<p><strong>ಚೆನ್ನೈ (ಪಿಟಿಐ): </strong>ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ಗಡ್ಕರಿ ಅವರನ್ನು ಎರಡನೇ ಅವಧಿಗೂ ಮುಂದುವರಿಸುವ ಬಗ್ಗೆ ಆ ಪಕ್ಷವೇ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್)ದ ಪ್ರಧಾನ ಕಾರ್ಯದರ್ಶಿ ಸುರೇಶ್ ಜೋಷಿ ಹೇಳಿದರು.<br /> <br /> `ಇದು ಸಂಘಕ್ಕೆ ಸಂಬಂಧಿಸಿದ ವಿಷಯವಲ್ಲ. ರಾಜಕೀಯ ಪಕ್ಷಗಳು ತಮ್ಮದೇ ಆದ ವ್ಯವಸ್ಥೆ ಹೊಂದಿವೆ. ನಾವು ಅದರಲ್ಲಿ ಯಾವುದೇ ಪಾತ್ರ ವಹಿಸುವುದಿಲ್ಲ~ ಎಂದು ನಗರದ ಹೊರವಲಯದಲ್ಲಿ ಭಾನುವಾರ ಕೊನೆಗೊಂಡ ಮೂರು ದಿನಗಳ ಆರ್ಎಸ್ಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ಸುದ್ದಿಗಾರರಿಗೆ ಜೋಷಿ ಈ ವಿಷಯ ತಿಳಿಸಿದರು.<br /> <br /> ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಗಡ್ಕರಿ ಅವರನ್ನು ಎರಡನೇ ಅವಧಿಗೆ ಮುಂದುವರಿಸಲು ಆರ್ಎಸ್ಎಸ್ ಸಮ್ಮತಿ ಸೂಚಿಸಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಯಾರ ವಿರುದ್ಧವೂ ಮೃದು ಧೋರಣೆ ತಾಳುವ ಪ್ರಶ್ನೆಯೇ ಇಲ್ಲ. ಎಲ್ಲವೂ ಕಾನೂನು ರೀತ್ಯ ನಡೆಯಬೇಕು ಎಂದು ಹೇಳಿದರು. <br /> ಗಡ್ಕರಿ ಒಡೆತನದ ಉದ್ದಿಮೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಆರೋಪ ಕೇಳಿ ಬಂದ ನಂತರದಿಂದ ಸಂಘ ಅಂತರ ಕಾಯ್ದುಕೊಂಡಿದೆ. <br /> <br /> `ಸಭೆಯಲ್ಲಿ ಗಡ್ಕರಿ ಅವರಿಗೆ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆಯಲಿಲ್ಲ. ಅವರ ವಿರುದ್ಧದ ಯಾವುದೇ ಆರೋಪ ಸಾಬೀತಾಗಿಲ್ಲ. ಆದರೆ, ತನಿಖೆ ನಡೆಸುವ ಅಗತ್ಯವಿದೆ~ ಎಂದಷ್ಟೇ ನುಡಿದರು.<br /> <br /> `ಆರ್ಎಸ್ಎಸ್ ಗರಡಿಯಲ್ಲೇ ಬೆಳೆದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಗಡ್ಕರಿ ವಿರುದ್ಧ ಸಂಘ ಆಂತರಿಕ ತನಿಖೆ ನಡೆಸಲಿದೆಯೇ~ ಎನ್ನುವ ಪ್ರಶ್ನೆಗೆ, `ಸಂಘದಲ್ಲಿ ಇಂತಹ ನಿಯಮವಿಲ್ಲ~ ಎಂದರು.<br /> <br /> `2014ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ಯಾರಾಗಲಿದ್ದಾರೆ~ ಎನ್ನುವ ಪ್ರಶ್ನೆಗೆ ನೇರವಾಗಿ ಉತ್ತರಿಸಿದ ಅವರು, `ಇದು ನಮಗೆ ಸಂಬಂಧಿಸಿದ ವಿಷಯವಲ್ಲ~ ಎಂದು ಚುಟುಕಾಗಿ ಹೇಳಿದರು.<br /> <br /> `ಒಂದುವೇಳೆ ರಾಜಕೀಯ ಪಕ್ಷಗಳು ತೀರ್ಮಾನ ಕೈಗೊಂಡರೆ, ನಾವು ಈ ನಿಟ್ಟಿನಲ್ಲಿ ಯೋಚಿಸುತ್ತೇವೆ~ ಎಂದರು.<br /> ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ಕರ್ನಾಟಕ ಪಾಲಿಸಬೇಕು. ದೇಶದ ಅತ್ಯುನ್ನತ ಸಂಸ್ಥೆ ನೀಡಿರುವ ಸೂಚನೆಯನ್ನು ಅದು ಜಾರಿಗೊಳಿಸಬೇಕು~ ಎಂದು ಪ್ರಶ್ನೆಯೊಂದಕ್ಕೆ ಈ ರೀತಿ ಹೇಳಿದರು.<br /> <br /> ಚೀನಾ ದೇಶವನ್ನು ಗಮನದಲ್ಲಿಟ್ಟುಕೊಂಡು ಸಮಗ್ರ ರಾಷ್ಟ್ರೀಯ ಭದ್ರತಾ ನೀತಿಯೊಂದನ್ನು ಕೇಂದ್ರ ಸರ್ಕಾರ ಜಾರಿಗೆ ತರುವಂತೆ ಒತ್ತಾಯಿಸಿ ಮೂರು ದಿನಗಳ ಆರ್ಎಸ್ಎಸ್ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ (ಪಿಟಿಐ): </strong>ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ಗಡ್ಕರಿ ಅವರನ್ನು ಎರಡನೇ ಅವಧಿಗೂ ಮುಂದುವರಿಸುವ ಬಗ್ಗೆ ಆ ಪಕ್ಷವೇ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್)ದ ಪ್ರಧಾನ ಕಾರ್ಯದರ್ಶಿ ಸುರೇಶ್ ಜೋಷಿ ಹೇಳಿದರು.<br /> <br /> `ಇದು ಸಂಘಕ್ಕೆ ಸಂಬಂಧಿಸಿದ ವಿಷಯವಲ್ಲ. ರಾಜಕೀಯ ಪಕ್ಷಗಳು ತಮ್ಮದೇ ಆದ ವ್ಯವಸ್ಥೆ ಹೊಂದಿವೆ. ನಾವು ಅದರಲ್ಲಿ ಯಾವುದೇ ಪಾತ್ರ ವಹಿಸುವುದಿಲ್ಲ~ ಎಂದು ನಗರದ ಹೊರವಲಯದಲ್ಲಿ ಭಾನುವಾರ ಕೊನೆಗೊಂಡ ಮೂರು ದಿನಗಳ ಆರ್ಎಸ್ಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ಸುದ್ದಿಗಾರರಿಗೆ ಜೋಷಿ ಈ ವಿಷಯ ತಿಳಿಸಿದರು.<br /> <br /> ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಗಡ್ಕರಿ ಅವರನ್ನು ಎರಡನೇ ಅವಧಿಗೆ ಮುಂದುವರಿಸಲು ಆರ್ಎಸ್ಎಸ್ ಸಮ್ಮತಿ ಸೂಚಿಸಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಯಾರ ವಿರುದ್ಧವೂ ಮೃದು ಧೋರಣೆ ತಾಳುವ ಪ್ರಶ್ನೆಯೇ ಇಲ್ಲ. ಎಲ್ಲವೂ ಕಾನೂನು ರೀತ್ಯ ನಡೆಯಬೇಕು ಎಂದು ಹೇಳಿದರು. <br /> ಗಡ್ಕರಿ ಒಡೆತನದ ಉದ್ದಿಮೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಆರೋಪ ಕೇಳಿ ಬಂದ ನಂತರದಿಂದ ಸಂಘ ಅಂತರ ಕಾಯ್ದುಕೊಂಡಿದೆ. <br /> <br /> `ಸಭೆಯಲ್ಲಿ ಗಡ್ಕರಿ ಅವರಿಗೆ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆಯಲಿಲ್ಲ. ಅವರ ವಿರುದ್ಧದ ಯಾವುದೇ ಆರೋಪ ಸಾಬೀತಾಗಿಲ್ಲ. ಆದರೆ, ತನಿಖೆ ನಡೆಸುವ ಅಗತ್ಯವಿದೆ~ ಎಂದಷ್ಟೇ ನುಡಿದರು.<br /> <br /> `ಆರ್ಎಸ್ಎಸ್ ಗರಡಿಯಲ್ಲೇ ಬೆಳೆದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಗಡ್ಕರಿ ವಿರುದ್ಧ ಸಂಘ ಆಂತರಿಕ ತನಿಖೆ ನಡೆಸಲಿದೆಯೇ~ ಎನ್ನುವ ಪ್ರಶ್ನೆಗೆ, `ಸಂಘದಲ್ಲಿ ಇಂತಹ ನಿಯಮವಿಲ್ಲ~ ಎಂದರು.<br /> <br /> `2014ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ಯಾರಾಗಲಿದ್ದಾರೆ~ ಎನ್ನುವ ಪ್ರಶ್ನೆಗೆ ನೇರವಾಗಿ ಉತ್ತರಿಸಿದ ಅವರು, `ಇದು ನಮಗೆ ಸಂಬಂಧಿಸಿದ ವಿಷಯವಲ್ಲ~ ಎಂದು ಚುಟುಕಾಗಿ ಹೇಳಿದರು.<br /> <br /> `ಒಂದುವೇಳೆ ರಾಜಕೀಯ ಪಕ್ಷಗಳು ತೀರ್ಮಾನ ಕೈಗೊಂಡರೆ, ನಾವು ಈ ನಿಟ್ಟಿನಲ್ಲಿ ಯೋಚಿಸುತ್ತೇವೆ~ ಎಂದರು.<br /> ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ಕರ್ನಾಟಕ ಪಾಲಿಸಬೇಕು. ದೇಶದ ಅತ್ಯುನ್ನತ ಸಂಸ್ಥೆ ನೀಡಿರುವ ಸೂಚನೆಯನ್ನು ಅದು ಜಾರಿಗೊಳಿಸಬೇಕು~ ಎಂದು ಪ್ರಶ್ನೆಯೊಂದಕ್ಕೆ ಈ ರೀತಿ ಹೇಳಿದರು.<br /> <br /> ಚೀನಾ ದೇಶವನ್ನು ಗಮನದಲ್ಲಿಟ್ಟುಕೊಂಡು ಸಮಗ್ರ ರಾಷ್ಟ್ರೀಯ ಭದ್ರತಾ ನೀತಿಯೊಂದನ್ನು ಕೇಂದ್ರ ಸರ್ಕಾರ ಜಾರಿಗೆ ತರುವಂತೆ ಒತ್ತಾಯಿಸಿ ಮೂರು ದಿನಗಳ ಆರ್ಎಸ್ಎಸ್ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>