<p><strong>ಮುಂಬೈ (ಪಿಟಿಐ): </strong>ಭಾರತೀಯ ರಿಸರ್ವ್ ಬ್ಯಾಂಕ್ ಇದೇ 17ರಂದು ತನ್ನ ವಾರ್ಷಿಕ ಸಾಲ ನೀತಿ ಪ್ರಕಟಗೊಳಿಸಿದ ನಂತರ ಸಾಲಗಳ ಮೇಲಿನ ಬಡ್ಡಿ ದರ ಕಡಿತಗೊಳಿಸುವ ಬಗ್ಗೆ ಆಲೋಚಿಸುವುದಾಗಿ ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹೇಳಿದೆ.<br /> <br /> `ಭವಿಷ್ಯದಲ್ಲಿ ಸಾಲಗಳ ಮೇಲಿನ ಬಡ್ಡಿದರಗಳನ್ನುಕಡಿಮೆಗೊಳಿಸುವ ಬಗ್ಗೆ ನಾವು ಚಿಂತನೆ ನಡೆಸಲಿದ್ದೇವೆ. ಆದರೆ, ಅದು `ಆರ್ಬಿಐ~ ಕಡಿತಗೊಳಿಸಲಿರುವ ನಗದು ಮೀಸಲು ಅನುಪಾತವನ್ನು (ಸಿಆರ್ಆರ್) ಅವಲಂಬಿಸಿದೆ~ ಎಂದು ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಎ.ಕೃಷ್ಣ ಕುಮಾರ್ ಹೇಳಿದರು.<br /> <br /> ಮುಂಬೈನಲ್ಲಿ ನಡೆದ ಆರನೇ ಅಂತರರಾಷ್ಟ್ರೀಯ ಬ್ಯಾಂಕಿಗ್ ಮತ್ತು ಹಣಕಾಸು ಸಮ್ಮೇಳನದಲ್ಲಿ ಅವರು ಮಾತನಾಡುತ್ತಿದ್ದರು.`ಆರ್ಬಿಐ ನಗದು ಮೀಸಲು ಅನುಪಾತ ಕಡಿಮೆಯಾಗಬಹುದು ಎಂಬುದು ನನ್ನ ನಿರೀಕ್ಷೆ. ಆದರೆ, ರೆಪೊ ದರದ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ~ ಎಂದು ಏಪ್ರಿಲ್ 17ರಂದು ಪ್ರಕಟಗೊಳ್ಳಲಿರುವ ಆರ್ಬಿಐ ವಾರ್ಷಿಕ ಸಾಲ ನೀತಿಯ ಬಗೆಗಿನ ನಿರೀಕ್ಷೆಗಳ ಕುರಿತಾಗಿ ಮಾತನಾಡುತ್ತಾ ಅವರು ಹೇಳಿದರು.<br /> <br /> ಬ್ಯಾಂಕ್ಗಳು ತಮ್ಮ ಒಟ್ಟು ಠೇವಣಿಗಳ ನಿರ್ದಿಷ್ಟ ಮೊತ್ತವನ್ನು ರಿಸರ್ವ್ ಬ್ಯಾಂಕ್ನಲ್ಲಿ ಠೇವಣಿ ಇಡುವುದು ನಗದು ಮೀಸಲು ಅನುಪಾವಾಗಿದೆ. ಸದ್ಯಕ್ಕೆ ಇದು ಶೇ 4.75ರಷ್ಟು ಇದೆ. ಆರ್ಬಿಐಯು ತನ್ನ ವಾರ್ಷಿಕ ಸಾಲ ನೀತಿಯಲ್ಲಿ `ಸಿಆರ್ಆರ್~ದಲ್ಲಿ ಶೇ 0.75ರಷ್ಟು ಕಡಿತಗೊಳಿಸುವ ಸಾಧ್ಯತೆ ಇದೆ ಎಂದು ಈ ಮೊದಲು ಎಸ್ಬಿಐ ಅಧ್ಯಕ್ಷ ಪ್ರತೀಪ್ ಚೌಧರಿ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ): </strong>ಭಾರತೀಯ ರಿಸರ್ವ್ ಬ್ಯಾಂಕ್ ಇದೇ 17ರಂದು ತನ್ನ ವಾರ್ಷಿಕ ಸಾಲ ನೀತಿ ಪ್ರಕಟಗೊಳಿಸಿದ ನಂತರ ಸಾಲಗಳ ಮೇಲಿನ ಬಡ್ಡಿ ದರ ಕಡಿತಗೊಳಿಸುವ ಬಗ್ಗೆ ಆಲೋಚಿಸುವುದಾಗಿ ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹೇಳಿದೆ.<br /> <br /> `ಭವಿಷ್ಯದಲ್ಲಿ ಸಾಲಗಳ ಮೇಲಿನ ಬಡ್ಡಿದರಗಳನ್ನುಕಡಿಮೆಗೊಳಿಸುವ ಬಗ್ಗೆ ನಾವು ಚಿಂತನೆ ನಡೆಸಲಿದ್ದೇವೆ. ಆದರೆ, ಅದು `ಆರ್ಬಿಐ~ ಕಡಿತಗೊಳಿಸಲಿರುವ ನಗದು ಮೀಸಲು ಅನುಪಾತವನ್ನು (ಸಿಆರ್ಆರ್) ಅವಲಂಬಿಸಿದೆ~ ಎಂದು ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಎ.ಕೃಷ್ಣ ಕುಮಾರ್ ಹೇಳಿದರು.<br /> <br /> ಮುಂಬೈನಲ್ಲಿ ನಡೆದ ಆರನೇ ಅಂತರರಾಷ್ಟ್ರೀಯ ಬ್ಯಾಂಕಿಗ್ ಮತ್ತು ಹಣಕಾಸು ಸಮ್ಮೇಳನದಲ್ಲಿ ಅವರು ಮಾತನಾಡುತ್ತಿದ್ದರು.`ಆರ್ಬಿಐ ನಗದು ಮೀಸಲು ಅನುಪಾತ ಕಡಿಮೆಯಾಗಬಹುದು ಎಂಬುದು ನನ್ನ ನಿರೀಕ್ಷೆ. ಆದರೆ, ರೆಪೊ ದರದ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ~ ಎಂದು ಏಪ್ರಿಲ್ 17ರಂದು ಪ್ರಕಟಗೊಳ್ಳಲಿರುವ ಆರ್ಬಿಐ ವಾರ್ಷಿಕ ಸಾಲ ನೀತಿಯ ಬಗೆಗಿನ ನಿರೀಕ್ಷೆಗಳ ಕುರಿತಾಗಿ ಮಾತನಾಡುತ್ತಾ ಅವರು ಹೇಳಿದರು.<br /> <br /> ಬ್ಯಾಂಕ್ಗಳು ತಮ್ಮ ಒಟ್ಟು ಠೇವಣಿಗಳ ನಿರ್ದಿಷ್ಟ ಮೊತ್ತವನ್ನು ರಿಸರ್ವ್ ಬ್ಯಾಂಕ್ನಲ್ಲಿ ಠೇವಣಿ ಇಡುವುದು ನಗದು ಮೀಸಲು ಅನುಪಾವಾಗಿದೆ. ಸದ್ಯಕ್ಕೆ ಇದು ಶೇ 4.75ರಷ್ಟು ಇದೆ. ಆರ್ಬಿಐಯು ತನ್ನ ವಾರ್ಷಿಕ ಸಾಲ ನೀತಿಯಲ್ಲಿ `ಸಿಆರ್ಆರ್~ದಲ್ಲಿ ಶೇ 0.75ರಷ್ಟು ಕಡಿತಗೊಳಿಸುವ ಸಾಧ್ಯತೆ ಇದೆ ಎಂದು ಈ ಮೊದಲು ಎಸ್ಬಿಐ ಅಧ್ಯಕ್ಷ ಪ್ರತೀಪ್ ಚೌಧರಿ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>