<p><strong>ಗದಗ: </strong>ಪೊಲೀಸ್ ಸಿಬ್ಬಂದಿ ಆರೋಗ್ಯ ರಕ್ಷಣೆ ಕಡೆ ಹೆಚ್ಚು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಎಸ್. ಶಂಕರನಾರಾಯಣ ಕಿವಿಮಾತು ಹೇಳಿದರು. <br /> <br /> ಬೆಟಗೇರಿಯ ಜಿಲ್ಲಾ ಪೊಲೀಸ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. <br /> <br /> ಪೊಲೀಸರಿಗೆ ಸದೃಢ ಆರೋಗ್ಯ ಹಾಗೂ ಗಟ್ಟಿ ಮನಸ್ಸು ಬಹಳ ಅಗತ್ಯ. ಇವೆರಡು ಒಟ್ಟಾಗಿ ಸೇರಿದರೆ ಸೇವೆಯನ್ನು ಚೆನ್ನಾಗಿ ಮಾಡಬಹುದು. ಆದ್ದರಿಂದ ಪೊಲೀಸರು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು ಎಂದರು. <br /> <br /> ಪೊಲೀಸ ಠಾಣೆಗಳಿಗೆ ದೂರು ಸಲ್ಲಿಸಲು ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಬಂದವರ ಕುಂದುಕೊರತೆಗಳನ್ನು ಪ್ರಾಮಾಣಿಕತೆಯಿಂದ ಬಗೆಹರಿಸಬೇಕು ಎಂದು ತನ್ಮೂಲಕ ಪೊಲೀಸ ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಅಂತರವನ್ನು ಕಡಿಮೆ ಮಾಡಲು ಪ್ರಯತ್ನಿಸಬೇಕು. <br /> <br /> ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ, ಸಾರ್ವಜನಿಕರ ಆಸ್ತಿ -ಪಾಸ್ತಿಯನ್ನು ರಕ್ಷಣೆ ಮಾಡುವ ಪೊಲೀಸ ಇಲಾಖೆಯು ತ್ಯಾಗ ಮತ್ತು ಬಲಿದಾನದ ಪ್ರತೀಕವಾಗಿದೆ. ಪಾರದರ್ಶಕತೆ, ಪಕ್ಷಪಾತ ರಹಿತ ಸೇವೆಯ ಮುಂದೆ ಬೇರೆ ಯಾವುದು ಸಮಾನವಲ್ಲ. ಆದ್ದರಿಂದ ಪೊಲೀಸರು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ಭಕ್ತಿ, ಗೌರವದಿಂದ ಮಾಡಬೇಕು ಎಂದರು. <br /> <br /> ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ರವಿಕುಮಾರ ನಾಯಕ ಹುತಾತ್ಮ ಪೊಲೀಸರ ಸ್ಮರಣೆ ಮಾಡಿದರು. ಡಿವೈಎಸ್ಪಿ ಸುರೇಶ ಮಸೂತಿ, ಸಿಪಿಐಗಳಾದ ನಾಗರಾಜ ಅಂಬಲಿ, ವಿಜಯ ಬಿರಾದಾರ, ಆರ್.ಎಸ್. ಬೆಂತೂರ, ಬಿ.ವಿ. ಪಾಟೀಲ, ಫೈಯಾಜುದ್ದೀನ್ ಮತ್ತಿತರರು ಹಾಜರಿದ್ದರು.</p>.<p><br /> ಇದಕ್ಕೂ ಮೊದಲು ನಗರದ ಗಣ್ಯರು ಹಾಗೂ ನಾಗರಿಕರು ಹುತಾತ್ಮ ಸ್ಮಾರಕಕ್ಕೆ ಪುಷ್ಪ ಗುಚ್ಛ ಅರ್ಪಿಸಿ ನಮನ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>ಪೊಲೀಸ್ ಸಿಬ್ಬಂದಿ ಆರೋಗ್ಯ ರಕ್ಷಣೆ ಕಡೆ ಹೆಚ್ಚು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಎಸ್. ಶಂಕರನಾರಾಯಣ ಕಿವಿಮಾತು ಹೇಳಿದರು. <br /> <br /> ಬೆಟಗೇರಿಯ ಜಿಲ್ಲಾ ಪೊಲೀಸ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. <br /> <br /> ಪೊಲೀಸರಿಗೆ ಸದೃಢ ಆರೋಗ್ಯ ಹಾಗೂ ಗಟ್ಟಿ ಮನಸ್ಸು ಬಹಳ ಅಗತ್ಯ. ಇವೆರಡು ಒಟ್ಟಾಗಿ ಸೇರಿದರೆ ಸೇವೆಯನ್ನು ಚೆನ್ನಾಗಿ ಮಾಡಬಹುದು. ಆದ್ದರಿಂದ ಪೊಲೀಸರು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು ಎಂದರು. <br /> <br /> ಪೊಲೀಸ ಠಾಣೆಗಳಿಗೆ ದೂರು ಸಲ್ಲಿಸಲು ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಬಂದವರ ಕುಂದುಕೊರತೆಗಳನ್ನು ಪ್ರಾಮಾಣಿಕತೆಯಿಂದ ಬಗೆಹರಿಸಬೇಕು ಎಂದು ತನ್ಮೂಲಕ ಪೊಲೀಸ ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಅಂತರವನ್ನು ಕಡಿಮೆ ಮಾಡಲು ಪ್ರಯತ್ನಿಸಬೇಕು. <br /> <br /> ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ, ಸಾರ್ವಜನಿಕರ ಆಸ್ತಿ -ಪಾಸ್ತಿಯನ್ನು ರಕ್ಷಣೆ ಮಾಡುವ ಪೊಲೀಸ ಇಲಾಖೆಯು ತ್ಯಾಗ ಮತ್ತು ಬಲಿದಾನದ ಪ್ರತೀಕವಾಗಿದೆ. ಪಾರದರ್ಶಕತೆ, ಪಕ್ಷಪಾತ ರಹಿತ ಸೇವೆಯ ಮುಂದೆ ಬೇರೆ ಯಾವುದು ಸಮಾನವಲ್ಲ. ಆದ್ದರಿಂದ ಪೊಲೀಸರು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ಭಕ್ತಿ, ಗೌರವದಿಂದ ಮಾಡಬೇಕು ಎಂದರು. <br /> <br /> ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ರವಿಕುಮಾರ ನಾಯಕ ಹುತಾತ್ಮ ಪೊಲೀಸರ ಸ್ಮರಣೆ ಮಾಡಿದರು. ಡಿವೈಎಸ್ಪಿ ಸುರೇಶ ಮಸೂತಿ, ಸಿಪಿಐಗಳಾದ ನಾಗರಾಜ ಅಂಬಲಿ, ವಿಜಯ ಬಿರಾದಾರ, ಆರ್.ಎಸ್. ಬೆಂತೂರ, ಬಿ.ವಿ. ಪಾಟೀಲ, ಫೈಯಾಜುದ್ದೀನ್ ಮತ್ತಿತರರು ಹಾಜರಿದ್ದರು.</p>.<p><br /> ಇದಕ್ಕೂ ಮೊದಲು ನಗರದ ಗಣ್ಯರು ಹಾಗೂ ನಾಗರಿಕರು ಹುತಾತ್ಮ ಸ್ಮಾರಕಕ್ಕೆ ಪುಷ್ಪ ಗುಚ್ಛ ಅರ್ಪಿಸಿ ನಮನ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>