<p><strong>ಬೆಂಗಳೂರು</strong>: ಪಕ್ಷದ ಚುನಾವಣಾ ಪ್ರಾಧಿಕಾರ ನಡೆಸಿದ ಆಯ್ಕೆ ಪ್ರಕ್ರಿಯೆ ವಿರುದ್ಧ ಪತ್ರಿಕೆಗಳಲ್ಲಿ ಜಾಹೀರಾತು ನೀಡಿರುವುದು ಪಕ್ಷದ ಶಿಸ್ತಿಗೆ ವಿರುದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರದೇಶ ಕಾಂಗ್ರೆಸ್, ಮಾಜಿ ಸಚಿವ ಪ್ರೊ ಬಿ.ಕೆ.ಚಂದ್ರಶೇಖರ್ ಮತ್ತು ಡಾ.ಗುರಪ್ಪ ನಾಯ್ಡು ಅವರಿಂದ ವಿವರಣೆ ಕೇಳಿದೆ.<br /> <br /> ಈ ಇಬ್ಬರೂ ಮುಖಂಡರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚುನಾವಣಾ ಪ್ರಾಧಿಕಾರ ನಡೆಸಿರುವ ಆಯ್ಕೆ ಪ್ರಕ್ರಿಯೆ ವಿರುದ್ಧ ನಿರ್ಣಯ ತೆಗೆದುಕೊಂಡಿರುವುದು ಪತ್ರಿಕೆಯೊಂದರ ಜಾಹೀರಾತಿನಲ್ಲಿ ಪ್ರಕಟಗೊಂಡಿದೆ. ಈ ಕುರಿತು ವಿವರಣೆ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ವಹಾಬ್ ಇಬ್ಬರೂ ಮುಖಂಡರಿಗೆ ಪತ್ರ ಬರೆದಿದ್ದಾರೆ.<br /> <br /> ಪಕ್ಷದ ಸಾಂಸ್ಥಿಕ ಚುನಾವಣೆಯಲ್ಲಿ ಸರ್ವಾನುಮತದಿಂದ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನೀಡಿದ ಅಭಿಪ್ರಾಯದಂತೆ ನೇಮಕ ಪ್ರಕ್ರಿಯೆ ನಡೆದಿದೆ. ಈ ವಿಷಯದಲ್ಲಿ ಚುನಾವಣಾ ಪ್ರಾಧಿಕಾರ ತೆಗೆದುಕೊಂಡ ನಿರ್ಣಯವೇ ಅಂತಿಮ ಎಂದೂ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪಕ್ಷದ ಚುನಾವಣಾ ಪ್ರಾಧಿಕಾರ ನಡೆಸಿದ ಆಯ್ಕೆ ಪ್ರಕ್ರಿಯೆ ವಿರುದ್ಧ ಪತ್ರಿಕೆಗಳಲ್ಲಿ ಜಾಹೀರಾತು ನೀಡಿರುವುದು ಪಕ್ಷದ ಶಿಸ್ತಿಗೆ ವಿರುದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರದೇಶ ಕಾಂಗ್ರೆಸ್, ಮಾಜಿ ಸಚಿವ ಪ್ರೊ ಬಿ.ಕೆ.ಚಂದ್ರಶೇಖರ್ ಮತ್ತು ಡಾ.ಗುರಪ್ಪ ನಾಯ್ಡು ಅವರಿಂದ ವಿವರಣೆ ಕೇಳಿದೆ.<br /> <br /> ಈ ಇಬ್ಬರೂ ಮುಖಂಡರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚುನಾವಣಾ ಪ್ರಾಧಿಕಾರ ನಡೆಸಿರುವ ಆಯ್ಕೆ ಪ್ರಕ್ರಿಯೆ ವಿರುದ್ಧ ನಿರ್ಣಯ ತೆಗೆದುಕೊಂಡಿರುವುದು ಪತ್ರಿಕೆಯೊಂದರ ಜಾಹೀರಾತಿನಲ್ಲಿ ಪ್ರಕಟಗೊಂಡಿದೆ. ಈ ಕುರಿತು ವಿವರಣೆ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ವಹಾಬ್ ಇಬ್ಬರೂ ಮುಖಂಡರಿಗೆ ಪತ್ರ ಬರೆದಿದ್ದಾರೆ.<br /> <br /> ಪಕ್ಷದ ಸಾಂಸ್ಥಿಕ ಚುನಾವಣೆಯಲ್ಲಿ ಸರ್ವಾನುಮತದಿಂದ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನೀಡಿದ ಅಭಿಪ್ರಾಯದಂತೆ ನೇಮಕ ಪ್ರಕ್ರಿಯೆ ನಡೆದಿದೆ. ಈ ವಿಷಯದಲ್ಲಿ ಚುನಾವಣಾ ಪ್ರಾಧಿಕಾರ ತೆಗೆದುಕೊಂಡ ನಿರ್ಣಯವೇ ಅಂತಿಮ ಎಂದೂ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>