<p>ಗಾಜಿಯಾಬಾದ್ (ಪಿಟಿಐ): ರಾಷ್ಟ್ರಪತಿ ಸ್ಥಾನಕ್ಕೆ ಯುಪಿಎ ಅಭ್ಯರ್ಥಿ ಪ್ರಣವ್ ಮುಖರ್ಜಿ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಅಣ್ಣಾ ತಂಡದ ಸದಸ್ಯ ಅರವಿಂದ್ ಕೇಜ್ರಿವಾಲ್, ಮುಖರ್ಜಿ ವಿರುದ್ಧ ತಾವು ಮಾಡಿರುವ ಆರೋಪಗಳ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.<br /> <br /> ಪ್ರಧಾನಿ ಮನಮೋಹನ್ ಸಿಂಗ್, ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹಾಗೂ ಇತರ 13 ಮಂದಿ ಸಚಿವರ ವಿರುದ್ಧ ಅಣ್ಣಾ ತಂಡ ಮೇ 26ರಂದು ಆರೋಪ ಹೊರಿಸಿತ್ತಲ್ಲದೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿತ್ತು.<br /> ರಾಷ್ಟ್ರದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುವ ವ್ಯಕ್ತಿ ಎಲ್ಲವನ್ನೂ ಮೀರಿದವರಾಗಿರಬೇಕು ಎಂದು ಕೇಜ್ರಿವಾಲ್ ಹೇಳಿದರು.<br /> <br /> ಪ್ರಣವ್ ಪ್ರತಿಕ್ರಿಯೆ: ಕೇಜ್ರಿವಾಲ್ ಆರೋಪವನ್ನು ತಳ್ಳಿ ಹಾಕಿರುವ ಮುಖರ್ಜಿ, ಆರೋಪ ರಾಜಕೀಯ ಪ್ರೇರಿತವಾಗಿದ್ದು, ನ್ಯಾಯಸಮ್ಮತವಲ್ಲ ಎಂದ್ದ್ದಿದಾರೆ.<br /> <br /> ಮಿತಿಮೀರಿದ ವರ್ತನೆ: ರಾಷ್ಟ್ರಪತಿ ಸ್ಥಾನಕ್ಕೆ ಯುಪಿಎ ಅಭ್ಯರ್ಥಿಯಾಗಿರುವ ಪ್ರಣವ್ ಮುಖರ್ಜಿ ಅವರ ವಿರುದ್ಧದ ಆರೋಪಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕೆಂಬ ಅಣ್ಣಾ ತಂಡದ ಬೇಡಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ, ಅಣ್ಣಾ ತಂಡ ಸಂವಿಧಾನಕ್ಕೂ ಮೀರಿದ ಸಂಸ್ಥೆಯಂತೆ ವರ್ತಿಸಬಾರದು ಎಂದು ಎಚ್ಚರಿಸಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಾಜಿಯಾಬಾದ್ (ಪಿಟಿಐ): ರಾಷ್ಟ್ರಪತಿ ಸ್ಥಾನಕ್ಕೆ ಯುಪಿಎ ಅಭ್ಯರ್ಥಿ ಪ್ರಣವ್ ಮುಖರ್ಜಿ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಅಣ್ಣಾ ತಂಡದ ಸದಸ್ಯ ಅರವಿಂದ್ ಕೇಜ್ರಿವಾಲ್, ಮುಖರ್ಜಿ ವಿರುದ್ಧ ತಾವು ಮಾಡಿರುವ ಆರೋಪಗಳ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.<br /> <br /> ಪ್ರಧಾನಿ ಮನಮೋಹನ್ ಸಿಂಗ್, ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹಾಗೂ ಇತರ 13 ಮಂದಿ ಸಚಿವರ ವಿರುದ್ಧ ಅಣ್ಣಾ ತಂಡ ಮೇ 26ರಂದು ಆರೋಪ ಹೊರಿಸಿತ್ತಲ್ಲದೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿತ್ತು.<br /> ರಾಷ್ಟ್ರದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುವ ವ್ಯಕ್ತಿ ಎಲ್ಲವನ್ನೂ ಮೀರಿದವರಾಗಿರಬೇಕು ಎಂದು ಕೇಜ್ರಿವಾಲ್ ಹೇಳಿದರು.<br /> <br /> ಪ್ರಣವ್ ಪ್ರತಿಕ್ರಿಯೆ: ಕೇಜ್ರಿವಾಲ್ ಆರೋಪವನ್ನು ತಳ್ಳಿ ಹಾಕಿರುವ ಮುಖರ್ಜಿ, ಆರೋಪ ರಾಜಕೀಯ ಪ್ರೇರಿತವಾಗಿದ್ದು, ನ್ಯಾಯಸಮ್ಮತವಲ್ಲ ಎಂದ್ದ್ದಿದಾರೆ.<br /> <br /> ಮಿತಿಮೀರಿದ ವರ್ತನೆ: ರಾಷ್ಟ್ರಪತಿ ಸ್ಥಾನಕ್ಕೆ ಯುಪಿಎ ಅಭ್ಯರ್ಥಿಯಾಗಿರುವ ಪ್ರಣವ್ ಮುಖರ್ಜಿ ಅವರ ವಿರುದ್ಧದ ಆರೋಪಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕೆಂಬ ಅಣ್ಣಾ ತಂಡದ ಬೇಡಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ, ಅಣ್ಣಾ ತಂಡ ಸಂವಿಧಾನಕ್ಕೂ ಮೀರಿದ ಸಂಸ್ಥೆಯಂತೆ ವರ್ತಿಸಬಾರದು ಎಂದು ಎಚ್ಚರಿಸಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>