<p><strong>ಬೆಂಗಳೂರು: </strong>‘ಸೇನೆ ವಿರುದ್ಧ ಘೋಷಣೆ ಕೂಗಿದವರ ಬಂಧಿಸಬೇಕು’ ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ನಗರದ ವಿವಿಧೆಡೆ ಬುಧವಾರವೂ ಪ್ರತಿಭಟನೆ ನಡೆಸಿದರು. ನಿವೃತ್ತ ಸೈನಿಕರು ಹಾಗೂ ವಿದ್ಯಾರ್ಥಿಗಳು ಅವರ ಹೋರಾಟಕ್ಕೆ ಬೆಂಬಲ ನೀಡಿದರು. <br /> <br /> ನಗರದ ಸೌತ್ ಎಂಡ್ ವೃತ್ತ ಹಾಗೂ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಮಾಡಿದ ಕಾರ್ಯಕರ್ತರು, ‘ಆರೋಪಿಗಳನ್ನು ಬಂಧಿಸುವವರೆಗೂ ಹೀಗೆ ಪೊಲೀಸರಿಂದ ಅನುಮತಿ ಪಡೆಯದೆ ದಿಢೀರ್ ಪ್ರತಿಭಟನೆ ಮಾಡುತ್ತೇವೆ’ ಎಂದು ಎಚ್ಚರಿಸಿದರು.<br /> <br /> ಸೌತ್ ಎಂಡ್ ವೃತ್ತದಲ್ಲಿ ಪ್ರತಿಭಟನೆ ಮುಗಿಸಿದ ಬಳಿಕ ಕಾರ್ಯಕರ್ತರು ಮಹಾರಾಣಿ ಕಾಲೇಜು ಎದುರು ಜಮಾಯಿಸಿದರು. ನಂತರ ಸ್ವಾತಂತ್ರ್ಯ ಉದ್ಯಾನದ ಮೂಲಕ ಮೈಸೂರು ಬ್ಯಾಂಕ್ ವೃತ್ತಕ್ಕೆ ಬಂದು ಸರ್ಕಾರದ ಪ್ರತಿಕೃತಿ ದಹಿಸಿದರು.<br /> <br /> ‘ಘಟನೆಗೆ ಸಂಬಂಧಿಸಿದಂತೆ ಆಮ್ನೆಸ್ಟಿ ಸಂಸ್ಥೆ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕು. ಆರೋಪಿಗಳನ್ನು ಈ ಕೂಡಲೇ ಬಂಧಿಸಬೇಕು ಹಾಗೂ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟ ಕಾಲೇಜಿನ ವಿರುದ್ಧವೂ ಕ್ರಮ ಜರುಗಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಈ ವೇಳೆ, ವಾಹನಗಳ ಸಂಚಾರ ವ್ಯವಸ್ಥೆಗೆ ತೊಂದರೆ ಉಂಟು ಮಾಡದಂತೆ ಪೊಲೀಸರು ಮನವಿ ಮಾಡಿದರು. ಆದರೆ, ‘ನಗರ ಪೊಲೀಸ್ ಕಮಿಷನರ್ ಎನ್.ಎಸ್. ಮೇಘರಿಕ್ ಅವರು ಸ್ಥಳಕ್ಕೆ ಬಂದು ಮಾತುಕತೆ ನಡೆಸುವ ತನಕ ಕದಲುವುದಿಲ್ಲ’ ಎಂದು ಪಟ್ಟುಹಿಡಿದರು.<br /> <br /> ಬಳಿಕ ಸ್ಥಳಕ್ಕೆ ಬಂದ ನಗರ ಹೆಚ್ಚುವರಿ ಪೊಲೀಸ್ ಕಮಿಷನರ್ (ಪಶ್ಚಿಮ) ಚರಣ್ ರೆಡ್ಡಿ ಅವರು ನಗರ ಪೊಲೀಸ್ ಕಮಿಷನರ್ ಪರವಾಗಿ ಪ್ರತಿಭಟನಾ ನಿರತರಿಂದ ಮನವಿ ಪತ್ರ ಸ್ವೀಕರಿಸಿದರು.<br /> <br /> ಈ ನಡುವೆ, ಎಬಿವಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನಯ್ ಬಿದರೆ ಮಾತನಾಡಿ, ‘ಆಮ್ನೆಸ್ಟಿ ಅಂತರರಾಷ್ಟ್ರೀಯ ಸಂಸ್ಥೆ ಆಗಿರುವುದರಿಂದ ಅದರ ವಿರುದ್ಧ ಕ್ರಮಕ್ಕೆ ಪೊಲೀಸ್ ಇಲಾಖೆ ಮುಂದಾಗುತ್ತಿಲ್ಲ’ ಎಂದು ಆರೋಪಿಸಿದರು.<br /> <br /> ‘ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಸಾಕ್ಷ್ಯಗಳನ್ನು ಒದಗಿಸಿದ ಹೊರತಾಗಿಯೂ ಈ ತನಕ ಯಾರೊಬ್ಬರನ್ನೂ ಬಂಧಿಸಲಾಗಿಲ್ಲ. ಸರ್ಕಾರವು ದೇಶವಿರೋಧಿ ಜನರನ್ನು ರಕ್ಷಿಸಲು ಯತ್ನಿಸುತ್ತಿದೆ’ ಎಂದು ದೂರಿದರು.<br /> <br /> ‘ಆರೋಪಿಗಳನ್ನು ಬಂಧಿಸುವ ತನಕ ಪ್ರತಿಭಟನೆ ಮುಂದುವರೆಯಲಿದೆ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ನಿವಾಸಗಳ ಎದುರೂ ಪ್ರತಿಭಟನೆ ನಡೆಸಲಾಗುವುದು’ ಎಂದು ಅವರು ಹೇಳಿದರು.<br /> <br /> <strong>ಸಂಚಾರ ದಟ್ಟಣೆ:</strong> ಮುನ್ಸೂಚನೆ ನೀಡದೇ ಎಬಿವಿಪಿ ಪ್ರತಿಭಟನೆ ನಡೆಸಿದ್ದರಿಂದ ಕೆ.ಜಿ. ರಸ್ತೆ ಹಾಗೂ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆ ಕಂಡುಬಂತು. ಆದರೆ, ದೊಡ್ಡ ಪ್ರಮಾಣದ ಸಂಚಾರ ದಟ್ಟಣೆ ತಪ್ಪಿಸುವ ನಿಟ್ಟಿನಲ್ಲಿ ಪೊಲೀಸರು ಮಿನರ್ವ ಜಂಕ್ಷನ್ನಿಂದ ಪರ್ಯಾಯ ರಸ್ತೆಗಳ ಮೂಲಕ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.<br /> <br /> <strong>ಕಾಲೇಜುಗಳಿಗೆ ನೋಟಿಸ್:</strong> ‘ಸರ್ಕಾರಿ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳುತ್ತಿರುವುದು ಕಂಡು ಬಂದಿದೆ. ಅಂಥ ಕಾಲೇಜುಗಳನ್ನು ಗುರುತಿಸಿ, ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್ನೀಡಲಾಗಿದೆ.</p>.<p>ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದು ಕಂಡು ಬಂದರೆ, ವಿದ್ಯಾರ್ಥಿಗಳು ಹಾಗೂ ಕಾಲೇಜುಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಸೂಚಿಸಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.<br /> <br /> ‘ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದರೆ, ಅವರ ವೃತ್ತಿ ಜೀವನಕ್ಕೆ ತೊಂದರೆ ಆಗುತ್ತದೆ. ಬುಧವಾರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸಜ್ಜಾಗಿರುವ ಸುಳಿವು ಸಿಕ್ಕಿತ್ತು. ಆದರೆ, ಎಚ್ಚರಿಕೆ ನೀಡಿದ ಬಳಿಕ, ಅವರೆಲ್ಲ ಪ್ರತಿಭಟನೆಯಿಂದ ದೂರ ಉಳಿದರು’ ಎಂದು ಅವರು ಹೇಳಿದರು.</p>.<p><strong>ಕಾಶ್ಮೀರಿ ಭಾಷೆ ಬಳಕೆ...</strong><br /> ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಚರಣ್ ರೆಡ್ಡಿ, ‘ಪ್ರಕರಣ ಸಂಬಂಧ ಕಾರ್ಯಕ್ರಮದಲ್ಲಿ ಹಾಜರಿದ್ದ ಹಲವು ಜನರಿಂದ ಹೇಳಿಕೆ ಪಡೆಯುತ್ತಿದ್ದೇವೆ. ಅಂತೆಯೇ ಕಾರ್ಯಕ್ರಮದ ಸಂಘಟಕರಿಂದಲೂ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದೇವೆ. ಕಾರ್ಯಕ್ರಮದ ಒಂದೂವರೆ ಗಂಟೆಯಷ್ಟು ವಿಡಿಯೊದೃಶ್ಯಾವಳಿ ಹಾಗೂ ಚಿತ್ರಗಳನ್ನು ಸುಪರ್ದಿಗೆ ಪಡೆಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ದೃಶ್ಯಾವಳಿಯ ಕೆಲ ತುಣುಕುಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವುಗಳ ಋಜುತ್ವದ ಬಗ್ಗೆ ಪರಿಶೀಲಿಸಲು ವಿಧಿವಿಜ್ಞಾನ ಪ್ರಯೋಗಾಲಕ್ಕೆ ಕಳುಹಿಸಲಾಗಿದೆ. ಕಾರ್ಯಕ್ರಮದಲ್ಲಿ ಕಾಶ್ಮೀರಿ ಭಾಷೆ ಬಳಕೆಯಾದ ಕುರಿತು ತನಿಖೆಯಿಂದ ತಿಳಿದಿದೆ. ಅದರ ಅರ್ಥ ತಿಳಿಯಲು ಭಾಷಾ ತಜ್ಞರ ನೆರವು ಕೋರಲಾಗಿದೆ’ ಎಂದು ಹೇಳಿದರು.<br /> <br /> ‘ಕಾರ್ಯಕ್ರಮದಲ್ಲಿ ಹಾಜರಿದ್ದ ದೂರುದಾರರನ್ನು ವಿಚಾರಣೆ ನಡೆಸಲಾಗುವುದು. ಅವರಿಂದ ವಿವರಣಾತ್ಮಕ ಹೇಳಿಕೆ ಪಡೆಯಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಪತ್ತೆಗೆ ಪೊಲೀಸರು ಶ್ರಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ನೆರವಾಗಲು ಕೆಲ ಸಂಘಟನೆಗಳು ಮುಂದೆ ಬಂದಿವೆ. ಕಾರ್ಯಕ್ರಮ ನಡೆದ ಕಾಲೇಜು ಮಂಡಳಿಯನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ’ ಎಂದು ವಿವರಿಸಿದರು.</p>.<p><strong>ತನಿಖೆ ಚುರುಕು...</strong><br /> ‘ಪ್ರಕರಣ ತನಿಖೆ ಪ್ರಗತಿಯಲ್ಲಿದೆ. ದೇಶದ್ರೋಹಕ್ಕೆ ಕಾರಣ ಆಗುವಂಥ ಯಾವುದೇ ಅಂಶಗಳು ಪ್ರಕರಣದಲ್ಲಿ ಇಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.<br /> <br /> ‘ಕಾರ್ಯಕ್ರಮದ ವೇಳೆ ಕಾಲೇಜು ಆಸ್ತಿಯನ್ನು ಧ್ವಂಸ ಮಾಡಲಾಗಿದೆ ಎಂದು ಆರೋಪಿಸಿದ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜು (ಯುಟಿಸಿ) ಎಬಿವಿಪಿ ಸದಸ್ಯರ ವಿರುದ್ಧ ಪ್ರಕರಣವನ್ನು ದಾಖಲಿಸಿದೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಸೇನೆ ವಿರುದ್ಧ ಘೋಷಣೆ ಕೂಗಿದವರ ಬಂಧಿಸಬೇಕು’ ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ನಗರದ ವಿವಿಧೆಡೆ ಬುಧವಾರವೂ ಪ್ರತಿಭಟನೆ ನಡೆಸಿದರು. ನಿವೃತ್ತ ಸೈನಿಕರು ಹಾಗೂ ವಿದ್ಯಾರ್ಥಿಗಳು ಅವರ ಹೋರಾಟಕ್ಕೆ ಬೆಂಬಲ ನೀಡಿದರು. <br /> <br /> ನಗರದ ಸೌತ್ ಎಂಡ್ ವೃತ್ತ ಹಾಗೂ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಮಾಡಿದ ಕಾರ್ಯಕರ್ತರು, ‘ಆರೋಪಿಗಳನ್ನು ಬಂಧಿಸುವವರೆಗೂ ಹೀಗೆ ಪೊಲೀಸರಿಂದ ಅನುಮತಿ ಪಡೆಯದೆ ದಿಢೀರ್ ಪ್ರತಿಭಟನೆ ಮಾಡುತ್ತೇವೆ’ ಎಂದು ಎಚ್ಚರಿಸಿದರು.<br /> <br /> ಸೌತ್ ಎಂಡ್ ವೃತ್ತದಲ್ಲಿ ಪ್ರತಿಭಟನೆ ಮುಗಿಸಿದ ಬಳಿಕ ಕಾರ್ಯಕರ್ತರು ಮಹಾರಾಣಿ ಕಾಲೇಜು ಎದುರು ಜಮಾಯಿಸಿದರು. ನಂತರ ಸ್ವಾತಂತ್ರ್ಯ ಉದ್ಯಾನದ ಮೂಲಕ ಮೈಸೂರು ಬ್ಯಾಂಕ್ ವೃತ್ತಕ್ಕೆ ಬಂದು ಸರ್ಕಾರದ ಪ್ರತಿಕೃತಿ ದಹಿಸಿದರು.<br /> <br /> ‘ಘಟನೆಗೆ ಸಂಬಂಧಿಸಿದಂತೆ ಆಮ್ನೆಸ್ಟಿ ಸಂಸ್ಥೆ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕು. ಆರೋಪಿಗಳನ್ನು ಈ ಕೂಡಲೇ ಬಂಧಿಸಬೇಕು ಹಾಗೂ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟ ಕಾಲೇಜಿನ ವಿರುದ್ಧವೂ ಕ್ರಮ ಜರುಗಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಈ ವೇಳೆ, ವಾಹನಗಳ ಸಂಚಾರ ವ್ಯವಸ್ಥೆಗೆ ತೊಂದರೆ ಉಂಟು ಮಾಡದಂತೆ ಪೊಲೀಸರು ಮನವಿ ಮಾಡಿದರು. ಆದರೆ, ‘ನಗರ ಪೊಲೀಸ್ ಕಮಿಷನರ್ ಎನ್.ಎಸ್. ಮೇಘರಿಕ್ ಅವರು ಸ್ಥಳಕ್ಕೆ ಬಂದು ಮಾತುಕತೆ ನಡೆಸುವ ತನಕ ಕದಲುವುದಿಲ್ಲ’ ಎಂದು ಪಟ್ಟುಹಿಡಿದರು.<br /> <br /> ಬಳಿಕ ಸ್ಥಳಕ್ಕೆ ಬಂದ ನಗರ ಹೆಚ್ಚುವರಿ ಪೊಲೀಸ್ ಕಮಿಷನರ್ (ಪಶ್ಚಿಮ) ಚರಣ್ ರೆಡ್ಡಿ ಅವರು ನಗರ ಪೊಲೀಸ್ ಕಮಿಷನರ್ ಪರವಾಗಿ ಪ್ರತಿಭಟನಾ ನಿರತರಿಂದ ಮನವಿ ಪತ್ರ ಸ್ವೀಕರಿಸಿದರು.<br /> <br /> ಈ ನಡುವೆ, ಎಬಿವಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನಯ್ ಬಿದರೆ ಮಾತನಾಡಿ, ‘ಆಮ್ನೆಸ್ಟಿ ಅಂತರರಾಷ್ಟ್ರೀಯ ಸಂಸ್ಥೆ ಆಗಿರುವುದರಿಂದ ಅದರ ವಿರುದ್ಧ ಕ್ರಮಕ್ಕೆ ಪೊಲೀಸ್ ಇಲಾಖೆ ಮುಂದಾಗುತ್ತಿಲ್ಲ’ ಎಂದು ಆರೋಪಿಸಿದರು.<br /> <br /> ‘ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಸಾಕ್ಷ್ಯಗಳನ್ನು ಒದಗಿಸಿದ ಹೊರತಾಗಿಯೂ ಈ ತನಕ ಯಾರೊಬ್ಬರನ್ನೂ ಬಂಧಿಸಲಾಗಿಲ್ಲ. ಸರ್ಕಾರವು ದೇಶವಿರೋಧಿ ಜನರನ್ನು ರಕ್ಷಿಸಲು ಯತ್ನಿಸುತ್ತಿದೆ’ ಎಂದು ದೂರಿದರು.<br /> <br /> ‘ಆರೋಪಿಗಳನ್ನು ಬಂಧಿಸುವ ತನಕ ಪ್ರತಿಭಟನೆ ಮುಂದುವರೆಯಲಿದೆ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ನಿವಾಸಗಳ ಎದುರೂ ಪ್ರತಿಭಟನೆ ನಡೆಸಲಾಗುವುದು’ ಎಂದು ಅವರು ಹೇಳಿದರು.<br /> <br /> <strong>ಸಂಚಾರ ದಟ್ಟಣೆ:</strong> ಮುನ್ಸೂಚನೆ ನೀಡದೇ ಎಬಿವಿಪಿ ಪ್ರತಿಭಟನೆ ನಡೆಸಿದ್ದರಿಂದ ಕೆ.ಜಿ. ರಸ್ತೆ ಹಾಗೂ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆ ಕಂಡುಬಂತು. ಆದರೆ, ದೊಡ್ಡ ಪ್ರಮಾಣದ ಸಂಚಾರ ದಟ್ಟಣೆ ತಪ್ಪಿಸುವ ನಿಟ್ಟಿನಲ್ಲಿ ಪೊಲೀಸರು ಮಿನರ್ವ ಜಂಕ್ಷನ್ನಿಂದ ಪರ್ಯಾಯ ರಸ್ತೆಗಳ ಮೂಲಕ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.<br /> <br /> <strong>ಕಾಲೇಜುಗಳಿಗೆ ನೋಟಿಸ್:</strong> ‘ಸರ್ಕಾರಿ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳುತ್ತಿರುವುದು ಕಂಡು ಬಂದಿದೆ. ಅಂಥ ಕಾಲೇಜುಗಳನ್ನು ಗುರುತಿಸಿ, ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್ನೀಡಲಾಗಿದೆ.</p>.<p>ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದು ಕಂಡು ಬಂದರೆ, ವಿದ್ಯಾರ್ಥಿಗಳು ಹಾಗೂ ಕಾಲೇಜುಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಸೂಚಿಸಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.<br /> <br /> ‘ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದರೆ, ಅವರ ವೃತ್ತಿ ಜೀವನಕ್ಕೆ ತೊಂದರೆ ಆಗುತ್ತದೆ. ಬುಧವಾರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸಜ್ಜಾಗಿರುವ ಸುಳಿವು ಸಿಕ್ಕಿತ್ತು. ಆದರೆ, ಎಚ್ಚರಿಕೆ ನೀಡಿದ ಬಳಿಕ, ಅವರೆಲ್ಲ ಪ್ರತಿಭಟನೆಯಿಂದ ದೂರ ಉಳಿದರು’ ಎಂದು ಅವರು ಹೇಳಿದರು.</p>.<p><strong>ಕಾಶ್ಮೀರಿ ಭಾಷೆ ಬಳಕೆ...</strong><br /> ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಚರಣ್ ರೆಡ್ಡಿ, ‘ಪ್ರಕರಣ ಸಂಬಂಧ ಕಾರ್ಯಕ್ರಮದಲ್ಲಿ ಹಾಜರಿದ್ದ ಹಲವು ಜನರಿಂದ ಹೇಳಿಕೆ ಪಡೆಯುತ್ತಿದ್ದೇವೆ. ಅಂತೆಯೇ ಕಾರ್ಯಕ್ರಮದ ಸಂಘಟಕರಿಂದಲೂ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದೇವೆ. ಕಾರ್ಯಕ್ರಮದ ಒಂದೂವರೆ ಗಂಟೆಯಷ್ಟು ವಿಡಿಯೊದೃಶ್ಯಾವಳಿ ಹಾಗೂ ಚಿತ್ರಗಳನ್ನು ಸುಪರ್ದಿಗೆ ಪಡೆಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ದೃಶ್ಯಾವಳಿಯ ಕೆಲ ತುಣುಕುಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವುಗಳ ಋಜುತ್ವದ ಬಗ್ಗೆ ಪರಿಶೀಲಿಸಲು ವಿಧಿವಿಜ್ಞಾನ ಪ್ರಯೋಗಾಲಕ್ಕೆ ಕಳುಹಿಸಲಾಗಿದೆ. ಕಾರ್ಯಕ್ರಮದಲ್ಲಿ ಕಾಶ್ಮೀರಿ ಭಾಷೆ ಬಳಕೆಯಾದ ಕುರಿತು ತನಿಖೆಯಿಂದ ತಿಳಿದಿದೆ. ಅದರ ಅರ್ಥ ತಿಳಿಯಲು ಭಾಷಾ ತಜ್ಞರ ನೆರವು ಕೋರಲಾಗಿದೆ’ ಎಂದು ಹೇಳಿದರು.<br /> <br /> ‘ಕಾರ್ಯಕ್ರಮದಲ್ಲಿ ಹಾಜರಿದ್ದ ದೂರುದಾರರನ್ನು ವಿಚಾರಣೆ ನಡೆಸಲಾಗುವುದು. ಅವರಿಂದ ವಿವರಣಾತ್ಮಕ ಹೇಳಿಕೆ ಪಡೆಯಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಪತ್ತೆಗೆ ಪೊಲೀಸರು ಶ್ರಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ನೆರವಾಗಲು ಕೆಲ ಸಂಘಟನೆಗಳು ಮುಂದೆ ಬಂದಿವೆ. ಕಾರ್ಯಕ್ರಮ ನಡೆದ ಕಾಲೇಜು ಮಂಡಳಿಯನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ’ ಎಂದು ವಿವರಿಸಿದರು.</p>.<p><strong>ತನಿಖೆ ಚುರುಕು...</strong><br /> ‘ಪ್ರಕರಣ ತನಿಖೆ ಪ್ರಗತಿಯಲ್ಲಿದೆ. ದೇಶದ್ರೋಹಕ್ಕೆ ಕಾರಣ ಆಗುವಂಥ ಯಾವುದೇ ಅಂಶಗಳು ಪ್ರಕರಣದಲ್ಲಿ ಇಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.<br /> <br /> ‘ಕಾರ್ಯಕ್ರಮದ ವೇಳೆ ಕಾಲೇಜು ಆಸ್ತಿಯನ್ನು ಧ್ವಂಸ ಮಾಡಲಾಗಿದೆ ಎಂದು ಆರೋಪಿಸಿದ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜು (ಯುಟಿಸಿ) ಎಬಿವಿಪಿ ಸದಸ್ಯರ ವಿರುದ್ಧ ಪ್ರಕರಣವನ್ನು ದಾಖಲಿಸಿದೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>