<p><strong>ಶಿವಮೊಗ್ಗ: </strong>ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮದ ಅಡಿ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ನಡೆಸದ ಅನುದಾನ ರಹಿತ ಶಾಲೆಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ ಎಚ್ಚರಿಕೆ ನೀಡಿದರು.<br /> <br /> ಆ. 1ರಿಂದ ಆರಂಭವಾಗುವ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ಅಭಿಯಾನ ಕುರಿತು ಮಂಗಳವಾರ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ಅವರು ಮಾತನಾಡಿದರು.<br /> <br /> ಸರ್ಕಾರಿ ಶಾಲೆಗಳು, ಅನುದಾನಿತ, ಅನುದಾನರಹಿತ ಶಾಲೆಗಳು ಹಾಗೂ ವಸತಿ ಶಾಲೆಗಳಲ್ಲಿ ಪ್ರತಿವರ್ಷ ಮಕ್ಕಳ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯ ಸಮಸ್ಯೆ ಕಂಡುಬಂದಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದರು.<br /> <br /> ಆದರೆ, ಕೆಲವು ಖಾಸಗಿ ಅನುದಾನ ರಹಿತ ಶಾಲೆಗಳು ಯೋಜನೆಯ ನಿಯಮದಂತೆ ಕ್ರಮ ಜರುಗಿಸುತ್ತಿಲ್ಲ. ಯಾವುದೋ ತಿಂಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ನಡೆಸುತ್ತಿರುವ ಮಾಹಿತಿ ಇರುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದ ಅವರು, ಅಂತಹ ಶಾಲೆಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.<br /> <br /> ಪ್ರಸಕ್ತ ಸಾಲಿನಲ್ಲಿ ಆ. 1ರಿಂದ 31ರವರೆಗೆ ಒಂದು ತಿಂಗಳ ಕಾಲ ವಿವಿಧ ಶಾಲೆಗಳಲ್ಲಿ ತಜ್ಞವೈದ್ಯರು ಮಕ್ಕಳ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ಶಾಲೆಗಳು, ಶಿಕ್ಷಕರು, ಆರೋಗ್ಯ ಇಲಾಖೆ ಅಧಿಕಾರಿಗಳು ವೈದ್ಯರು ಭಾಗವಹಿಸಿ ಯೋಜನೆಯನ್ನು ಸಮರ್ಪಕ ಆಗಿ ಅನುಷ್ಠಾನಗೊಳಿಸಬೇಕು ಎಂದರು.<br /> <br /> ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಾಗೂ ವಸತಿಶಾಲೆಗಳು ಸೇರಿದಂತೆ ಒಂದರಿಂದ 10ನೇ ತರಗತಿಯವರೆಗೆ ಒಟ್ಟು 2,72,113 ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡುವ ಗುರಿ ಹೊಂದಲಾಗಿದೆ. <br /> <br /> ತಪಾಸಣೆ ವೇಳೆ ಆರೋಗ್ಯ ಸಂಬಂಧಿ ಸಮಸ್ಯೆಗಳು ಕಂಡು ಬಂದರೆ ಸೂಕ್ತ ಚಿಕಿತ್ಸೆಯನ್ನು ತಜ್ಞವೈದ್ಯರು ನೀಡಲಿದ್ದಾರೆ. ಒಂದೊಮ್ಮೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ ಅಂತಹ ಮಕ್ಕಳನ್ನು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದರು.<br /> <br /> <strong>ಶುಚಿತ್ವಕ್ಕೆ ಆದ್ಯತೆ:</strong> ಈ ಅಭಿಯಾನ ಕೇವಲ ಆರೋಗ್ಯ ತಪಾಸಣೆಯಾಗಿರದೆ ಶಾಲಾ ಆವರಣಲ್ಲಿನ ಶುಚಿತ್ವ ಹಾಗೂ ಗ್ರಾಮದ ಪರಿಸರ ಸಂಬಂಧಿಸಿದಂತೆಯೂ ಜಾಗೃತಿ ಮೂಡಿಸುವುದಾಗಿದೆ. ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಈ ಬಗ್ಗೆ ಹೆಚ್ಚಿನ ಜಾಗೃತಿ ಅಗತ್ಯವಿದೆ ಎಂದರು. <br /> <strong><br /> ಪ್ರತಿದಿನ ವರದಿ: </strong>ಆಗಸ್ಟ್ ಒಂದರಿಂದ ಒಂದು ತಿಂಗಳು ನಡೆಯುವ ಈ ಅಭಿಯಾನದ ಬಗ್ಗೆ ಪ್ರತಿ ಶಾಲೆಗಳು ತಮಗೆ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅವರಿಗೆ ಪ್ರತಿದಿನದ ವರದಿ ಸಲ್ಲಿಸಬೇಕು, ಆರೋಗ್ಯ ತಪಾಸಣೆ ವರದಿ ಕೊಡದವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ತಾಕೀತು ಮಾಡಿದರು.<br /> <br /> ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸಂಜಯ್ ಬಿಜ್ಜೂರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್.ಎಸ್. ಕುಮಾರ್ ಉಪಸ್ಥಿತರಿದ್ದರು. ಜಿಲ್ಲೆಯ ಎಲ್ಲ ತಾಲ್ಲೂಕು ಆರೋಗ್ಯಾಧಿಕಾರಿ,ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮದ ಅಡಿ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ನಡೆಸದ ಅನುದಾನ ರಹಿತ ಶಾಲೆಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ ಎಚ್ಚರಿಕೆ ನೀಡಿದರು.<br /> <br /> ಆ. 1ರಿಂದ ಆರಂಭವಾಗುವ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ಅಭಿಯಾನ ಕುರಿತು ಮಂಗಳವಾರ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ಅವರು ಮಾತನಾಡಿದರು.<br /> <br /> ಸರ್ಕಾರಿ ಶಾಲೆಗಳು, ಅನುದಾನಿತ, ಅನುದಾನರಹಿತ ಶಾಲೆಗಳು ಹಾಗೂ ವಸತಿ ಶಾಲೆಗಳಲ್ಲಿ ಪ್ರತಿವರ್ಷ ಮಕ್ಕಳ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯ ಸಮಸ್ಯೆ ಕಂಡುಬಂದಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದರು.<br /> <br /> ಆದರೆ, ಕೆಲವು ಖಾಸಗಿ ಅನುದಾನ ರಹಿತ ಶಾಲೆಗಳು ಯೋಜನೆಯ ನಿಯಮದಂತೆ ಕ್ರಮ ಜರುಗಿಸುತ್ತಿಲ್ಲ. ಯಾವುದೋ ತಿಂಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ನಡೆಸುತ್ತಿರುವ ಮಾಹಿತಿ ಇರುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದ ಅವರು, ಅಂತಹ ಶಾಲೆಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.<br /> <br /> ಪ್ರಸಕ್ತ ಸಾಲಿನಲ್ಲಿ ಆ. 1ರಿಂದ 31ರವರೆಗೆ ಒಂದು ತಿಂಗಳ ಕಾಲ ವಿವಿಧ ಶಾಲೆಗಳಲ್ಲಿ ತಜ್ಞವೈದ್ಯರು ಮಕ್ಕಳ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ಶಾಲೆಗಳು, ಶಿಕ್ಷಕರು, ಆರೋಗ್ಯ ಇಲಾಖೆ ಅಧಿಕಾರಿಗಳು ವೈದ್ಯರು ಭಾಗವಹಿಸಿ ಯೋಜನೆಯನ್ನು ಸಮರ್ಪಕ ಆಗಿ ಅನುಷ್ಠಾನಗೊಳಿಸಬೇಕು ಎಂದರು.<br /> <br /> ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಾಗೂ ವಸತಿಶಾಲೆಗಳು ಸೇರಿದಂತೆ ಒಂದರಿಂದ 10ನೇ ತರಗತಿಯವರೆಗೆ ಒಟ್ಟು 2,72,113 ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡುವ ಗುರಿ ಹೊಂದಲಾಗಿದೆ. <br /> <br /> ತಪಾಸಣೆ ವೇಳೆ ಆರೋಗ್ಯ ಸಂಬಂಧಿ ಸಮಸ್ಯೆಗಳು ಕಂಡು ಬಂದರೆ ಸೂಕ್ತ ಚಿಕಿತ್ಸೆಯನ್ನು ತಜ್ಞವೈದ್ಯರು ನೀಡಲಿದ್ದಾರೆ. ಒಂದೊಮ್ಮೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ ಅಂತಹ ಮಕ್ಕಳನ್ನು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದರು.<br /> <br /> <strong>ಶುಚಿತ್ವಕ್ಕೆ ಆದ್ಯತೆ:</strong> ಈ ಅಭಿಯಾನ ಕೇವಲ ಆರೋಗ್ಯ ತಪಾಸಣೆಯಾಗಿರದೆ ಶಾಲಾ ಆವರಣಲ್ಲಿನ ಶುಚಿತ್ವ ಹಾಗೂ ಗ್ರಾಮದ ಪರಿಸರ ಸಂಬಂಧಿಸಿದಂತೆಯೂ ಜಾಗೃತಿ ಮೂಡಿಸುವುದಾಗಿದೆ. ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಈ ಬಗ್ಗೆ ಹೆಚ್ಚಿನ ಜಾಗೃತಿ ಅಗತ್ಯವಿದೆ ಎಂದರು. <br /> <strong><br /> ಪ್ರತಿದಿನ ವರದಿ: </strong>ಆಗಸ್ಟ್ ಒಂದರಿಂದ ಒಂದು ತಿಂಗಳು ನಡೆಯುವ ಈ ಅಭಿಯಾನದ ಬಗ್ಗೆ ಪ್ರತಿ ಶಾಲೆಗಳು ತಮಗೆ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅವರಿಗೆ ಪ್ರತಿದಿನದ ವರದಿ ಸಲ್ಲಿಸಬೇಕು, ಆರೋಗ್ಯ ತಪಾಸಣೆ ವರದಿ ಕೊಡದವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ತಾಕೀತು ಮಾಡಿದರು.<br /> <br /> ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸಂಜಯ್ ಬಿಜ್ಜೂರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್.ಎಸ್. ಕುಮಾರ್ ಉಪಸ್ಥಿತರಿದ್ದರು. ಜಿಲ್ಲೆಯ ಎಲ್ಲ ತಾಲ್ಲೂಕು ಆರೋಗ್ಯಾಧಿಕಾರಿ,ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>