<p>ಧಾರವಾಡ: `ದೇಶದ ಬದಲಾವಣೆ ಯಲ್ಲಿ ಪ್ರಮುಖ ಪಾತ್ರ ವಹಿಸುವ ಶಿಕ್ಷಕರು, ಮಕ್ಕಳಿಗೆ ಯೋಗ ಕಲಿಸುವ ಮೂಲಕ ಸದೃಢ ಸಮಾಜ ನಿರ್ಮಿಸ ಬೇಕು~ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಅಡಿವೆಪ್ಪ ಮನಮಿ ಹೇಳಿದರು.<br /> <br /> ಇಲ್ಲಿಯ ಗಾಂಧಿನಗರದ ರುಡಸೆಟ್ ಸಂಸ್ಥೆಯಲ್ಲಿ ಆಯುಷ್ ನಿರ್ದೇಶ ನಾಲಯ ಹಾಗೂ ಜಿಲ್ಲಾ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಆರೋಗ್ಯ ಪ್ರಶಿಕ್ಷಣ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. `ಪರಿಸರ ಬದಲಾವಣೆ ಹಾಗೂ ಆಹಾರ ಪದ್ಧತಿ ಬದಲಾವಣೆಯಿಂದ ಇಂದು ಅನೇಕ ಹೊಸ ತರಹದ ರೋಗ ಗಳು ಉದ್ಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಇಂಗ್ಲಿಷ್ಔಷಧಿಯಿಂದ ಬೇಸತ್ತ ಜನತೆ, ಆಯುರ್ವೇದದತ್ತ ಮುಖ ಮಾಡು ತ್ತಿದ್ದಾರೆ. ಇದರಿಂದ ಆಯುರ್ವೇದ ಮತ್ತೆ ಮರುಜೀವ ಪಡೆದುಕೊಂಡಿದೆ~ ಎಂದರು.<br /> <br /> ವಿಧಾನಪರಿಷತ್ ಸದಸ್ಯ ಮೋಹನ ಲಿಂಬಿಕಾಯಿ, ಶಿಕ್ಷಕರು ಯೋಗ ಕಲಿಯುವ ಮೂಲಕ ತಮ್ಮ ಶಾಲೆಯ ಮಕ್ಕಳಿಗೆ ಯೋಗ ಕಲಿಸಿ, ಅವರ ಮಾನಸಿಕ, ದೈಹಿಕ ಬೆಳವಣಿಗೆಗೆ ಶ್ರಮಿಸಬೇಕು ಎಂದರು. <br /> <br /> ಅಧ್ಯಕ್ಷತೆ ವಹಿಸಿದ್ದ ಶಾಸಕ ಚಂದ್ರಕಾಂತ ಬೆಲ್ಲದ, ಸಮತೋಲನ ಆಹಾರ ಕ್ರಮ, ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಧಾನಗಳನ್ನು ಅನುಸರಿಸುವು ದರ ಮೂಲಕ ಸದೃಢ ಆರೋಗ್ಯ ಹೊಂದಲು ಸಹಾಯವಾಗುತ್ತದೆ~ ಎಂದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಮಲ್ಲಣ್ಣ ತೋಟದ, ಡಾ.ಮಲ್ಲಿ ಕಾರ್ಜುನ ಎ.ಎಸ್., ಡಾ.ಬಿ.ಪಿ. ಪೂಜಾರಿ, ರುಡ್ಸೆಟ್ ನಿರ್ದೇಶಕ ಎಂ.ಡಿ.ವೀರಾಪುರ, ಡಾ.ಶಂಕರ ಹಿರೇಮಠ, ಜೀವನ ಪತ್ರಿಕೆಯ ಸಹ ಸಂಪಾದಕ ಗುರುಮೂರ್ತಿ ಯರಗಂಬಳಿಮಠ ಹಾಜರಿದ್ದರು.<br /> <br /> ಆರು ದಿನಗಳ ಕಾಲ ನಡೆಯುವ ಶಿಬಿರದಲ್ಲಿ ತಾಲ್ಲೂಕಿನ ಸುಮಾರು 100 ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಪಾಲ್ಗೊಂಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: `ದೇಶದ ಬದಲಾವಣೆ ಯಲ್ಲಿ ಪ್ರಮುಖ ಪಾತ್ರ ವಹಿಸುವ ಶಿಕ್ಷಕರು, ಮಕ್ಕಳಿಗೆ ಯೋಗ ಕಲಿಸುವ ಮೂಲಕ ಸದೃಢ ಸಮಾಜ ನಿರ್ಮಿಸ ಬೇಕು~ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಅಡಿವೆಪ್ಪ ಮನಮಿ ಹೇಳಿದರು.<br /> <br /> ಇಲ್ಲಿಯ ಗಾಂಧಿನಗರದ ರುಡಸೆಟ್ ಸಂಸ್ಥೆಯಲ್ಲಿ ಆಯುಷ್ ನಿರ್ದೇಶ ನಾಲಯ ಹಾಗೂ ಜಿಲ್ಲಾ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಆರೋಗ್ಯ ಪ್ರಶಿಕ್ಷಣ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. `ಪರಿಸರ ಬದಲಾವಣೆ ಹಾಗೂ ಆಹಾರ ಪದ್ಧತಿ ಬದಲಾವಣೆಯಿಂದ ಇಂದು ಅನೇಕ ಹೊಸ ತರಹದ ರೋಗ ಗಳು ಉದ್ಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಇಂಗ್ಲಿಷ್ಔಷಧಿಯಿಂದ ಬೇಸತ್ತ ಜನತೆ, ಆಯುರ್ವೇದದತ್ತ ಮುಖ ಮಾಡು ತ್ತಿದ್ದಾರೆ. ಇದರಿಂದ ಆಯುರ್ವೇದ ಮತ್ತೆ ಮರುಜೀವ ಪಡೆದುಕೊಂಡಿದೆ~ ಎಂದರು.<br /> <br /> ವಿಧಾನಪರಿಷತ್ ಸದಸ್ಯ ಮೋಹನ ಲಿಂಬಿಕಾಯಿ, ಶಿಕ್ಷಕರು ಯೋಗ ಕಲಿಯುವ ಮೂಲಕ ತಮ್ಮ ಶಾಲೆಯ ಮಕ್ಕಳಿಗೆ ಯೋಗ ಕಲಿಸಿ, ಅವರ ಮಾನಸಿಕ, ದೈಹಿಕ ಬೆಳವಣಿಗೆಗೆ ಶ್ರಮಿಸಬೇಕು ಎಂದರು. <br /> <br /> ಅಧ್ಯಕ್ಷತೆ ವಹಿಸಿದ್ದ ಶಾಸಕ ಚಂದ್ರಕಾಂತ ಬೆಲ್ಲದ, ಸಮತೋಲನ ಆಹಾರ ಕ್ರಮ, ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಧಾನಗಳನ್ನು ಅನುಸರಿಸುವು ದರ ಮೂಲಕ ಸದೃಢ ಆರೋಗ್ಯ ಹೊಂದಲು ಸಹಾಯವಾಗುತ್ತದೆ~ ಎಂದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಮಲ್ಲಣ್ಣ ತೋಟದ, ಡಾ.ಮಲ್ಲಿ ಕಾರ್ಜುನ ಎ.ಎಸ್., ಡಾ.ಬಿ.ಪಿ. ಪೂಜಾರಿ, ರುಡ್ಸೆಟ್ ನಿರ್ದೇಶಕ ಎಂ.ಡಿ.ವೀರಾಪುರ, ಡಾ.ಶಂಕರ ಹಿರೇಮಠ, ಜೀವನ ಪತ್ರಿಕೆಯ ಸಹ ಸಂಪಾದಕ ಗುರುಮೂರ್ತಿ ಯರಗಂಬಳಿಮಠ ಹಾಜರಿದ್ದರು.<br /> <br /> ಆರು ದಿನಗಳ ಕಾಲ ನಡೆಯುವ ಶಿಬಿರದಲ್ಲಿ ತಾಲ್ಲೂಕಿನ ಸುಮಾರು 100 ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಪಾಲ್ಗೊಂಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>