<p>ಜಗಳೂರು: ತಾಲ್ಲೂಕಿನ ಗುರುಸಿದ್ದಾಪುರ ಅರಣ್ಯ ಪ್ರದೇಶದಲ್ಲಿ ಗೋಶಾಲೆ ಪ್ರಾರಂಭಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.<br /> <br /> ತಾಲ್ಲೂಕಿನ ಮಡ್ರಳ್ಳಿ ಚೌಡೇಶ್ವರಿ ದೇವಸ್ಥಾನದ ಸಮೀಪ ಗುರುವಾರ ಗೋಶಾಲೆ ನಿರ್ಮಾಣದ ಸಿದ್ಧತಾ ಕಾರ್ಯ ಅವರು ಪರಿಶೀಲಿಸಿದರು.<br /> <br /> ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸುವ ಜಾನುವಾರುಗಳಿಗೆ ಅಗತ್ಯ ಮೇವು, ಕುಡಿಯುವ ನೀರು ಹಾಗೂ ಶೆಡ್ಗಳನ್ನು ನಿರ್ಮಿಸಲು ಹಾಗೂ ಜಾನುವಾರುಗಳ ಆರೋಗ್ಯದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಅಗತ್ಯ ಔಷಧಿ ಮತ್ತು ವೈದ್ಯರ ನಿಯೋಜನೆ ಮಾಡುವಂತೆ ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಕೇಶವಮೂರ್ತಿ ಅವರಿಗೆ ಸೂಚಿಸಿದರು.<br /> <br /> ತಾಲ್ಲೂಕಿನ ಮೆದಗಿನಕೆರೆ ಮತ್ತು ಅಣಬೂರು ಸಮೀಪ ಹಸಿರು ಮೇವು ಬೆಳೆಸಲು ಕ್ರಮ ಕೈಗೊಳ್ಳಬೇಕು. ಗೋಶಾಲೆಗಳಲ್ಲಿ ತುರ್ತು ಮೇವಿನ ಅಗತ್ಯವಿದ್ದು, ಚನ್ನಗಿರಿ ತಾಲ್ಲೂಕಿನಿಂದ ಎರಡು ಲೋಡ್ ಮೇವು ತರಿಸಿಕೊಳ್ಳಲು ಡಿಸಿ ಸಲಹೆ ನೀಡಿದರು.<br /> <br /> ಪಲ್ಲಾಗಟ್ಟೆ ಹಾಗೂ ಮರಿಕುಂಟೆ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆಯಾಗಿದ್ದು, ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.<br /> <br /> `ಬರಪರಿಹಾರ ಯೋಜನೆಯಡಿ ಜಗಳೂರು ವಿಧಾನಸಭಾ ಕ್ಷೇತ್ರಕ್ಕೆ ್ಙ 1 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ತಾಲ್ಲೂಕಿಗೆ ್ಙ 70 ಲಕ್ಷ ಮತ್ತು ಕ್ಷೇತ್ರ ವ್ಯಾಪ್ತಿಯ ಅರಸಿಕೆರೆ ಹೋಬಳಿಗೆ ್ಙ 30 ಲಕ್ಷ ಅನುದಾನದಲ್ಲಿ ತುರ್ತು ಪರಿಹಾರ ಕಾಮಗಾರಿಗಳನ್ನು ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪಟ್ಟಣಶೆಟ್ಟಿ ಸ್ಪಷ್ಟಪಡಿಸಿದರು.<br /> <br /> ಉಪ ವಿಭಾಗಾಧಿಕಾರಿ ಮಲ್ಲಪ್ಪ, ತಹಶೀಲ್ದಾರ್ ಎಚ್.ಪಿ. ನಾಗರಾಜ್, ಪಿಆರ್ಇಡಿ ಎಇಇ ಎನ್. ಲಿಂಗರಾಜ್ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಗಳೂರು: ತಾಲ್ಲೂಕಿನ ಗುರುಸಿದ್ದಾಪುರ ಅರಣ್ಯ ಪ್ರದೇಶದಲ್ಲಿ ಗೋಶಾಲೆ ಪ್ರಾರಂಭಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.<br /> <br /> ತಾಲ್ಲೂಕಿನ ಮಡ್ರಳ್ಳಿ ಚೌಡೇಶ್ವರಿ ದೇವಸ್ಥಾನದ ಸಮೀಪ ಗುರುವಾರ ಗೋಶಾಲೆ ನಿರ್ಮಾಣದ ಸಿದ್ಧತಾ ಕಾರ್ಯ ಅವರು ಪರಿಶೀಲಿಸಿದರು.<br /> <br /> ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸುವ ಜಾನುವಾರುಗಳಿಗೆ ಅಗತ್ಯ ಮೇವು, ಕುಡಿಯುವ ನೀರು ಹಾಗೂ ಶೆಡ್ಗಳನ್ನು ನಿರ್ಮಿಸಲು ಹಾಗೂ ಜಾನುವಾರುಗಳ ಆರೋಗ್ಯದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಅಗತ್ಯ ಔಷಧಿ ಮತ್ತು ವೈದ್ಯರ ನಿಯೋಜನೆ ಮಾಡುವಂತೆ ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಕೇಶವಮೂರ್ತಿ ಅವರಿಗೆ ಸೂಚಿಸಿದರು.<br /> <br /> ತಾಲ್ಲೂಕಿನ ಮೆದಗಿನಕೆರೆ ಮತ್ತು ಅಣಬೂರು ಸಮೀಪ ಹಸಿರು ಮೇವು ಬೆಳೆಸಲು ಕ್ರಮ ಕೈಗೊಳ್ಳಬೇಕು. ಗೋಶಾಲೆಗಳಲ್ಲಿ ತುರ್ತು ಮೇವಿನ ಅಗತ್ಯವಿದ್ದು, ಚನ್ನಗಿರಿ ತಾಲ್ಲೂಕಿನಿಂದ ಎರಡು ಲೋಡ್ ಮೇವು ತರಿಸಿಕೊಳ್ಳಲು ಡಿಸಿ ಸಲಹೆ ನೀಡಿದರು.<br /> <br /> ಪಲ್ಲಾಗಟ್ಟೆ ಹಾಗೂ ಮರಿಕುಂಟೆ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆಯಾಗಿದ್ದು, ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.<br /> <br /> `ಬರಪರಿಹಾರ ಯೋಜನೆಯಡಿ ಜಗಳೂರು ವಿಧಾನಸಭಾ ಕ್ಷೇತ್ರಕ್ಕೆ ್ಙ 1 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ತಾಲ್ಲೂಕಿಗೆ ್ಙ 70 ಲಕ್ಷ ಮತ್ತು ಕ್ಷೇತ್ರ ವ್ಯಾಪ್ತಿಯ ಅರಸಿಕೆರೆ ಹೋಬಳಿಗೆ ್ಙ 30 ಲಕ್ಷ ಅನುದಾನದಲ್ಲಿ ತುರ್ತು ಪರಿಹಾರ ಕಾಮಗಾರಿಗಳನ್ನು ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪಟ್ಟಣಶೆಟ್ಟಿ ಸ್ಪಷ್ಟಪಡಿಸಿದರು.<br /> <br /> ಉಪ ವಿಭಾಗಾಧಿಕಾರಿ ಮಲ್ಲಪ್ಪ, ತಹಶೀಲ್ದಾರ್ ಎಚ್.ಪಿ. ನಾಗರಾಜ್, ಪಿಆರ್ಇಡಿ ಎಇಇ ಎನ್. ಲಿಂಗರಾಜ್ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>