<p><strong>ಪೀಣ್ಯ ದಾಸರಹಳ್ಳಿ:</strong> ಉತ್ತಮ ಪರಿಸರದ ಕೊರತೆ ಎದುರಾಗಿರುವುದರಿಂದ ನಗರ ಪ್ರದೇಶದ ಮಕ್ಕಳು ತೀವ್ರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಕಿದ್ವಾಯಿ ಗ್ರಂಥಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ತಜ್ಞೆ ಡಾ.ವಿಜಯಲಕ್ಷ್ಮೀ ದೇಶಮಾನೆ ಆತಂಕ ವ್ಯಕ್ತಪಡಿಸಿದರು.<br /> <br /> ಅವರು ದಾಸರಹಳ್ಳಿಯ ಶಾರದ ವಿದ್ಯಾಮಂದಿರದಲ್ಲಿ ಹಸಿರು ಪ್ರತಿಷ್ಠಾನ ಆಯೋಜಿಸಿದ್ದ ಆರೋಗ್ಯದ ಅರಿವು ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ಅತಿಯಾದ ಒತ್ತಡವು ಕೂಡ ಮಕ್ಕಳಿಗೆ ದೈಹಿಕ ಕಾಯಿಲೆಯನ್ನು ತಂದೊಡ್ಡುತ್ತಿದೆ.ಇದಕ್ಕೆ ಪೋಷಕರು ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು. ಹಸಿರು ಪ್ರತಿಷ್ಠಾನದ ಗೌರವಾಧ್ಯಕ್ಷ ಎಂ.ಆರ್.ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಉತ್ತಮ ಪರಿಸರದ ಕೊರತೆ ಎದುರಾಗಿರುವುದರಿಂದ ನಗರ ಪ್ರದೇಶದ ಮಕ್ಕಳು ತೀವ್ರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಕಿದ್ವಾಯಿ ಗ್ರಂಥಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ತಜ್ಞೆ ಡಾ.ವಿಜಯಲಕ್ಷ್ಮೀ ದೇಶಮಾನೆ ಆತಂಕ ವ್ಯಕ್ತಪಡಿಸಿದರು.<br /> <br /> ಅವರು ದಾಸರಹಳ್ಳಿಯ ಶಾರದ ವಿದ್ಯಾಮಂದಿರದಲ್ಲಿ ಹಸಿರು ಪ್ರತಿಷ್ಠಾನ ಆಯೋಜಿಸಿದ್ದ ಆರೋಗ್ಯದ ಅರಿವು ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ಅತಿಯಾದ ಒತ್ತಡವು ಕೂಡ ಮಕ್ಕಳಿಗೆ ದೈಹಿಕ ಕಾಯಿಲೆಯನ್ನು ತಂದೊಡ್ಡುತ್ತಿದೆ.ಇದಕ್ಕೆ ಪೋಷಕರು ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು. ಹಸಿರು ಪ್ರತಿಷ್ಠಾನದ ಗೌರವಾಧ್ಯಕ್ಷ ಎಂ.ಆರ್.ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>