳಿ ಇಕ್ಕಟ್ಟಿಗೆ ಸಿಲುಕಿದೆ ಎಂದು ಕೇಂದ್ರ ರೇಷ್ಮೆ ಮಂಡಳಿಯ ಜಂಟಿ ನಿರ್ದೇಶಕ ಕೆ.ಎಸ್. ಮೆನನ್ ಇಲ್ಲಿ ಅಭಿಪ್ರಾಯಪಟ್ಟರು.<br /> <br /> ಚೀನಾದಿಂದ ಆಮದಾಗುತ್ತಿರುವ ರೇಷ್ಮೆ ಮೇಲಿನ ಆಮದು ಸುಂಕವನ್ನು ಶೇಕಡ 30ರಿಂದ ಶೇಕಡ 5ಕ್ಕೆ ಇಳಿಕೆ ಮಾಡಿರುವ ಕ್ರಮವನ್ನು ರೇಷ್ಮೆ ಬೆಳೆಗಾರರು ವಿರೋಧಿಸುತ್ತಿದ್ದಾರೆ. ಆದರೆ ಈ ಕ್ರಮವನ್ನು ನೇಕಾರರು ಸ್ವಾಗತಿಸುತ್ತಿದ್ದಾರೆ. ಇದರಿಂದ ಮಂಡಳಿಯು ಇಕ್ಕಟ್ಟಿಗೆ ಗುರಿಯಾಗಿದೆ ಎಂದರು.<br /> <br /> ಕೇಂದ್ರ ರೇಷ್ಮೆ ಮಂಡಳಿಯ ಬೆಂಗಳೂರಿನ ಕಚೇರಿಯಲ್ಲಿ ಗುರುವಾರ ಆಯೋಜಿಸಲಾಗಿದ್ದ `ದೇಸಿ ರೇಷ್ಮೆಯಿಂದ ಉತ್ಕೃಷ್ಟ ದರ್ಜೆಯ ನೂಲು ತಯಾರಿಕೆ~ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.<br /> <br /> ಜಾಗತಿಕ ರೇಷ್ಮೆ ನೂಲು ಉತ್ಪಾದನೆಯಲ್ಲಿ ಭಾರತ ಮತ್ತು ಚೀನಾ ದೇಶಗಳ ಒಟ್ಟು ಪಾಲು ಶೇಕಡ 95ರಷ್ಟಿದೆ. ಮುಂದಿನ ಐದು ವರ್ಷಗಳಲ್ಲಿ 32 ಸಾವಿರ ಟನ್ ರೇಷ್ಮೆ ನೂಲು ಉತ್ಪಾದಿಸುವ ಗುರಿ ಇದೆ .<br /> <br /> ಸ್ವಯಂಚಾಲಿತ ನೂಲು ತೆಗೆಯುವ ಯಂತ್ರ: ಕೇಂದ್ರ ರೇಷ್ಮೆ ತಂತ್ರಜ್ಞಾನ ಸಂಶೋಧನಾ ಸಂಸ್ಥೆಯು ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಒಟ್ಟು ಏಳು ಸ್ವಯಂಚಾಲಿತ ರೇಷ್ಮೆ ನೂಲು ತೆಗೆಯುವ ಯಂತ್ರಗಳನ್ನು ಸ್ಥಾಪಿಸಿದೆ ಎಂದು ಸಂಸ್ಥೆಯು ನಿರ್ದೇಶಕ ಡಾ. ಅರಿಂದಮ್ ಬಸು ತಿಳಿಸಿದರು.<br /> <br /> `ಸ್ವಯಂಚಾಲಿತ ಯಂತ್ರಗಳ ಸ್ಥಾಪನೆಯ ನಂತರ ಚೀನಾ ದೇಶದ ರೇಷ್ಮೆ ನೂಲಿನಷ್ಟೇ ಗುಣಮಟ್ಟದ ರೇಷ್ಮೆ ನೂಲನ್ನು ದೇಸಿ ಮಾರುಕಟ್ಟೆಯಿಂದಲೇ ಪಡೆದುಕೊಳ್ಳಲು ಸಾಧ್ಯವಾಗುತ್ತಿದೆ~ ಎಂದರು.<br /> <br /> ಕರ್ನಾಟಕದ ರಾಮನಗರ ಮತ್ತು ಚನ್ನಪಟ್ಟಣಗಳಲ್ಲಿ ತಲಾ ಒಂದು ಸ್ವಯಂಚಾಲಿತ ರೇಷ್ಮೆ ನೂಲು ತೆಗೆಯುವ ಯಂತ್ರ, ಆಂಧ್ರಪ್ರದೇಶದ ಹಿಂದೂಪುರದಲ್ಲಿ ಎರಡು ಮತ್ತು ತಮಿಳುನಾಡಿನಲ್ಲಿ ಮೂರು ಯಂತ್ರಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.<br /> <br /> ಚೀನಾ ದೇಶದ ರೇಷ್ಮೆಗಿಂತ ದೇಸಿ ತಳಿಯಾದ ಮಲ್ಬರಿ ರೇಷ್ಮೆ ಹೆಚ್ಚು ಗುಣಮಟ್ಟದ್ದಾಗಿದೆ. ರಾಜ್ಯದಲ್ಲಿ ಈ ತಳಿಯ ರೇಷ್ಮೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲು ಪ್ರೋತ್ಸಾಹ ನೀಡಬೇಕು ಎಂದು ದೊಡ್ಡಬಳ್ಳಾಪುರದ ವಿದ್ಯುತ್ ಚಾಲಿತ ಮಗ್ಗಗಳ ಸಹಕಾರಿ ಸಂಘದ ಅಧ್ಯಕ್ಷ ಜಗನ್ನಾಥ ಆಗ್ರಹಿಸಿದರು.<br /> <br /> ರೇಷ್ಮೆ ಬೆಳೆಗಾರರು ಮತ್ತು ನೇಕಾರರು ತಮ್ಮ ಲಾಭಾಂಶವನ್ನು ಹಂಚಿಕೊಳ್ಳುವ ಒಪ್ಪಂದಕ್ಕೆ ಬಂದರೆ ಚೀನಾ ರೇಷ್ಮೆ ಆಮದಿನಿಂದ ಆಗುತ್ತಿರುವ ಸಮಸ್ಯೆಗಳಿಗೆ ಆಸ್ಪದ ಇರುವುದಿಲ್ಲ ಎಂದು ರೇಷ್ಮೆ ಮಂಡಳಿಯ ಅಧ್ಯಕ್ಷ (ತಾಂತ್ರಿಕ ವಿಭಾಗ) ಡಾ.ಬಿ. ಶರತ್ಚಂದ್ರ ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>