<p><strong>ಬೆಂಗಳೂರು: </strong>ಲೋಕಾಯುಕ್ತ ಕಚೇರಿಯಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರದಲ್ಲಿ ತಮ್ಮ ಮಗನ ಪಾತ್ರವನ್ನು ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ ರಾವ್ ಅಲ್ಲಗಳೆದಿದ್ದಾರೆ.<br /> <br /> ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದು ವ್ಯವಸ್ಥಿತ ಷಡ್ಯಂತ್ರ. ನನ್ನ ಮಗನ ಸಂಖ್ಯೆಯಿಂದ ಕರೆ ಹೋಗಿದೆ ಎಂದಿರುವ ದಿನ ಆತ ಹೈದರಾಬಾದ್ನಲ್ಲಿದ್ದ. ಈ ಪ್ರಕರಣದಲ್ಲಿ ನನ್ನ ಮಗನ ಪಾತ್ರವಿಲ್ಲ. ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂಬ ಉದ್ದೇಶದಿಂದಲೇ ವಿಶೇಷ ತನಿಖಾ ತಂಡ ರಚಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದೆ’ ಎಂದರು.<br /> <br /> ‘ನನ್ನ ಮೇಲಿನ ಆರೋಪ ನಿರಾಧಾರ. ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ. ವರದಿ ಬಂದ ನಂತರ ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ’ ಎಂದು ಹೇಳಿದರು.<br /> <br /> * ಆರೋಪ ಎದುರಿಸುತ್ತಿರುವ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ರಾವ್ ರಾಜೀನಾಮೆ ನೀಡುವುದು ಸೂಕ್ತ.<br /> <strong>-ಎಚ್.ಡಿ.ದೇವೇಗೌಡ</strong><br /> <strong>ಜೆಡಿಎಸ್ ರಾಷ್ಟ್ರೀಯ ಅಧ್ಯಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಲೋಕಾಯುಕ್ತ ಕಚೇರಿಯಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರದಲ್ಲಿ ತಮ್ಮ ಮಗನ ಪಾತ್ರವನ್ನು ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ ರಾವ್ ಅಲ್ಲಗಳೆದಿದ್ದಾರೆ.<br /> <br /> ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದು ವ್ಯವಸ್ಥಿತ ಷಡ್ಯಂತ್ರ. ನನ್ನ ಮಗನ ಸಂಖ್ಯೆಯಿಂದ ಕರೆ ಹೋಗಿದೆ ಎಂದಿರುವ ದಿನ ಆತ ಹೈದರಾಬಾದ್ನಲ್ಲಿದ್ದ. ಈ ಪ್ರಕರಣದಲ್ಲಿ ನನ್ನ ಮಗನ ಪಾತ್ರವಿಲ್ಲ. ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂಬ ಉದ್ದೇಶದಿಂದಲೇ ವಿಶೇಷ ತನಿಖಾ ತಂಡ ರಚಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದೆ’ ಎಂದರು.<br /> <br /> ‘ನನ್ನ ಮೇಲಿನ ಆರೋಪ ನಿರಾಧಾರ. ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ. ವರದಿ ಬಂದ ನಂತರ ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ’ ಎಂದು ಹೇಳಿದರು.<br /> <br /> * ಆರೋಪ ಎದುರಿಸುತ್ತಿರುವ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ರಾವ್ ರಾಜೀನಾಮೆ ನೀಡುವುದು ಸೂಕ್ತ.<br /> <strong>-ಎಚ್.ಡಿ.ದೇವೇಗೌಡ</strong><br /> <strong>ಜೆಡಿಎಸ್ ರಾಷ್ಟ್ರೀಯ ಅಧ್ಯಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>