<p>ನವದೆಹಲಿ (ಪಿಟಿಐ): ಮಾಹಿತಿ ಹಕ್ಕು ಕಾಯ್ದೆಯಡಿ (ಆರ್ಟಿಐ) ಸ್ವಯಂ ಪ್ರೇರಣೆಯಿಂದ ಸಾರ್ವಜನಿಕವಾಗಿ ಬಹಿರಂಗ ಪಡಿಸಬೇಕಿದ್ದ ಮಾಹಿತಿಗಳನ್ನು ಸಮರ್ಪಕವಾಗಿ ಪ್ರಕಟಿಸುತ್ತಿಲ್ಲ ಎಂದು ಸರ್ಕಾರಿ ಇಲಾಖೆ/ಸಂಸ್ಥೆಗಳನ್ನು ಕೇಂದ್ರ ಮಾಹಿತಿ ಹಕ್ಕು ಆಯೋಗದ (ಸಿಐಸಿ) ಮುಖ್ಯ ಆಯುಕ್ತರು ತರಾಟೆಗೆ ತೆಗೆದುಕೊಂಡಿದ್ದಾರೆ.<br /> <br /> `ಆರ್ಟಿಐ~ ಕಾಯ್ದೆಯ 4ನೇ ಅಧಿನಿಯಮದ ಅನ್ವಯ ಸ್ವಯಂ ಪ್ರೇರಣೆಯಿಂದಲೇ ಕಾಯ್ದೆಗೆ ಸಂಬಂಧಿಸಿದ ಮಾಹಿತಿಗಳನ್ನು ಸಾರ್ವಜನಿಕರಿಗೆ ತಿಳಿಸಬೇಕು. ಆದರೆ, ಈ ಕಾಯ್ದೆ ಜಾರಿಯಾಗಿ ಏಳು ವರ್ಷಗಳು ಕಳೆದರೂ ಬಹುತೇಕ ಸರ್ಕಾರಿ ಇಲಾಖೆ/ಸಂಸ್ಥೆಗಳು ಇದನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿಲ್ಲ ಎಂದು ಮುಖ್ಯ ಮಾಹಿತಿ ಹಕ್ಕು ಆಯುಕ್ತ ಸತ್ಯಾನಂದ ಮಿಶ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<br /> <br /> ಅಖಿಲ ಭಾರತ ಲೋಕಾಯುಕ್ತರ ಸಮಾವೇಶದಲ್ಲಿ ಶನಿವಾರ ಮಾತನಾಡಿದ ಅವರು, `ಅಧಿನಿಯಮದ ಅನ್ವಯ ಸರ್ಕಾರಿ ಇಲಾಖೆ/ಸಂಸ್ಥೆಗಳು `ಆರ್ಟಿಐ~ಗೆ ಸಂಬಂಧಿಸಿದ 17 ಅಂಶಗಳ ಮಾಹಿತಿಯನ್ನು ಅನುಕ್ರಮಣಿಕೆಯಂತೆ ಪಟ್ಟಿ ಮಾಡಿ 120 ದಿವಸಗಳಲ್ಲಿ ಪ್ರಕಟಿಸುವುದು ಕಡ್ಡಾಯ. `ಆರ್ಟಿಐ~ ಸಮರ್ಪಕವಾಗಿ ಅನುಷ್ಠಾನಗೊಂಡರೆ ಭ್ರಷ್ಟಾಚಾರಕ್ಕೂ ಕಡಿವಾಣ ಬೀಳುತ್ತದೆ~ ಎಂದರು.<br /> <br /> ರಾಷ್ಟ್ರೀಯ ಸಲಹಾ ಮಂಡಳಿ ಸದಸ್ಯೆ ಅರುಣಾ ರಾಯ್ ಮಾತನಾಡಿ, `ಭ್ರಷ್ಟಾಚಾರ ತಡೆಗಟ್ಟಲು ಮತ್ತಷ್ಟು ಶಾಸನಗಳನ್ನು ರಚಿಸುವ ಅಗತ್ಯವಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಮಾಹಿತಿ ಹಕ್ಕು ಕಾಯ್ದೆಯಡಿ (ಆರ್ಟಿಐ) ಸ್ವಯಂ ಪ್ರೇರಣೆಯಿಂದ ಸಾರ್ವಜನಿಕವಾಗಿ ಬಹಿರಂಗ ಪಡಿಸಬೇಕಿದ್ದ ಮಾಹಿತಿಗಳನ್ನು ಸಮರ್ಪಕವಾಗಿ ಪ್ರಕಟಿಸುತ್ತಿಲ್ಲ ಎಂದು ಸರ್ಕಾರಿ ಇಲಾಖೆ/ಸಂಸ್ಥೆಗಳನ್ನು ಕೇಂದ್ರ ಮಾಹಿತಿ ಹಕ್ಕು ಆಯೋಗದ (ಸಿಐಸಿ) ಮುಖ್ಯ ಆಯುಕ್ತರು ತರಾಟೆಗೆ ತೆಗೆದುಕೊಂಡಿದ್ದಾರೆ.<br /> <br /> `ಆರ್ಟಿಐ~ ಕಾಯ್ದೆಯ 4ನೇ ಅಧಿನಿಯಮದ ಅನ್ವಯ ಸ್ವಯಂ ಪ್ರೇರಣೆಯಿಂದಲೇ ಕಾಯ್ದೆಗೆ ಸಂಬಂಧಿಸಿದ ಮಾಹಿತಿಗಳನ್ನು ಸಾರ್ವಜನಿಕರಿಗೆ ತಿಳಿಸಬೇಕು. ಆದರೆ, ಈ ಕಾಯ್ದೆ ಜಾರಿಯಾಗಿ ಏಳು ವರ್ಷಗಳು ಕಳೆದರೂ ಬಹುತೇಕ ಸರ್ಕಾರಿ ಇಲಾಖೆ/ಸಂಸ್ಥೆಗಳು ಇದನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿಲ್ಲ ಎಂದು ಮುಖ್ಯ ಮಾಹಿತಿ ಹಕ್ಕು ಆಯುಕ್ತ ಸತ್ಯಾನಂದ ಮಿಶ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<br /> <br /> ಅಖಿಲ ಭಾರತ ಲೋಕಾಯುಕ್ತರ ಸಮಾವೇಶದಲ್ಲಿ ಶನಿವಾರ ಮಾತನಾಡಿದ ಅವರು, `ಅಧಿನಿಯಮದ ಅನ್ವಯ ಸರ್ಕಾರಿ ಇಲಾಖೆ/ಸಂಸ್ಥೆಗಳು `ಆರ್ಟಿಐ~ಗೆ ಸಂಬಂಧಿಸಿದ 17 ಅಂಶಗಳ ಮಾಹಿತಿಯನ್ನು ಅನುಕ್ರಮಣಿಕೆಯಂತೆ ಪಟ್ಟಿ ಮಾಡಿ 120 ದಿವಸಗಳಲ್ಲಿ ಪ್ರಕಟಿಸುವುದು ಕಡ್ಡಾಯ. `ಆರ್ಟಿಐ~ ಸಮರ್ಪಕವಾಗಿ ಅನುಷ್ಠಾನಗೊಂಡರೆ ಭ್ರಷ್ಟಾಚಾರಕ್ಕೂ ಕಡಿವಾಣ ಬೀಳುತ್ತದೆ~ ಎಂದರು.<br /> <br /> ರಾಷ್ಟ್ರೀಯ ಸಲಹಾ ಮಂಡಳಿ ಸದಸ್ಯೆ ಅರುಣಾ ರಾಯ್ ಮಾತನಾಡಿ, `ಭ್ರಷ್ಟಾಚಾರ ತಡೆಗಟ್ಟಲು ಮತ್ತಷ್ಟು ಶಾಸನಗಳನ್ನು ರಚಿಸುವ ಅಗತ್ಯವಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>