<p><strong>ಬೆಂಗಳೂರು: </strong>ಆಸ್ಟ್ರೇಲಿಯಾ ವಿರುದ್ಧದ ಟೂರ್ನಿಗೆ ಭಾರತ ಹಾಕಿ ತಂಡ ಆಯ್ಕೆ ಮಾಡಲು ರಾಷ್ಟ್ರೀಯ ಆಯ್ಕೆದಾರರ ಉಪಸ್ಥಿತಿಯಲ್ಲಿ ಸೋಮವಾರ ಒಂದು ದಿನದ ಆಯ್ಕೆ ಟ್ರಯಲ್ಸ್ ನಡೆಯಿತು.<br /> <br /> ಭಾರತ ಕ್ರೀಡಾ ಪ್ರಾಧಿಕಾರದಲ್ಲಿ ನಡೆದ ಆಯ್ಕೆ ಟ್ರಯಲ್ಸ್ ವೇಳೆ ಆಯ್ಕೆದಾರರಾದ ಬಿ.ಪಿ.ಗೋವಿಂದ, ಎ.ಬಿ.ಸುಬ್ಬಯ್ಯ, ತೋಯಿಬಾ ಸಿಂಗ್, ಸೈಯದ್ ಅಲಿ ಹಾಗೂ ಸರ್ಕಾರದ ವೀಕ್ಷಕ ದಿಲಿಪ್ ಟರ್ಕಿ ಉಪಸ್ಥಿತರಿದ್ದರು. <br /> <br /> ಅಕ್ಟೋಬರ್ 12ರಂದು ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಆರಂಭಿಸಲಿದೆ. ಪ್ರವಾಸದ ವೇಳೆ ಹೊಸದಾಗಿ ರೂಪಿಸಲಾಗಿರುವ ತಲಾ 9 ಆಟಗಾರರನ್ನೊಳಗೊಂಡ ಪಂದ್ಯಗಳ ಎರಡು ಟೂರ್ನಿ ಹಾಗೂ ಅಂತರರಾಷ್ಟ್ರೀಯ ಪ್ರದರ್ಶನ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ, ಆಸ್ಟ್ರೇಲಿಯಾ `ಎ~, ಪಾಕಿಸ್ತಾನ ಹಾಗೂ ಕೊರಿಯಾ ತಂಡಗಳು ಪಾಲ್ಗೊಳ್ಳಲಿವೆ. <br /> <br /> `ಆಯ್ಕೆ ಟ್ರಯಲ್ಸ್ ಯಶಸ್ವಿಯಾಗಿ ನಡೆಯಿತು. ಕೆಲ ಆಟಗಾರರು ಅತ್ಯುತ್ತಮ ಫಾರ್ಮ್ನಲ್ಲಿದ್ದಾರೆ. ದೀರ್ಘ ಪ್ರವಾಸವಾಗಿರುವುದರಿಂದ ನಾವು 22 ಮಂದಿ ಆಟಗಾರರನ್ನು ಆಯ್ಕೆ ಮಾಡುತ್ತೇವೆ~ ಎಂದು ಹಾಕಿ ಇಂಡಿಯಾ ಕಾರ್ಯಕಾರಿ ನಿರ್ದೇಶಕ ಅನುಪಮ್ ಗುಲಟಿ ನುಡಿದರು.<br /> <br /> ಫೆಬ್ರುವರಿಯಲ್ಲಿ ನವದೆಹಲಿಯಲ್ಲಿ ನಡೆಯಲಿರುವ ಒಲಿಂಪಿಕ್ಸ್ ಅರ್ಹತಾ ಸುತ್ತಿಗೆ ಸಿದ್ಧತೆ ನಡೆಸುವ ನಿಟ್ಟಿನಲ್ಲಿ ಪಾಕಿಸ್ತಾನ ಎದುರು ಟೆಸ್ಟ್ ಸರಣಿ ಆಯೋಜಿಸಲಾಗುವುದು ಎಂದು ಭಾನುವಾರ ಕೋಚ್ ಮೈಕಲ್ ನಾಬ್ಸ್ ತಿಳಿಸಿದ್ದರು. ಆದರೆ ಈ ಬಗ್ಗೆ ಹೆಚ್ಚು ಮಾತನಾಡಲು ಗುಲಟಿ ಇಷ್ಟಪಡಲಿಲ್ಲ.<br /> <br /> `ಹಾಕಿ ಟೆಸ್ಟ್ ಸರಣಿ ಆಡಲು ಪಾಕಿಸ್ತಾನ ನಮ್ಮನ್ನು ಸಂಪರ್ಕಿಸಿರುವುದು ನಿಜ. ಆದರೆ ಈ ಸಂಬಂಧ ನಮಗೆ ಕೇಂದ್ರದಿಂದ ಒಪ್ಪಿಗೆಬೇಕು~ ಎಂದರು.ಬೆಂಗಳೂರಲ್ಲಿ <br /> <br /> <strong>ತರಬೇತಿ ಕೇಂದ್ರ:</strong> ಬೆಂಗಳೂರಿನಲ್ಲಿ ಹಾಕಿ ತರಬೇತಿ ಕೇಂದ್ರ ಸ್ಥಾಪಿಸುವ ವಿಷಯವನ್ನು ಹಾಕಿ ಇಂಡಿಯಾ ಕಾರ್ಯಕಾರಿ ನಿರ್ದೇಶಕ ಅನುಪಮ್ ಗುಲಟಿ ಖಚಿತಪಡಿಸಿದ್ದಾರೆ. `ಬೆಂಗಳೂರಿನಲ್ಲಿ ಅಗತ್ಯ ಸೌಲಭ್ಯಗಳಿವೆ. ಭಾರತ ಕ್ರೀಡಾ ಪ್ರಾಧಿಕಾರದ (ಎಸ್ಎಐ) ಪ್ರಧಾನ ನಿರ್ದೇಶಕ ದೇಶ್ ದೀಪಕ್ ವರ್ಮ ಕೂಡ ಇಲ್ಲಿಯೇ ಹಾಕಿ ಕೇಂದ್ರ ಸ್ಥಾಪಿಸಲು ಒಪ್ಪಿದ್ದಾರೆ~ ಎಂದು ಅವರು ನುಡಿದರು.<br /> <br /> <strong>ಅಖ್ತರ್ ಕ್ಷಮೆಯಾಚಿಸಬೇಕು: ದೇಶಮುಖ್</strong></p>.<p><strong>ನವದೆಹಲಿ (ಐಎಎನ್ಎಸ್): </strong>ಸಲ್ಲದ ಟೀಕೆ ಮಾಡಿರುವ ಪಾಕಿಸ್ತಾನದ ಮಾಜಿ ವೇಗಿ ಶೋಯಬ್ ಅಖ್ತರ್ ಬ್ಯಾಟಿಂಗ್ ಚಾಂಪಿಯನ್ ಸಚಿನ್ ತೆಂಡೂಲ್ಕರ್ ಅವರ ಕ್ಷಮೆಯಾಚಿಸಬೇಕು ಎಂದು ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಅಧ್ಯಕ್ಷ ಹಾಗೂ ಕೇಂದ್ರ ಸಚಿವ ವಿಲಾಸರಾವ್ ದೇಶಮುಖ್ ಆಗ್ರಹಿಸಿದ್ದಾರೆ.<br /> <br /> `ಅಖ್ತರ್ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಸಚಿನ್ ವಿಶ್ವ ದರ್ಜೆಯ ಬ್ಯಾಟ್ಸ್ಮನ್. ಅನೇಕ ದಾಖಲೆಗಳು ಅವರ ಹೆಸರಿನಲ್ಲಿವೆ. ಹಾಗಾಗಿ ಸಚಿನ್ ಅವರ ಕ್ಷಮೆಯಾಚಿಸಬೇಕು~ ಎಂದು ದೇಶಮುಖ್ ನುಡಿದಿದ್ದಾರೆ.<br /> <br /> `ಪಂದ್ಯವನ್ನು ಗೆಲ್ಲಿಸಿಕೊಡುವಂತಹ ಕಲೆ ಸಚಿನ್ ಹಾಗೂ ದ್ರಾವಿಡ್ ಅವರ ಬಳಿ ಇಲ್ಲ. ಅಷ್ಟು ಮಾತ್ರವಲ್ಲದೇ, 2006ರಲ್ಲಿ ಫೈಸಲಾಬಾದ್ನಲ್ಲಿ ನಡೆದ ಟೆಸ್ಟ್ ಪಂದ್ಯವೊಂದರಲ್ಲಿ ನನ್ನ ಎಸೆತಗಳನ್ನು ಎದುರಿಸಲು ಸಚಿನ್ ಪರದಾಡಿದ್ದರು~ ಎಂದು `ಕಾಂಟ್ರವರ್ಸಿಯಲಿ ಯುವರ್ಸ್~ ಎಂಬ ತಮ್ಮ ಆತ್ಮಚರಿತ್ರೆಯಲ್ಲಿ ರಾವಲ್ಪಿಂಡಿ ಎಕ್ಸ್ಪ್ರೆಸ್ ಖ್ಯಾತಿಯ ಅಖ್ತರ್ ಟೀಕಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಆಸ್ಟ್ರೇಲಿಯಾ ವಿರುದ್ಧದ ಟೂರ್ನಿಗೆ ಭಾರತ ಹಾಕಿ ತಂಡ ಆಯ್ಕೆ ಮಾಡಲು ರಾಷ್ಟ್ರೀಯ ಆಯ್ಕೆದಾರರ ಉಪಸ್ಥಿತಿಯಲ್ಲಿ ಸೋಮವಾರ ಒಂದು ದಿನದ ಆಯ್ಕೆ ಟ್ರಯಲ್ಸ್ ನಡೆಯಿತು.<br /> <br /> ಭಾರತ ಕ್ರೀಡಾ ಪ್ರಾಧಿಕಾರದಲ್ಲಿ ನಡೆದ ಆಯ್ಕೆ ಟ್ರಯಲ್ಸ್ ವೇಳೆ ಆಯ್ಕೆದಾರರಾದ ಬಿ.ಪಿ.ಗೋವಿಂದ, ಎ.ಬಿ.ಸುಬ್ಬಯ್ಯ, ತೋಯಿಬಾ ಸಿಂಗ್, ಸೈಯದ್ ಅಲಿ ಹಾಗೂ ಸರ್ಕಾರದ ವೀಕ್ಷಕ ದಿಲಿಪ್ ಟರ್ಕಿ ಉಪಸ್ಥಿತರಿದ್ದರು. <br /> <br /> ಅಕ್ಟೋಬರ್ 12ರಂದು ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಆರಂಭಿಸಲಿದೆ. ಪ್ರವಾಸದ ವೇಳೆ ಹೊಸದಾಗಿ ರೂಪಿಸಲಾಗಿರುವ ತಲಾ 9 ಆಟಗಾರರನ್ನೊಳಗೊಂಡ ಪಂದ್ಯಗಳ ಎರಡು ಟೂರ್ನಿ ಹಾಗೂ ಅಂತರರಾಷ್ಟ್ರೀಯ ಪ್ರದರ್ಶನ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ, ಆಸ್ಟ್ರೇಲಿಯಾ `ಎ~, ಪಾಕಿಸ್ತಾನ ಹಾಗೂ ಕೊರಿಯಾ ತಂಡಗಳು ಪಾಲ್ಗೊಳ್ಳಲಿವೆ. <br /> <br /> `ಆಯ್ಕೆ ಟ್ರಯಲ್ಸ್ ಯಶಸ್ವಿಯಾಗಿ ನಡೆಯಿತು. ಕೆಲ ಆಟಗಾರರು ಅತ್ಯುತ್ತಮ ಫಾರ್ಮ್ನಲ್ಲಿದ್ದಾರೆ. ದೀರ್ಘ ಪ್ರವಾಸವಾಗಿರುವುದರಿಂದ ನಾವು 22 ಮಂದಿ ಆಟಗಾರರನ್ನು ಆಯ್ಕೆ ಮಾಡುತ್ತೇವೆ~ ಎಂದು ಹಾಕಿ ಇಂಡಿಯಾ ಕಾರ್ಯಕಾರಿ ನಿರ್ದೇಶಕ ಅನುಪಮ್ ಗುಲಟಿ ನುಡಿದರು.<br /> <br /> ಫೆಬ್ರುವರಿಯಲ್ಲಿ ನವದೆಹಲಿಯಲ್ಲಿ ನಡೆಯಲಿರುವ ಒಲಿಂಪಿಕ್ಸ್ ಅರ್ಹತಾ ಸುತ್ತಿಗೆ ಸಿದ್ಧತೆ ನಡೆಸುವ ನಿಟ್ಟಿನಲ್ಲಿ ಪಾಕಿಸ್ತಾನ ಎದುರು ಟೆಸ್ಟ್ ಸರಣಿ ಆಯೋಜಿಸಲಾಗುವುದು ಎಂದು ಭಾನುವಾರ ಕೋಚ್ ಮೈಕಲ್ ನಾಬ್ಸ್ ತಿಳಿಸಿದ್ದರು. ಆದರೆ ಈ ಬಗ್ಗೆ ಹೆಚ್ಚು ಮಾತನಾಡಲು ಗುಲಟಿ ಇಷ್ಟಪಡಲಿಲ್ಲ.<br /> <br /> `ಹಾಕಿ ಟೆಸ್ಟ್ ಸರಣಿ ಆಡಲು ಪಾಕಿಸ್ತಾನ ನಮ್ಮನ್ನು ಸಂಪರ್ಕಿಸಿರುವುದು ನಿಜ. ಆದರೆ ಈ ಸಂಬಂಧ ನಮಗೆ ಕೇಂದ್ರದಿಂದ ಒಪ್ಪಿಗೆಬೇಕು~ ಎಂದರು.ಬೆಂಗಳೂರಲ್ಲಿ <br /> <br /> <strong>ತರಬೇತಿ ಕೇಂದ್ರ:</strong> ಬೆಂಗಳೂರಿನಲ್ಲಿ ಹಾಕಿ ತರಬೇತಿ ಕೇಂದ್ರ ಸ್ಥಾಪಿಸುವ ವಿಷಯವನ್ನು ಹಾಕಿ ಇಂಡಿಯಾ ಕಾರ್ಯಕಾರಿ ನಿರ್ದೇಶಕ ಅನುಪಮ್ ಗುಲಟಿ ಖಚಿತಪಡಿಸಿದ್ದಾರೆ. `ಬೆಂಗಳೂರಿನಲ್ಲಿ ಅಗತ್ಯ ಸೌಲಭ್ಯಗಳಿವೆ. ಭಾರತ ಕ್ರೀಡಾ ಪ್ರಾಧಿಕಾರದ (ಎಸ್ಎಐ) ಪ್ರಧಾನ ನಿರ್ದೇಶಕ ದೇಶ್ ದೀಪಕ್ ವರ್ಮ ಕೂಡ ಇಲ್ಲಿಯೇ ಹಾಕಿ ಕೇಂದ್ರ ಸ್ಥಾಪಿಸಲು ಒಪ್ಪಿದ್ದಾರೆ~ ಎಂದು ಅವರು ನುಡಿದರು.<br /> <br /> <strong>ಅಖ್ತರ್ ಕ್ಷಮೆಯಾಚಿಸಬೇಕು: ದೇಶಮುಖ್</strong></p>.<p><strong>ನವದೆಹಲಿ (ಐಎಎನ್ಎಸ್): </strong>ಸಲ್ಲದ ಟೀಕೆ ಮಾಡಿರುವ ಪಾಕಿಸ್ತಾನದ ಮಾಜಿ ವೇಗಿ ಶೋಯಬ್ ಅಖ್ತರ್ ಬ್ಯಾಟಿಂಗ್ ಚಾಂಪಿಯನ್ ಸಚಿನ್ ತೆಂಡೂಲ್ಕರ್ ಅವರ ಕ್ಷಮೆಯಾಚಿಸಬೇಕು ಎಂದು ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಅಧ್ಯಕ್ಷ ಹಾಗೂ ಕೇಂದ್ರ ಸಚಿವ ವಿಲಾಸರಾವ್ ದೇಶಮುಖ್ ಆಗ್ರಹಿಸಿದ್ದಾರೆ.<br /> <br /> `ಅಖ್ತರ್ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಸಚಿನ್ ವಿಶ್ವ ದರ್ಜೆಯ ಬ್ಯಾಟ್ಸ್ಮನ್. ಅನೇಕ ದಾಖಲೆಗಳು ಅವರ ಹೆಸರಿನಲ್ಲಿವೆ. ಹಾಗಾಗಿ ಸಚಿನ್ ಅವರ ಕ್ಷಮೆಯಾಚಿಸಬೇಕು~ ಎಂದು ದೇಶಮುಖ್ ನುಡಿದಿದ್ದಾರೆ.<br /> <br /> `ಪಂದ್ಯವನ್ನು ಗೆಲ್ಲಿಸಿಕೊಡುವಂತಹ ಕಲೆ ಸಚಿನ್ ಹಾಗೂ ದ್ರಾವಿಡ್ ಅವರ ಬಳಿ ಇಲ್ಲ. ಅಷ್ಟು ಮಾತ್ರವಲ್ಲದೇ, 2006ರಲ್ಲಿ ಫೈಸಲಾಬಾದ್ನಲ್ಲಿ ನಡೆದ ಟೆಸ್ಟ್ ಪಂದ್ಯವೊಂದರಲ್ಲಿ ನನ್ನ ಎಸೆತಗಳನ್ನು ಎದುರಿಸಲು ಸಚಿನ್ ಪರದಾಡಿದ್ದರು~ ಎಂದು `ಕಾಂಟ್ರವರ್ಸಿಯಲಿ ಯುವರ್ಸ್~ ಎಂಬ ತಮ್ಮ ಆತ್ಮಚರಿತ್ರೆಯಲ್ಲಿ ರಾವಲ್ಪಿಂಡಿ ಎಕ್ಸ್ಪ್ರೆಸ್ ಖ್ಯಾತಿಯ ಅಖ್ತರ್ ಟೀಕಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>