<p><strong>ಶಿವಮೊಗ್ಗ:</strong> ಗೃಹ ನಿರ್ಮಾಣ ಸಹಕಾರ ಸಂಘಗಳು ಆರ್ಥಿಕ ಶಿಸ್ತು ಬೆಳೆಸಿಕೊಂಡಾಗ ಮಾತ್ರ ಸದಸ್ಯರಿಗೆ ಉತ್ತಮ ಸೇವೆ ನೀಡಲು ಸಾಧ್ಯ ಎಂದು ಅಪೆಕ್ಸ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಸಲಹೆ ಮಾಡಿದರು.</p>.<p>ನಗರದ ಜಿಲ್ಲಾ ಸ್ಕೌಟ್ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಗೃಹ ನಿರ್ಮಾಣ ಸಹಕಾರ ಸಂಘ ಮತ್ತು ಪ್ರಥಮ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಬಹಳಷ್ಟು ಗೃಹ ನಿರ್ಮಾಣ ಸಹಕಾರ ಸಂಘಗಳು ಇಂದು ಭ್ರಷ್ಟಚಾರದಲ್ಲಿ ಮುಳುಗಿವೆ. ಸಮಾಜದಲ್ಲಿ ಜವಾಬ್ದಾರಿ ಸ್ಥಾನ ಹೊಂದಿರುವ ಶಿಕ್ಷಕರು, ಸಂಘದಲ್ಲಿ ಆರ್ಥಿಕ ಶಿಸ್ತು ರೂಢಿಸಿಕೊಂಡು ಸದಸ್ಯರಿಗೆ ಉತ್ತಮ ಸೇವೆ ಕಲ್ಪಿಸಬೇಕು ಎಂದರು.</p>.<p>ಗೃಹ ನಿರ್ಮಾಣ ಸಹಕಾರ ಸಂಘ ಕೇವಲ ನಿವೇಶನ ನೀಡುವುದಕ್ಕಷ್ಟೇ ಸೀಮಿತಗೊಳ್ಳಬಾರದು; ಸದಸ್ಯರಿಗೆ ಮನೆಗಳನ್ನು ಕಟ್ಟಿಕೊಡುವುದಕ್ಕೆ ಮುಂದಾಗಬೇಕು. ಸಾಧ್ಯವಾದರೆ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆಯನ್ನೂ ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ 9 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರಿದ್ದಾರೆ; ಸಂಘದ ಸದಸ್ಯರಾದವರು ಕೇವಲ 550 ಮಾತ್ರ. ಈ ಸಂಖ್ಯೆಯನ್ನು ಇನ್ನಷ್ಟು ಹೆಚ್ಚುಗೊಳಿಸಿ, ಸರ್ಕಾರದ ಸಹಾಯವನ್ನು ಪಡೆದುಕೊಳ್ಳಬಹುದು ಎಂದು ಸಲಹೆ ಮಾಡಿದರು.</p>.<p>ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಶುಭಾ ಕೃಷ್ಣಮೂರ್ತಿ, ಡಿಸಿಸಿ ಬ್ಯಾಂಕ್ ನಿರ್ದೇಶಕಿ ಸರಸ್ವತಿ ನಾಗರಾಜ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಟಿ. ರವಿ, ಪ್ರವರ್ತಕರಾದ ತಿಮ್ಮಪ್ಪ, ಎನ್.ಎಸ್. ಸತ್ಯನಾರಾಯಣ, ಕೆ.ಎಸ್. ನಟರಾಜ್, ಹಾಲೇಶಪ್ಪ ಮತ್ತಿತರರು ಉಪಸ್ಥಿತರಿದ್ದರು. <br /> ಸಂಘದ ಮುಖ್ಯ ಪ್ರವರ್ತಕ ಮಹಾಬಲೇಶ್ವರ ಹೆಗಡೆ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಗೃಹ ನಿರ್ಮಾಣ ಸಹಕಾರ ಸಂಘಗಳು ಆರ್ಥಿಕ ಶಿಸ್ತು ಬೆಳೆಸಿಕೊಂಡಾಗ ಮಾತ್ರ ಸದಸ್ಯರಿಗೆ ಉತ್ತಮ ಸೇವೆ ನೀಡಲು ಸಾಧ್ಯ ಎಂದು ಅಪೆಕ್ಸ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಸಲಹೆ ಮಾಡಿದರು.</p>.<p>ನಗರದ ಜಿಲ್ಲಾ ಸ್ಕೌಟ್ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಗೃಹ ನಿರ್ಮಾಣ ಸಹಕಾರ ಸಂಘ ಮತ್ತು ಪ್ರಥಮ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಬಹಳಷ್ಟು ಗೃಹ ನಿರ್ಮಾಣ ಸಹಕಾರ ಸಂಘಗಳು ಇಂದು ಭ್ರಷ್ಟಚಾರದಲ್ಲಿ ಮುಳುಗಿವೆ. ಸಮಾಜದಲ್ಲಿ ಜವಾಬ್ದಾರಿ ಸ್ಥಾನ ಹೊಂದಿರುವ ಶಿಕ್ಷಕರು, ಸಂಘದಲ್ಲಿ ಆರ್ಥಿಕ ಶಿಸ್ತು ರೂಢಿಸಿಕೊಂಡು ಸದಸ್ಯರಿಗೆ ಉತ್ತಮ ಸೇವೆ ಕಲ್ಪಿಸಬೇಕು ಎಂದರು.</p>.<p>ಗೃಹ ನಿರ್ಮಾಣ ಸಹಕಾರ ಸಂಘ ಕೇವಲ ನಿವೇಶನ ನೀಡುವುದಕ್ಕಷ್ಟೇ ಸೀಮಿತಗೊಳ್ಳಬಾರದು; ಸದಸ್ಯರಿಗೆ ಮನೆಗಳನ್ನು ಕಟ್ಟಿಕೊಡುವುದಕ್ಕೆ ಮುಂದಾಗಬೇಕು. ಸಾಧ್ಯವಾದರೆ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆಯನ್ನೂ ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ 9 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರಿದ್ದಾರೆ; ಸಂಘದ ಸದಸ್ಯರಾದವರು ಕೇವಲ 550 ಮಾತ್ರ. ಈ ಸಂಖ್ಯೆಯನ್ನು ಇನ್ನಷ್ಟು ಹೆಚ್ಚುಗೊಳಿಸಿ, ಸರ್ಕಾರದ ಸಹಾಯವನ್ನು ಪಡೆದುಕೊಳ್ಳಬಹುದು ಎಂದು ಸಲಹೆ ಮಾಡಿದರು.</p>.<p>ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಶುಭಾ ಕೃಷ್ಣಮೂರ್ತಿ, ಡಿಸಿಸಿ ಬ್ಯಾಂಕ್ ನಿರ್ದೇಶಕಿ ಸರಸ್ವತಿ ನಾಗರಾಜ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಟಿ. ರವಿ, ಪ್ರವರ್ತಕರಾದ ತಿಮ್ಮಪ್ಪ, ಎನ್.ಎಸ್. ಸತ್ಯನಾರಾಯಣ, ಕೆ.ಎಸ್. ನಟರಾಜ್, ಹಾಲೇಶಪ್ಪ ಮತ್ತಿತರರು ಉಪಸ್ಥಿತರಿದ್ದರು. <br /> ಸಂಘದ ಮುಖ್ಯ ಪ್ರವರ್ತಕ ಮಹಾಬಲೇಶ್ವರ ಹೆಗಡೆ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>