<p><strong>ನೀಮಚ್ (ಮಧ್ಯಪ್ರದೇಶ) (ಪಿಟಿಐ): </strong>ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್ಎಸ್ಎಸ್) ಬಾಂಬ್ ತಯಾರಿಕೆ ತರಬೇತಿ ನೀಡುತ್ತದೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರು ಗುರುವಾರ ಆರೋಪಿಸಿದರು.<br /> <br /> ರಾಜ್ಯದ ಹಲವಾರು ಸ್ಥಳಗಳಲ್ಲಿ ಈ ಹಿಂದೆ ನಡೆದ ಘಟನೆಗಳ ಆಧಾರ ಮೇಲೆ ತಾವು ಈ ಆರೋಪ ಮಾಡಿರುವುದಾಗಿ ಸಿಂಗ್ ಅವರು ಸುದ್ದಿಗಾರರಿಗೆ ತಿಳಿಸಿದರು.<br /> <br /> 1992ರಲ್ಲಿ ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತ ಇದ್ದ ವೇಳೆ ಆರ್ಎಸ್ಎಸ್ ಕಚೇರಿ ಸೇವಾ ಭಾರತಿ ಬಳಿ ಸಂಭವಿಸಿದ ಬಾಂಬ್ ಸ್ಫೋಟವೊಂದರಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದ. ನಂತರ 1993ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈ ಪ್ರಕರಣವನ್ನು ಮರುವಿಚಾರಣೆ ನಡೆಸಿ ಘಟನೆಗೆ ಸಂಬಂಧಿಸಿದಂತೆ ಸಂಘದ ನಂಟು ಹೊಂದಿದ್ದ ಖರ್ಗಾಂವ್ನ ಓರ್ವ ಪ್ರಿನ್ಸಿಪಾಲ್ನನ್ನು ಬಂಧಿಸಲಾಯಿತು ಎಂದು ಅವರು ಹೇಳಿದರು.<br /> <br /> 2004ರಲ್ಲಿ ಮೊವ್ನಲ್ಲಿ ಜರುಗಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಆರೋಪಿಗಳು ಆರ್ಎಸ್ಎಸ್ ಬಾಂಬ್ ತಯಾರಿಕೆ ತರಬೇತಿ ನೀಡಿತ್ತು ಎಂದು ಹೇಳಿಕೆ ನೀಡಿದ್ದರು ಎಂದು ಸಿಂಗ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೀಮಚ್ (ಮಧ್ಯಪ್ರದೇಶ) (ಪಿಟಿಐ): </strong>ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್ಎಸ್ಎಸ್) ಬಾಂಬ್ ತಯಾರಿಕೆ ತರಬೇತಿ ನೀಡುತ್ತದೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರು ಗುರುವಾರ ಆರೋಪಿಸಿದರು.<br /> <br /> ರಾಜ್ಯದ ಹಲವಾರು ಸ್ಥಳಗಳಲ್ಲಿ ಈ ಹಿಂದೆ ನಡೆದ ಘಟನೆಗಳ ಆಧಾರ ಮೇಲೆ ತಾವು ಈ ಆರೋಪ ಮಾಡಿರುವುದಾಗಿ ಸಿಂಗ್ ಅವರು ಸುದ್ದಿಗಾರರಿಗೆ ತಿಳಿಸಿದರು.<br /> <br /> 1992ರಲ್ಲಿ ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತ ಇದ್ದ ವೇಳೆ ಆರ್ಎಸ್ಎಸ್ ಕಚೇರಿ ಸೇವಾ ಭಾರತಿ ಬಳಿ ಸಂಭವಿಸಿದ ಬಾಂಬ್ ಸ್ಫೋಟವೊಂದರಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದ. ನಂತರ 1993ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈ ಪ್ರಕರಣವನ್ನು ಮರುವಿಚಾರಣೆ ನಡೆಸಿ ಘಟನೆಗೆ ಸಂಬಂಧಿಸಿದಂತೆ ಸಂಘದ ನಂಟು ಹೊಂದಿದ್ದ ಖರ್ಗಾಂವ್ನ ಓರ್ವ ಪ್ರಿನ್ಸಿಪಾಲ್ನನ್ನು ಬಂಧಿಸಲಾಯಿತು ಎಂದು ಅವರು ಹೇಳಿದರು.<br /> <br /> 2004ರಲ್ಲಿ ಮೊವ್ನಲ್ಲಿ ಜರುಗಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಆರೋಪಿಗಳು ಆರ್ಎಸ್ಎಸ್ ಬಾಂಬ್ ತಯಾರಿಕೆ ತರಬೇತಿ ನೀಡಿತ್ತು ಎಂದು ಹೇಳಿಕೆ ನೀಡಿದ್ದರು ಎಂದು ಸಿಂಗ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>