<p><strong>ಚನ್ನರಾಯಪಟ್ಟಣ: </strong>ಜಾಗತೀಕರಣದ ನಂತರ ಅರ್ಥ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಹೊಸ ಆವಿಷ್ಕಾರಗಳು ನಡೆದಿವೆ ಎಂದು ಕರ್ನಾಟಕ ಲೋಕಾ ಸೇವಾ ಆಯೋಗದ ಸದಸ್ಯ ಡಾ.ಎಂ. ಮಹದೇವ್ ತಿಳಿಸಿದರು.<br /> <br /> ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ `ಆರ್ಥಿಕ ಚಿಂತಕರ ವೇದಿಕೆ~ಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಆರ್ಥಿಕ ಚಿಂತಕರ ವೇದಿಕೆಗಳು ತಾಲ್ಲೂಕು ಮಟ್ಟದಲ್ಲಿ ಉತ್ತಮ ಸಂಘಟನೆಯಾಗಿ ವಿಚಾರ ಸಂಕಿರಣ, ಕಾರ್ಯಾಗಾರ ಏರ್ಪಡಿಸಿದರೆ ಅರ್ಥಿಕ ಚಿಂತಕರು ಹೆಚ್ಚಾಗುತ್ತಾರೆ. ಇದರಿಂದ ಸಮಾಜಕ್ಕೆ ಅನುಕೂಲವಾಗುತ್ತದೆ ಎಂದರು.<br /> <br /> ಮೈಸೂರು ವಿಶ್ವ ವಿದ್ಯಾನಿಲಯದ ಅರ್ಥಶಾಸ್ತ್ರ, ಸಹಕಾರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ ಎಸ್. ಮಹೇಂದ್ರಕುಮಾರ್. ಕಾಲೇಜು ಪ್ರಾಚಾರ್ಯ ಪ್ರೊ.ಎಂ.ಕೆ. ಉಮಾನಾಥ್, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ನೇ.ತಿ. ಸೋಮಶೇಖರ್, ಅರ್ಥಶಾಸ್ತ್ರ ಚಿಂತಕರ ವೇದಿಕೆ ಅಧ್ಯಕ್ಷ ಎಂ.ಎನ್. ಲೋಕೇಶ್, ಡಾ. ಲಿಂಗರಾಜು ಉಪಸ್ಥಿತರಿದ್ದರು.<br /> <br /> ಇದೇ ಸಂದರ್ಭದಲ್ಲಿ `ಅರ್ಥ ಚಿಲುಮೆ ಪತ್ರಿಕೆ~ ಹಾಗೂ `ಅರ್ಥಸ್ಫೂರ್ತಿ ಗೋಡೆ~ ಪತ್ರಿಕೆ ಬಿಡುಗಡೆ ಮಾಡಲಾಯಿತು. ಅರ್ಥಶಾಸ್ತ್ರದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಕೆ.ಎಂ. ಕುಸುಮ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿ ಕೆ.ಯು. ದಿವ್ಯ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ: </strong>ಜಾಗತೀಕರಣದ ನಂತರ ಅರ್ಥ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಹೊಸ ಆವಿಷ್ಕಾರಗಳು ನಡೆದಿವೆ ಎಂದು ಕರ್ನಾಟಕ ಲೋಕಾ ಸೇವಾ ಆಯೋಗದ ಸದಸ್ಯ ಡಾ.ಎಂ. ಮಹದೇವ್ ತಿಳಿಸಿದರು.<br /> <br /> ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ `ಆರ್ಥಿಕ ಚಿಂತಕರ ವೇದಿಕೆ~ಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಆರ್ಥಿಕ ಚಿಂತಕರ ವೇದಿಕೆಗಳು ತಾಲ್ಲೂಕು ಮಟ್ಟದಲ್ಲಿ ಉತ್ತಮ ಸಂಘಟನೆಯಾಗಿ ವಿಚಾರ ಸಂಕಿರಣ, ಕಾರ್ಯಾಗಾರ ಏರ್ಪಡಿಸಿದರೆ ಅರ್ಥಿಕ ಚಿಂತಕರು ಹೆಚ್ಚಾಗುತ್ತಾರೆ. ಇದರಿಂದ ಸಮಾಜಕ್ಕೆ ಅನುಕೂಲವಾಗುತ್ತದೆ ಎಂದರು.<br /> <br /> ಮೈಸೂರು ವಿಶ್ವ ವಿದ್ಯಾನಿಲಯದ ಅರ್ಥಶಾಸ್ತ್ರ, ಸಹಕಾರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ ಎಸ್. ಮಹೇಂದ್ರಕುಮಾರ್. ಕಾಲೇಜು ಪ್ರಾಚಾರ್ಯ ಪ್ರೊ.ಎಂ.ಕೆ. ಉಮಾನಾಥ್, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ನೇ.ತಿ. ಸೋಮಶೇಖರ್, ಅರ್ಥಶಾಸ್ತ್ರ ಚಿಂತಕರ ವೇದಿಕೆ ಅಧ್ಯಕ್ಷ ಎಂ.ಎನ್. ಲೋಕೇಶ್, ಡಾ. ಲಿಂಗರಾಜು ಉಪಸ್ಥಿತರಿದ್ದರು.<br /> <br /> ಇದೇ ಸಂದರ್ಭದಲ್ಲಿ `ಅರ್ಥ ಚಿಲುಮೆ ಪತ್ರಿಕೆ~ ಹಾಗೂ `ಅರ್ಥಸ್ಫೂರ್ತಿ ಗೋಡೆ~ ಪತ್ರಿಕೆ ಬಿಡುಗಡೆ ಮಾಡಲಾಯಿತು. ಅರ್ಥಶಾಸ್ತ್ರದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಕೆ.ಎಂ. ಕುಸುಮ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿ ಕೆ.ಯು. ದಿವ್ಯ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>