<p>ವಿಜಯಪುರ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿದ್ದ ಶಾಸಕ ಕೆ.ವೆಂಕಟಸ್ವಾಮಿ ಅವರಿಗೆ ಆಸ್ಪತ್ರೆ ಸಮಸ್ಯೆಗಳನ್ನು ಪರಿಹರಿಸುವಂತೆ ಸಾರ್ವಜನಿಕರು ಮನವಿ ಸಲ್ಲಿಸಿದರು. <br /> <br /> ಆರೋಗ್ಯ ಕೇಂದ್ರ ಪ್ರಾರಂಭವಾಗಿ 6 ತಿಂಗಳು ಕಳೆದರೂ ಅಗತ್ಯ ವೈದ್ಯರು, ದಾದಿಯರು ಮತ್ತು ಇತರೆ ಸಿಬ್ಬಂದಿಯ ನೇಮಕ ನಡೆದಿಲ್ಲ. ವೈದ್ಯಕೀಯ ಉಪಕರಣಗಳು ಇಲ್ಲದ ಕಾರಣ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸೂಕ್ತ ಸೌಲಭ್ಯಗಳನ್ನು ದೊರಕಿಸಿಕೊಡುವಂತೆ ಸಾರ್ವಜನಿಕರು ಮನವಿ ಮಾಡಿದರು.<br /> <br /> ಸಮುದಾಯ ಆರೋಗ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದ ಜಿಲ್ಲಾ ಆರೋಗ್ಯ ಅಧಿಕಾರಿ ತಿಮ್ಮಾರೆಡ್ಡಿ ಅವರ ಬಳಿ ಶಾಸಕರು ಸಮಸ್ಯೆಗಳ ಕುರಿತು ಚರ್ಚಿಸಿದರು. ವಿಜಯಪುರದ ಆರೋಗ್ಯ ಕೇಂದ್ರವು 30 ಹಾಸಿಗೆ ಸಾಮರ್ಥ್ಯದ್ದಾಗಿದೆ. 5 ವೈದ್ಯರು ಕಾರ್ಯನಿರ್ವಹಿಸಬೇಕಾಗಿದ್ದು, ಇಬ್ಬರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ದಾದಿಯರ 10 ಹುದ್ದೆಗಳಲ್ಲಿ 3ಕ್ಕೆ ಮಾತ್ರ ನೇಮಕ ಮಾಡಲಾಗಿದೆ. 12 ಮಂದಿ ಗ್ರೂಪ್ ಡಿ ನೌಕರರು ಕಾರ್ಯನಿರ್ವಹಿಸಬೇಕಾಗಿದ್ದು, ಮೂರು ಮಂದಿ ಮಾತ್ರ ಸೇವೆಯಲ್ಲಿದ್ದಾರೆ. <br /> <br /> ರಾಜ್ಯದಲ್ಲಿ ಇದೀಗ ನೇಮಕಾತಿ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಕೆಲವು ದಿನಗಳಲ್ಲಿ ಪರಿಸ್ಥಿತಿ ಸುಧಾರಿಸಲಿದೆ ಎಂದು ಹೇಳಿದರು.<br /> <br /> ಆಸ್ಪತ್ರೆಯಲ್ಲಿ ಇಬ್ಬರು ಮಹಿಳಾ ವೈದ್ಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, 24 ತಾಸುಗಳು ಸೇವೆ ಮಾಡುತ್ತಿದ್ದಾರೆ. ಆಸ್ಪತ್ರೆಯು ಪಟ್ಟಣದಿಂದ 2 ಕಿ.ಮೀ. ದೂರದಲ್ಲಿರುವುದರಿಂದ ವೈದ್ಯರು ರಾತ್ರಿ ಸಮಯದಲ್ಲಿ ಕಾರ್ಯ ನಿರ್ವಹಿಸಲು ರಕ್ಷಣೆ ಇಲ್ಲ ಎಂದು ಮಾಹಿತಿ ನೀಡಿದರು.<br /> <br /> ಮುಖಂಡ ಬೈರಾಪುರ ರಾಜಣ್ಣ ಮಾತನಾಡಿ, ವಿಜಯಪುರ ಪಟ್ಟಣಕ್ಕೆ ಹೊಂದಿಕೊಂಡಂತೆ ಶಿಡ್ಲಘಟ್ಟ ತಾಲ್ಲೂಕಿನ ಸುಮಾರು 25 ರಿಂದ 30 ಹಳ್ಳಿಗಳಿದ್ದು, ಒಟ್ಟು ಆಸ್ಪತ್ರೆ ವಲಯದಲ್ಲಿ 250 ಹಳ್ಳಿಗಳು ಸೇರುತ್ತವೆ. ಆದ್ದರಿಂದ ಸಮಸ್ಯೆಗಳನ್ನು ಶೀಘ್ರ ಪರಿಹರಿಸಬೇಕು ಎಂದು ಆಗ್ರಹಿಸಿದರು.<br /> <br /> <strong>ಶಾಸಕರ ಭರವಸೆ</strong>: ಆಸ್ಪತ್ರೆಯ ಸಮಸ್ಯೆಗಳ ಮಾಹಿತಿ ಪಡೆದ ಶಾಸಕರು, ಈ ಬಗ್ಗೆ ಆಯುಕ್ತರು ಮತ್ತು ಸಚಿವರೊಂದಿಗೆ ಚರ್ಚಿಸಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. <br /> <br /> ಕೂಡಲೇ ಆಸ್ಪತ್ರೆಯ ಸಲಹಾ ಸಮಿತಿಯನ್ನು ಪುನರ್ ರಚಿಸಲು ಹೇಳಿದರು. ಇದಕ್ಕೂ ಮುನ್ನ ಪಟ್ಟಣದ 5,6,7,8 ಮತ್ತು 11ನೇ ವಾರ್ಡ್ಗಳಿಗೆ ಪುರಸಭಾ ಮುಖ್ಯಾಧಿಕಾರಿ ಮತ್ತು ಸದಸ್ಯರೊಂದಿಗೆ ಭೇಟಿ ನೀಡಿದ ಶಾಸಕರು ಇಲ್ಲಿನ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆದರು. <br /> <br /> <strong>ನಾಳೆ ಭೇಟಿ:</strong> ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಪಟ್ಟಣದ 12, 13, 14 ಮತ್ತು 15 ನೇ ವಾರ್ಡ್ಗಳಲ್ಲಿ ಶಾಸಕರು ಭೇಟಿ ನೀಡುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿದ್ದ ಶಾಸಕ ಕೆ.ವೆಂಕಟಸ್ವಾಮಿ ಅವರಿಗೆ ಆಸ್ಪತ್ರೆ ಸಮಸ್ಯೆಗಳನ್ನು ಪರಿಹರಿಸುವಂತೆ ಸಾರ್ವಜನಿಕರು ಮನವಿ ಸಲ್ಲಿಸಿದರು. <br /> <br /> ಆರೋಗ್ಯ ಕೇಂದ್ರ ಪ್ರಾರಂಭವಾಗಿ 6 ತಿಂಗಳು ಕಳೆದರೂ ಅಗತ್ಯ ವೈದ್ಯರು, ದಾದಿಯರು ಮತ್ತು ಇತರೆ ಸಿಬ್ಬಂದಿಯ ನೇಮಕ ನಡೆದಿಲ್ಲ. ವೈದ್ಯಕೀಯ ಉಪಕರಣಗಳು ಇಲ್ಲದ ಕಾರಣ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸೂಕ್ತ ಸೌಲಭ್ಯಗಳನ್ನು ದೊರಕಿಸಿಕೊಡುವಂತೆ ಸಾರ್ವಜನಿಕರು ಮನವಿ ಮಾಡಿದರು.<br /> <br /> ಸಮುದಾಯ ಆರೋಗ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದ ಜಿಲ್ಲಾ ಆರೋಗ್ಯ ಅಧಿಕಾರಿ ತಿಮ್ಮಾರೆಡ್ಡಿ ಅವರ ಬಳಿ ಶಾಸಕರು ಸಮಸ್ಯೆಗಳ ಕುರಿತು ಚರ್ಚಿಸಿದರು. ವಿಜಯಪುರದ ಆರೋಗ್ಯ ಕೇಂದ್ರವು 30 ಹಾಸಿಗೆ ಸಾಮರ್ಥ್ಯದ್ದಾಗಿದೆ. 5 ವೈದ್ಯರು ಕಾರ್ಯನಿರ್ವಹಿಸಬೇಕಾಗಿದ್ದು, ಇಬ್ಬರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ದಾದಿಯರ 10 ಹುದ್ದೆಗಳಲ್ಲಿ 3ಕ್ಕೆ ಮಾತ್ರ ನೇಮಕ ಮಾಡಲಾಗಿದೆ. 12 ಮಂದಿ ಗ್ರೂಪ್ ಡಿ ನೌಕರರು ಕಾರ್ಯನಿರ್ವಹಿಸಬೇಕಾಗಿದ್ದು, ಮೂರು ಮಂದಿ ಮಾತ್ರ ಸೇವೆಯಲ್ಲಿದ್ದಾರೆ. <br /> <br /> ರಾಜ್ಯದಲ್ಲಿ ಇದೀಗ ನೇಮಕಾತಿ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಕೆಲವು ದಿನಗಳಲ್ಲಿ ಪರಿಸ್ಥಿತಿ ಸುಧಾರಿಸಲಿದೆ ಎಂದು ಹೇಳಿದರು.<br /> <br /> ಆಸ್ಪತ್ರೆಯಲ್ಲಿ ಇಬ್ಬರು ಮಹಿಳಾ ವೈದ್ಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, 24 ತಾಸುಗಳು ಸೇವೆ ಮಾಡುತ್ತಿದ್ದಾರೆ. ಆಸ್ಪತ್ರೆಯು ಪಟ್ಟಣದಿಂದ 2 ಕಿ.ಮೀ. ದೂರದಲ್ಲಿರುವುದರಿಂದ ವೈದ್ಯರು ರಾತ್ರಿ ಸಮಯದಲ್ಲಿ ಕಾರ್ಯ ನಿರ್ವಹಿಸಲು ರಕ್ಷಣೆ ಇಲ್ಲ ಎಂದು ಮಾಹಿತಿ ನೀಡಿದರು.<br /> <br /> ಮುಖಂಡ ಬೈರಾಪುರ ರಾಜಣ್ಣ ಮಾತನಾಡಿ, ವಿಜಯಪುರ ಪಟ್ಟಣಕ್ಕೆ ಹೊಂದಿಕೊಂಡಂತೆ ಶಿಡ್ಲಘಟ್ಟ ತಾಲ್ಲೂಕಿನ ಸುಮಾರು 25 ರಿಂದ 30 ಹಳ್ಳಿಗಳಿದ್ದು, ಒಟ್ಟು ಆಸ್ಪತ್ರೆ ವಲಯದಲ್ಲಿ 250 ಹಳ್ಳಿಗಳು ಸೇರುತ್ತವೆ. ಆದ್ದರಿಂದ ಸಮಸ್ಯೆಗಳನ್ನು ಶೀಘ್ರ ಪರಿಹರಿಸಬೇಕು ಎಂದು ಆಗ್ರಹಿಸಿದರು.<br /> <br /> <strong>ಶಾಸಕರ ಭರವಸೆ</strong>: ಆಸ್ಪತ್ರೆಯ ಸಮಸ್ಯೆಗಳ ಮಾಹಿತಿ ಪಡೆದ ಶಾಸಕರು, ಈ ಬಗ್ಗೆ ಆಯುಕ್ತರು ಮತ್ತು ಸಚಿವರೊಂದಿಗೆ ಚರ್ಚಿಸಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. <br /> <br /> ಕೂಡಲೇ ಆಸ್ಪತ್ರೆಯ ಸಲಹಾ ಸಮಿತಿಯನ್ನು ಪುನರ್ ರಚಿಸಲು ಹೇಳಿದರು. ಇದಕ್ಕೂ ಮುನ್ನ ಪಟ್ಟಣದ 5,6,7,8 ಮತ್ತು 11ನೇ ವಾರ್ಡ್ಗಳಿಗೆ ಪುರಸಭಾ ಮುಖ್ಯಾಧಿಕಾರಿ ಮತ್ತು ಸದಸ್ಯರೊಂದಿಗೆ ಭೇಟಿ ನೀಡಿದ ಶಾಸಕರು ಇಲ್ಲಿನ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆದರು. <br /> <br /> <strong>ನಾಳೆ ಭೇಟಿ:</strong> ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಪಟ್ಟಣದ 12, 13, 14 ಮತ್ತು 15 ನೇ ವಾರ್ಡ್ಗಳಲ್ಲಿ ಶಾಸಕರು ಭೇಟಿ ನೀಡುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>