<p><strong>ನವದೆಹಲಿ (ಪಿಟಿಐ): </strong>ದೂರಸಂಪರ್ಕ, ವಿಮೆ ಕ್ಷೇತ್ರ ಸೇರಿದಂತೆ 13 ವಲಯಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಮಿತಿ (ಎಫ್ಡಿಐ) ಹೆಚ್ಚಿಸಿರುವುದರಿಂದ ಷೇರುಪೇಟೆ ಕಳೆದ ವಾರಾಂತ್ಯದಲ್ಲಿ ಏರಿಕೆ ದಾಖಲಿಸಿದೆ. ಆದರೆ, ಈ ವಾರ ಕಾರ್ಪೊರೇಟ್ ಕಂಪೆನಿಗಳ ತ್ರೈಮಾಸಿಕ ಫಲಿತಾಂಶ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಪ್ರಕಟಿಸಲಿರುವ ಮೊದಲ ತ್ರೈಮಾಸಿಕ ಹಣಕಾಸು ನೀತಿಯು ವಹಿವಾಟಿನ ಗತಿ ನಿರ್ಧರಿಸಲಿವೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.<br /> <br /> ಡಾಲರ್ ವಿರುದ್ಧ ರೂಪಾಯಿ ಅಪಮೌಲ್ಯ ತಡೆಯಲು `ಆರ್ಬಿಐ' ಪ್ರಕಟಿಸಿರುವ ಕ್ರಮಗಳು ವಿದೇಶಿ ಸಾಂಸ್ಥಿಕ ಹೂಡಿಕೆದಾರರಲ್ಲಿ(ಎಫ್ಐಐ) ವಿಶ್ವಾಸ ಮೂಡಿಸಿವೆ. ಇದರಿಂದ ಈ ವಾರ `ಎಫ್ಐಐ' ಒಳಹರಿವು ಹೆಚ್ಚುವ ಸಾಧ್ಯತೆ ಇದೆ ಎಂದು `ಆದಿತ್ಯಾ ಟ್ರೇಡಿಂಗ್ ಸಲ್ಯೂಷನ್ಸ್' ಮುಖ್ಯಸ್ಥ ವಿಕಾಸ್ ಜೈನ್ ಅಭಿಪ್ರಾಯಪಟ್ಟಿದ್ದಾರೆ.<br /> <br /> ರೂಪಾಯಿ ಅಪಮೌಲ್ಯ ತಡೆಯಲು `ಆರ್ಬಿಐ' ಬ್ಯಾಂಕುಗಳಿಗೆ ನೀಡುವ ಸಾಲದ (ರೆಪೊ) ಬಡ್ಡಿದರ ಹೆಚ್ಚಿಸಿದೆ. ಆದರೆ, ಜುಲೈ 30ರಂದು ಪ್ರಕಟಿಸಲಿರುವ ಹಣಕಾಸು ನೀತಿಯಲ್ಲಿ `ರೆಪೊ' ದರ ಕಡಿತ ಮಾಡುವ ನಿರೀಕ್ಷೆ ಇದೆ. ತಯಾರಿಕೆ ಮತ್ತು ಕೈಗಾರಿಕಾ ವಲಯದ ಪ್ರಗತಿ ಕುಸಿದಿರುವುದರಿಂದ ಬಡ್ಡಿ ದರ ತಗ್ಗಲಿದೆ ಎಂದು ಉದ್ಯಮ ಸಂಸ್ಥೆಗಳು ವಿಶ್ವಾಸ ವ್ಯಕ್ತಪಡಿಸಿವೆ. ಆದರೆ, ಹಣದುಬ್ಬರ ಹೆಚ್ಚಳಗೊಂಡಿರುವುದರಿಂದ ಬಡ್ಡಿ ದರ ಕಡಿತ ಸಾಧ್ಯತೆ ಕ್ಷೀಣಗೊಂಡಿದೆ ಎಂದು ವಿಕಾಸ್ ಹೇಳಿದ್ದಾರೆ.<br /> <br /> `ರಿಲಯನ್ಸ್ ಇಂಡಸ್ಟ್ರೀಸ್ ಶುಕ್ರವಾರ ತ್ರೈಮಾಸಿಕ ಫಲಿತಾಂಶ ಪ್ರಕಟಿಸಿದೆ. ಸೋಮವಾರ ವಹಿವಾಟು ಆರಂಭವಾಗುತ್ತಿದ್ದಂತೆ ಪೇಟೆ ಇದಕ್ಕೆ ಪ್ರತಿಕ್ರಿಯಿಸಲಿದೆ' ಎಂದು ಇನ್ವೆಂಚರ್ ಗ್ರೋಥ್ ಅಂಡ್ ಸೆಕ್ಯುರಿಟೀಸ್ನ ವ್ಯವಸ್ಥಾಪಕ ನಿರ್ದೇಶಕರಾದ ನಗ್ಜಿ ಕೆ.ರೀಟಾ ಅಭಿಪ್ರಾಯಪಟ್ಟಿದ್ದಾರೆ.<br /> <br /> `ಸದ್ಯ ಜಾಗತಿಕ ಮಾರುಕಟ್ಟೆ ಬೆಳವಣಿಗೆಗಳು ದೇಶೀಯ ಷೇರುಪೇಟೆಗೆ ಪೂರಕವಾಗಿಲ್ಲ. `ಕೆವೈಸಿ'(ನೊ ಯುವರ್ ಕಸ್ಟಮರ್) ನಿಯಮ ಉಲ್ಲಂಘಿಸಿದ ಬ್ಯಾಂಕುಗಳಿಗೆ `ಆರ್ಬಿಐ' ದಂಡ ವಿಧಿಸಿದೆ. ಇದರಿಂದ ಬ್ಯಾಂಕಿಂಗ್ ವಲಯದ ಷೇರುಗಳು ತೀವ್ರ ಕುಸಿತ ಕಂಡಿವೆ. ಇದು ಒಟ್ಟಾರೆ ಪೇಟೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ನಗ್ಜಿ ವಿಶ್ಲೇಷಿಸಿದ್ದಾರೆ.<br /> <br /> ಎಲ್ ಅಂಡ್ ಟಿ, ಅಂಬುಜಾ ಸಿಮೆಂಟ್ಸ್, ಕ್ರೇನ್ ಇಂಡಿಯಾ, ಹೀರೊ ಮೋಟೊ ಕಾರ್ಪ್, ಐಟಿಸಿ, ಮಾರುತಿ ಸುಜುಕಿ, ಸ್ಟರ್ಲೈಟ್ ಇಂಡಸ್ಟ್ರೀಸ್, ಹಿಂದೂಸ್ತಾನ್ ಯೂನಿಲಿವರ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ವಿಪ್ರೊ ಈ ವಾರ ಪ್ರಸಕ್ತ ಹಣಕಾಸು ವರ್ಷದ ತ್ರೈಮಾಸಿಕ ಫಲಿತಾಂಶ ಪ್ರಕಟಿಸಲಿವೆ.<br /> <br /> `ಮಾರಾಟದ ಒತ್ತಡ ಹೆಚ್ಚಿರುವುದರಿಂದ ಈ ವಾರ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ(ಎನ್ಎಸ್ಇ) ಸೂಚ್ಯಂಕ `ನಿಫ್ಟಿ' 5,900 ಅಂಶಗಳನ್ನು ದಾಟುವುದು ಕಷ್ಟ' ಎಂದು ಬೊನಾಂಜಾ ಪೋರ್ಟ್ ಫೋಲಿಯೊ ಸಂಸ್ಥೆಯ ಉಪಾಧ್ಯಕ್ಷ ರಾಕೇಶ್ ಗೋಯಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ದೂರಸಂಪರ್ಕ, ವಿಮೆ ಕ್ಷೇತ್ರ ಸೇರಿದಂತೆ 13 ವಲಯಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಮಿತಿ (ಎಫ್ಡಿಐ) ಹೆಚ್ಚಿಸಿರುವುದರಿಂದ ಷೇರುಪೇಟೆ ಕಳೆದ ವಾರಾಂತ್ಯದಲ್ಲಿ ಏರಿಕೆ ದಾಖಲಿಸಿದೆ. ಆದರೆ, ಈ ವಾರ ಕಾರ್ಪೊರೇಟ್ ಕಂಪೆನಿಗಳ ತ್ರೈಮಾಸಿಕ ಫಲಿತಾಂಶ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಪ್ರಕಟಿಸಲಿರುವ ಮೊದಲ ತ್ರೈಮಾಸಿಕ ಹಣಕಾಸು ನೀತಿಯು ವಹಿವಾಟಿನ ಗತಿ ನಿರ್ಧರಿಸಲಿವೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.<br /> <br /> ಡಾಲರ್ ವಿರುದ್ಧ ರೂಪಾಯಿ ಅಪಮೌಲ್ಯ ತಡೆಯಲು `ಆರ್ಬಿಐ' ಪ್ರಕಟಿಸಿರುವ ಕ್ರಮಗಳು ವಿದೇಶಿ ಸಾಂಸ್ಥಿಕ ಹೂಡಿಕೆದಾರರಲ್ಲಿ(ಎಫ್ಐಐ) ವಿಶ್ವಾಸ ಮೂಡಿಸಿವೆ. ಇದರಿಂದ ಈ ವಾರ `ಎಫ್ಐಐ' ಒಳಹರಿವು ಹೆಚ್ಚುವ ಸಾಧ್ಯತೆ ಇದೆ ಎಂದು `ಆದಿತ್ಯಾ ಟ್ರೇಡಿಂಗ್ ಸಲ್ಯೂಷನ್ಸ್' ಮುಖ್ಯಸ್ಥ ವಿಕಾಸ್ ಜೈನ್ ಅಭಿಪ್ರಾಯಪಟ್ಟಿದ್ದಾರೆ.<br /> <br /> ರೂಪಾಯಿ ಅಪಮೌಲ್ಯ ತಡೆಯಲು `ಆರ್ಬಿಐ' ಬ್ಯಾಂಕುಗಳಿಗೆ ನೀಡುವ ಸಾಲದ (ರೆಪೊ) ಬಡ್ಡಿದರ ಹೆಚ್ಚಿಸಿದೆ. ಆದರೆ, ಜುಲೈ 30ರಂದು ಪ್ರಕಟಿಸಲಿರುವ ಹಣಕಾಸು ನೀತಿಯಲ್ಲಿ `ರೆಪೊ' ದರ ಕಡಿತ ಮಾಡುವ ನಿರೀಕ್ಷೆ ಇದೆ. ತಯಾರಿಕೆ ಮತ್ತು ಕೈಗಾರಿಕಾ ವಲಯದ ಪ್ರಗತಿ ಕುಸಿದಿರುವುದರಿಂದ ಬಡ್ಡಿ ದರ ತಗ್ಗಲಿದೆ ಎಂದು ಉದ್ಯಮ ಸಂಸ್ಥೆಗಳು ವಿಶ್ವಾಸ ವ್ಯಕ್ತಪಡಿಸಿವೆ. ಆದರೆ, ಹಣದುಬ್ಬರ ಹೆಚ್ಚಳಗೊಂಡಿರುವುದರಿಂದ ಬಡ್ಡಿ ದರ ಕಡಿತ ಸಾಧ್ಯತೆ ಕ್ಷೀಣಗೊಂಡಿದೆ ಎಂದು ವಿಕಾಸ್ ಹೇಳಿದ್ದಾರೆ.<br /> <br /> `ರಿಲಯನ್ಸ್ ಇಂಡಸ್ಟ್ರೀಸ್ ಶುಕ್ರವಾರ ತ್ರೈಮಾಸಿಕ ಫಲಿತಾಂಶ ಪ್ರಕಟಿಸಿದೆ. ಸೋಮವಾರ ವಹಿವಾಟು ಆರಂಭವಾಗುತ್ತಿದ್ದಂತೆ ಪೇಟೆ ಇದಕ್ಕೆ ಪ್ರತಿಕ್ರಿಯಿಸಲಿದೆ' ಎಂದು ಇನ್ವೆಂಚರ್ ಗ್ರೋಥ್ ಅಂಡ್ ಸೆಕ್ಯುರಿಟೀಸ್ನ ವ್ಯವಸ್ಥಾಪಕ ನಿರ್ದೇಶಕರಾದ ನಗ್ಜಿ ಕೆ.ರೀಟಾ ಅಭಿಪ್ರಾಯಪಟ್ಟಿದ್ದಾರೆ.<br /> <br /> `ಸದ್ಯ ಜಾಗತಿಕ ಮಾರುಕಟ್ಟೆ ಬೆಳವಣಿಗೆಗಳು ದೇಶೀಯ ಷೇರುಪೇಟೆಗೆ ಪೂರಕವಾಗಿಲ್ಲ. `ಕೆವೈಸಿ'(ನೊ ಯುವರ್ ಕಸ್ಟಮರ್) ನಿಯಮ ಉಲ್ಲಂಘಿಸಿದ ಬ್ಯಾಂಕುಗಳಿಗೆ `ಆರ್ಬಿಐ' ದಂಡ ವಿಧಿಸಿದೆ. ಇದರಿಂದ ಬ್ಯಾಂಕಿಂಗ್ ವಲಯದ ಷೇರುಗಳು ತೀವ್ರ ಕುಸಿತ ಕಂಡಿವೆ. ಇದು ಒಟ್ಟಾರೆ ಪೇಟೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ನಗ್ಜಿ ವಿಶ್ಲೇಷಿಸಿದ್ದಾರೆ.<br /> <br /> ಎಲ್ ಅಂಡ್ ಟಿ, ಅಂಬುಜಾ ಸಿಮೆಂಟ್ಸ್, ಕ್ರೇನ್ ಇಂಡಿಯಾ, ಹೀರೊ ಮೋಟೊ ಕಾರ್ಪ್, ಐಟಿಸಿ, ಮಾರುತಿ ಸುಜುಕಿ, ಸ್ಟರ್ಲೈಟ್ ಇಂಡಸ್ಟ್ರೀಸ್, ಹಿಂದೂಸ್ತಾನ್ ಯೂನಿಲಿವರ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ವಿಪ್ರೊ ಈ ವಾರ ಪ್ರಸಕ್ತ ಹಣಕಾಸು ವರ್ಷದ ತ್ರೈಮಾಸಿಕ ಫಲಿತಾಂಶ ಪ್ರಕಟಿಸಲಿವೆ.<br /> <br /> `ಮಾರಾಟದ ಒತ್ತಡ ಹೆಚ್ಚಿರುವುದರಿಂದ ಈ ವಾರ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ(ಎನ್ಎಸ್ಇ) ಸೂಚ್ಯಂಕ `ನಿಫ್ಟಿ' 5,900 ಅಂಶಗಳನ್ನು ದಾಟುವುದು ಕಷ್ಟ' ಎಂದು ಬೊನಾಂಜಾ ಪೋರ್ಟ್ ಫೋಲಿಯೊ ಸಂಸ್ಥೆಯ ಉಪಾಧ್ಯಕ್ಷ ರಾಕೇಶ್ ಗೋಯಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>