<p>ಮಂಡ್ಯ: ಪ್ರಜಾಪ್ರಭುತ್ವದ ಆಶಯ ರಕ್ಷಿಸಲು ಯುವಜನರು ಆಮಿಷಕ್ಕೆ ಒಳಗಾಗದೇ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಅಜಯ್ ನಾಗಭೂಷಣ್ ಹೇಳಿದರು.<br /> <br /> ನಗರದ ಸರ್ಕಾರಿ ಮಹಾವಿದ್ಯಾಲಯದಲ್ಲಿ (ಸ್ವಾಯತ್ತ) ಸೋಮವಾರ ಜಿಲ್ಲಾಡಳಿತ ಆಯೋಜಿಸಿದ್ದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ದೇಶದ ಅಭಿವೃದ್ಧಿ ಮತದಾರರ ತೀರ್ಮಾನ ಅವಲಂಭಿಸಿರುತ್ತದೆ. ಚುನಾವಣೆ ಸಂದರ್ಭದಲ್ಲಿ ಎಚ್ಚರಿಕೆಯಿಂದ ಮತ ಚಲಾಯಿಸಬೇಕು. ಗ್ರಾ.ಪಂ. ಚುನಾವಣೆ ಹೊರತುಪಡಿಸಿ, ಉಳಿದ ಚುನಾವಣೆಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮತದಾನ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.<br /> <br /> ಪ್ರತಿ ಚುನಾವಣೆಯಲ್ಲೂ ಮತದಾನದ ಪ್ರಮಾಣ ಕಡಿಮೆಯಾಗುತ್ತಿದೆ. ಸರ್ಕಾರಿ ರಜೆ ಇದ್ದರೂ ಮತದಾನ ಮಾಡದೆ ತಮ್ಮ ಜವಾಬ್ದಾರಿ ಮರೆಯುತ್ತಿದ್ದಾರೆ ಎಂದರು.<br /> <br /> ಮುಂಬರುವ ಚುನಾವಣೆಗಳಲ್ಲಿ ಶೇ 100 ರಷ್ಟು ಮತದಾನ ನಡೆಯಬೇಕು. 18 ವರ್ಷ ತುಂಬಿದ ಪ್ರತಿಯೊಬ್ಬರು ಚುನಾವಣಾ ಗುರುತಿನ ಚೀಟಿ ಪಡೆದುಕೊಳ್ಳಬೇಕು. ಭ್ರಷ್ಟಾಚಾರ ಮುಕ್ತ ಮತದಾನ ಮಾಡಬೇಕು. ನೋಟಾ ಆಯ್ಕೆ ಇದ್ದು, ಅದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಜತೆಗೆ ಜನರಲ್ಲಿ ಆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕಿವಿಮಾತು ಹೇಳಿದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ಕುಮಾರ್ ರೆಡ್ಡಿ ಅವರು ಯುವ ಮತದಾರರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸ್ಪರ್ಧೆ ವಿಜೇತರು: ಪ್ರಬಂಧ ಸ್ಪರ್ಧೆಯಲ್ಲಿ ಸರ್ಕಾರಿ ಮಹಿಳಾ ಕಾಲೇಜಿನ ಕೆ.ವಿ. ಹರ್ಷಿತಾ (ಪ್ರಥಮ), ಏಕಾಂತಶ್ರೀ (ದ್ವಿತೀಯ), ಲೋಕಶ್ರೀ (ತೃತೀಯ) ಹಾಗೂ ಭಾಷಣ ಸ್ಪರ್ಧೆಯಲ್ಲಿ ಪಿಇಎಸ್ ಕಾಲೇಜಿನ ಡಿ. ಶರತ್ (ಪ್ರಥಮ), ಸರ್ಕಾರಿ ಮಹಿಳಾ ಕಾಲೇಜಿನ ಎಂ. ಹರ್ಷಿತಾ (ದ್ವಿತೀಯ), ಭವ್ಯ (ತೃತೀಯ) ಬಹುಮಾನ ಪಡೆದರು.<br /> ಮಂಡ್ಯ ಉಪ ವಿಭಾಗಾಧಿಕಾರಿ ಅರುಳ್ಕುಮಾರ್, ತಹಶೀಲ್ದಾರ್ ಮಾರುತಿ ಪ್ರಸನ್ನ, ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಎಂ. ಶ್ರೀಕಂಠಯ್ಯ, ಪ್ರಾಂಶುಪಾಲ ಚಿಕ್ಕಮಾದನಾಯ್ಕ ಉಪಸ್ಥಿತರಿದ್ದರು.<br /> <br /> ರೈತ ಆತ್ಮಹತ್ಯೆ: ಪಿರಿಯಪಟ್ಟಣ: ಸಾಲದ ಬಾಧೆ ಹಾಗೂ ಬೆಳೆ ನಷ್ಟದಿಂದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಗಂಗೇಗೌಡನ ಕೊಪ್ಪಲಿನ ಭಾನುವಾರ ನಡೆದಿದೆ. ಗ್ರಾಮದ ಬುಗ್ಗೆಗೌಡ (58) ಆತ್ಮಹತ್ಯೆ ಮಾಡಿಕೊಂಡಿರುವ ರೈತ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಪ್ರಜಾಪ್ರಭುತ್ವದ ಆಶಯ ರಕ್ಷಿಸಲು ಯುವಜನರು ಆಮಿಷಕ್ಕೆ ಒಳಗಾಗದೇ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಅಜಯ್ ನಾಗಭೂಷಣ್ ಹೇಳಿದರು.<br /> <br /> ನಗರದ ಸರ್ಕಾರಿ ಮಹಾವಿದ್ಯಾಲಯದಲ್ಲಿ (ಸ್ವಾಯತ್ತ) ಸೋಮವಾರ ಜಿಲ್ಲಾಡಳಿತ ಆಯೋಜಿಸಿದ್ದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ದೇಶದ ಅಭಿವೃದ್ಧಿ ಮತದಾರರ ತೀರ್ಮಾನ ಅವಲಂಭಿಸಿರುತ್ತದೆ. ಚುನಾವಣೆ ಸಂದರ್ಭದಲ್ಲಿ ಎಚ್ಚರಿಕೆಯಿಂದ ಮತ ಚಲಾಯಿಸಬೇಕು. ಗ್ರಾ.ಪಂ. ಚುನಾವಣೆ ಹೊರತುಪಡಿಸಿ, ಉಳಿದ ಚುನಾವಣೆಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮತದಾನ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.<br /> <br /> ಪ್ರತಿ ಚುನಾವಣೆಯಲ್ಲೂ ಮತದಾನದ ಪ್ರಮಾಣ ಕಡಿಮೆಯಾಗುತ್ತಿದೆ. ಸರ್ಕಾರಿ ರಜೆ ಇದ್ದರೂ ಮತದಾನ ಮಾಡದೆ ತಮ್ಮ ಜವಾಬ್ದಾರಿ ಮರೆಯುತ್ತಿದ್ದಾರೆ ಎಂದರು.<br /> <br /> ಮುಂಬರುವ ಚುನಾವಣೆಗಳಲ್ಲಿ ಶೇ 100 ರಷ್ಟು ಮತದಾನ ನಡೆಯಬೇಕು. 18 ವರ್ಷ ತುಂಬಿದ ಪ್ರತಿಯೊಬ್ಬರು ಚುನಾವಣಾ ಗುರುತಿನ ಚೀಟಿ ಪಡೆದುಕೊಳ್ಳಬೇಕು. ಭ್ರಷ್ಟಾಚಾರ ಮುಕ್ತ ಮತದಾನ ಮಾಡಬೇಕು. ನೋಟಾ ಆಯ್ಕೆ ಇದ್ದು, ಅದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಜತೆಗೆ ಜನರಲ್ಲಿ ಆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕಿವಿಮಾತು ಹೇಳಿದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ಕುಮಾರ್ ರೆಡ್ಡಿ ಅವರು ಯುವ ಮತದಾರರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸ್ಪರ್ಧೆ ವಿಜೇತರು: ಪ್ರಬಂಧ ಸ್ಪರ್ಧೆಯಲ್ಲಿ ಸರ್ಕಾರಿ ಮಹಿಳಾ ಕಾಲೇಜಿನ ಕೆ.ವಿ. ಹರ್ಷಿತಾ (ಪ್ರಥಮ), ಏಕಾಂತಶ್ರೀ (ದ್ವಿತೀಯ), ಲೋಕಶ್ರೀ (ತೃತೀಯ) ಹಾಗೂ ಭಾಷಣ ಸ್ಪರ್ಧೆಯಲ್ಲಿ ಪಿಇಎಸ್ ಕಾಲೇಜಿನ ಡಿ. ಶರತ್ (ಪ್ರಥಮ), ಸರ್ಕಾರಿ ಮಹಿಳಾ ಕಾಲೇಜಿನ ಎಂ. ಹರ್ಷಿತಾ (ದ್ವಿತೀಯ), ಭವ್ಯ (ತೃತೀಯ) ಬಹುಮಾನ ಪಡೆದರು.<br /> ಮಂಡ್ಯ ಉಪ ವಿಭಾಗಾಧಿಕಾರಿ ಅರುಳ್ಕುಮಾರ್, ತಹಶೀಲ್ದಾರ್ ಮಾರುತಿ ಪ್ರಸನ್ನ, ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಎಂ. ಶ್ರೀಕಂಠಯ್ಯ, ಪ್ರಾಂಶುಪಾಲ ಚಿಕ್ಕಮಾದನಾಯ್ಕ ಉಪಸ್ಥಿತರಿದ್ದರು.<br /> <br /> ರೈತ ಆತ್ಮಹತ್ಯೆ: ಪಿರಿಯಪಟ್ಟಣ: ಸಾಲದ ಬಾಧೆ ಹಾಗೂ ಬೆಳೆ ನಷ್ಟದಿಂದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಗಂಗೇಗೌಡನ ಕೊಪ್ಪಲಿನ ಭಾನುವಾರ ನಡೆದಿದೆ. ಗ್ರಾಮದ ಬುಗ್ಗೆಗೌಡ (58) ಆತ್ಮಹತ್ಯೆ ಮಾಡಿಕೊಂಡಿರುವ ರೈತ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>