<p><strong>ಬೆಂಗಳೂರು</strong>: ಬಳ್ಳಾರಿಯ ದೋಣಿಮಲೆ ಅರಣ್ಯ ಪ್ರದೇಶದಲ್ಲಿ ಅದಿರು ಗಣಿಗಾರಿಕೆಗೆ ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಆರ್ಸೆಲರ್-ಮಿತ್ತಲ್ ಉಕ್ಕು ಕಂಪೆನಿ ಹಿಂದಕ್ಕೆ ಪಡೆದುಕೊಂಡಿದೆ. ರಾಜ್ಯ ಸರ್ಕಾರ ಎರಡನೆಯ ವಿಶ್ವ ಬಂಡವಾಳ ಹೂಡಿಕೆದಾರರ ಸಮ್ಮೇಳನಕ್ಕೆ ಸಿದ್ಧತೆ ನಡೆಸಿರುವ ಸಂದರ್ಭದಲ್ಲೇ ಈ ವಿದ್ಯಮಾನ ನಡೆದಿದೆ.<br /> <br /> `ದೋಣಿಮಲೆ ಅರಣ್ಯ ಪ್ರದೇಶದಲ್ಲಿ ಅದಿರಿನ ನಿಕ್ಷೇಪ ದೊಡ್ಡ ಪ್ರಮಾಣದಲ್ಲಿ ಇಲ್ಲ. ಇರುವ ಅದಿರಿನ ಗುಣಮಟ್ಟವೂ ಉತ್ತಮವಾಗಿಲ್ಲ. ಹಾಗಾಗಿ ಅಲ್ಲಿ ಗಣಿಗಾರಿಕೆ ನಡೆಸುವುದು ಆರ್ಥಿಕವಾಗಿ ಲಾಭದಾಯಕ ಅಲ್ಲ~ ಎಂದು ಕಂಪೆನಿ ಕಳೆದ ಜೂನ್ ತಿಂಗಳಿನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಗೆ ಬರೆದ ಪತ್ರದಲ್ಲಿ ವಿವರಿಸಿದೆ.<br /> <br /> ಅಲ್ಲಿ ದೊರೆಯುವ ಅದಿರಿನಲ್ಲಿ ಕಬ್ಬಿಣದ ಅಂಶ ಇರುವುದು ಶೇಕಡ 30ರಿಂದ 38ರಷ್ಟು ಮಾತ್ರ. ಈ ಹಿನ್ನೆಲೆಯಲ್ಲಿ ಗಣಿಗಾರಿಕೆಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂದಕ್ಕೆ ಪಡೆಯುತ್ತಿದ್ದೇವೆ ಎಂದು ಕಂಪೆನಿ ಹೇಳಿದೆ. <br /> <br /> ಇದೇ ಕಂಪೆನಿ ಬಳ್ಳಾರಿಯ ಕುಡುತಿನಿಯಲ್ಲಿ 30 ಸಾವಿರ ಕೋಟಿ ರೂಪಾಯಿ ಹೂಡಿಕೆಯ ಉಕ್ಕು ತಯಾರಿಕಾ ಘಟಕ ಆರಂಭಿಸಬೇಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಳ್ಳಾರಿಯ ದೋಣಿಮಲೆ ಅರಣ್ಯ ಪ್ರದೇಶದಲ್ಲಿ ಅದಿರು ಗಣಿಗಾರಿಕೆಗೆ ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಆರ್ಸೆಲರ್-ಮಿತ್ತಲ್ ಉಕ್ಕು ಕಂಪೆನಿ ಹಿಂದಕ್ಕೆ ಪಡೆದುಕೊಂಡಿದೆ. ರಾಜ್ಯ ಸರ್ಕಾರ ಎರಡನೆಯ ವಿಶ್ವ ಬಂಡವಾಳ ಹೂಡಿಕೆದಾರರ ಸಮ್ಮೇಳನಕ್ಕೆ ಸಿದ್ಧತೆ ನಡೆಸಿರುವ ಸಂದರ್ಭದಲ್ಲೇ ಈ ವಿದ್ಯಮಾನ ನಡೆದಿದೆ.<br /> <br /> `ದೋಣಿಮಲೆ ಅರಣ್ಯ ಪ್ರದೇಶದಲ್ಲಿ ಅದಿರಿನ ನಿಕ್ಷೇಪ ದೊಡ್ಡ ಪ್ರಮಾಣದಲ್ಲಿ ಇಲ್ಲ. ಇರುವ ಅದಿರಿನ ಗುಣಮಟ್ಟವೂ ಉತ್ತಮವಾಗಿಲ್ಲ. ಹಾಗಾಗಿ ಅಲ್ಲಿ ಗಣಿಗಾರಿಕೆ ನಡೆಸುವುದು ಆರ್ಥಿಕವಾಗಿ ಲಾಭದಾಯಕ ಅಲ್ಲ~ ಎಂದು ಕಂಪೆನಿ ಕಳೆದ ಜೂನ್ ತಿಂಗಳಿನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಗೆ ಬರೆದ ಪತ್ರದಲ್ಲಿ ವಿವರಿಸಿದೆ.<br /> <br /> ಅಲ್ಲಿ ದೊರೆಯುವ ಅದಿರಿನಲ್ಲಿ ಕಬ್ಬಿಣದ ಅಂಶ ಇರುವುದು ಶೇಕಡ 30ರಿಂದ 38ರಷ್ಟು ಮಾತ್ರ. ಈ ಹಿನ್ನೆಲೆಯಲ್ಲಿ ಗಣಿಗಾರಿಕೆಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂದಕ್ಕೆ ಪಡೆಯುತ್ತಿದ್ದೇವೆ ಎಂದು ಕಂಪೆನಿ ಹೇಳಿದೆ. <br /> <br /> ಇದೇ ಕಂಪೆನಿ ಬಳ್ಳಾರಿಯ ಕುಡುತಿನಿಯಲ್ಲಿ 30 ಸಾವಿರ ಕೋಟಿ ರೂಪಾಯಿ ಹೂಡಿಕೆಯ ಉಕ್ಕು ತಯಾರಿಕಾ ಘಟಕ ಆರಂಭಿಸಬೇಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>