<p>ಸಿಂಧನೂರು: ತಾಲ್ಲೂಕಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆಗೊಳಿಸುವಂತೆ ಆಗ್ರಹಿಸಿ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಶನ್ ತಾಲ್ಲೂಕು ಸಮಿತಿ ಕಾರ್ಯಕರ್ತರು ತಹಸೀಲ್ದಾರ್ ಬಿ.ಟಿ.ಕುಮಾರಸ್ವಾಮಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.<br /> <br /> ರಾಜ್ಯದಲ್ಲಿ ಉಚಿತ ಶಿಕ್ಷಣ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಜಾರಿಯಾಗಿ ಮೂರು ವರ್ಷಗಳು ಗತಿಸಿದರೂ ಅದನ್ನು ಕಟ್ಟುನಿಟ್ಟಾಗಿ ಜಾರಿಗೆಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ. ಇದರಿಂದಾಗಿ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ.</p>.<p>ಕೆಲ ಶಾಲೆಗಳು ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ನೀಡದೆ ತಮ್ಮದು ಅಲ್ಪಸಂಖ್ಯಾತರ ಶಾಲೆಗಳೆಂದು ಸುಳ್ಳುವ ಹೇಳುವ ಮೂಲಕ ಅವಕಾಶದಿಂದ ವಂಚಿಸುತ್ತಿವೆ. ಗುಣಮಟ್ಟದ ಶಿಕ್ಷಣದ ಜೊತೆಗೆ ಪ್ರತಿ ಶಾಲೆಗೂ ಮೂಲಸೌಲಭ್ಯ ದೊರಕಿಸಿಕೊಡಬೇಕೆನ್ನುವ ನಿಯಮಗಳು ಸಂಪೂರ್ಣ ಉಲ್ಲಂಘನೆಯಾಗಿವೆ. ಈ ಬಗ್ಗೆ ಆಯಾ ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಗಮನ ಸೆಳೆದರು.<br /> <br /> ಒಂದುವೇಳೆ ಅರ್ಹರಿಗೆ ಅವಕಾಶ ಕೊಡದೇ ಇದ್ದರೆ ದುರುಪಯೋಗವಾಗುವ ಸಾಧ್ಯತೆಗಳಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ತಹಸೀಲ್ದಾರರಿಗೆ ಎಸ್ಐಒ ಪದಾಧಿಕಾರಿಗಳು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಧನೂರು: ತಾಲ್ಲೂಕಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆಗೊಳಿಸುವಂತೆ ಆಗ್ರಹಿಸಿ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಶನ್ ತಾಲ್ಲೂಕು ಸಮಿತಿ ಕಾರ್ಯಕರ್ತರು ತಹಸೀಲ್ದಾರ್ ಬಿ.ಟಿ.ಕುಮಾರಸ್ವಾಮಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.<br /> <br /> ರಾಜ್ಯದಲ್ಲಿ ಉಚಿತ ಶಿಕ್ಷಣ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಜಾರಿಯಾಗಿ ಮೂರು ವರ್ಷಗಳು ಗತಿಸಿದರೂ ಅದನ್ನು ಕಟ್ಟುನಿಟ್ಟಾಗಿ ಜಾರಿಗೆಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ. ಇದರಿಂದಾಗಿ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ.</p>.<p>ಕೆಲ ಶಾಲೆಗಳು ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ನೀಡದೆ ತಮ್ಮದು ಅಲ್ಪಸಂಖ್ಯಾತರ ಶಾಲೆಗಳೆಂದು ಸುಳ್ಳುವ ಹೇಳುವ ಮೂಲಕ ಅವಕಾಶದಿಂದ ವಂಚಿಸುತ್ತಿವೆ. ಗುಣಮಟ್ಟದ ಶಿಕ್ಷಣದ ಜೊತೆಗೆ ಪ್ರತಿ ಶಾಲೆಗೂ ಮೂಲಸೌಲಭ್ಯ ದೊರಕಿಸಿಕೊಡಬೇಕೆನ್ನುವ ನಿಯಮಗಳು ಸಂಪೂರ್ಣ ಉಲ್ಲಂಘನೆಯಾಗಿವೆ. ಈ ಬಗ್ಗೆ ಆಯಾ ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಗಮನ ಸೆಳೆದರು.<br /> <br /> ಒಂದುವೇಳೆ ಅರ್ಹರಿಗೆ ಅವಕಾಶ ಕೊಡದೇ ಇದ್ದರೆ ದುರುಪಯೋಗವಾಗುವ ಸಾಧ್ಯತೆಗಳಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ತಹಸೀಲ್ದಾರರಿಗೆ ಎಸ್ಐಒ ಪದಾಧಿಕಾರಿಗಳು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>