<p><strong>ರಾಯಚೂರು: </strong>ಆಂಧ್ರಪ್ರದೇಶದಲ್ಲಿ ತೆಲಂಗಾಣ ಹೋರಾಟದ ಭಾಗವಾಗಿ ನಡೆಯುತ್ತಿರುವ ರೈಲು ತಡೆ ಚಳವಳಿ, ತೋಯ್ದ ಕಲ್ಲಿದ್ದಲು, ತಾಂತ್ರಿಕ ಕಾರಣ ಈ ರೀತಿ ಹಲವು ಕಾರಣಗಳಿಂದ ಇಲ್ಲಿನ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ಆರ್ಟಿಪಿಎಸ್)ದ 8 ಘಟಕಗಳಲ್ಲಿ ಮೂರು ಘಟಕಗಳು ಬಂದ್ ಆಗಿದ್ದು ಕೇವಲ 5 ಘಟಕಗಳು ವಿದ್ಯುತ್ ಉತ್ಪಾದಿಸುತ್ತಿವೆ.<br /> <br /> ರೈಲು ತಡೆ ಚಳವಳಿ ತೀವ್ರ ಸ್ವರೂಪ ಪಡೆದಿರುವುದರಿಂದ ಆಂಧ್ರಪ್ರದೇಶದ ಸಿಂಗರೇಣಿ ಕಲ್ಲಿದ್ದಲು ಗಣಿಯಿಂದ ರೈಲಿನಲ್ಲಿ ಆರ್ಟಿಪಿಎಸ್ಗೆ ಸರಬರಾಜು ಆಗಬೇಕಿದ್ದ ಕಲ್ಲಿದ್ದಲು ಪೂರೈಕೆ ಪ್ರಮಾಣ ತಗ್ಗಿದೆ. <br /> <br /> ಎರಡು ದಿನದ ಹಿಂದೆ ಒಂದು ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹ ಶನಿವಾರದ ಹೊತ್ತಿಗೆ ಅರ್ಧದಷ್ಟು ತಗ್ಗಿದೆ. ತಾಲ್ಚೇರಿಯಿಂದ 1 ರೇಕ್ ಮಾತ್ರ ಕಲ್ಲಿದ್ದಲು ಪೂರೈಕೆ ಆಗಿದ್ದು ಸಿಂಗರೇಣಿ ಕಲ್ಲಿದ್ದಲು ಗಣಿಯಿಂದ ಕಲ್ಲಿದ್ದಲು ಪೂರೈಕೆ ಸ್ಥಗಿತಗೊಂಡಿದೆ ಎಂದು ಆರ್ಟಿಪಿಎಸ್ ಮೂಲಗಳು ಸ್ಪಷ್ಟಪಡಿಸಿವೆ.<br /> <br /> <strong>ಉತ್ಪಾದನೆ ಕುಸಿತ</strong>: ಮೂರು ದಿನಗಳ ಹಿಂದೆ 23 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸಲಾಗುತ್ತಿತ್ತು. ಶನಿವಾರ ವಿದ್ಯುತ್ ಉತ್ಪಾದನೆ 19 ದಶಲಕ್ಷ ಯೂನಿಟ್ಗೆ ತಗ್ಗಿದೆ.<br /> <br /> <strong>ಗಣಿ ಕಾರ್ಮಿಕರ ಮುಷ್ಕರ: </strong>ಸಿಂಗರೇಣಿ ಕಲ್ಲಿದ್ದಲು ಗಣಿ ಕಾರ್ಮಿಕರು ತೆಲಂಗಾಣ ಚಳವಳಿಯಲ್ಲಿ ಪಾಲ್ಗೊಂಡಿರುವುದರಿಂದ ಆರ್ಟಿಪಿಎಸ್ ಕಲ್ಲಿದ್ದಲು ಕೊರತೆ ಎದುರಿಸಲು ಪ್ರಮುಖ ಕಾರಣವಾಗಿದೆ. <br /> <br /> ಕಲ್ಲಿದ್ದಲು ಪೂರೈಕೆ ಪ್ರಮಾಣಕ್ಕೆ ಅನುಗುಣವಾಗಿ ಘಟಕಗಳನ್ನು ನಿರ್ವಹಿಸಲಾಗುತ್ತಿದೆ ಎಂದು ಆರ್ಟಿಪಿಎಸ್ ಕಾರ್ಯ ನಿರ್ವಾಹಕ ನಿರ್ದೇಶಕ ಭಾಸ್ಕರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಆಂಧ್ರಪ್ರದೇಶದಲ್ಲಿ ತೆಲಂಗಾಣ ಹೋರಾಟದ ಭಾಗವಾಗಿ ನಡೆಯುತ್ತಿರುವ ರೈಲು ತಡೆ ಚಳವಳಿ, ತೋಯ್ದ ಕಲ್ಲಿದ್ದಲು, ತಾಂತ್ರಿಕ ಕಾರಣ ಈ ರೀತಿ ಹಲವು ಕಾರಣಗಳಿಂದ ಇಲ್ಲಿನ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ಆರ್ಟಿಪಿಎಸ್)ದ 8 ಘಟಕಗಳಲ್ಲಿ ಮೂರು ಘಟಕಗಳು ಬಂದ್ ಆಗಿದ್ದು ಕೇವಲ 5 ಘಟಕಗಳು ವಿದ್ಯುತ್ ಉತ್ಪಾದಿಸುತ್ತಿವೆ.<br /> <br /> ರೈಲು ತಡೆ ಚಳವಳಿ ತೀವ್ರ ಸ್ವರೂಪ ಪಡೆದಿರುವುದರಿಂದ ಆಂಧ್ರಪ್ರದೇಶದ ಸಿಂಗರೇಣಿ ಕಲ್ಲಿದ್ದಲು ಗಣಿಯಿಂದ ರೈಲಿನಲ್ಲಿ ಆರ್ಟಿಪಿಎಸ್ಗೆ ಸರಬರಾಜು ಆಗಬೇಕಿದ್ದ ಕಲ್ಲಿದ್ದಲು ಪೂರೈಕೆ ಪ್ರಮಾಣ ತಗ್ಗಿದೆ. <br /> <br /> ಎರಡು ದಿನದ ಹಿಂದೆ ಒಂದು ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹ ಶನಿವಾರದ ಹೊತ್ತಿಗೆ ಅರ್ಧದಷ್ಟು ತಗ್ಗಿದೆ. ತಾಲ್ಚೇರಿಯಿಂದ 1 ರೇಕ್ ಮಾತ್ರ ಕಲ್ಲಿದ್ದಲು ಪೂರೈಕೆ ಆಗಿದ್ದು ಸಿಂಗರೇಣಿ ಕಲ್ಲಿದ್ದಲು ಗಣಿಯಿಂದ ಕಲ್ಲಿದ್ದಲು ಪೂರೈಕೆ ಸ್ಥಗಿತಗೊಂಡಿದೆ ಎಂದು ಆರ್ಟಿಪಿಎಸ್ ಮೂಲಗಳು ಸ್ಪಷ್ಟಪಡಿಸಿವೆ.<br /> <br /> <strong>ಉತ್ಪಾದನೆ ಕುಸಿತ</strong>: ಮೂರು ದಿನಗಳ ಹಿಂದೆ 23 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸಲಾಗುತ್ತಿತ್ತು. ಶನಿವಾರ ವಿದ್ಯುತ್ ಉತ್ಪಾದನೆ 19 ದಶಲಕ್ಷ ಯೂನಿಟ್ಗೆ ತಗ್ಗಿದೆ.<br /> <br /> <strong>ಗಣಿ ಕಾರ್ಮಿಕರ ಮುಷ್ಕರ: </strong>ಸಿಂಗರೇಣಿ ಕಲ್ಲಿದ್ದಲು ಗಣಿ ಕಾರ್ಮಿಕರು ತೆಲಂಗಾಣ ಚಳವಳಿಯಲ್ಲಿ ಪಾಲ್ಗೊಂಡಿರುವುದರಿಂದ ಆರ್ಟಿಪಿಎಸ್ ಕಲ್ಲಿದ್ದಲು ಕೊರತೆ ಎದುರಿಸಲು ಪ್ರಮುಖ ಕಾರಣವಾಗಿದೆ. <br /> <br /> ಕಲ್ಲಿದ್ದಲು ಪೂರೈಕೆ ಪ್ರಮಾಣಕ್ಕೆ ಅನುಗುಣವಾಗಿ ಘಟಕಗಳನ್ನು ನಿರ್ವಹಿಸಲಾಗುತ್ತಿದೆ ಎಂದು ಆರ್ಟಿಪಿಎಸ್ ಕಾರ್ಯ ನಿರ್ವಾಹಕ ನಿರ್ದೇಶಕ ಭಾಸ್ಕರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>