<p><strong>ಆಳಂದ:</strong> ‘ಪಟ್ಟಣದ ಪುರಸಭೆಯ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭವ್ಯ ಪುತ್ಥಳಿಯನ್ನು ಅನಾವರಣಗೊಳಿಸಿದಿದ್ದರೆ ಲೋಕಸಭೆ ಚುನಾವಣೆಯನ್ನು ಬಹಿಷ್ಕಾರಿಸುವ ನಿರ್ಣಯ ಕೈಗೊಳ್ಳಲಾಗುವುದು’ ಎಂದು ಕರ್ನಾಟಕ ದಲಿತ ಸೇನೆ ರಾಜ್ಯಾಧ್ಯಕ್ಷ ಬಾಬುರಾವ ಅರಣೋದಯ ಎಚ್ಚರಿಸಿದ್ದಾರೆ.<br /> <br /> ಪತ್ರಿಕಾ ಹೇಳಿಕೆ ನೀಡಿರುವ ಅವರು ‘ ದಲಿತಪರ ಸಂಘಟನೆಗಳು ಹಾಗೂ ಡಾ.ಅಂಬೇಡ್ಕರ್ ಅಭಿಮಾನಿಗಳ ಒತ್ತಾಯದ ಮೇಲೆ ಪುರಸಭೆಯು ಕಳೆದ ಅವಧಿಯಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿತ್ತು. ₨ 12ಲಕ್ಷ ವೆಚ್ಚದಲ್ಲಿ ಪುಣೆಯಿಂದ ಪ್ರತಿಮೆಯನ್ನು ತಂದು ಪುರಸಭೆಯಲ್ಲಿ ಇರಿಸಲಾಗಿದೆ.ಏಪ್ರಿಲ್ 14ರೊಳಗೆ ಸೂಕ್ತ ಸ್ಥಳದಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ಅನಾವರಣ ಮಾಡಲು ಶಾಸಕರ ಅಧ್ಯಕ್ಷತೆಯಲ್ಲಿ ಸರ್ಕಾರ ಸಭೆ ಕರೆಯಬೇಕು’ ಎಂದು ಅವರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಳಂದ:</strong> ‘ಪಟ್ಟಣದ ಪುರಸಭೆಯ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭವ್ಯ ಪುತ್ಥಳಿಯನ್ನು ಅನಾವರಣಗೊಳಿಸಿದಿದ್ದರೆ ಲೋಕಸಭೆ ಚುನಾವಣೆಯನ್ನು ಬಹಿಷ್ಕಾರಿಸುವ ನಿರ್ಣಯ ಕೈಗೊಳ್ಳಲಾಗುವುದು’ ಎಂದು ಕರ್ನಾಟಕ ದಲಿತ ಸೇನೆ ರಾಜ್ಯಾಧ್ಯಕ್ಷ ಬಾಬುರಾವ ಅರಣೋದಯ ಎಚ್ಚರಿಸಿದ್ದಾರೆ.<br /> <br /> ಪತ್ರಿಕಾ ಹೇಳಿಕೆ ನೀಡಿರುವ ಅವರು ‘ ದಲಿತಪರ ಸಂಘಟನೆಗಳು ಹಾಗೂ ಡಾ.ಅಂಬೇಡ್ಕರ್ ಅಭಿಮಾನಿಗಳ ಒತ್ತಾಯದ ಮೇಲೆ ಪುರಸಭೆಯು ಕಳೆದ ಅವಧಿಯಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿತ್ತು. ₨ 12ಲಕ್ಷ ವೆಚ್ಚದಲ್ಲಿ ಪುಣೆಯಿಂದ ಪ್ರತಿಮೆಯನ್ನು ತಂದು ಪುರಸಭೆಯಲ್ಲಿ ಇರಿಸಲಾಗಿದೆ.ಏಪ್ರಿಲ್ 14ರೊಳಗೆ ಸೂಕ್ತ ಸ್ಥಳದಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ಅನಾವರಣ ಮಾಡಲು ಶಾಸಕರ ಅಧ್ಯಕ್ಷತೆಯಲ್ಲಿ ಸರ್ಕಾರ ಸಭೆ ಕರೆಯಬೇಕು’ ಎಂದು ಅವರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>