<p>ಹೊಸನಗರ: ಭ್ರಷ್ಟಾಚಾರದ ಆರೋಪ ಹೊತ್ತಿರುವ ಕಂದಾಯ ಇಲಾಖೆಯ ಕಸಬಾ ಪ್ರಭಾರ ರಾಜಸ್ವ ನಿರೀಕ್ಷಕರನ್ನು(ಆರ್ಐ) ಅಮಾನತು ಮಾಡುವಂತೆ ಒತ್ತಾಯಿಸಿ ಬುಧವಾರ ತಾಲ್ಲೂಕು ಕಚೇರಿ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.<br /> <br /> ಎರಡು ವರ್ಷಗಳಿಂದ ಕಸಬಾ ಪ್ರಭಾರ ರಾಜಸ್ವ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ಎಂಬುವವರು ರೈತ ಹಾಗೂ ಕೂಲಿ ಕಾರ್ಮಿಕರಿಂದ ಹಾಡು ಹಗಲೇ ಲಂಚ ವಸೂಲಿ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದರು.<br /> <br /> ವಿದ್ಯಾರ್ಥಿಗಳ ಶುಲ್ಕ ರಿಯಾಯಿತಿ ಹಾಗೂ ಪ್ರೋತ್ಸಾಹ ಧನದ ಆದಾಯ ಪ್ರಮಾಣಪತ್ರಕ್ಕೂ ಸಹ ಹಣ ವಸೂಲಿ ಮಾಡುತ್ತಿದ್ದಾರೆ. ಸಂಧ್ಯಾ ಸುರಕ್ಷಾ, ವಿಧವಾವೇತನ, ಅಂಗವಿಕಲ, ಭಾಗ್ಯಲಕ್ಷ್ಮೀ ಯೋಜನೆಯ ಶಿಫಾರಸಿಗೆ ಸಹ ಹಣ ಕೇಳುತ್ತಾರೆ ಎಂಬುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು.<br /> <br /> ಜಮೀನು ಖಾತೆ ಬದಲಾವಣೆಯಿಂದ ಹಿಡಿದು ಪ್ರತಿಯೊಂದಕ್ಕೂ ದರ ನಿಗದಿ ಮಾಡಿರುವ ಕಸಬಾ ರಾಜಸ್ವ ನಿರೀಕ್ಷಕರು ಹಣ ನೀಡದ ಬಡವರಿಗೆ ಕಚೇರಿ ಅಲೆಯುವಂತೆ ಮಾಡುತ್ತಾರೆ ಎಂದು ದೂರಿದರು.<br /> <br /> ಕಸಬಾ ಆರ್ಐ ಅವರನ್ನು ಕೂಡಲೇ ಅಮಾನತು ಮಾಡಿ ಬೇರೆ ಕಡೆ ವರ್ಗಾಯಿಸಬೇಕು ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡುವುದಾಗಿ ತಹಶೀಲ್ದಾರ್ಗೆ ನೀಡಿದ ಮನವಿ ಪತ್ರದಲ್ಲಿ ಎಚ್ಚರಿಸಿದ್ದಾರೆ.<br /> <br /> ಜೆಸಿಬಿ ಶ್ರೀಧರ್, ಹೆಬೈಲು ರಾಜುಗೌಡ, ಎಂ.ಟಿ. ಟಾಕಪ್ಪ, ರಾಮಚಂದ್ರ, ಹೆಚ್.ವಿ. ಲೋಕೇಶ್, ಜೆ. ಆನಂದ್, ಕೆ.ಟಿ. ಯೋಗೀಶ್, ಕೃಷ್ಣಮೂರ್ತಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸನಗರ: ಭ್ರಷ್ಟಾಚಾರದ ಆರೋಪ ಹೊತ್ತಿರುವ ಕಂದಾಯ ಇಲಾಖೆಯ ಕಸಬಾ ಪ್ರಭಾರ ರಾಜಸ್ವ ನಿರೀಕ್ಷಕರನ್ನು(ಆರ್ಐ) ಅಮಾನತು ಮಾಡುವಂತೆ ಒತ್ತಾಯಿಸಿ ಬುಧವಾರ ತಾಲ್ಲೂಕು ಕಚೇರಿ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.<br /> <br /> ಎರಡು ವರ್ಷಗಳಿಂದ ಕಸಬಾ ಪ್ರಭಾರ ರಾಜಸ್ವ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ಎಂಬುವವರು ರೈತ ಹಾಗೂ ಕೂಲಿ ಕಾರ್ಮಿಕರಿಂದ ಹಾಡು ಹಗಲೇ ಲಂಚ ವಸೂಲಿ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದರು.<br /> <br /> ವಿದ್ಯಾರ್ಥಿಗಳ ಶುಲ್ಕ ರಿಯಾಯಿತಿ ಹಾಗೂ ಪ್ರೋತ್ಸಾಹ ಧನದ ಆದಾಯ ಪ್ರಮಾಣಪತ್ರಕ್ಕೂ ಸಹ ಹಣ ವಸೂಲಿ ಮಾಡುತ್ತಿದ್ದಾರೆ. ಸಂಧ್ಯಾ ಸುರಕ್ಷಾ, ವಿಧವಾವೇತನ, ಅಂಗವಿಕಲ, ಭಾಗ್ಯಲಕ್ಷ್ಮೀ ಯೋಜನೆಯ ಶಿಫಾರಸಿಗೆ ಸಹ ಹಣ ಕೇಳುತ್ತಾರೆ ಎಂಬುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು.<br /> <br /> ಜಮೀನು ಖಾತೆ ಬದಲಾವಣೆಯಿಂದ ಹಿಡಿದು ಪ್ರತಿಯೊಂದಕ್ಕೂ ದರ ನಿಗದಿ ಮಾಡಿರುವ ಕಸಬಾ ರಾಜಸ್ವ ನಿರೀಕ್ಷಕರು ಹಣ ನೀಡದ ಬಡವರಿಗೆ ಕಚೇರಿ ಅಲೆಯುವಂತೆ ಮಾಡುತ್ತಾರೆ ಎಂದು ದೂರಿದರು.<br /> <br /> ಕಸಬಾ ಆರ್ಐ ಅವರನ್ನು ಕೂಡಲೇ ಅಮಾನತು ಮಾಡಿ ಬೇರೆ ಕಡೆ ವರ್ಗಾಯಿಸಬೇಕು ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡುವುದಾಗಿ ತಹಶೀಲ್ದಾರ್ಗೆ ನೀಡಿದ ಮನವಿ ಪತ್ರದಲ್ಲಿ ಎಚ್ಚರಿಸಿದ್ದಾರೆ.<br /> <br /> ಜೆಸಿಬಿ ಶ್ರೀಧರ್, ಹೆಬೈಲು ರಾಜುಗೌಡ, ಎಂ.ಟಿ. ಟಾಕಪ್ಪ, ರಾಮಚಂದ್ರ, ಹೆಚ್.ವಿ. ಲೋಕೇಶ್, ಜೆ. ಆನಂದ್, ಕೆ.ಟಿ. ಯೋಗೀಶ್, ಕೃಷ್ಣಮೂರ್ತಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>