<p><strong>ಶಿವಮೊಗ್ಗ:</strong> ಮಣ್ಣು ಅತ್ಯಮೂಲ್ಯವಾದ ನೈಸರ್ಗಿಕ ಸಂಪನ್ಮೂಲವಾಗಿದ್ದು, ಸುಸ್ಥಿರ ಕೃಷಿ ಉತ್ಪಾದನೆ ಮತ್ತು ಮಾನವನ ಆರೋಗ್ಯಕರ ಜೀವನಕ್ಕೆ ಮಣ್ಣಿನ ಸಂರಕ್ಷಣೆ ಅತ್ಯವಶ್ಯಕ ಎಂದು ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ಪಿ.ಎಂ.ಸಾಲಿಮಠ ಅಭಿಪ್ರಾಯಪಟ್ಟರು.<br /> <br /> ನವಿಲೆಯ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಣ್ಣು ವಿಜ್ಞಾನ ದಿನಾಚರಣೆ ಮತ್ತು ಭಾರತೀಯ ಮಣ್ಣುಶಾಸ್ತ್ರ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ನಾನಾ ಕಾರಣಗಳಿಂದ ಮಣ್ಣಿನ ಆರೋಗ್ಯ ಇಂದು ಹದಗೆಡುತ್ತಿದ್ದು, ಅದನ್ನು ಸರಿಪಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾದ ತುರ್ತು ಇದೆ ಎಂದು ಅವರು ಪ್ರತಿಪಾದಿಸಿದರು.<br /> <br /> ವಿಶ್ವ ಆಹಾರ ಭದ್ರತೆಯ ದೃಷ್ಟಿಯಿಂದ ವಿಶ್ವ ಆಹಾರ ಮತ್ತು ಕೃಷಿ ಸಂಸ್ಥೆ ಕರೆಯ ಮೇರೆಗೆ ಜಾಗತಿಕ ಮಣ್ಣು ಆರೋಗ್ಯ ದಿನಾಚರಣೆಯನ್ನ ಇನ್ನಷ್ಟು ಕ್ರಿಯಾಶೀಲವಾಗಿ ಆಚರಿಸುವ ಅವಶ್ಯಕತೆ ಇದೆ ಎಂದರು.<br /> <br /> ಭಾರತೀಯ ಮಣ್ಣು ಶಾಸ್ತ್ರ ಸಂಘದ ಶಿವಮೊಗ್ಗ ಶಾಖೆ ಉದ್ಘಾಟಿಸಿದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಆರ್.ಸಿದ್ದರಾಮಪ್ಪ ಮಾತನಾಡಿ, ಮಣ್ಣು ವಿಜ್ಞಾನಿಗಳು ತಮ್ಮ ಸಂಶೋಧನೆಯಲ್ಲಿ ವಸ್ತುನಿಷ್ಠತೆ, ಕ್ರಿಯಾಶೀಲತೆ ಹಾಗೂ ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.<br /> <br /> ಮಣ್ಣುಶಾಸ್ತ್ರ ಸಂಘ, ರೈತರೊಂದಿಗೆ ಉತ್ತಮ ಸಂಬಂಧ ಹೊಂದಕೊಳ್ಳಬೇಕು. ಈ ನಿಟ್ಟಿನಲ್ಲಿ ಹೆಚ್ಚು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದರು.<br /> <br /> ಭಾರತೀಯ ಮಣ್ಣು ಶಾಸ್ತ್ರ ಸಂಘದ ಶಿವಮೊಗ್ಗ ಶಾಖೆ ಅಧ್ಯಕ್ಷ ಡಾ.ಟಿ.ಎಸ್.ವಾಗೀಶ್ ಮಾತನಾಡಿ, ಸಮಾಜದ ಪ್ರಗತಿಗಾಗಿ ಮಣ್ಣು ವಿಜ್ಞಾನದ ಜ್ಞಾನವನ್ನು ಜನಸಾಮಾನ್ಯರಿಗೆ ಪರಿಚಯಿಸುವ ಉದ್ದೇಶ ಸಂಘ ಹೊಂದಿದೆ ಎಂದರು.<br /> <br /> ಬೆಂಗಳೂರು ಹೆಸರುಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಮಣ್ಣು ವಿಜ್ಞಾನ ಮುಖ್ಯಸ್ಥ ಡಾ.ಎ.ಎನ್.ಗಣೇಶ್ ಮೂರ್ತಿ, ಆಹಾರಭದ್ರತೆಯಲ್ಲಿ ಮಣ್ಣಿನ ಗುಣಮಟ್ಟದ ಪಾತ್ರ ಬಗ್ಗೆ ಉಪನ್ಯಾಸ ನೀಡಿದರು.<br /> ಭಾರತೀಯ ಮಣ್ಣುಶಾಸ್ತ್ರ ಸಂಘದ ನವದೆಹಲಿಯ ಅಧ್ಯಕ್ಷ ಡಾ.ಆರ್.ಕೆ.ರತನ್ ಅವರಿಂದ ಬಂದ ಸಂದೇಶವನ್ನು ಡಾ.ಎಚ್.ಎಂ.ಚಿದಾನಂದಪ್ಪ ವಾಚಿಸಿದರು.<br /> <br /> ಸಮಾರಂಭದಲ್ಲಿ ವಿ.ವಿ. ಶಿಕ್ಷಣ ನಿರ್ದೇಶಕ ಡಾ.ಎ.ಎಸ್.ಕುಮಾರಸ್ವಾಮಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.<br /> <br /> ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ ಡಾ.ಎಂ.ಎಸ್.ವಿಘ್ನೇಶ್ ವಹಿಸಿದ್ದರು. ವಿ.ವಿ.ಸಹಾಯಕ ಸಂಶೋಧನಾ ನಿರ್ದೇಶಕ ಡಾ.ವೈ.ವಿ.ಶೆಟ್ಟಿ ಸ್ವಾಗತಿಸಿದರು. ಮಹಾಶ್ವೇತ ಚರ್ಕವರ್ತಿ, ಪ್ರೀತಿ ಕಾರ್ಯಕ್ರಮ ನಿರೂಪಿಸಿದರು. ಗುರುಮೂರ್ತಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಮಣ್ಣು ಅತ್ಯಮೂಲ್ಯವಾದ ನೈಸರ್ಗಿಕ ಸಂಪನ್ಮೂಲವಾಗಿದ್ದು, ಸುಸ್ಥಿರ ಕೃಷಿ ಉತ್ಪಾದನೆ ಮತ್ತು ಮಾನವನ ಆರೋಗ್ಯಕರ ಜೀವನಕ್ಕೆ ಮಣ್ಣಿನ ಸಂರಕ್ಷಣೆ ಅತ್ಯವಶ್ಯಕ ಎಂದು ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ಪಿ.ಎಂ.ಸಾಲಿಮಠ ಅಭಿಪ್ರಾಯಪಟ್ಟರು.<br /> <br /> ನವಿಲೆಯ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಣ್ಣು ವಿಜ್ಞಾನ ದಿನಾಚರಣೆ ಮತ್ತು ಭಾರತೀಯ ಮಣ್ಣುಶಾಸ್ತ್ರ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ನಾನಾ ಕಾರಣಗಳಿಂದ ಮಣ್ಣಿನ ಆರೋಗ್ಯ ಇಂದು ಹದಗೆಡುತ್ತಿದ್ದು, ಅದನ್ನು ಸರಿಪಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾದ ತುರ್ತು ಇದೆ ಎಂದು ಅವರು ಪ್ರತಿಪಾದಿಸಿದರು.<br /> <br /> ವಿಶ್ವ ಆಹಾರ ಭದ್ರತೆಯ ದೃಷ್ಟಿಯಿಂದ ವಿಶ್ವ ಆಹಾರ ಮತ್ತು ಕೃಷಿ ಸಂಸ್ಥೆ ಕರೆಯ ಮೇರೆಗೆ ಜಾಗತಿಕ ಮಣ್ಣು ಆರೋಗ್ಯ ದಿನಾಚರಣೆಯನ್ನ ಇನ್ನಷ್ಟು ಕ್ರಿಯಾಶೀಲವಾಗಿ ಆಚರಿಸುವ ಅವಶ್ಯಕತೆ ಇದೆ ಎಂದರು.<br /> <br /> ಭಾರತೀಯ ಮಣ್ಣು ಶಾಸ್ತ್ರ ಸಂಘದ ಶಿವಮೊಗ್ಗ ಶಾಖೆ ಉದ್ಘಾಟಿಸಿದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಆರ್.ಸಿದ್ದರಾಮಪ್ಪ ಮಾತನಾಡಿ, ಮಣ್ಣು ವಿಜ್ಞಾನಿಗಳು ತಮ್ಮ ಸಂಶೋಧನೆಯಲ್ಲಿ ವಸ್ತುನಿಷ್ಠತೆ, ಕ್ರಿಯಾಶೀಲತೆ ಹಾಗೂ ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.<br /> <br /> ಮಣ್ಣುಶಾಸ್ತ್ರ ಸಂಘ, ರೈತರೊಂದಿಗೆ ಉತ್ತಮ ಸಂಬಂಧ ಹೊಂದಕೊಳ್ಳಬೇಕು. ಈ ನಿಟ್ಟಿನಲ್ಲಿ ಹೆಚ್ಚು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದರು.<br /> <br /> ಭಾರತೀಯ ಮಣ್ಣು ಶಾಸ್ತ್ರ ಸಂಘದ ಶಿವಮೊಗ್ಗ ಶಾಖೆ ಅಧ್ಯಕ್ಷ ಡಾ.ಟಿ.ಎಸ್.ವಾಗೀಶ್ ಮಾತನಾಡಿ, ಸಮಾಜದ ಪ್ರಗತಿಗಾಗಿ ಮಣ್ಣು ವಿಜ್ಞಾನದ ಜ್ಞಾನವನ್ನು ಜನಸಾಮಾನ್ಯರಿಗೆ ಪರಿಚಯಿಸುವ ಉದ್ದೇಶ ಸಂಘ ಹೊಂದಿದೆ ಎಂದರು.<br /> <br /> ಬೆಂಗಳೂರು ಹೆಸರುಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಮಣ್ಣು ವಿಜ್ಞಾನ ಮುಖ್ಯಸ್ಥ ಡಾ.ಎ.ಎನ್.ಗಣೇಶ್ ಮೂರ್ತಿ, ಆಹಾರಭದ್ರತೆಯಲ್ಲಿ ಮಣ್ಣಿನ ಗುಣಮಟ್ಟದ ಪಾತ್ರ ಬಗ್ಗೆ ಉಪನ್ಯಾಸ ನೀಡಿದರು.<br /> ಭಾರತೀಯ ಮಣ್ಣುಶಾಸ್ತ್ರ ಸಂಘದ ನವದೆಹಲಿಯ ಅಧ್ಯಕ್ಷ ಡಾ.ಆರ್.ಕೆ.ರತನ್ ಅವರಿಂದ ಬಂದ ಸಂದೇಶವನ್ನು ಡಾ.ಎಚ್.ಎಂ.ಚಿದಾನಂದಪ್ಪ ವಾಚಿಸಿದರು.<br /> <br /> ಸಮಾರಂಭದಲ್ಲಿ ವಿ.ವಿ. ಶಿಕ್ಷಣ ನಿರ್ದೇಶಕ ಡಾ.ಎ.ಎಸ್.ಕುಮಾರಸ್ವಾಮಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.<br /> <br /> ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ ಡಾ.ಎಂ.ಎಸ್.ವಿಘ್ನೇಶ್ ವಹಿಸಿದ್ದರು. ವಿ.ವಿ.ಸಹಾಯಕ ಸಂಶೋಧನಾ ನಿರ್ದೇಶಕ ಡಾ.ವೈ.ವಿ.ಶೆಟ್ಟಿ ಸ್ವಾಗತಿಸಿದರು. ಮಹಾಶ್ವೇತ ಚರ್ಕವರ್ತಿ, ಪ್ರೀತಿ ಕಾರ್ಯಕ್ರಮ ನಿರೂಪಿಸಿದರು. ಗುರುಮೂರ್ತಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>