<p>ಪುಣೆ (ಪಿಟಿಐ): ಐಪಿಎಲ್ನಲ್ಲಿ ಸತತ ಎರಡು ಗೆಲುವು ಲಭಿಸಿರುವುದು ಪುಣೆ ವಾರಿಯರ್ಸ್ ತಂಡದ ನಾಯಕ ಸೌರವ್ ಗಂಗೂಲಿ ಸಂತಸಕ್ಕೆ ಕಾರಣವಾಗಿದೆ. ಆಲ್ರೌಂಡ್ ಪ್ರದರ್ಶನದಿಂದಾಗಿ ಈ ಜಯ ದೊರೆತಿದೆ ಎಂದಿರುವ ಗಂಗೂಲಿ, ಆಟಗಾರರ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದ್ದಾರೆ.<br /> <br /> ಭಾನುವಾರ ನಡೆದ ಪಂದ್ಯದಲ್ಲಿ ವಾರಿಯರ್ಸ್ 22 ರನ್ಗಳಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಜಯ ಪಡೆದಿತ್ತು. 167 ರನ್ಗಳ ಗುರಿ ಬೆನ್ನಟ್ಟಿದ್ದ ಆ್ಯಡಮ್ ಗಿಲ್ಕ್ರಿಸ್ಟ್ ನೇತೃತ್ವದ ತಂಡ 20 ಓವರ್ಗಳಲ್ಲಿ 8 ವಿಕೆಟ್ಗೆ 144 ರನ್ ಮಾತ್ರ ಪೇರಿಸಿತ್ತು.<br /> <br /> `ಮೊದಲ 10 ಓವರ್ಗಳಲ್ಲಿ ಚೆನ್ನಾಗಿ ಬೌಲಿಂಗ್ ಮಾಡಿದೆವು. ಅದೇ ರೀತಿ ಕೊನೆಯ 10 ಓವರ್ಗಳಲ್ಲಿ ನಮ್ಮ ಬ್ಯಾಟ್ಸ್ಮನ್ಗಳು ಬಿರುಸಿನ ಆಟವಾಡಿದರು. ಚೆಂಡು ತೀರಾ ಕೆಳಮಟ್ಟದಲ್ಲಿ ನುಗ್ಗಿಬರುತ್ತಿದ್ದ ಕಾರಣ ಈ ಪಿಚ್ನಲ್ಲಿ ಬ್ಯಾಟಿಂಗ್ ಸುಲಭವಲ್ಲ. ಆದರೂ 160 ಕ್ಕೂ ಅಧಿಕ ರನ್ ಪೇರಿಸಲು ಯಶಸ್ವಿಯಾದೆವು~ ಎಂದು ಪಂದ್ಯದ ಬಳಿಕ ಗಂಗೂಲಿ ಪ್ರತಿಕ್ರಿಯಿಸಿದ್ದಾರೆ.<br /> <br /> ಸತತ ಎರಡು ಗೆಲುವಿನ ಬಗ್ಗೆ ಕೇಳಿದಾಗ ಅವರು, `ಟೂರ್ನಿಯಲ್ಲಿ ಇನ್ನೂ ಸಾಕಷ್ಟು ಪಂದ್ಯಗಳಿವೆ. ಸಾಗಬೇಕಾದ ಹಾದಿ ಬಹಳಷ್ಟಿದೆ~ ಎಂದ ಉತ್ತರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪುಣೆ (ಪಿಟಿಐ): ಐಪಿಎಲ್ನಲ್ಲಿ ಸತತ ಎರಡು ಗೆಲುವು ಲಭಿಸಿರುವುದು ಪುಣೆ ವಾರಿಯರ್ಸ್ ತಂಡದ ನಾಯಕ ಸೌರವ್ ಗಂಗೂಲಿ ಸಂತಸಕ್ಕೆ ಕಾರಣವಾಗಿದೆ. ಆಲ್ರೌಂಡ್ ಪ್ರದರ್ಶನದಿಂದಾಗಿ ಈ ಜಯ ದೊರೆತಿದೆ ಎಂದಿರುವ ಗಂಗೂಲಿ, ಆಟಗಾರರ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದ್ದಾರೆ.<br /> <br /> ಭಾನುವಾರ ನಡೆದ ಪಂದ್ಯದಲ್ಲಿ ವಾರಿಯರ್ಸ್ 22 ರನ್ಗಳಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಜಯ ಪಡೆದಿತ್ತು. 167 ರನ್ಗಳ ಗುರಿ ಬೆನ್ನಟ್ಟಿದ್ದ ಆ್ಯಡಮ್ ಗಿಲ್ಕ್ರಿಸ್ಟ್ ನೇತೃತ್ವದ ತಂಡ 20 ಓವರ್ಗಳಲ್ಲಿ 8 ವಿಕೆಟ್ಗೆ 144 ರನ್ ಮಾತ್ರ ಪೇರಿಸಿತ್ತು.<br /> <br /> `ಮೊದಲ 10 ಓವರ್ಗಳಲ್ಲಿ ಚೆನ್ನಾಗಿ ಬೌಲಿಂಗ್ ಮಾಡಿದೆವು. ಅದೇ ರೀತಿ ಕೊನೆಯ 10 ಓವರ್ಗಳಲ್ಲಿ ನಮ್ಮ ಬ್ಯಾಟ್ಸ್ಮನ್ಗಳು ಬಿರುಸಿನ ಆಟವಾಡಿದರು. ಚೆಂಡು ತೀರಾ ಕೆಳಮಟ್ಟದಲ್ಲಿ ನುಗ್ಗಿಬರುತ್ತಿದ್ದ ಕಾರಣ ಈ ಪಿಚ್ನಲ್ಲಿ ಬ್ಯಾಟಿಂಗ್ ಸುಲಭವಲ್ಲ. ಆದರೂ 160 ಕ್ಕೂ ಅಧಿಕ ರನ್ ಪೇರಿಸಲು ಯಶಸ್ವಿಯಾದೆವು~ ಎಂದು ಪಂದ್ಯದ ಬಳಿಕ ಗಂಗೂಲಿ ಪ್ರತಿಕ್ರಿಯಿಸಿದ್ದಾರೆ.<br /> <br /> ಸತತ ಎರಡು ಗೆಲುವಿನ ಬಗ್ಗೆ ಕೇಳಿದಾಗ ಅವರು, `ಟೂರ್ನಿಯಲ್ಲಿ ಇನ್ನೂ ಸಾಕಷ್ಟು ಪಂದ್ಯಗಳಿವೆ. ಸಾಗಬೇಕಾದ ಹಾದಿ ಬಹಳಷ್ಟಿದೆ~ ಎಂದ ಉತ್ತರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>