<p>ಬೆಂಗಳೂರು: ‘ದೇಶದ ಆರ್ಥಿಕ ಕ್ಷೇತ್ರಕ್ಕೆ ಆರ್ಯವೈಶ್ಯ ಸಮಾಜದ ಕೊಡುಗೆ ಅಪಾರವಾದುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.ಭಾನುವಾರ ನಗರದಲ್ಲಿ ನಡೆದ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. <br /> <br /> ‘ವಿವಿಧತೆಯಲ್ಲಿ ಏಕತೆ ಸಾರಿದ ಆರ್ಯವೈಶ್ಯ ಸಮುದಾಯ ಚಂದ್ರಗುಪ್ತ ಮೌರ್ಯ, ದಾಸ ಶ್ರೇಷ್ಠರು ಮುಂತಾದವರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ.ಆರ್ಥಿಕವಾಗಿ ಸ್ವಾವಲಂಬಿಗಳಾಗುವ ಮೂಲಕ ಸಮಾಜದಲ್ಲಿ ವಿಶಿಷ್ಟವಾಗಿ ಗುರುತಿಕೊಂಡಿದ್ದಾರೆ’ ಎಂದರು.<br /> <br /> ಸಂಸದ ಅನಂತಕುಮಾರ್ ಮಾತನಾಡಿ ‘ವಾಣಿಜ್ಯ ಹಾಗೂ ಉದ್ಯಮ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಆರ್ಯವೈಶ್ಯ ಸಮಾಜ ರಾಜಕೀಯವಾಗಿ ಮುಂದೆ ಬರಬೇಕಿದೆ. ಸಮುದಾಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ರಾಜಕೀಯ ಪ್ರಾತಿನಿಧ್ಯ ಅಗತ್ಯವಿದೆ’ ಎಂದು ಕರೆ ನೀಡಿದರು.<br /> <br /> ಆಂಧ್ರಪ್ರದೇಶ ಸಣ್ಣ ನೀರಾವರಿ ಸಚಿವ ಟಿ.ಜಿ. ವೆಂಕಟೇಶ್ ಮಾತನಾಡಿ ‘ಹಿಂದುಳಿದ ವರ್ಗಗಳೊಂದಿಗೆ ಗುರುತಿಸಿಕೊಂಡಿರುವ ಆರ್ಯವೈಶ್ಯರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸುವ ಅಗತ್ಯವಿದೆ. ಇದರಿಂದಾಗಿ ಸಮುದಾಯದ ಬಡಜನರಿಗೆ ಸಾಕಷ್ಟು ಅನುಕೂಲವಾಗಲಿದೆ’ ಎಂದರು.<br /> <br /> ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಶಾಸಕ ಶಿವಣ್ಣ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಬಿ.ಜಿ.ನಂದಕುಮಾರ್, ಮಹಾಸಭಾ ಅಧ್ಯಕ್ಷ ಆರ್.ಪಿ.ರವಿಶಂಕರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. <br /> <br /> ದೇವೇಗೌಡರ ಪ್ರಶಂಸೆ:‘ಧಾರ್ಮಿಕ ನೆಲೆಗಟ್ಟಿನ ಮೇಲೆ ನಿಂತಿರುವ ಭಾರತವನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ. ಇಲ್ಲಿ ಜನಿಸಿದ ಧಾರ್ಮಿಕ ನಾಯಕರು ತಮ್ಮದೇ ಆದ ರೀತಿಯಲ್ಲಿ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.<br /> <br /> ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಆರ್ಯವೈಶ್ಯ ಮಹಾಸಭಾದ ಶತಮಾನೋತ್ಸವ ಸಮಾರಂಭದಲ್ಲಿ ಭಾನುವಾರ ನಡೆದ ರಾಜಕೀಯ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ಸಮಾಜಕ್ಕೆ ಆರ್ಯವೈಶ್ಯ ಜನಾಂಗ ನೀಡಿರುವ ಕೊಡುಗೆ ಕೂಡ ಗಮನಾರ್ಹವಾದುದು. ರಾಜಕೀಯ ಕ್ಷೇತ್ರದಲ್ಲಿ ಆರ್ಯವೈಶ್ಯ ಜನಾಂಗದವರು ತುಂಬಾ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಕೆಲವೇ ಸಂಖ್ಯೆಯಲ್ಲಿದ್ದರೂ ಈ ನಾಯಕರು ಪ್ರಾಮಾಣಿಕರಾಗಿದ್ದಾರೆ. ಡಿ.ಎಚ್. ಶಂಕರಮೂರ್ತಿ ಇಂತಹವರಲ್ಲಿ ಒಬ್ಬರು. ಇಂತಹ ಸಜ್ಜನಿಕೆ ನಾಯಕರನ್ನು ಗುರುತಿಸುವಂತಾಗಲಿ’ ಎಂದು ಅವರು ಹೇಳಿದರು.ಪಿ.ಜಿ.ಆರ್ ಸಿಂಧ್ಯ ಅವರು ಮುಖ್ಯ ಅತಿಥಿಯಾಗಿದ್ದರು. ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರ ಸ್ವತಿ, ವಿಧಾನಪರಿಷತ್ತಿನ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ದೇಶದ ಆರ್ಥಿಕ ಕ್ಷೇತ್ರಕ್ಕೆ ಆರ್ಯವೈಶ್ಯ ಸಮಾಜದ ಕೊಡುಗೆ ಅಪಾರವಾದುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.ಭಾನುವಾರ ನಗರದಲ್ಲಿ ನಡೆದ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. <br /> <br /> ‘ವಿವಿಧತೆಯಲ್ಲಿ ಏಕತೆ ಸಾರಿದ ಆರ್ಯವೈಶ್ಯ ಸಮುದಾಯ ಚಂದ್ರಗುಪ್ತ ಮೌರ್ಯ, ದಾಸ ಶ್ರೇಷ್ಠರು ಮುಂತಾದವರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ.ಆರ್ಥಿಕವಾಗಿ ಸ್ವಾವಲಂಬಿಗಳಾಗುವ ಮೂಲಕ ಸಮಾಜದಲ್ಲಿ ವಿಶಿಷ್ಟವಾಗಿ ಗುರುತಿಕೊಂಡಿದ್ದಾರೆ’ ಎಂದರು.<br /> <br /> ಸಂಸದ ಅನಂತಕುಮಾರ್ ಮಾತನಾಡಿ ‘ವಾಣಿಜ್ಯ ಹಾಗೂ ಉದ್ಯಮ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಆರ್ಯವೈಶ್ಯ ಸಮಾಜ ರಾಜಕೀಯವಾಗಿ ಮುಂದೆ ಬರಬೇಕಿದೆ. ಸಮುದಾಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ರಾಜಕೀಯ ಪ್ರಾತಿನಿಧ್ಯ ಅಗತ್ಯವಿದೆ’ ಎಂದು ಕರೆ ನೀಡಿದರು.<br /> <br /> ಆಂಧ್ರಪ್ರದೇಶ ಸಣ್ಣ ನೀರಾವರಿ ಸಚಿವ ಟಿ.ಜಿ. ವೆಂಕಟೇಶ್ ಮಾತನಾಡಿ ‘ಹಿಂದುಳಿದ ವರ್ಗಗಳೊಂದಿಗೆ ಗುರುತಿಸಿಕೊಂಡಿರುವ ಆರ್ಯವೈಶ್ಯರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸುವ ಅಗತ್ಯವಿದೆ. ಇದರಿಂದಾಗಿ ಸಮುದಾಯದ ಬಡಜನರಿಗೆ ಸಾಕಷ್ಟು ಅನುಕೂಲವಾಗಲಿದೆ’ ಎಂದರು.<br /> <br /> ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಶಾಸಕ ಶಿವಣ್ಣ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಬಿ.ಜಿ.ನಂದಕುಮಾರ್, ಮಹಾಸಭಾ ಅಧ್ಯಕ್ಷ ಆರ್.ಪಿ.ರವಿಶಂಕರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. <br /> <br /> ದೇವೇಗೌಡರ ಪ್ರಶಂಸೆ:‘ಧಾರ್ಮಿಕ ನೆಲೆಗಟ್ಟಿನ ಮೇಲೆ ನಿಂತಿರುವ ಭಾರತವನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ. ಇಲ್ಲಿ ಜನಿಸಿದ ಧಾರ್ಮಿಕ ನಾಯಕರು ತಮ್ಮದೇ ಆದ ರೀತಿಯಲ್ಲಿ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.<br /> <br /> ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಆರ್ಯವೈಶ್ಯ ಮಹಾಸಭಾದ ಶತಮಾನೋತ್ಸವ ಸಮಾರಂಭದಲ್ಲಿ ಭಾನುವಾರ ನಡೆದ ರಾಜಕೀಯ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ಸಮಾಜಕ್ಕೆ ಆರ್ಯವೈಶ್ಯ ಜನಾಂಗ ನೀಡಿರುವ ಕೊಡುಗೆ ಕೂಡ ಗಮನಾರ್ಹವಾದುದು. ರಾಜಕೀಯ ಕ್ಷೇತ್ರದಲ್ಲಿ ಆರ್ಯವೈಶ್ಯ ಜನಾಂಗದವರು ತುಂಬಾ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಕೆಲವೇ ಸಂಖ್ಯೆಯಲ್ಲಿದ್ದರೂ ಈ ನಾಯಕರು ಪ್ರಾಮಾಣಿಕರಾಗಿದ್ದಾರೆ. ಡಿ.ಎಚ್. ಶಂಕರಮೂರ್ತಿ ಇಂತಹವರಲ್ಲಿ ಒಬ್ಬರು. ಇಂತಹ ಸಜ್ಜನಿಕೆ ನಾಯಕರನ್ನು ಗುರುತಿಸುವಂತಾಗಲಿ’ ಎಂದು ಅವರು ಹೇಳಿದರು.ಪಿ.ಜಿ.ಆರ್ ಸಿಂಧ್ಯ ಅವರು ಮುಖ್ಯ ಅತಿಥಿಯಾಗಿದ್ದರು. ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರ ಸ್ವತಿ, ವಿಧಾನಪರಿಷತ್ತಿನ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>